Homeಕರ್ನಾಟಕಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

ಮೋಸ ಹೋಗುವ ಮೊದಲು ನೀವಿದನ್ನು ತಿಳಿದುಕೊಂಡಿರಬೇಕು!!!!

- Advertisement -
- Advertisement -

| ಮುತ್ತುರಾಜು |

ಐಎಂಎ ಗ್ರೂಪ್ ಆಫ್ ಕಂಪನಿ ಸಾವಿರಾರು ಜನರಿಗೆ ನೂರಾರು ಕೋಟಿ ರೂ ಹಣ ವಂಚನೆ ಮಾಡಿರುವ ಪ್ರಕರಣ ಬಗ್ಗೆ ನಿಮಗೆಲ್ಲಾ ತಿಳಿದಿದೆ. ರಾಜ್ಯದ ನಾನಾ ಮೂಲೆಗಳಿಂದ ಮೋಸ ಹೋಗಿರುವ ಜನರು ಬೆಂಗಳೂರಿಗೆ ಬಂದು ಕಂಪನಿ ವಿರುದ್ಧ ದೂರು ದಾಖಲಿಸುತ್ತಿದ್ದಾರೆ. ಈ ಜನರೆಲ್ಲಾ ಯಾರು? ಹಣ ಹೂಡಿಕೆ ಯಾಕೆ ಮಾಡಿದ್ದರು? ಅಂತಹ ಅಗತ್ಯವೇನಿತ್ತು? ನಿಮಗೆ ಗೊತ್ತೆ?

ದಿನಗೂಲಿ ಕಾರ್ಮಿಕರು, ಕೂಲಿಕಾರರು, ಬೀದಿ ಬದಿ ವ್ಯಾಪಾರಿಗಳು, ಗೃಹಿಣಿಯರು ಹೀಗೆ ನಾನಾ ರೀತಿಯ ಕೆಲಸ ಮಾಡುತ್ತಾ ಜೀವನ ನಡೆಸುತ್ತದ್ದ ಬಡ ಹಾಗೂ ಮಧ್ಯಮ ವರ್ಗದ ಜನರು ಮಕ್ಕಳ ಶಿಕ್ಷಣಕ್ಕಾಗಿ, ಮದುವೆ ಖರ್ಚಿಗಾಗಿ, ಸ್ವಂತ ಮನೆ, ಆಸ್ತಿ, ಜಮೀನು ಮಾಡಿಕೊಳ್ಳಬೇಕೆಂಬ ಕನಸನ್ನಿಟ್ಟುಕೊಂಡ ಇವರು ಹೆಚ್ಚು ಬಡ್ಡಿ ದೊರೆಯುತ್ತದೆ ಎಂಬ ಆಸೆಯಿಂದ ಸಾವಿರದಿಂದ ಕೋಟಿವರೆಗೂ ಹಣವನ್ನು ಹೂಡಿಕೆ ಮಾಡಿದ್ದರು.

ಕಳೆದ ಸೋಮವಾರ ಕಂಪನಿ ಮಾಲೀಕ ಹರಿಬಿಟ್ಟ ಆಡಿಯೋ ಮೂಲಕ ಹೂಡಿಕೆದಾರರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಧ್ಯಕ್ಕೆ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಜನರಿಂದ ದೂರುಗಳನ್ನು ದಾಖಲಿಸುತ್ತಿದ್ದಾರೆ. ಈವರೆಗೂ ಸುಮಾರು 11 ಸಾವಿರಕ್ಕೂ ಹೆಚ್ಚು ಜನರು ಮೊಹಮ್ಮದ್ ಮನ್ಸೂರ್ ಖಾನ್ ವಿರುದ್ಧ ದೂರು ನೀಡಿದ್ದಾರೆ.

ಮುಂದಿನ ಕಥೆ ಏನು? ಜನರ ಹಣ ವಾಪಸ್ ಬರುವುದೇ?
ಈಗಾಗಲೇ ಐಎಂಎ ಕಂಪನಿಯ ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರನ್ನು ಬಂಧಿಸಲಾಗಿದ್ದು, ಮನ್ಸೂರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಈ ಹಣ ವಂಚನೆ ಪ್ರಕರಣಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಇದೇ ಮೊದಲಲ್ಲ. ಕಳೆದ 15 ವರ್ಷಗಳಲ್ಲಿ ಸುಮಾರು 20ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಇಂತಹ ಮೋಸದ ಕಂಪನಿಗಳ ಮಾತುಗಳಿಗೆ ಮರುಳಾದವರು ಬರೀ ಜನಸಾಮಾನ್ಯರು ಮಾತ್ರವಲ್ಲ. 2002-18ರವರೆಗೆ ವ್ಯವಹಾರ ನಡೆಸುತ್ತಿದ್ದ ವಿಕ್ರಂ ಚಿಟ್ ಫಂಡ್ ಹಗರಣದಲ್ಲಿ ಪ್ರಕಾಶ್ ಪಡುಕೋಣೆ, ರಾಹುಲ್ ದ್ರಾವಿಡ್ ಕೂಡ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಆದರೆ ಇವರ್ಯಾರಿಗೂ ಹಣ ಕೈಸೇರಿಲ್ಲ.

ಈ ವರೆಗೂ ಕರ್ನಾಟಕದಲ್ಲಿ ನಡೆದಿರುವ ವಂಚನೆ ಪ್ರಕರಣಗಳ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕೃಪೆ: ಪ್ರಜಾವಾಣಿ

ಕಳೆದ ವರ್ಷ ಪ್ರಜಾವಾಣಿಯಲ್ಲಿ ಸುದ್ದಿಯಾದ ವರದಿಯ ಪ್ರಕಾರ 2013-18 ರವರೆಗೆ ಸುಮಾರು 16 ಕಂಪನಿಗಳಿಂದ ಒಟ್ಟು 5,200 ಕೋಟಿ ರೂ ವಂಚನೆಯಾಗಿದೆಯಾಗಿದೆ ಎಂಬುದು ವರದಿಯಾಗಿದೆ.

ಇಷ್ಟೆಲ್ಲಾ ಪ್ರಕರಣಗಳಲ್ಲಿ ಸರ್ಕಾರ ಏನು ಮಾಡುತ್ತಿದೆ?
ಪ್ರತಿ ಪ್ರಕರಣ ಘಟನೆಗಳು ನಡೆದಾಗಲೂ ಸರ್ಕಾರ ತನಿಖೆ ನಡೆಸಲು ಆದೇಶಿಸುತ್ತಿದೆ. ಐಎಂಎ ಪ್ರಕರಣ ಒಳಗೊಂಡಂತೆ ಹಲವಾರು ಪ್ರಕರಣಗಳಲ್ಲಿ ರಾಜಕೀಯ ಮುಖಂಡರು, ಪ್ರಭಾವಿ ವ್ಯಕ್ತಿಗಳ ಕೈವಾಡವು ಇರುವುದು ಕಂಡುಬಂದಿದೆ. ಈ ಬಗ್ಗೆ ಪಕ್ಷಾತೀತವಾಗಿ ತನಿಖೆ ನಡೆಯಬೇಕು. ಈ ಹಿಂದೆ ನಡೆದ ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಆದರೆ ಜನರಿಗೆ ನ್ಯಾಯ ಸಿಕ್ಕಿರುವುದು ಸಂಶಯವೇ ಸರಿ. ಇಂತಹ ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಸರ್ಕಾರವು ಯಾವ ನೀತಿಯನ್ನು ಜಾರಿಗೊಳಿಸಿಲ್ಲ.

ಇಷ್ಟೆಲ್ಲಾ ಪ್ರಕರಣಗಳ ಬಗ್ಗೆ ಜನರಿಗೆ ಅರಿವಿದ್ದರೂ ಪದೇ ಪದೇ ಮೋಸ ಹೋಗುತ್ತಿರುವುದೇಕೆ? 
ದಿನಗೂಲಿ ಮಾಡಿ ಬದುಕು ನಡೆಸುತ್ತಿರುವ ಜನರು ತಮ್ಮ ಪುಟ್ಟ ಕನಸುಗಳಿಗಾಗಿ ಹಣ ಕೂಡಿಡುವುದು ಸಾಮಾನ್ಯ. ಹೆಚ್ಚು ಬಡ್ಡಿ ಬರುತ್ತದೆ, ಹಣ ಡಬಲ್ ಮಾಡಿಕೊಡುತ್ತೇವೆ ಎನ್ನುವ ಮೋಸದ ಮಾತುಗಳಿಗೆ ಬಲಿಯಾಗುತ್ತಿದ್ದಾರೆ. ಇನ್ನು ಮುಂದಾದರೂ ಇಂತಹ ವಂಚಕ ಕಂಪನಿಗಳ ಬಗ್ಗೆ ಜನರು ಎಚ್ಚರದಿಂದಿರಬೇಕು.

ಇಂತಹ ಮೋಸದ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡುವವರಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗದ ಜನರೇ ಹೆಚ್ಚು. ಮಕ್ಕಳ ಓದು, ಸ್ವಂತ ಮನೆ ಇವರ ಕನಸಾಗಿರುತ್ತದೆ.  ಹಾಗಾಗಿ ಸರ್ಕಾರ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಬೇಕು. ದುಡಿಮೆಗೆ ತಕ್ಕ ಪ್ರತಿಫಲ/ಸಂಬಳ ಸಿಕ್ಕರೆ ಜನರು ಹೀಗೆ ಮೋಸ ಹೋಗಲಾರರು. ಉತ್ತಮ ಗುಣಮಟ್ಟದ ಶಿಕ್ಷಣ, ಉಚಿತ ಆರೋಗ್ಯ, ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ, ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಮೂಲಭೂತ ಸೌಲಭ್ಯಗಳು ಇವೆಲ್ಲವನ್ನು ಸರ್ಕಾರ ಉಚಿತವಾಗಿ ಒದಗಿಸಿದರೆ ಜನರು ಮೋಸಹೋಗಲಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...