Homeಚಳವಳಿಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ಗುರು ರವಿದಾಸ್ ಜಯಂತಿ ಹಿನ್ನೆಲೆ ಪಂಜಾಬ್‌ನ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ಕ್ಕೆ ಮುಂದೂಡಲಾಗಿದೆ.

- Advertisement -
- Advertisement -

15 ರಿಂದ 16 ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಗುರು ರವಿದಾಸ್ ಅವರ ಜಯಂತಿ ಇಂದು. ಸಂತ ರವಿದಾಸ್‌ ಬರೆದಿರುವ ದೋಹೆಗಳು/ವಚನಗಳನ್ನು ಸಿಖ್ ಧರ್ಮ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನಲ್ಲಿಯೂ ಸೇರಿಸಲಾಗಿದೆ.

ಸಂತ, ಕವಿ ಸಮಾಜವನ್ನು ಸುಧಾರಿಸಲು ಮತ್ತು ಜಾತಿ ಆಧಾರಿತ ಶ್ರೇಣಿ ವ್ಯವಸ್ಥೆಯ ಪಕ್ಷಪಾತಗಳನ್ನು ತೆಗೆದುಹಾಕಲು ಧಾರ್ಮಿಕವಾಗಿ ಕೆಲಸ ಮಾಡಿದವರು. ಇವರ ಜನ್ಮದಿನವನ್ನು ಪಂಜಾಬ್, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಚಂಡೀಗಢ ಸೇರಿದಂತೆ ಉತ್ತರ ಭಾರತದಲ್ಲಿ ಆಚರಿಸಲಾಗುತ್ತದೆ.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವವನ್ನು ಮಾಘ ಪೂರ್ಣಿಮಾದಂದು  (ಮಾಘ ಮಾಸದ ಹುಣ್ಣಿಮೆಯ ದಿನ) ಆಚರಿಸಲಾಗುತ್ತದೆ. ಈ ವರ್ಷ, ಇದು ಫೆಬ್ರವರಿ 16 ರಂದು ಈ ಮಾಘ ಪೂರ್ಣಿಮಾ ಬಂದಿದೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ ಫೆ.14ರ ಬದಲು ಫೆ.20ಕ್ಕೆ ಮುಂದೂಡಿಕೆ

ಚಮ್ಮಾರ ಕುಲದಲ್ಲಿ ಜನಿಸಿದ್ದ ಇವರು, ಜಾತಿಯ ಆಧಾರದ ಮೇಲೆ ಸಮಾನತೆ ಮತ್ತು ಘನತೆಯ ನೀಡದಿರುವ ಬಗ್ಗೆ ಖಂಡಿಸಿದ್ದರು. ಲಿಂಗ ಸಮಾನತೆಯನ್ನು ಉತ್ತೇಜಿಸಿದರು. ಲಿಂಗ ಅಥವಾ ಜಾತಿಯ ಆಧಾರದ ಮೇಲೆ ಸಮಾಜದ ವಿಭಜನೆಯನ್ನು ವಿರೋಧಿಸಿದ್ದರು. ಇವರು ಭಕ್ತಿ ಚಳವಳಿಯ ಮತ್ತೊಬ್ಬ ಪ್ರಮುಖ ಕವಯರ್ತಿ ಮೀರಾ ಬಾಯಿ ಅವರ ಆಧ್ಯಾತ್ಮಿಕ ಮಾರ್ಗದರ್ಶಕರಾಗಿದ್ದರು ಎಂದು ಕೆಲವರು ಹೇಳುತ್ತಾರೆ.

ವಾರಣಾಸಿಯ ಅವರ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಶ್ರೀ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಅದ್ಧೂರಿ ಆಚರಣೆಯನ್ನು ಆಯೋಜಿಸಲಾಗಿದೆ. ಅವರ ಕೆಲವು ಅನುಯಾಯಿಗಳು ಪವಿತ್ರ ನದಿಯಲ್ಲಿ ಸ್ನಾನ ಮಾಡಿ, ಅವರ ಗೌರವಾರ್ಥವಾಗಿ ಆರತಿ ಮಾಡುತ್ತಾರೆ. ರವಿದಾಸ್ ಜನಮ್ ಆಸ್ಥಾನ ಮಂದಿರವು 1970 ರ ದಶಕದಲ್ಲಿ ಉದ್ಘಾಟನೆಗೊಂಡಿತು.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ಅಸೆಂಬ್ಲಿ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸುವುದಾಗಿ ಆಯೋಗ ಘೋಷಿಸಿದೆ.

ಮಾನವತಾವಾದದ ಕುರಿತು ಗುರು ರವಿದಾಸ್ “ಪ್ರತಿಯೊಬ್ಬ ಮಾನವರಲ್ಲಿಯೂ ದೇವರು ನೆಲೆಸಿದ್ದಾರೆ, ಜಾತಿಗಳು, ಪಂಥಗಳು ಮತ್ತು ಇತರ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಗಳ ಆಧಾರದ ಮೇಲೆ ವ್ಯಕ್ತಿಗಳನ್ನು ಪ್ರತ್ಯೇಕಿಸುವುದು ತುಂಬಾ ನಿಷ್ಪ್ರಯೋಜಕವಾಗಿದೆ” ಎಂದಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...