Homeಅಂಕಣಗಳುಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

- Advertisement -
- Advertisement -

ಯಾವುದೇ ಪಕ್ಷವಾದರೂ ಹೊಂದಿಕೊಂಡು ಆ ಪಕ್ಷದ ವಕ್ತಾರನಂತೆ ಮಾತನಾಡುತ್ತ ಪಾರ್ಟಿಯ ಮಾನ ಮರ್ಯಾದೆ ಕಾಪಾಡುವಂತಹ ಶಿವರಾಮೇಗೌಡರನ್ನ ಮಾತನಾಡಿಸಿ, ಅವರು ಜೆಡಿಎಸ್‌ನಿಂದ ವಜಾಗೊಂಡಿರುವ ಸಮಯದಲ್ಲಿ ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೆ ಎಂದು ಯೋಚಿಸಿ ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ “ಯಾರು ಏನು ಮಾಡುವರು, ನನಗೇನೂ ಕೇಡು ಮಾಡುವರು, ಯಾರು…”

“ಹಲೋ ಯಾರು”

“ನಾನು ಸಾರ್ ನಿಮ್ಮ ಹಿತೈಷಿ ಯಾಹೂ.”

“ಹಿತೈಷಿ ಅನ್ನೊರಿಂದ್ಲೆ ಹಿಂಗಾದದ್ದು ಕಂಡ್ರಿ.”

“ನಾವಂಥೋರಲ್ಲ ಸಾ. ನೀವು ಮಾತಾಡಿದ್ದ ನಿಮ್ಮ ಬುಡಕೆ ತರೋದಿಲ್ಲ ಸಾ.”

“ಆಕೆ ಹೆಣ್ಣುಮಗಳು ವಳ್ಯೊಳು ಅಂತ ಮಾತಾಡಿದ್ನಪ್ಪ, ಹಿಂಗೆ ಮಾಡ್ತಳೆ ಅಂತ ಯಾರಿಗೊತ್ತು.”

“ಆಗೊದ್ಯಲ್ಲ ವಳ್ಳೆದ್ಕೆ ಅಂತ ಭಗವದ್ಗೀತೆ ಹೇಳ್ಯದೆ ಸಾ.”

“ಏನೊಳ್ಳೆದಾಯ್ತದೆ.”

“ಡಿ.ಕೆ ಶಿವಕುಮಾರ್ ಮತ್ತೆ ನೀವು ಆತ್ಮೀಯ ಗೆಳೆಯರಲ್ಲವ ಸಾ.”

“ಅದೇನೊ ನಿಜ.”

“ಮತ್ತೆ ಅವುರು ಮುಂದೆ ಪವರಿಗೆ ಬತ್ತಾಯಿರುವಾಗ ನೀವು ಜೆಡಿಎಸ್ಸಿನಲ್ಲಿರದು ಸರೀನಾ ಸಾರ್.”

“ನೀವೇಳಿದ್ದು ಸರಿನೆ, ಅದ್ರೆ ಕುಮಾರಣ್ಣ ನನ್ನ ಬುಟ್ಟು ಯಾರು ಸರಕಾರ ಮಾಡ್ತರೆ ನೋಡ್ತಿನಿ ಅಂದವುನಲಾ.”

“ಅಷ್ಟ್‌ವೊತ್ತಿಗೆ ಏನಾಗ್ತದೊ ಏನೋ, ಯಾರು ಕಂಡವುರೆ, ನೀವು ಡಿ.ಕೆಶಿಗೆ ತುಂಬ ಬೇಕಾದೊರಾದಾಗ ನಿಮ್ಮನ್ನ ನೆಗ್ಲೆಟ್ ಮಾಡಕ್ಕೆ ಬರಲ.”

“ನನ್ನನ್ನ ಯಾರೂ ನೆಗ್ಲೆಟ್ ಮಾಡಕ್ಕಾಗಲ್ಲ ಕಂಡ್ರಿ.”

“ಆಗಲ್ಲ ಸಾರ್, ಪವರಿಗೆ ಬಂದವುರ ಮನೆ ಬಾಗ್ಲಲ್ಲಿ ದಿನ ಹೋಗಿ ನಿಂತಗತ್ತಿರಿ, ಒಂದಿನ ವಳಿಗೆ ಕರದೇ ಕರಿತರೆ.”

“ಏನೇಳ್ತಯಿದ್ದಿರಿ ನೀವು.”

“ಆಗ ದೇವೆಗೌಡ್ರಿಗೆ ಅಂಗೆ ಮಾಡಿದ್ರಲ್ಲ ಸಾರ್, ಅವರು ಮುಖ್ಯಮಂತ್ರಿಯಾಗಿದ್ದಾಗ ಅಪ್ಪಾಜಿ, ಅಪ್ಪಾಜಿ ಅಂತ ಮನೆತಕ್ಕೊಗಿ ಕೂಗುತಿದ್ರಿ ಪಾಪ. ಅವುರ ಮಕ್ಕಾಳ್ಯಾರು ಅಂಗೆ ಕರಿತಿರಲಿಲ್ಲ. ಯಲ್ಲ ಯಪ್ಪ ಯಪ್ಪ ಅಂತಿದ್ದೊ ನೀವು ಅಪ್ಪಾಜಿ ಅಂತ ಕಾಲಿಗೆ ಬಿದ್ದಿದ್ದು ವರ್ಕೌಟಾಯ್ತು, ಹೌಸಿಂಗ್ ಬೋರ್ಡ್ ಛೇರ್ಮನ್ ಮಾಡಿದ್ರು.”

“ಅದ್ಯಲ್ಲ ಹಳೆ ಕತೆ, ಈಗಂಗಿಲ್ಲ ಅವುರು.”

“ನೀವಂಗೆ ಇದ್ದಿರಲ್ಲ ಸಾ, ನೀವು ಬದ್ಲಾಗಿದ್ರೆ ಹಿಂಗ್ಯಾಕಾಗದು.”

“ಅಲ್ಲ ಕಂಡ್ರಿ, ಸತ್ಯ ಮಾತಾಡದು ತಪ್ಪ.”

“ಏನು ಸತ್ಯ ಮಾತಾಡಿದ್ರಿ.”

“ಆ ಮಾದೇಗೌಡ ನನಿಗೆ ಎರಡು ಸತಿ ಟಿಕೆಟ್ ತಪ್ಪಿಸಿದ. ನಾನು ನಮ್ಮೂರಲ್ಲಿ ಒಬ್ಬನ ಮನೆ ಮ್ಯಾಲೆ ದಾಳಿ ಮಾಡಿಸಿದೆ. ಅದ ನೋಡಕ್ಕೆ ಬಂದ ಮಾದೇಗೌಡನಿಗೆ ನನ್ನ ಕಂಡ್ರಾಯ್ತಿರಲಿಲ್ಲ. ಸೋಲಂಗೆ ಮಾಡಿದ. ಆಗ ನಾನು ಗೆದ್ದಿದ್ರೆ ಯಸ್ಸೆಂ ಕೃಷ್ಣನ ಸಂಪುಟದಲ್ಲಿ ಡಿ.ಕೆ ಶಿವಕುಮಾರ್ ಜೊತೆ ನಾನು ಮಂತ್ರಿಯಾಯ್ತಿದ್ದೆ. ಡ್ರಸ್‌ನೂ ಕೂಡ ವಲಿಸಿದ್ದೆ ಕಂಡ್ರಿ, ವಟ್ಟುರಿಯಕ್ಕಿಲ್‌ವೆ ನನಿಗೆ.”

“ಡಿ.ಕೆ ಶಿವಕುಮಾರ್‌ಗೆ ಆಸ್ತಿ ಜಾಸ್ತಿಯಾಗಿ ತೊಂದ್ರೆ ಅನುಭವುಸ್ತಾಯಿದ್ರೆ, ನೀವು ನಾಳಗೆ ತೊಂದಗರಿಗೆ ಸಿಗಾತ್ತಾಯಿದ್ದಿರಿ ಸಾ.”

“ಸತ್ಯ ಮಾತಾಡದ್ರೆ ತಪ್ಪೇನ್ರಿ.”

“ಸತ್ಯ ಮಾತಾಡಿ ಅದರ ಪರಿಣಾಮ ಹೆದ್ರಸಕ್ಕೂ ರೆಡಿಯಾಗಿ.”

“ಈಗ ರೆಡಿಯಾಗಿ ಇದ್ದಿನಲ್ಲ, ನಿಂತ ನೆಲಿಲೆ ಕುಮಾರಸ್ವಾಮಿ ನನ್ನನ್ನ ವಜಾ ಮಾಡಿದ್ರೆ ಹೋಗಿ ಕಾಲಿಗೆ ಬೀಳಕ್ಕಾಯ್ತದಾ.”

“ಆಗಲ್ಲ ಸಾ, ಅವುರ ತಂದೆ ಕಾಲಿಗೇನೂ ಬೀಳಬಹುದು, ಆದ್ರೆ ಕುಮಾರಣ್ಣ ಕಾಲಿಗೆ ನಿಮ್ಮಂತ ಸೀನಿಯರು ಬೀಳಬಾರ್ದು.”

“ಅಲ್ಲ ಕಂಡ್ರಿ ಈ ಅಪ್ಪ ಮಕ್ಕಳು ನನ್ನ ಉಪಕಾರನೆ ಮರತುಬುಡ್ತರಲ್ಲ ಹೇಳಿ.”

“ಉಪಕಾರ ಏನು ಮಾಡಿದ್ರಿ ಸಾ.”

“ಸುಮಲತ ಎಲಕ್ಷನ್ನಿಗೆ ನಿಂತಾಗ ಇದೇ ನಾಗಮಂಗಲದಲ್ಲಿ ಪ್ರಧಾನ ಭಾಷಣಕಾರ ನಾನೆಯ, ಆಗ ಸುಮಲತಕ್ಕನ್ನ ಇವುಳು ಮಾಯಾಂಗನೆ ಜಯಲಲಿತ ಆಗಕ್ಕೆ ಬಂದವುಳೆ ಬುಡಬ್ಯಾಡಿ ಸೋಲಿಸಿ ಅಂದೆ. ಅಗ ದ್ಯಾವೇಗೌಡ್ರು ಮೆಚ್ಚಿ ಶಿವರಾಮೇಗೌಡರು ಮಾತನಾಡಿದ ಮೇಲೆ ನಾನು ಭಾಷಣ ಮಾಡೊ ಅಗತ್ಯ ಇಲ್ಲ ಅಂದ್ರು, ಅವತ್ತು ನಾನು ಕ್ಯಟ್ಟ ಮಾತಾಡಕ್ಕೆ ಪುಸಲಾಯಿಸಿದೋರು. ಇವತ್ತು ಅಂತವೇ ಮಾತಾಡಿದ್ರೆ ಪಾರ್ಟಿಯಿಂದ್ಲೆ ವಜಾ ಮಾಡ್ತಾರೆ ಇದಕೇನೇಳನ.”

“ಅದ್ಕೆ ಸಾರ್ ಯಾರಿಗೂ ಕೆಟ್ಟ ಮಾತಾಡಬಾರ್ದು.”

“ಅದ್ಯಂಗ್ರಿ ಇರಕ್ಕಾಯ್ತದೆ, ಕ್ಯಟ್ಟ ಮನುಸ್ರನ ವಳ್ಳೆ ಮನುಸ್ರು ಅನ್ನಕಾಯ್ತದೆ.”

“ಮಾದೇಗೌಡ್ರು ಕ್ಯಟ್ಟೊರಲ್ಲ, ಮಂಡ್ಯದ ರೈತ ನಾಯಕರು.”

“ಯಾವ ಸೀಮೆ ರೈತನಾಯಕ. ರೈತರಾಗಿದ್ರೆ ವಲ ಉಳತಿದ್ರು, ಮಂಡ್ಯಕ್ಕೆ ಬಂದು ರಾಜಕಾರಣ ಮಾಡತಿರಲಿಲ್ಲ.”

“ರೈತ ನಾಯಕರು ವಲ ಉಳೋ ಅಗತ್ಯಯಿಲ್ಲ, ಕೂಲಿಕೊಟ್ಟು ಉಳುಸಬಹುದು. ಇವತ್ತು ಕಾವೇರಿ ಇಶ್ಯೂ ಹಿಡಕಂಡು ಹೋರಾಡೊ ಅಂಥೋರು ವಬ್ರೂಯಿಲ್ಲ. ಯಾರಿಗೂ ಕೇರ್ ಮಾಡ್ದೆ ನೇರಾ ನೇರಾ ಮಾತಾಡತಿದ್ದ ಮಾದೇಗೌಡ್ರು ಸಮಾಧಿ ವಳಗಿದ್ದ ಕಂಡೇ ನಿಮ್ಮನ್ನ ವಜಾ ಮಾಡುಸ್ತರೆ ಅಂದ್ರೆ, ಅವುರ ಪವರೆಸ್ಟದೆ ಲ್ಯಕ್ಕ ಹಾಕಿ ಸಾ.”

“ಇದ್ಕೆ ನಿಮ್ಮನ್ನ ತಲಿಲ್ದ ಪತ್ರಕರ್ತರು ಅನ್ನದು.”

“ಅಂಗಂತಿರಾ.”

“ಮತ್ತಿನೇನು ಸಾಕ್ಷಿನೆ ಸಿಕ್ತಲ್ಲಾ, ಅಲ್ಲ ಕಂಡ್ರೀ ಜೆಡಿಎಸ್ಸು ಮಂಡ್ಯ ಜಿಲ್ಲೆಲಿ ನ್ಯಲೆ ಕಳಕತ್ತಾ ಅದೆ. ಅಂಥಾ ಟೈಮಲ್ಲಿ ನಾನು ಮಾದೇಗೌಡ್ರು ಬೋದಿದ್ದಿನಿ, ಅದ್ಕೆ ಕುಮಾರಣ್ಣ ಮಾದೇಗೌಡ್ರು ನಮ್ಮವರು, ಅವುರು ಒಕ್ಕಲಿಗರ ಲೀಡ್ರು ಅಂತ ಜಾತಿ ಮಾತಾಡಿ ನನ್ನ ವಜಾ ಮಾಡಿ ಜೆಡಿಎಸ್ ಬ್ಯಳಸಕ್ಕೆ ವಂಟವುರೆ, ಸುಮಲತನ್ನ ಬೈಯಿ ಅಂತ ಹೇಳಿದೋರು, ಮಾದೇಗೌಡ್ರು ಬೋದ್ರೆ ವಜಾ ಮಾಡ್ತರಲ್ಲಾ. ಇದು ರಾಜಕಾರಣ ಅಲವೇನ್ರಿ, ಅದರಲ್ಲೂ ಜಾತಿರಾಜಕಾರಣ ಅಲವೇನ್ರಿ. ಇಂತ ವಿಷಯನೆ ನಿಮಗೆ ತಿಳಿಯದಿಲ್ಲ. ಶಿವರಾಮೇಗೌಡ ಮಾದೇಗೌಡ್ರು ಬೋದ ಅಂತ ಅಲ್ಲೆ ಗಿರಕಿ ವಡಿತಿರಿ.”

“ಮಾದೇಗೌಡ್ರುನ ಏಕವಚನದಲ್ಲಿ ಅಂದು ಬಾಳ ಹಿಂದೆ ಸಾಯಬೇಕಾಗಿತ್ತು ಅಂದಿದ್ದು ತಪ್ಪಲವ ಸಾ.”

“ಅಂದಿದ್ದು ಆಯ್ತು, ಪಾರ್ಟಿಯಿಂದ ತಗದಾಕಿದ್ದು ಆಯ್ತು, ಈಗ್ಯಾಕ್ರಿ ತಪ್ಪಾಯ್ತು ಅನ್ನನಾ.”

“ಥೂತ್ತೇರಿ.”


ಇದನ್ನೂ ಓದಿ: ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...