Homeಮುಖಪುಟಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

ಗುಜರಾತ್: ಚರ್ಚಾ ಸ್ಪರ್ಧೆಯಲ್ಲಿ ಮಕ್ಕಳಿಗೆ ’ನನ್ನ ಆದರ್ಶ ಗೋಡ್ಸೆ’ ವಿಷಯ, ವ್ಯಾಪಕ ಖಂಡನೆ

- Advertisement -
- Advertisement -

ದೇಶದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ನಾಯಕ, ದೇಶಪ್ರೇಮಿ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದೆ. ಆದರೆ, ಈ ಬಾರಿ ಆಘಾತಕಾರಿ ವಿಷಯವೆಂದರೆ ಗುಜರಾತ್‌ನ ಶಾಲೆಯೊಂದರಲ್ಲಿ ಗೋಡ್ಸೆ ನನ್ನ ಆದರ್ಶ ಎನ್ನುವ ವಿಷಯವನ್ನು ಪುಟ್ಟ ಮಕ್ಕಳ ತಲೆಯಲ್ಲಿ ತುಂಬಲು ಪ್ರಯತ್ನಿಸಲಾಗಿದೆ.

ಸೋಮವಾರ (ಫೆ.14) ವಲ್ಸಾದ್ ನಗರದ ಕುಸುಮ್ ವಿದ್ಯಾಲಯ ಶಾಲೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’ ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆಯನ್ನು ನಡೆಸಲಾಗಿತ್ತು. 5ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು. ಬಳಿಕ ಈ ವಿಚಾರ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಒಂದು ಮಗುವಿಗೆ ಪ್ರಥಮ ಬಹುಮಾನ ನೀಡಲಾಯಿತು. ಈಗ ಈ ಸ್ಪರ್ಧೆಯ ಬಗ್ಗೆ ಸಾಕಷ್ಟು ಘರ್ಷಣೆ ಪ್ರಾರಂಭವಾಗಿದೆ. ಇದರಲ್ಲೂ 7 ರಿಂದ 12 ವರ್ಷದ ಪ್ರಾಥಮಿಕ ಶಾಲಾ ಮಕ್ಕಳಿಗೆ ಈ ವಿಷಯವನ್ನು ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ ಎಂಬುದೇ ಆಘಾತಕಾರಿಯಾಗಿದೆ. ಅಹಿಂಸೆಯ ಬೋಧಕ ಗಾಂಧೀಜಿಯವರನ್ನು ಹತ್ಯೆ ಮಾಡಿದವರು ಹೇಗೆ ಆದರ್ಶರಾಗುತ್ತಾರೆ..? ಎಂದು ಗಾಂಧಿವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

स्कूल द्वारा आयोजित बाल प्रतिभा स्पर्धा का प्रेस-नोट।

ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿವಾದದ ಹಿನ್ನೆಲೆಯಲ್ಲಿ ವಲ್ಸಾದ್ ಜಿಲ್ಲಾ ಕ್ರೀಡಾ ಅಧಿಕಾರಿ ಮಿತಾಬೆನ್ ಗಾವ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಗೃಹ ಸಚಿವ ಹರ್ಷ ಸಾಂಘ್ವಿ ಅವರು ಇಡೀ ಪ್ರಕರಣದ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಹೊಣೆಗಾರರ ​​ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ದೈನಿಕ್ ಭಾಸ್ಕರ್‌ ಜೊತೆಗೆ ಮಾತನಾಡಿರುವ ಕುಸುಮ ವಿದ್ಯಾಲಯದ ನಿರ್ದೇಶಕಿ ಅರ್ಚನಾಬೆನ್ ದೇಸಾಯಿ, “ಬಾಲಪ್ರತಿಭೆ ಸಂಶೋಧನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯ ಸಂಪೂರ್ಣ ಯೋಜನೆಯನ್ನು ಸರ್ಕಾರಿ ಕಾರ್ಯಾಲಯದಿಂದ ಸಿದ್ಧಪಡಿಸಲಾಗಿತ್ತು. ಹೀಗಾಗಿ ನಮ್ಮ ಶಾಲೆಯು ಸ್ಪರ್ಧೆ ನಡೆಸಲು ಸ್ಥಳವನ್ನು ಮಾತ್ರ ನೀಡಿತ್ತು. ಈ ಮೂಲಕ ವಲ್ಸಾದ್ ಸರ್ಕಾರಿ ಕಚೇರಿಯ ಆದೇಶವನ್ನು ಪಾಳಿಸಿದೆ. ಸ್ಪರ್ಧೆ ಪ್ರಾರಂಭದ ಮೊದಲು ಅದರಲ್ಲಿರುವ ವಿಷಯಗಳ ಬಗ್ಗೆ ನಮಗೆ ತಿಳಿದಿರಲಿಲ್ಲ” ಎಂದಿದ್ದಾರೆ.

“ಈ ಸ್ಪರ್ಧೆಯಲ್ಲಿ ‘ನನ್ನ ಆದರ್ಶ ನಾಥೂರಾಂ ಗೋಡ್ಸೆ’, ‘ಆಕಾಶದಲ್ಲಿ ಹಾರಾಡುವ ಹಕ್ಕಿಗಳು ನನಗೆ ಇಷ್ಟ’ ಮತ್ತು ‘ವಿಜ್ಞಾನಿಯಾದ ನಂತರವೂ ನಾನು ಅಮೆರಿಕಕ್ಕೆ ಹೋಗುವುದಿಲ್ಲ’ ಎಂಬ ಮೂರು ವಿಷಯಗಳನ್ನು ನೀಡಲಾಗಿತ್ತು. ಈ ಮೂರು ವಿಷಯಗಳ ಬಗ್ಗೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು” ಎಂದಿದ್ದಾರೆ.

ಕಳೆದ ವರ್ಷ ನವೆಂಬರ್ 15 ರಂದು ಜಾಮ್‌ನಗರದಲ್ಲಿ ನಾಥೂರಾಂ ಗೋಡ್ಸೆ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಸಾಕಷ್ಟು ವಿವಾದ ಉಂಟಾಗಿತ್ತು. ಜಾಮ್‌ನಗರದ ಹನುಮಾನ್ ಆಶ್ರಮದಲ್ಲಿ ಹಿಂದೂ ಸೇನೆ ಗೋಡ್ಸೆ ವಿಗ್ರಹವನ್ನು ಸ್ಥಾಪಿಸಿತ್ತು. ಸುದ್ದಿ ತಿಳಿದ ಕಾಂಗ್ರೆಸ್ ಮುಖಂಡರು, ನಗರಸಭೆ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಪ್ರತಿಮೆ ಧ್ವಂಸಗೊಳಿಸಿದರು. ಬಳಿಕ ಉಭಯ ನಾಯಕರ ಮೇಲೆ ಪೊಲೀಸ್ ದೂರು ದಾಖಲಾಗಿತ್ತು.


ಇದನ್ನೂ ಓದಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು ಗಾಂಧಿ ಭಾರತವನ್ನು, ಗೋಡ್ಸೆ ಭಾರತವನ್ನಾಗಿ ಪರಿವರ್ತನೆ ಮಾಡಲು ನಾಂದಿ ಹಾಡಿದ್ದಾರೆ. ಈ ದೇಶದ ಪ್ರಜ್ಞಾವಂತ ಜನರು, ಇದನ್ನು ತಡೆಯದಿದ್ದಲ್ಲಿ, ನಮ್ಮ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...