Homeಮುಖಪುಟಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.

ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ’ಭಾರತೀಯ ಜನತಾ ಪಕ್ಷವು ಸೋಲುವುದು ಖಚಿತ ಮತ್ತು ಹೊಸ ಸರ್ಕಾರವನ್ನು ರಚಿಸುವುದಿಲ್ಲ. ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಆರಾಮವಾಗಿ 202 ಸ್ಥಾನಗಳನ್ನು ದಾಟುತ್ತವೆ ಮತ್ತು ತಮ್ಮದೇ ಆದ ಬಹುಮತವನ್ನು ಪಡೆಯುತ್ತವೆ. ಬೇರೆ ಪಕ್ಷಗಳ ಬೆಂಬಲದ ಅಗತ್ಯವಿಲ್ಲದೆ ಅವರು ಸರ್ಕಾರ ರಚಿಸುತ್ತಾರೆ” ಎಂದಿದ್ದಾರೆ.

ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಮಾಜಿ ಉಪಕುಲಪತಿಯೂ ಆಗಿರುವ ನಜೀಬ್ ಜಂಗ್ ಯುಪಿಯಲ್ಲಿ ಬಿಜೆಪಿ ಸೋಲಿನತ್ತ ಸಾಗುತ್ತಿರುವುದಕ್ಕೆ ನಾಲ್ಕು ನಿರ್ಣಾಯಕ ಕಾರಣಗಳನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ

ಮೊದಲನೆಯದು ಈ ಬಾರಿ ನರೇಂದ್ರ ಮೋದಿ ಅವರು ಬಿಜೆಪಿ ಪ್ರಚಾರದ ಮುಖವಾಗಿಲ್ಲ, ಅವರ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್  ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂಬುದು ಅತ್ಯಂತ ಮುಖ್ಯವಾದ ಅಂಶವಾಗಿದೆ. ಎರಡನೇಯದು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಅಸಮಾಧಾನ ಮತ್ತು ಕೋಪ. ಮೂರನೇಯದು ಬಿಡಾಡಿ ಹಸುಗಳ ವ್ಯಾಪಕ ಸಮಸ್ಯೆ ಮತ್ತು ಕೊನೆಯದಾಗಿ ನಿರುದ್ಯೋಗ.

ನಿರುದ್ಯೋಗ ಬಹುಶಃ ಇತರ ರಾಜ್ಯಗಳಿಗಿಂತ ಯುಪಿಯಲ್ಲಿ ಹೆಚ್ಚಾಗಿದ್ದು, ವಿಶೇಷವಾಗಿ ಯುವ ಜನತೆಯ ಮೇಲೆ ಪರಿಣಾಮ ಬೀರಿದೆ. ಇದರ ಜೊತೆಗೆ ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಅಸಮರ್ಥ ನಿರ್ವಹಣೆ ಮತ್ತು ಅದು ಸೃಷ್ಟಿಸಿದ ಆಘಾತವನ್ನು ಇಲ್ಲಿನ ಜನ ಇನ್ನು  ಮರೆತಿಲ್ಲ ಎಂದಿದ್ದಾರೆ.

ಯೋಗಿ ಆದಿತ್ಯನಾಥ್‌ಗೆ ವ್ಯತಿರಿಕ್ತವಾಗಿ, ಅಖಿಲೇಶ್ ಯಾದವ್ ಅವರು ಹಿಂದುತ್ವದ ಸವಾಲನ್ನು ನಿಭಾಯಿಸಿದ್ದಾರೆ. ಅವರು ಯಾದವ್ ಒಬಿಸಿಗಳನ್ನು ಮಾತ್ರವಲ್ಲದೆ ಯಾದವೇತರ ಒಬಿಸಿಗಳನ್ನು ಆಕರ್ಷಿಸಿದ್ದಾರೆ. ಇದರಿಂದ ಬಿಜೆಪಿಯಿಂದ ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳಿಗೆ ಹಲವರು ಸೇರ್ಪಡೆಯಾಗಿದ್ದಾರೆ. ಇದರ ಜೊತೆಗೆ 80% ಅಥವಾ ಹೆಚ್ಚಿನ ಮುಸ್ಲಿಮರು ಸಮಾಜವಾದಿ ಪಕ್ಷಕ್ಕೆ ಮತ ಹಾಕುತ್ತಾರೆ (2017 ರಲ್ಲಿ 58%). ಮತ್ತೊಂದೆಡೆ, ಬ್ರಾಹ್ಮಣರು ಅಧಿಕ ಸಂಖ್ಯೆಯಲ್ಲಿ ಬಿಜೆಪಿಯಿಂದ ದೂರ ಸರಿದಿದ್ದಾರೆ. ಬಹುಶಃ ಕಾಂಗ್ರೆಸ್‌ಗೆ ಅವರು ಮತಹಾಕಲಿದ್ದು, ಅವರು ಸಮಾಜವಾದಿ ಪಕ್ಷಕ್ಕೆ ಮತ ಹಾಕುವ ಸಾಧ್ಯತೆ ಕಡಿಮೆ. ಇದು ಬಿಜೆಪಿಯನ್ನು ದುರ್ಬಲಗೊಳಿಸುವುದು ನಿಶ್ಚಿತ ಎಂದು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಇತ್ತ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉತ್ತರ ಪ್ರದೇಶದಲ್ಲಿ ನಡೆದಿರುವ ಎರಡನೇ ಹಂತದ ಮತದಾನದ ನಂತರ,  “ಬಿಜೆಪಿ ಮೊದಲ ಬಾರಿಗೆ ಎರಡು ಹಂತಗಳಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ” ಎಂದು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲು ತಿಳಿಸಿದ್ದಾರೆ.

“ಮೊದಲ ಹಂತದಲ್ಲಿ ಬಿಜೆಪಿ ಕೇವಲ 17 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಎರಡನೇ ಹಂತದಲ್ಲಿ ಪಕ್ಷವು ಅಷ್ಟೇ ಕೆಟ್ಟದ್ದನ್ನು ಮಾಡಿದೆ” ಎಂದು ಭಾಗವತ್ ಅವರನ್ನು ಉಲ್ಲೇಖಿಸಿ ಆರ್‌ಎಸ್‌ಎಸ್ ಹಿರಿಯ ಕಾರ್ಯಕಾರಿಯೊಬ್ಬರು ಹೇಳಿದ್ದಾರೆ.

ಯುಪಿಯಲ್ಲಿ ಫೆಬ್ರವರಿ 10 ರಂದು ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ 58 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017 ರಲ್ಲಿ ಬಿಜೆಪಿ ಈ ಪೈಕಿ 53 ಸ್ಥಾನಗಳನ್ನು ಗೆದ್ದಿದ್ದರೆ, ಆರೆಸ್ಸೆಸ್ ಐಬಿ ಇನ್‌ಪುಟ್ ಆಧರಿಸಿ ಈ ಬಾರಿ 17 ಸ್ಥಾನಗಳನ್ನು ಗೆಲ್ಲಲಿದೆ. ಫೆಬ್ರವರಿ 14 ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಕನಿಷ್ಠ 55 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. 2017ರಲ್ಲಿ ಬಿಜೆಪಿ ಈ ಪೈಕಿ 38 ಸ್ಥಾನಗಳನ್ನು ಗೆದ್ದಿತ್ತು ಮತ್ತು ಈ ಬಾರಿ ಅರ್ಧದಷ್ಟು ಸ್ಥಾನಗಳನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ಆರ್‌ಎಸ್‌ಎಸ್‌ ಲೆಕ್ಕಾಚಾರ.

ಸಂಘದ ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ಮಾಡಲು ಮತ್ತು ಬಿಜೆಪಿಗೆ ಮತ ಹಾಕಲು ಹಿಂದೂಗಳನ್ನು ಪ್ರೇರೇಪಿಸಲು ಸಭೆಯಲ್ಲಿ ಕೇಳಿಕೊಳ್ಳಲಾಗಿದೆ. “ಇದು ತುಂಬಾ ಸ್ಪಷ್ಟವಾಗಿದೆ. ಯೋಗಿ 2022ರ ಚುನಾವಣೆಯಲ್ಲಿ ಸೋತರೆ, 2024ರಲ್ಲಿ ಮೋದಿ ಸೋಲುವುದು ನಿಶ್ಚಿತ” ಎಂದು ಸಂಘದ ಪ್ರಚಾರಕ ಹೇಳಿದ್ದಾರೆ.

ಒಟ್ಟಾರೆ 2017 ರಲ್ಲಿ ಗೆಲುವಿನ ತುತ್ತತುದಿಗೆ ಏರಿದ್ದ ಬಿಜೆಪಿ ಈ ಬಾರಿ ಕೆಳಗೆ ಬೀಳುವುದು ಖಚಿತ ಎನ್ನುವ ಮಾತುಗಳು ಕೇಳಿ ಬಂದಿವೆ. ವಿವಾದಿತ ಕೃಷಿ ಕಾನೂನುಗಳ ವಿವಾದ, ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ, ಬಿಡಾಡಿ ದನಗಳ ಹಾವಳಿ ಮತ್ತು ನಿರುದ್ಯೋಗ ಯುಪಿಯ ಬಿಜೆಪಿ ಸರ್ಕಾರಕ್ಕೆ ಕಗ್ಗಂಟಾಗಿದೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...