Homeಮುಖಪುಟಬಿಹಾರ: ಚಂಪಾರಣ್ಯ ಸತ್ಯಾಗ್ರಹ ಸ್ಥಳದಲ್ಲಿದ್ದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

ಬಿಹಾರ: ಚಂಪಾರಣ್ಯ ಸತ್ಯಾಗ್ರಹ ಸ್ಥಳದಲ್ಲಿದ್ದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

- Advertisement -
- Advertisement -

ಮಹಾತ್ಮ ಗಾಂಧಿ ಅವರು 1917 ರಲ್ಲಿ ಚಂಪಾರಣ್ಯ ಸತ್ಯಾಗ್ರಹ ಆರಂಭಿಸಿದ ಸ್ಥಳದ ಬಳಿ ಸ್ಥಾಪಿಸಲಾಗಿದ್ದ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಇದು ಸ್ಥಳದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಬಿಹಾರದ ಆಡಳಿತ ಮಂಡಳಿ ಮಂಗಳವಾರ ತಿಳಿಸಿದೆ.

“ಭಾನುವಾರ ರಾತ್ರಿ ಮೋತಿಹಾರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಖಾ ಪಾರ್ಕ್‌ನಲ್ಲಿರುವ ಪ್ರತಿಮೆಯನ್ನು ಹಾನಿಗೊಳಿಸಿ, ನೆಲಕ್ಕೆ ಬೀಳಿಸಲಾಗಿದೆ. ಪೊಲೀಸರು ತಮ್ಮ ತನಿಖೆಯನ್ನು ನಡೆಸುತ್ತಿದ್ದಾರೆ ಮತ್ತು ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವವರು ಕಾನೂನು ಪ್ರಕಾರ ಕ್ರಮ ಎದುರಿಸಬೇಕಾಗುತ್ತದೆ” ಎಂದು ಪೂರ್ವ ಚಂಪಾರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿರ್ಷತ್ ಕಪಿಲ್ ಅಶೋಕ್ ಹೇಳಿದ್ದಾರೆ.

ಘಟನೆ ನಡೆದ ಭಾನುವಾರ ರಾತ್ರಿ ಈ ಪ್ರದೇಶದಲ್ಲಿ ಧಾರ್ಮಿಕ ಘೋಷಣೆಗಳು ಕೇಳಿಬಂದವು ಎಂದು ಆರೋಪಿಸಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಈ ಫೋಟೋಗಳು, ವಿಡಿಯೋಗಳನ್ನು ಹಂಚಿಕೊಂಡು ಬಲಪಂಥೀಯ ಗುಂಪುಗಳು ಈ ನೀಚ ಕಾರ್ಯ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌‌ | ರಾಜ್ಯ ಸರ್ಕಾರ ಮಂಧ್ಯಂತರ ಆದೇಶವನ್ನು ದುರುಪಯೋಗಪಡಿಸುತ್ತಿದೆ: ವಕೀಲರ ದೂರು

ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಡಿಎಂ ಮತ್ತು ಎಸ್ಪಿ ಸ್ಥಳಕ್ಕೆ ಆಗಮಿಸಿ ವಿಗ್ರಹವನ್ನು ಸಂಗ್ರಹಿಸಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ.

“ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ತನ್ನ ಈ ಉದ್ಯಾನವನದ ನಿರ್ವಹಣಾ ಕಾರ್ಯವನ್ನು ನಡೆಸುತ್ತಿದೆ. ನಾವು ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಲು ಸಲಹೆ ನೀಡುತ್ತೇವೆ. ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯನ್ನು ಸಹ ಖಚಿತಪಡಿಸಿಕೊಳ್ಳಲಾಗುವುದು. ಪ್ರತಿಮೆಯ ಮರು ಪ್ರತಿಷ್ಠಾಪನೆಯನ್ನು ಜಿಲ್ಲಾಡಳಿತ ಮಾಡಲಿದೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಶಿರ್ಷತ್ ಕಪಿಲ್ ಅಶೋಕ್ ಹೇಳಿದ್ದಾರೆ.

ಚಂಪಾರಣ್ಯ ಸತ್ಯಾಗ್ರಹವು 1917 ರಲ್ಲಿ ಬ್ರಿಟಿಷ್ ಭಾರತದಲ್ಲಿ ಮಹಾತ್ಮ ಗಾಂಧಿಯವರು ಪ್ರಾರಂಭಿಸಿದ ಮೊದಲ ಸತ್ಯಾಗ್ರಹ ಚಳವಳಿಯಾಗಿದೆ.


ಇದನ್ನೂ ಓದಿ: ಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಾತ್ಮ ಗಾಂಧಿ ಈ ದೇಶಕ್ಕೆ ಬೇಡ ಎಂದಾದರೆ, ಅದು ಈ ದೇಶದ ದುರಂತಕ್ಕೆ ನಾಂದಿ ಹಾಡಿದಂತೆ.

LEAVE A REPLY

Please enter your comment!
Please enter your name here

- Advertisment -

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...