Homeಕರ್ನಾಟಕಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

ಚಂದನವನದ ಸುದ್ದಿ: ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆದ ನಟಿ ಶ್ರೀಲೀಲಾ

- Advertisement -
- Advertisement -

ಕನ್ನಡದ ಭರಾಟೆ, ಕಿಸ್, ತೆಲುಗಿನ ಪೆಳ್ಳಿ ಸಂದಡಿ ಚಿತ್ರಗಳ ಮೂಲಕ ಭರವಸೆ ಮೂಡಿಸಿರುವ ಯುವ ನಟಿ ಶ್ರೀಲೀಲಾ ಈಗ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ಪಡೆಯುವ ಮಾನವೀಯ ಕಾರ್ಯದ ಮೂಲಕ ಜನಸಾಮಾನ್ಯರಿಗೂ ಮಾದರಿಯಾಗಿದ್ದಾರೆ.

ನಟಿ ಶ್ರೀಲೀಲಾ ಬೆಂಗಳೂರಿನ ಮಾತೃಶ್ರೀ‌ ಮನೋವಿಕಾಸ ಕೇಂದ್ರದ ಇಬ್ಬರು ದಿವ್ಯಾಂಗ ಮಕ್ಕಳನ್ನ ದತ್ತು ಪಡೆದು ಅಮ್ಮನಾಗಿದ್ದಾರೆ. ಬುದ್ದಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆಗೆ ಭೇಟಿ ನೀಡಿದ್ದ ನಟಿ,  8 ತಿಂಗಳ ಕೂಸು ‘ಗುರು’ ಮತ್ತು ಶೋಭಿತ ಅನ್ನೋ ಹೆಣ್ಣು ಮಗುವನ್ನು ದತ್ತು ಪಡೆದು, ಅವರ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ವೇಳೆ “ಬೈ ಟು ಲವ್” ಚಿತ್ರದ ನಿರ್ದೇಶಕ‌ ಹರಿ ಸಂತೋಷ್ ಶ್ರೀಲೀಲಾ ಅವ್ರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ಇವರು ಅಭಿನಯದ ಬಿಡುಗಡೆಗೆ ಸಿದ್ಧವಾಗಿರುವ ’ಬೈ ಟು ಲವ್’ ಚಿತ್ರದಲ್ಲಿ ಮಗುವಿನ ಜೊತೆ ನಟಿಸಿದ್ದು, ಚಿತ್ರಕ್ಕೂ ಮಕ್ಕಳಿಗೂ ವಿಶೇಷ ನಂಟಿದೆ. ಚಿತ್ರದಲ್ಲಿ ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮಕ್ಕಳನ್ನು ದತ್ತು ಪಡೆಯುವವರೆಗೂ ಕಡೆದುಕೊಂಡು ಬಂದಿದೆ. ’ಬೈ ಟು ಲವ್’ ಸಿನಿಮಾ ಇವತ್ತಿನ ಪೀಳಿಗೆಗೆ ಬದುಕಿನ ಪಾಠ ಮಾಡಲಿದೆ. ಅಂಥ ವಿಶೇಷ ವಿಚಾರಗಳು ಚಿತ್ರದಲ್ಲಿವೆ ಎನ್ನುತ್ತಾರೆ ಶ್ರೀಲೀಲಾ.

“ಹೀಗೇಲ್ಲಾ ಇರುತ್ತೆ ಅಂತ ಗೊತ್ತಿತ್ತು. ಆದ್ರೆ ಹತ್ತಿರದಿಂದ ನೋಡಿರಲಿಲ್ಲ. ಈ ಜಾಗಕ್ಕೆ ಬಂದಿದ್ದು ನನಗೆ ಹೊಸ ಲೋಕಕ್ಕೆ ಬಂದಂತೆ ಆಗಿದೆ. ಈ ಬಗ್ಗೆ ನಮ್ಮ ಕೈಯಲ್ಲಿ ಆಗುವಷ್ಟು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಂಗವಿಕಲತೆ ಅಥವಾ ಮೆಡಿಕಲ್ ಕಂಡಿಷನ್‌ ಕಾರಣದಿಂದ ಈ ಮುಗ್ಧ ಮಕ್ಕಳನ್ನು ರೈಲ್ವೇ ಸ್ಟೇಷನ್, ಬಸ್ ಸ್ಟಾಪ್‌, ರಸ್ತೆ ಬದಿಯಲ್ಲಿ ಬಿಟ್ಟು ಹೋಗಿಬಿಡುತ್ತಾರೆ. ಇಂತಹ ಕೆಲಸ ಮಾಡಬಾರದು. ಅಷ್ಟು ಚಿಕ್ಕ ಮಕ್ಕಳಿಗೆ ಹೇಗೆ ಏನಾಗಿದೆ ಅಂತ ತಿಳಿಯುತ್ತದೆ..? ಯಾರು ಎತ್ತಿಕೊಂಡರು ಅವರೇ ಅಮ್ಮ ಎಂದುಕೊಳ್ಳುತ್ತಾರೆ ಅಷ್ಟು ಮುಗ್ಧರು ಇವರು. ಮಕ್ಕಳನ್ನು ನೋಡಿಕೊಳ್ಳುವ ತುಂಬಾ ಜಾಗಗಳಿವೆ. ನಮ್ಮ ಕೈಯಲ್ಲಿ ಆಗುವಷ್ಟು ಸಹಾಯ ಮಾಡಬೇಕು. ಇದಕ್ಕೆ ಲಕ್ಷವೂ, ಸಾವಿರಾರು ರೂಪಾಯಿ ಬೇಕಿಲ್ಲ” ಎಂದಿದ್ದಾರೆ.

“ಇಂತಹ ವಿಷಯ ಇಟ್ಟುಕೊಂಡು ಮಾಡಿರುವ ಚಿತ್ರದಲ್ಲಿ ನಟಿಸಿರುವುದಕ್ಕೆ ನನಗೆ ಹೆಮ್ಮೆಯಿದೆ. ಈಗ ನನಗೆ ನನ್ನ ಜೀವನದ ಗುರಿ ಏನು ಎಂಬುದು ಇಲ್ಲಿ ಅರ್ಥವಾಗಿದೆ. ತಂದೆ ತಾಯಿ ಈ ಮಕ್ಕಳನ್ನು ಬಿಟ್ಟು ಹೋದರೂ ನಾವೆಲ್ಲರೂ ಸೇರಿ ಈ ಮಕ್ಕಳ ಕುಟುಂಬವಾಗೋಣ. ಇನ್ಮುಂದೆ ಗುರು, ಶೋಭು ಇಬ್ಬರು ನನ್ನ ಮಕ್ಕಳು. ಅವರ ಪೂರ್ತಿ ಜವಾಬ್ದಾರಿ ನನ್ನದು” ಎಂದಿದ್ದಾರೆ ನಟಿ ಶ್ರೀಲೀಲಾ.

ನಟ ಧನ್ವೀರ್‌, ಶ್ರೀಲೀಲಾ ನಟನೆಯ ’ಬೈ ಟು ಲವ್’ ಚಿತ್ರ ಇದೇ ಫೆ. 18ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.


ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...