Homeಕರ್ನಾಟಕಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

ಆದೇಶ ಅರಿಯದೆ ಮಕ್ಕಳ ಮೇಲೆ ಮಾಧ್ಯಮಗಳ ಸವಾರಿ: ಅಧಿಕಾರಿಗಳ ಬೇಸರ

- Advertisement -
- Advertisement -

ಹಿಜಾಬ್‌ ಕೇಸರಿ ವಿವಾದದ ಬೆನ್ನಲ್ಲೇ ಮೂರು ದಿನಗಳ ರಜೆಯ ಬಳಿಕ ರಾಜ್ಯದ ಪ್ರೌಢಶಾಲೆಗಳು ಸೋಮವಾರ ಮತ್ತೆ ಆರಂಭವಾದವು. ಶಾಲೆಗಳ ಮುಂದೆ ಹೋಗಿ ಕ್ಯಾಮೆರಾ ಹಿಡಿದು ನಿಂತ ಮಾಧ್ಯಮ ಪ್ರತಿನಿಧಿಗಳು, ಮುಖ್ಯವಾಹಿನಿ ದೃಶ್ಯ ಮಾಧ್ಯಮಗಳ ಸಂಪಾದಕರು ಮಕ್ಕಳ ಮೇಲೆ ದ್ವೇಷವನ್ನೇ ಹರಿಬಿಡಲು ಯತ್ನಿಸಿದ್ದಾರೆ.

ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳನ್ನು ಗೇಟ್‌ಗಳ ಬಳಿಯೇ ಶಾಲಾ ಆಡಳಿತ ಮಂಡಳಿ ತಡೆಯಿತು. ಹಿಜಾಬ್‌ ಬಿಚ್ಚಿಸಲಾಯಿತು. ಶಿಕ್ಷಕಿಯೊಬ್ಬರು ಬುರ್ಕಾವನ್ನು ಸಾರ್ವಜನಿಕವಾಗಿ ತೆಗೆದ ವಿಡಿಯೊ ವೈರಲ್ ಆಗಿದೆ.

ಕಾಲೇಜು ಮಟ್ಟದಲ್ಲಿದ್ದ ಹಿಜಾಬ್‌ – ಕೇಸರಿ ಶಾಲು ವಿವಾದ, ಪ್ರೌಢಶಾಲೆಗಳಿಗೂ ಹಬ್ಬಿಸಲು ಮಾಧ್ಯಮಗಳು ಯತ್ನಿಸಿದಂತೆ ಕಾಣುತ್ತಿವೆ. ಪೂರ್ವ ಸಿದ್ಧತಾ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರನ್ನು ತಡೆಯುವಲ್ಲಿ ಮಾಧ್ಯಮಗಳ ಪಾತ್ರವೂ ಆಗಾಧವಾಗಿದೆ. ಕ್ಯಾಮೆರಾ ಹಿಡಿದು ನಿಂತು ಸೌಹಾರ್ದತೆಯನ್ನು ಕದಡಲು ಯತ್ನಿಸಿರುವುದು ಕಂಡು ಬಂದಿದೆ.

ಮಾಧ್ಯಮಗಳಲ್ಲಿ ಬಂದ ಕೆಲವು ವರದಿಗಳು

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಜಾಬ್‌‌ ತೆಗೆಯಲು ನಿರಾಕರಿಸಿ ಇಬ್ಬರು ವಿದ್ಯಾರ್ಥಿನಿಯರು ಮನೆಗೆ ವಾಪಸಾದರು.

ಚಿಕ್ಕಮಗಳೂರು ತಾಲ್ಲೂಕಿನ ಇಂದಾವರ ಶಾಲೆಯಲ್ಲಿ ಹಿಜಾಬ್‌ ನಿಷೇಧ. ವಿದ್ಯಾರ್ಥಿನಿಯರು ವೇಲ್‌ಅನ್ನೇ ತಲೆಯ ಮೇಲೆ ಧರಿಸಿದ್ದರು. ಹಿಜಾಬ್‌ ಅಲ್ಲ ಇದು ವೇಲ್‌ ಎಂದು ಹೇಳುತ್ತಿರುವ ವಿದ್ಯಾರ್ಥಿನಿಯರಿಗೆ ಮಾಧ್ಯಮವೊಂದರ ವರದಿಗಾರ, “ಕೋರ್ಟ್ ಆದೇಶ ಇದೆಯಮ್ಮ. ಧರಿಸಿ ಬರಬಾರದೆಂದು. ನಿಮಗೆ ತಿಳಿದಿಲ್ಲವಾ?” ಎಂದು ಕೇಳುತ್ತಾರೆ. “ನಮಗೆ ಎಜುಕೇಷನ್‌ ಹಾಗೂ ಹಿಜಾಬ್‌ ಎರಡೂ ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ.

ಶಿಕಾರಿಪುರದ ಮೌಲಾನಾ ಹಜಾದ್ ಶಾಲೆಯಲ್ಲಿ ಹೈಡ್ರಾಮಾ ಎಂದು ಕನ್ನಡದ ಮುಖ್ಯವಾಹಿನಿ ದೃಶ್ಯಮಾಧ್ಯಮದ ಸಂಪಾದಕರೊಬ್ಬರು ಪ್ರೈಮ್‌ಟೈಮ್‌ನಲ್ಲಿ ಹೇಳುತ್ತಾರೆ. ಜೊತೆಗೆ ವಿದ್ಯಾರ್ಥಿಗಳಿಗೆ ಧರ್ಮ ಬೋಧನೆ ಮಾಡುತ್ತಾರೆ.

ಯಾದಗಿರಿ ನಗರದ ಸರ್ಕಾರಿ ಉರ್ದು ಹೈಸ್ಕೂಲ್‌ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿದ್ದರೆಂದು ಅಡ್ಡಿಪಡಿಸಲಾಯಿತು. ಪ್ರಾಂಶುಪಾಲರು ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದ್ದನ್ನು ಮಾಧ್ಯಮಗಳು ವರದಿ ಮಾಡಿದ್ದವು. ಇದರಿಂದ ಗಲಿಬಿಲಿಯಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಡಿಡಿಪಿಐ ಶಾಂತಗೌಡ ಪಾಟೀಲ್‌, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ಶಾಲೆಗೆ ಆಗಮಿಸಿ ಹಿಜಾಬ್‌ ಹಾಕಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

ಆದೇಶ ಅರಿಯದ ಅಧಿಕಾರಿಗಳು, ಮಾಧ್ಯಮಗಳು?

ಪುಟಾಣಿ ಮಕ್ಕಳ ಮೇಲೆ ಕ್ಯಾಮೆರಾ ದಾಳಿ ಒಂದೆಡೆಯಾದರೆ ಮತ್ತೊಂದೆಡೆ ಹೈಕೋರ್ಟ್ ಆದೇಶವನ್ನೇ ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂಬ ಆರೋಪಗಳು ಬಂದಿವೆ.  “ಕೆಲವು ಶಿಕ್ಷಣ ಸಂಸ್ಥೆಗಳು ಮತ್ತು ಶೈಕ್ಷಣಿಕ ಜಿಲ್ಲಾಡಳಿತದಿಂದ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಾಗುತ್ತಿದೆ” ಎಂದು ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಅವರು ಶಿಕ್ಷಣ ಆಯುಕ್ತರಿಗೆ ಪತ್ರ ಬರೆದಿದ್ದಾರೆ. “ಉಲ್ಲಂಘನೆಯನ್ನು ತಕ್ಷಣವೇ ನಿಲ್ಲಿಸಲು ಜಿಲ್ಲಾ ಮತ್ತು ಬ್ಲಾಕ್‌ ಅಂತದ ಅಧಿಕಾರಿಗಳಿಗೆ ಕೂಡಲೇ ಸ್ಪಷ್ಟೀಕರಣವನ್ನು ನೀಡಬೇಕು” ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಆದೇಶವು ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಆದೇಶದ 11ನೆಯ ಕ್ರಮ ಸಂಖ್ಯೆಯಲ್ಲಿ ತಿಳಿಸಲಾಗಿದೆ. ಆದರೆ ವಿದ್ಯಾರ್ಥಿಗಳು ತಲೆಗೆ ಸ್ಕಾರ್ಫ್ ಧರಿಸದಂತೆ ನಿರ್ಬಂಧ ಹೊಂದಿರದ ಶಿಕ್ಷಣ ಸಂಸ್ಥೆಗಳ ಮೇಲೂ ನಿಷೇಧವನ್ನು ವಿಧಿಸುತ್ತಿವೆ. ಇದು ನ್ಯಾಯಾಲಯದ ಮಧ್ಯಂತರ ಆದೇಶದ ಉಲ್ಲಂಘನೆಯಲ್ಲದೆ ಮತ್ತೇನೂ ಅಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿಯಾಗಿರುವ ಹಲವು ಶಾಲೆಗಳ ಸಂಬಂಧ ಸ್ಥಳೀಯ ಅಧಿಕಾರಿಗಳಿಂದ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ನಮ್ಮೊಂದಿಗೆ ಮಾತನಾಡಿದ ಅಧಿಕಾರಿಗಳಿಗೆ ಕೋರ್ಟ್ ಆದೇಶದ ಕುರಿತು ಸ್ಪಷ್ಟತೆಗಳಿಲ್ಲ ಎಂಬುದು ಕಂಡುಬಂದಿದೆ. ಜೊತೆಗೆ ಕೆಲವು ಅಧಿಕಾರಿಗಳು ಮಾಧ್ಯಮಗಳ ಅತಿರೇಕ, ಮಾಧ್ಯಮಗಳು ಸೃಷ್ಟಿಸುತ್ತಿರುವ ಭಯದ ವಾತಾವರಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಪ್ರತಿಕ್ರಿಯೆ

ಮಂಡ್ಯ ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದ ಕುರಿತು ವರದಿಯಾದ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿಯವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು. ಘಟನೆಯ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, “ರೋಟರಿ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಬುರ್ಕಾ ತೆಗೆದಿದ್ದು ತಿಳಿಯಿತು. ನಾವು ಈ ಕುರಿತು ಯಾವುದೇ ಆದೇಶ ನೀಡಿಲ್ಲ. ಮೀಡಿಯಾದವರನ್ನು ನೋಡಿ ಹೆದರಿದ ಶಿಕ್ಷಕಿ ಭಯ ಬಿದ್ದು ತೆಗೆದಿದ್ದಾರೆ. ಆ ರೀತಿ ತೆಗೆಯುವ ಅಗತ್ಯವಿಲ್ಲ ಎಂದು ನಾವು ತಿಳಿಸಿದ್ದೇವೆ. ಇಂತಹ ಘಟನೆಗಳು ನಡೆದದ್ದು ವರದಿಯಾದರೆ ನಮ್ಮ ಗಮನಕ್ಕೆ ತನ್ನಿ, ಕ್ರಮ ಜರುಗಿಸುತ್ತೇನೆ” ಎಂದಿದ್ದಾರೆ.

ಶಿವಮೊಗ್ಗ ಡಿಡಿಪಿಐ ಎಂ.ಎನ್‌.ರಮೇಶ್‌ ಅವರೊಂದಿಗೆ ಮಾತನಾಡುತ್ತಾ, ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಮಾತು ಮುಂದುವರಿಸಿದ ಡಿಡಿಪಿಐ, “ನಾನು ಅಷ್ಟೊಂದು ಬುದ್ಧಿವಂತನಲ್ಲ. ರಾಜ್ಯಾದ್ಯಂತ ಇದೇ ಪ್ರಕರಣ ನಡೆಯುತ್ತಿದೆ. ನಾವು ಕೆಲವು ಕಡೆ ವಿದ್ಯಾರ್ಥಿಗಳನ್ನು ತಡೆದಿದ್ದೇವೆ. ಕೋರ್ಟ್ ಆದೇಶವನ್ನು ಸರಿಯಾಗಿ ತಿಳಿದುಕೊಂಡು ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ” ಎಂದರು.

ಸೂಫಿ ಸಂತರ ನಾಡು ಹೈದ್ರಾಬಾದ್ ಕರ್ನಾಟಕ. ಬಹುಶಃ ಅತಿ ಹೆಚ್ಚು ಕೋಮು ಸೌಹಾರ್ದತೆಯನ್ನು ಇಲ್ಲಿ ಕಾಣಬಹುದು. ಇಂತಹ ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದ ಯಾದಗಿರಿ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದ ಘಟನೆಯ ಕುರಿತು ಅಲ್ಲಿನ ಡಿಡಿಪಿಐ ಪ್ರತಿಕ್ರಿಯೆಯನ್ನು ನಾವು ಪಡೆದವು. ಡಿಡಿಪಿಐ ಶಾಂತಗೌಡ ಪಾಟೀಲ್‌ ಬಹಳ ವಿಷಾದದಿಂದ ಮಾಧ್ಯಮಗಳ ಕುರಿತು ಮಾತನಾಡಿದರು.

“ಶಾಲೆಗಳು ಸೋಮವಾರ ರೀಓಪನ್ ಆದವು. ಸಾಮಾನ್ಯವಾಗಿ ಎಂದಿನಂತೆ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದರು. ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತಿದ್ದೇವೆ. ಯಾವುದೇ ವಿವಾದ ಇಲ್ಲಿನ ಶಾಲೆಯಲ್ಲಿ ಇರಲಿಲ್ಲ. ಆದರೆ ಕೆಲವು ಮಾಧ್ಯಮಗಳು ಮುಂಚಿತವಾಗಿ ಹೋಗಿ ಇದನ್ನು ವಿವಾದ ಮಾಡಿವೆ. ಇಲ್ಲಿನ ಸಾರ್ವಜನಿಕರಿಗೆ ಈ ಕುರಿತು ಆಸಕ್ತಿಯೂ ಇಲ್ಲ. ವಿರೋಧನೂ ಇಲ್ಲ. ಪರವಾದ ವಾದವೂ ಇಲ್ಲ. ಆದರೆ ಮಾಧ್ಯಮಗಳು ಮಾತ್ರ ಇದನ್ನು ಸೃಷ್ಟಿಸುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದರು.

“ಕೋರ್ಟ್ ಆದೇಶದಂತೆ ಸರ್ಕಾರದ ಆದೇಶವಿತ್ತು. ಹೀಗಾಗಿ ಜಿಲ್ಲಾಡಳಿತ ನಮಗೆ ಸೂಚನೆ ನೀಡಿತ್ತು. ತರಗತಿಯಲ್ಲಿ ಕೂತಾಗ ಮಾತ್ರ ಹಿಜಾಬ್‌ ಧರಿಸದಿರಲು ಹೇಳಿದ್ದೆವು. ಆದರೆ ಶಾಲೆ ಆರಂಭಕ್ಕೂ ಮುನ್ನ ಮಾಧ್ಯಮಗಳು ಅಲ್ಲಿಗೆ ಹೋಗಿ- ನೋಡಿ, ಹಿಜಾಬ್ ಧರಿಸಿದ್ದಾರೆ, ಹಾಗೇ ಹೀಗೆ ಎಂದು ಸುದ್ದಿ ಮಾಡಲು ಶುರುಮಾಡಿದವು. ಈ ಮಾಧ್ಯಮಗಳು ಹೀಗೆ ನ್ಯೂಸ್ ಮಾಡುತ್ತಿರುವುದರಿಂದಲೇ ಸಮಸ್ಯೆಗಳು ಆಗುತ್ತಿರುವುದು” ಎಂದು ಅಭಿಪ್ರಾಯಪಟ್ಟರು ಶಾಂತಗೌಡ.


ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....