Homeಕರ್ನಾಟಕಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಹಿಜಾಬ್‌‌ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿದ ವಿಟ್ಲ ಪದವಿ ಕಾಲೇಜಿನ ಪ್ರಾಂಶುಪಾಲೆ!

ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಉನ್ನತ ಶಿಕ್ಷಣ ಸಚಿವರು ಸೋಮವಾರ ಹೇಳಿದ್ದರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನಿರಾಕರಿಸಿದ ಕಾರಣ 11 ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗದೇ ಮನೆಗೆ ಹಿಂತಿರುಗಿದ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ.

ಸೋಮವಾರವಷ್ಟೇ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥನಾರಾಯಣ ಅವರು ಪದವಿ ಕಾಲೇಜಿಗೆ ಯಾವುದೆ ಸಮವಸ್ತ್ರ ಇಲ್ಲ, ವಿದ್ಯಾರ್ಥಿಗಳು ತಮ್ಮ ಇಷ್ಟದ ವಸ್ತ್ರಗಳನ್ನು ಧರಿಸಿಕೊಂಡು ಬರಬಹುದು ಎಂದು ಚಾಮರಾಜನಗರದಲ್ಲಿ ಮಾತನಾಡುತ್ತಾ ಹೇಳಿದ್ದರು. ಅಲ್ಲದೆ, ಹಿಜಾಬ್‌ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯ ಮಧ್ಯೆ ನೀಡಿದ್ದ ಮಧ್ಯಂತರ ಆದೇಶ, “ಕೇವಲ ದಾವೆ ಹೂಡಿದ ವಿದ್ಯಾರ್ಥಿನಿಯರು ಓದುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ” ಎಂದು ಶಿಕ್ಷಣತಜ್ಞ ನಿರಂಜನಾರಾಧ್ಯ ಹಾಗೂ ಹೈಕೋರ್ಟ್ ವಕೀಲರಾದ ಎಸ್‌. ಬಾಲನ್‌ ಅವರು ಹೇಳಿದ್ದಾರೆ. (ವಿಡಿಯೊ ನೋಡಿ)

 

ಈ ಮಧ್ಯೆ ಹಲವಾರು ಶಾಲಾ-ಕಾಲೇಜುಗಳು ಕೋರ್ಟ್‌ನ ಮಧ್ಯಂತರ ಆದೇಶವನ್ನು ತಪ್ಪಾಗಿ ತಿಳಿದುಕೊಂಡು, ತಮ್ಮ ವಿದ್ಯಾರ್ಥಿಗಳನ್ನು ಮಾಧ್ಯಮಗಳ ಕೈಗೆ ಬಿಟ್ಟುಕೊಡುತ್ತಿವೆ. ಇದರ ವಿರುದ್ದ ಕೂಡಾ ದೇಶದಾದ್ಯಂತ ಗಣ್ಯರು ಧ್ವನಿ ಎತ್ತಿದ್ದು, ಇಂತಹ ಜನರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ.

ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ತರಗತಿಗೆ ಹೋಗಲು ಮುಂದಾಗಿದ್ದರು. ಆದರೆ ಪ್ರಾಂಶುಪಾಲರಾದ ಶ್ರೀಜಾ ಅವರು ಹಿಜಾಬ್ ಧರಿಸಿ, ತರಗತಿ ಒಳಗಡೆ ಪ್ರವೇಶಿಸಬಾರದು, ಈ ಬಗ್ಗೆ ನ್ಯಾಯಾಲಯದ ಆದೇಶ ಕೂಡ ಇದೆ ಎಂದಿದ್ದಾರೆ ಎಂದು ಸ್ಥಳೀಯ ವೆಬ್‌ಸೈಟ್‌‌ ವರದಿ ಮಾಡಿದೆ. ಪ್ರಾಂಶುಪಾಲರು ತರಗತಿಗೆ ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು ನೇರವಾಗಿ ಮನೆಗೆ ತೆರಳಿದ್ದಾರೆ ಎಂದು ಅದು ತನ್ನ ವರದಿಯಲ್ಲಿ ಹೇಳಿದೆ.

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಒಳಪಟ್ಟಿದೆಯಾದ್ದರಿಂದ ನಾನುಗೌರಿ.ಕಾಂ ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಕಿಶೋರ್‌ ಕುಮಾರ್‌‌ ಸಿ.ಕೆ. ಅವರನ್ನು ಸಂರ್ಪಕಿಸಿ, ವಿಟ್ಲ ಕಾಲೇಜಿನ ಬಗ್ಗೆ ಕೇಳಿದಾಗ, “ಕೋರ್ಟ್‌‌ನ ಮಧ್ಯಂತರ ಆದೇಶ ಎಲ್ಲಾ ಕಾಲೇಜಿಗೆ ಅನ್ವಯವಾಗುತ್ತದೆ” ಎಂದು ಸಮರ್ಥಿಸಿಕೊಂಡರು. ನಂತರ ನಾನುಗೌರಿ.ಕಾಂ ಸಮವಸ್ತ್ರದ ಬಗ್ಗೆ ಸಚಿವ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಮತ್ತು ಕೋರ್ಟ್‌ನ ಮಧ್ಯಂತರ ಆದೇಶದ ಅಂಶವನ್ನು ಅವರ ಗಮನಕ್ಕೆ ತಂದಿತು. ನಂತರ ಮಾತನಾಡಿದ ಅವರು, “ಈ ಬಗ್ಗೆ ನಾನು ಕಾಲೇಜಿನ ಪ್ರಾಂಶುಪಾಲರಿಗೆ ಮಾತನಾಡಿ, ಈ ಬಗ್ಗೆ ಅವರಲ್ಲಿ ವಿಚಾರಿಸುತ್ತೇನೆ ಮತ್ತು ಮಾಹಿತಿ ನೀಡಿದ್ದಕ್ಕಾಗಿ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಜಾ ಅವರನ್ನು ಮಾತನಾಡಿಸಿ ಸಚಿವರ ಹೇಳಿಕೆ ಮತ್ತು ನ್ಯಾಯಾಲಯದ ಮಧ್ಯಂತರ ಆದೇಶದ ಅಂಶಗಳನ್ನು ಗಮನಕ್ಕೆ ತಂದಿದ್ದೇವೆ. ನಂತರ ಯಾವ ಆಧಾರದಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರನ್ನು ಪ್ರಶ್ನಿಸಿದಾಗ, “ಈ ಬಗ್ಗೆ ನಾನು ನನ್ನ ಮೇಲಾಧಿಕಾರಿಗೆ ಹೇಳುತ್ತೇನೆ” ಎಂದಷ್ಟೇ ಹೇಳಿ, ಮುಂದುವರೆದು ಮಾತನಾಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಮುಂಡಗೋಡ ಪದವಿ ಕಾಲೇಜಿನಲ್ಲಿ ಕೂಡ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಿಲ್ಲ ಅವರನ್ನು ಗೇಟಿನ ಹೊರಗಡೆ ನಿಲ್ಲಿಸಲಾಯಿತು

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...