Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...