Homeಕರ್ನಾಟಕಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಉನ್ನತ ಶಿಕ್ಷಣ ಸಚಿವರು ಸೋಮವಾರ ಹೇಳಿದ್ದರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನಿರಾಕರಿಸಿದ ಕಾರಣ 11 ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗದೇ ಮನೆಗೆ ಹಿಂತಿರುಗಿದ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ.

ಸೋಮವಾರವಷ್ಟೇ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥನಾರಾಯಣ ಅವರು ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಚಾಮರಾಜನಗರದಲ್ಲಿ ಮಾತನಾಡುತ್ತಾ ಹೇಳಿದ್ದರು. ಅಲ್ಲದೆ, ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆ ನೀಡಿದ್ದ ಮಧ್ಯಂತರ ಆದೇಶ, “ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಶಿಕ್ಷಣತಜ್ಞ ನಿರಂಜನಾರಾಧ್ಯ ಹಾಗೂ ಹೈಕೋರ್ಟ್ ವಕೀಲರಾದ ಎಸ್‌. ಬಾಲನ್‌ ಅವರು ಹೇಳಿದ್ದಾರೆ. (ವಿಡಿಯೊ ನೋಡಿ)

 

ಈ ಮಧ್ಯೆ ಹಲವಾರು ಶಾಲಾ-ಕಾಲೇಜುಗಳು ಕೋರ್ಟ್‌ನ ಮಧ್ಯಂತರ ಆದೇಶವನ್ನು ತಪ್ಪಾಗಿ ತಿಳಿದುಕೊಂಡು, ತಮ್ಮ ವಿದ್ಯಾರ್ಥಿಗಳನ್ನು ಮಾಧ್ಯಮಗಳ ಕೈಗೆ ಬಿಟ್ಟುಕೊಡುತ್ತಿವೆ. ಇದರ ವಿರುದ್ದ ಕೂಡಾ ದೇಶದಾದ್ಯಂತ ಗಣ್ಯರು ಧ್ವನಿ ಎತ್ತಿದ್ದು, ಇಂತಹ ಜನರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ.

ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ತರಗತಿಗೆ ಹೋಗಲು ಮುಂದಾಗಿದ್ದರು. ಆದರೆ ಪ್ರಾಂಶುಪಾಲರಾದ ಶ್ರೀಜಾ ಅವರು ಹಿಜಾಬ್ ಧರಿಸಿ, ತರಗತಿ ಒಳಗಡೆ ಪ್ರವೇಶಿಸಬಾರದು, ಈ ಬಗ್ಗೆ ನ್ಯಾಯಾಲಯದ ಆದೇಶ ಕೂಡ ಇದೆ ಎಂದಿದ್ದಾರೆ ಎಂದು ಸ್ಥಳೀಯ ವೆಬ್‌ಸೈಟ್‌‌ ವರದಿ ಮಾಡಿದೆ. ಪ್ರಾಂಶುಪಾಲರು ತರಗತಿಗೆ ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು ನೇರವಾಗಿ ಮನೆಗೆ ತೆರಳಿದ್ದಾರೆ ಎಂದು ಅದು ತನ್ನ ವರದಿಯಲ್ಲಿ ಹೇಳಿದೆ.

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಒಳಪಟ್ಟಿದೆಯಾದ್ದರಿಂದ ನಾನುಗೌರಿ.ಕಾಂ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಕಿಶೋರ್‌ ಕುಮಾರ್‌‌ ಸಿ.ಕೆ. ಅವರನ್ನು ಸಂರ್ಪಕಿಸಿ, ವಿಟ್ಲ ಕಾಲೇಜಿನ ಬಗ್ಗೆ ಕೇಳಿದಾಗ, “ಕೋರ್ಟ್‌‌ನ ಮಧ್ಯಂತರ ಆದೇಶ ಎಲ್ಲಾ ಕಾಲೇಜಿಗೆ ಅನ್ವಯವಾಗುತ್ತದೆ” ಎಂದು ಸಮರ್ಥಿಸಿಕೊಂಡರು. ನಂತರ ನಾನುಗೌರಿ.ಕಾಂ ಸಮವಸ್ತ್ರದ ಬಗ್ಗೆ ಸಚಿವ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಮತ್ತು ಕೋರ್ಟ್‌ನ ಮಧ್ಯಂತರ ಆದೇಶದ ಅಂಶವನ್ನು ಅವರ ಗಮನಕ್ಕೆ ತಂದಿತು. ನಂತರ ಮಾತನಾಡಿದ ಅವರು, “ಈ ಬಗ್ಗೆ ನಾನು ಕಾಲೇಜಿನ ಪ್ರಾಂಶುಪಾಲರಿಗೆ ಮಾತನಾಡಿ, ಈ ಬಗ್ಗೆ ಅವರಲ್ಲಿ ವಿಚಾರಿಸುತ್ತೇನೆ ಮತ್ತು ಮಾಹಿತಿ ನೀಡಿದ್ದಕ್ಕಾಗಿ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಜಾ ಅವರನ್ನು ಮಾತನಾಡಿಸಿ ಸಚಿವರ ಹೇಳಿಕೆ ಮತ್ತು ನ್ಯಾಯಾಲಯದ ಮಧ್ಯಂತರ ಆದೇಶದ ಅಂಶಗಳನ್ನು ಗಮನಕ್ಕೆ ತಂದಿದ್ದೇವೆ. ನಂತರ ಯಾವ ಆಧಾರದಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರನ್ನು ಪ್ರಶ್ನಿಸಿದಾಗ, “ಈ ಬಗ್ಗೆ ನಾನು ನನ್ನ ಮೇಲಾಧಿಕಾರಿಗೆ ಹೇಳುತ್ತೇನೆ” ಎಂದಷ್ಟೇ ಹೇಳಿ, ಮುಂದುವರೆದು ಮಾತನಾಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಮುಂಡಗೋಡ ಪದವಿ ಕಾಲೇಜಿನಲ್ಲಿ ಕೂಡ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಿಲ್ಲ ಅವರನ್ನು ಗೇಟಿನ ಹೊರಗಡೆ ನಿಲ್ಲಿಸಲಾಯಿತು

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...