Homeಮುಖಪುಟಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

ಆಗ್ರಾ: ಪ್ರೇಮಿಗಳಿಗೆ ಕಿರುಕುಳ ನೀಡಿದ್ದ ಬಜರಂಗದಳದ 30-35 ಮಂದಿ ಮೇಲೆ FIR

- Advertisement -
- Advertisement -

ಆಗ್ರಾದಲ್ಲಿ ಪ್ರೇಮಿಗಳ ದಿನದಂದು ಹಲವು ಜೋಡಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಗಳು ನಡೆದಿದ್ದು, ಉದ್ಯಾನವನಗಳಲ್ಲಿದ್ದ ಜೋಡಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ ಎಂದು ಆಗ್ರಾ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಹಿಂದೂ ಮಹಾಸಭಾದ ಕಾರ್ಯಕರ್ತರು ಸೋಮವಾರ (ವ್ಯಾಲೆಂಟೈನ್ಸ್ ದಿನ) ಹಾಕಿ ಸ್ಟಿಕ್‌ಗಳೊಂದಿಗೆ ಬೀದಿಗಳಲ್ಲಿ ಓಡಾಡುತ್ತಿದ್ದದ್ದು ಕಂಡುಬಂದಿತು. ಇದೇ ವೇಳೆ ಉದ್ಯಾನವನದಲ್ಲಿ ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಲಾಗಿತ್ತು. ಪ್ರೇಮಿಗಳ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಇದರ ಜೊತೆಗೆ ಬಜರಂಗದಳದ ಜೊತೆ ಇದ್ದ ಹುಡುಗಿಯರೂ ಕೂಡ ಯುವತಿಯನ್ನು ಬೈದು ಆಕೆಯ ಬ್ಯಾಗ್‌ನಲ್ಲಿ ಹುಡುಕಾಟ ನಡೆಸಿದ್ದಾರೆ. ಕಾಲೇಜು ಡ್ರೆಸ್‌ನಲ್ಲಿದ್ದ ಯುವತಿಯನ್ನು ಬಲವಂತವಾಗಿ ವಿಡಿಯೋ ಮಾಡಿ ಆಕೆಯ ಕುಟುಂಬದ ಸದಸ್ಯರ ನಂಬರ್ ಪಡೆದು ದೌರ್ಜನ್ಯ ಎಸಗಿದ್ದಾರೆ. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದಾಗ, ಬಜರಂಗದಳದವರು ಅವರೊಂದಿಗೂ ಜಗಳವಾಡಿದರು. ಇಷ್ಟೆಲ್ಲಾ ನಡೆದರೂ ಪಾರ್ಕ್ ಮುಂಭಾಗಗಳಲ್ಲಿದ್ದ ಪೊಲೀಸರೂ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದೆ.

ಇದನ್ನೂ ಓದಿ: ನಾವು ತಾಳಿ, ಕಾಲುಂಗುರ ಸಹ ಹಾಕುವುದಿಲ್ಲ, ಕೇಳಲು ನೀವ್ಯಾರು?: ಬಜರಂಗದಳ ಸದಸ್ಯರಿಗೆ ಮಹಿಳೆಯ ಪ್ರಶ್ನೆ

ಬಳಿಕ ಈ ವಿಷಯವನ್ನು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದು, ವಿಷಯ ತಿಳಿದ ಎಸ್‌ಎಸ್‌ಪಿ ಸುಧೀರ್‌ಕುಮಾರ್‌ ಹರಿಪರ್ವತ್‌ ಪೊಲೀಸ್‌ ಠಾಣೆಗೆ ಪ್ರಕರಣ ದಾಖಲಿಸಿಕೊಳ್ಳಲು ಆದೇಶಿಸಿದ್ದರು.

ಆಗ್ರಾ ಪೊಲೀಸರು ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.”ಹರಿಪರ್ವತ ಪೊಲೀಸ್ ಠಾಣಾ ವ್ಯಾಪ್ತಿಯ ಪಲಿವಾಲ್ ಪಾರ್ಕ್‌ನಲ್ಲಿ ರಾಷ್ಟ್ರೀಯ ಬಜರಂಗ ದಳವು ಯುವಕ-ಯುವತಿಯರ ಮೇಲೆ ಅಸಭ್ಯವಾಗಿ ವರ್ತಿಸಿದ ಪ್ರಕರಣವನ್ನು ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ರಾಷ್ಟ್ರೀಯ ಬಜರಂಗದಳದ 30 ರಿಂದ 35 ಮಂದಿ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಮುಂದಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಬಜರಂಗದಳ ಮತ್ತು ಅಖಿಲ ಭಾರತ ಹಿಂದೂ ಮಹಾಸಭಾದ ಪದಾಧಿಕಾರಿಗಳು ಉದ್ಯಾನವನಗಳಲ್ಲಿ ಯಾರೇ ಅಶ್ಲೀಲವಾಗಿ ವರ್ತಿಸಿದರೆ ಅವರ ಮುಖ ಕಪ್ಪಾಗಿಸಿ ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಲಾಗುವುದು. ಅಲ್ಲದೆ, ಹಿಂದೂ ಸಂಪ್ರದಾಯದ ಪ್ರಕಾರ ಅವರಿಗೆ ಸ್ಥಳದಲ್ಲೇ ಮದುವೆ ಮಾಡಲಾಗುತ್ತದೆ ಎಂದು ಘೋಷಿಸಿದ್ದರು.

ಅಖಿಲ ಭಾರತ ಹಿಂದೂ ಮಹಾಸಭಾದ ಮೀನಾ ದಿವಾಕರ್ ಮತ್ತು ರೌನಕ್ ಠಾಕೂರ್ ನೇತೃತ್ವದಲ್ಲಿ ಸೋಮವಾರ ದಿವಾಣಿ ಚೌಕದಲ್ಲಿ ಪ್ರೇಮಿಗಳ ಪ್ರತಿಕೃತಿ ದಹಿಸಲಾಯಿತು. ಇದಾದ ನಂತರ, ರಾಷ್ಟ್ರೀಯ ಬಜರಂಗದಳದ ಕಾರ್ಯಕರ್ತರು ವ್ಯಾಲೆಂಟೈನ್ ಪ್ರತಿಮೆಗೆ ಸೀರೆ ತೊಡಿಸಿ ಪ್ರತಿಭಟನೆ ನಡೆಸಿದ್ದರು. ಇದಾದ ನಂತರ ಉಭಯ ಪಕ್ಷಗಳ ಕಾರ್ಯಕರ್ತರು ಉದ್ಯಾನವನಗಳತ್ತ ತೆರಳಿ ಜೋಡಿಗಳ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ಮಾಡಿದ್ದರು.


ಇದನ್ನೂ ಓದಿ: ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರೀತಿ ಪ್ರೇಮ ಸಹನೆ ತಾಳ್ಮೆ ಮತ್ತು ವಿವೇಚನೆ ಇಲ್ಲದೆ ಈ ಅಂಧರು ಜಾತಿಗ್ರಸ್ಥ ಸಮಾಜ ನಿರ್ಮಾಣಕ್ಕಾಗಿ ಕುತಂತ್ರ ಮಾಡುತ್ತಿರುವುದು ತೀರಾ ಖಂಡನೀಯಾ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...