Homeಮುಖಪುಟಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

ಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

- Advertisement -
- Advertisement -

ದೇಶದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ನಾಯಕ, ದೇಶಪ್ರೇಮಿ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದೆ. ಆದರೆ, ಈ ಬಾರಿ ಆಘಾತಕಾರಿ ವಿಷಯವೆಂದರೆ ಗುಜರಾತ್‌ನ ಶಾಲೆಯೊಂದರಲ್ಲಿ ಗೋಡ್ಸೆ ನನ್ನ ಆದರ್ಶ ಎನ್ನುವ ವಿಷಯವನ್ನು ಪುಟ್ಟ ಮಕ್ಕಳ ತಲೆಯಲ್ಲಿ ತುಂಬಲು ಪ್ರಯತ್ನಿಸಲಾಗಿದೆ.

ಸೋಮವಾರ (ಫೆ.14) ವಲ್ಸಾದ್ ನಗರದ ಕುಸುಮ್ ವಿದ್ಯಾಲಯ ಶಾಲೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ನಡೆಸಲಾಗಿತ್ತು. 5ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು. ಬಳಿಕ ಈ ವಿಚಾರ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಒಂದು ಮಗುವಿಗೆ ಪ್ರಥಮ ಬಹುಮಾನ ನೀಡಲಾಯಿತು. ಈಗ ಈ ಸ್ಪರ್ಧೆಯ ಬಗ್ಗೆ ಸಾಕಷ್ಟು ಘರ್ಷಣೆ ಪ್ರಾರಂಭವಾಗಿದೆ. ಇದರಲ್ಲೂ 7 ರಿಂದ 12 ವರ್ಷದ ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ವಿಷಯವನ್ನು ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ ಎಂಬುದೇ ಆಘಾತಕಾರಿಯಾಗಿದೆ. ಅಹಿಂಸೆಯ ಬೋಧಕ ಗಾಂಧೀಜಿಯವರನ್ನು ಹತ್ಯೆ ಮಾಡಿದವರು ಹೇಗೆ ಆದರ್ಶರಾಗುತ್ತಾರೆ..? ಎಂದು ಗಾಂಧಿವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

स्कूल द्वारा आयोजित बाल प्रतिभा स्पर्धा का प्रेस-नोट।

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿವಾದದ ಹಿನ್ನೆಲೆಯಲ್ಲಿ ವಲ್ಸಾದ್ ಜಿಲ್ಲಾ ಕ್ರೀಡಾ ಅಧಿಕಾರಿ ಮಿತಾಬೆನ್ ಗಾವ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಗೃಹ ಸಚಿವ ಹರ್ಷ ಸಾಂಘ್ವಿ ಅವರು ಇಡೀ ಪ್ರಕರಣದ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಹೊಣೆಗಾರರ ​​ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ದೈನಿಕ್ ಭಾಸ್ಕರ್‌ ಜೊತೆಗೆ ಮಾತನಾಡಿರುವ ಕುಸುಮ ವಿದ್ಯಾಲಯದ ನಿರ್ದೇಶಕಿ ಅರ್ಚನಾಬೆನ್ ದೇಸಾಯಿ, “ಬಾಲಪ್ರತಿಭೆ ಸಂಶೋಧನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯ ಸಂಪೂರ್ಣ ಯೋಜನೆಯನ್ನು ಸರ್ಕಾರಿ ಕಾರ್ಯಾಲಯದಿಂದ ಸಿದ್ಧಪಡಿಸಲಾಗಿತ್ತು. ಹೀಗಾಗಿ ನಮ್ಮ ಶಾಲೆಯು ಸ್ಪರ್ಧೆ ನಡೆಸಲು ಸ್ಥಳವನ್ನು ಮಾತ್ರ ನೀಡಿತ್ತು. ಈ ಮೂಲಕ ವಲ್ಸಾದ್ ಸರ್ಕಾರಿ ಕಚೇರಿಯ ಆದೇಶವನ್ನು ಪಾಳಿಸಿದೆ. ಸ್ಪರ್ಧೆ ಪ್ರಾರಂಭದ ಮೊದಲು ಅದರಲ್ಲಿರುವ ವಿಷಯಗಳ ಬಗ್ಗೆ ನಮಗೆ ತಿಳಿದಿರಲಿಲ್ಲ” ಎಂದಿದ್ದಾರೆ.

“ಈ ಸ್ಪರ್ಧೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’, ‘ಆಕಾಶದಲ್ಲಿ ಹಾರಾಡುವ ಹಕ್ಕಿಗಳು ನನಗೆ ಇಷ್ಟ’ ಮತ್ತು ‘ವಿಜ್ಞಾನಿಯಾದ ನಂತರವೂ ನಾನು ಅಮೆರಿಕಕ್ಕೆ ಹೋಗುವುದಿಲ್ಲ’ ಎಂಬ ಮೂರು ವಿಷಯಗಳನ್ನು ನೀಡಲಾಗಿತ್ತು. ಈ ಮೂರು ವಿಷಯಗಳ ಬಗ್ಗೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು” ಎಂದಿದ್ದಾರೆ.

ಕಳೆದ ವರ್ಷ ನವೆಂಬರ್ 15 ರಂದು ಜಾಮ್‌ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿತ್ತು. ಜಾಮ್‌ನಗರದ ಹನುಮಾನ್ ಆಶ್ರಮದಲ್ಲಿ ಹಿಂದೂ ಸೇನೆ ಗೋಡ್ಸೆ ವಿಗ್ರಹವನ್ನು ಸ್ಥಾಪಿಸಿತ್ತು. ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡರು, ನಗರಸಭೆ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಪ್ರತಿಮೆ ಧ್ವಂಸಗೊಳಿಸಿದರು. ಬಳಿಕ ಉಭಯ ನಾಯಕರ ಮೇಲೆ ಪೊಲೀಸ್ ದೂರು ದಾಖಲಾಗಿತ್ತು.


ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಗಾಂಧಿ ಭಾರತವನ್ನು, ಗೋಡ್ಸೆ ಭಾರತವನ್ನಾಗಿ ಪರಿವರ್ತನೆ ಮಾಡಲು ನಾಂದಿ ಹಾಡಿದ್ದಾರೆ. ಈ ದೇಶದ ಪ್ರಜ್ಞಾವಂತ ಜನರು, ಇದನ್ನು ತಡೆಯದಿದ್ದಲ್ಲಿ, ನಮ್ಮ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...