Homeಕರ್ನಾಟಕಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಹಿಜಾಬ್‌ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಬಿಜೆಪಿ ನಾಯಕರು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

ಹಿಜಾಬ್‌ಗಾಗಿ ಹೋರಾಡುತ್ತಿರುವ ಉಡುಪಿ ಹೆಣ್ಣುಮಕ್ಕಳ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ ಟ್ವಿಟರ್‌ ಖಾತೆಯ ಟ್ವೀಟ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಅವರ ಟ್ವೀಟ್‌ಅನ್ನು ಟ್ವಿಟರ್‌ ಸಂಸ್ಥೆ ರದ್ದು ಮಾಡಿದೆ.

ಟ್ವಿಟರ್‌ ನಿಯಮಗಳನ್ನು ಉಲ್ಲಂಘಿಸಿರುವುದನ್ನು ಗುರುತಿಸಿರುವ ಟ್ವಿಟರ್‌ ಸಂಸ್ಥೆಯು, ಟ್ವೀಟ್‌ಗಳನ್ನು ತೆಗೆದುಹಾಕಿದೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೆಪದಲ್ಲಿ, ವಿದ್ಯಾರ್ಥಿನಿಯರ ವಿಳಾಸ, ವಯಸ್ಸು, ತಂದೆತಾಯಿಯ ಹೆಸರು ಇತ್ಯಾದಿ ವಿವರಗಳನ್ನು ಪೋಸ್ಟ್‌ ಮಾಡಲಾಗಿತ್ತು.

“ಅಪ್ರಾಪ್ತ ಹೆಣ್ಣುಮಕ್ಕಳ ವಿವರಗಳನ್ನು ಹಂಚಿಕೊಳ್ಳುವುದು ಟ್ವಿಟರ್‌ ಪಾಲಿಸಿಗೆ ವಿರುದ್ಧವೇ?” ಎಂದು ಆಲ್ಟ್‌ ನ್ಯೂಸ್‌‌ನ ಸಹಸಂಸ್ಥಾಪಕರಾದ, ಖ್ಯಾತ ಪತ್ರಕರ್ತ ಮೊಹಮ್ಮದ್‌ ಜುಬೈರ್‌ ಪ್ರಶ್ನಿಸಿದ್ದರು. ಈ ಸಂಬಂಧ ‘ನಾನುಗೌರಿ.ಕಾಂ’ ಕೂಡ ವರದಿ ಮಾಡಿತ್ತು. (ಬಿಜೆಪಿ ಟ್ವೀಟ್‌ನ ಆರ್ಕೈವ್‌ ಲಿಂಕ್‌ ಇಲ್ಲಿದೆ).

ಇದನ್ನೂ ಓದಿರಿ: ಹಿಜಾಬ್‌ಗಾಗಿ ಹೋರಾಡುತ್ತಿರುವ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಹಂಚಿಕೊಂಡು ವಿಕೃತಿ ಮೆರೆದ ಬಿಜೆಪಿ

ಉಡುಪಿ ಬಾಲಕಿರು ವಿದ್ಯಾರ್ಥಿನಿಯರ ದಾಖಲಾತಿ ವಿವರಗಳನ್ನು ಕಾಲೇಜು ಸೋರಿಕೆ ಮಾಡಿದೆ ಎಂದು ‘ದಿ ಕ್ವಿಂಟ್’ ಜಾಲತಾಣ ಈ ಹಿಂದೆ ವರದಿ ಮಾಡಿತ್ತು. ಈ ಕುರಿತು ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು ತಾವು ಸ್ವೀಕರಿಸುತ್ತಿರುವ ಥ್ರೆಟ್‌ ಕಾಲ್‌ಗಳಿಂದ ಭಯಗೊಂಡಿರುವುದಾಗಿ ಹೇಳಿದ್ದರು.

ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿಗೆ ಸ್ಥಳೀಯ ಶಾಸಕ ರಘುಪತಿ ಭಟ್ ಅಧ್ಯಕ್ಷರಾಗಿದ್ದಾರೆ. ಆದರೆ ಖಾಸಗಿ ವಿವರಗಳು ಹೇಗೆ ಸೋರಿಕೆಯಾದವು ಎಂಬ ಮಾಹಿತಿ ಇರಲಿಲ್ಲ. ಆದರೆ ಬಿಜೆಪಿಯವರು ಟ್ವಿಟರ್‌ ಖಾತೆಯ ಮೂಲಕ ಖಾಸಗಿ ವಿವರಗಳನ್ನು ಬಹಿರಂಗಗೊಳಿಸಿದ್ದರು.

 

“ವಿಚಾರಣೆ ಮುಂದೂಡುವಂತೆ ಮಧ್ಯಂತರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ನಾಲ್ವರು ಅಪ್ರಾಪ್ತರು. ಈ ಅಪ್ರಾಪ್ತ ವಿದ್ಯಾರ್ಥಿನಿಯರು ಹಿಜಾಬ್ ವಿವಾದವನ್ನು ಪಂಚರಾಜ್ಯಗಳ ಚುನಾವಣೆಗೆ ಥಳುಕು ಹಾಕುತ್ತಿದ್ದಾರೆ ಎಂದರೆ ಅರ್ಥವೇನು? ಈ ವಿದ್ಯಾರ್ಥಿನಿಯರು ಬೇರೆಯವರ ತಾಳಕ್ಕೆ ಕುಣಿಯುವ ಗೊಂಬೆಗಳು ಎಂದು ಅರ್ಥವಲ್ಲವೇ?” ಎಂದು ಪೋಸ್ಟ್‌ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ವಿದ್ಯಾರ್ಥಿನಿಯರ ವಿಳಾಸಗಳನ್ನು ಒಳಗೊಂಡ ಕೋರ್ಟ್ ಪ್ರತಿಯನ್ನು ಹಂಚಿಕೊಂಡಿದ್ದರು. ಇದೇ ರೀತಿಯಲ್ಲಿಯೇ ‘ಬಿಜೆಪಿ ಕರ್ನಾಟಕ’ ಟ್ವಿಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿತ್ತು. ಈ ಎರಡು ಟ್ವೀಟ್‌ಗಳನ್ನು ರದ್ದು ಟ್ವಿಟರ್‌ ಸಂಸ್ಥೆ ಮಾಡಿದೆ.

 

ಹೀಗೆ ಅಪ್ರಾಪ್ತ ಮಕ್ಕಳ ಖಾಸಗಿ ವಿವರಗಳನ್ನು ಹಂಚಿಕೊಳ್ಳುವುದು ಕಾನೂನಿಗೆ ವಿರುದ್ಧ. ಈ ಸಂಬಂಧ ಮಕ್ಕಳ ಹಕ್ಕುಗಳ ತಜ್ಞರು ‘ನಾನುಗೌರಿ.ಕಾಂ’ನೊಂದಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ವಿರುದ್ಧ ಕ್ರಮ ಜರುಗಿಸುವುದಾಗಿ ಮಕ್ಕಳ ಹಕ್ಕುಗಳ ಆಯೋಗಯೂ ಎಚ್ಚರಿಸಿದೆ.

ಈ ಹಿಂದೆ ವಿದ್ಯಾರ್ಥಿನಿಯರ ವಿವರಗಳು ಸೋರಿಕೆಯಾಗಿವೆ ಎಂದು ವರದಿಯಾಗಿತ್ತು. ದಿ ಕ್ವಿಂಟ್‌ನೊಂದಿಗೆ ಮಾತನಾಡಿದ್ದ ವಿದ್ಯಾರ್ಥಿನಿಯರು, “ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದು ವಿದ್ಯಾರ್ಥಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....