Homeಕರ್ನಾಟಕಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ...

ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ ಮುಸ್ಲಿಂ ಬಾಲಕಿಯರ ಹಕ್ಕುಗಳ ಉಲ್ಲಂಘನೆ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗೆ ಬಹಿರಂಗ ಪತ್ರ

- Advertisement -
- Advertisement -

ಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿ, ಮುಸ್ಲಿಂ ಬಾಲಕಿಯರು ಹಾಗು ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತಿರುವ ಬಗ್ಗೆ ಬಹುತ್ವ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಅವರಿಗೆ ಬಹಿರಂಗ ಪತ್ರ ಬರೆಯಾಗಿದೆ.

ಹಿಜಾಬ್ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯದ ಉಚ್ಛ ನ್ಯಾಯಾಲಯ ಹೊರಡಿಸಿದ ಮಧ್ಯಂತರ ಆದೇಶದ ನಂತರ ಮುಸ್ಲಿಂ ಮಹಿಳೆಯರು ಹಾಗೂ ಬಾಲಕಿಯರ ಮೇಲೆ ನಡೆಸಲಾಗಿರುವಂತಹ ದುರುದ್ದೇಶಪೂರಿತ, ಅಮಾನವೀಯ ಹಾಗೂ ಅಗೌರವಯುತ ದಾಳಿಯ ಹಿನ್ನೆಲೆಯಲ್ಲಿ ಬಹಿರಂಗ ಪತ್ರವನ್ನು ಬರೆದಿದ್ದೇವೆ ಎಂದು ಬಹುತ್ವ ಕರ್ನಾಟಕ ತನ್ನ ಪತ್ರದಲ್ಲಿ ನ್ಯಾಯ ಮೂರ್ತಿಗಳಿಗೆ ಹೇಳಿದ್ದಾರೆ.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

“ಬಂಧುತ್ವ, ವ್ಯಕ್ತಿ ಗೌರವ, ಐಕ್ಯತೆ ಮತ್ತು ರಾಷ್ಟ್ರದ ಏಕತೆಯನ್ನು ಖಾತ್ರಿಪಡಿಸುವುದು ನಮ್ಮ ಸಂವಿಧಾನದ ಮೂಲಭೂತ ಉದ್ದೇಶಗಳಲ್ಲಿ ಒಂದಾಗಿದೆ. ಇಂದು ರಾಜ್ಯದ ವಿವಿಧ ಅಂಗಗಳು, ಮಾಧ್ಯಮ ಸಂಸ್ಥೆಗಳು ನ್ಯಾಯಾಲಯದ ಮಧ್ಯಂತರ ಆದೇಶವನ್ನು ದುರುಪಯೋಗಿಸಿ ಮುಸ್ಲಿಂ ಸಮುದಾಯದ ಸಾಂವಿಧಾನಿಕ ಮೌಲ್ಯಗಳು ಹಾಗೂ ಘನತೆಗೆ ಹಾನಿ ತರುವಲ್ಲಿ ತೊಡಗಿವೆ. ಆದರೆ ಇಂದು ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದರೂ ಸಹ ನ್ಯಾಯಾಲಯಗಳು ವಹಿಸಿರುವ ಸಂಪೂರ್ಣ ಮೌನ ನಮ್ಮಲ್ಲಿ ಆಘಾತ ಹಾಗೂ ಆತಂಕವನ್ನು ಸೃಷ್ಟಿಸಿದೆ” ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಫೆಬ್ರವರಿ 4 ರಂದು ರಾಜ್ಯದ ವಿವಿಧ ಜಿಲ್ಲೆಗಳ ಶಾಲೆಗಳಲ್ಲಿ, ಹಿಜಾಬ್‌‌‌ ಹಾಗೂ ಬುರ್ಖಾಗಳನ್ನು ಧರಿಸಿ ಬರುವಂತಹ ಮುಸ್ಲಿಂ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಶಾಲೆಯ ಹೊರಗೆ, ಬಹಿರಂಗವಾಗಿ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸಲಾಗುತ್ತಿದೆ. ಜಿಲ್ಲಾಡಳಿತಗಳು, ಸರ್ಕಾರಿ ಇಲಾಖೆಗಳು, ಸಚಿವರು ಹಾಗೂ ಮಾಧ್ಯಮಗಳು, ಶಾಲೆಗಳು ಒಳಗೊಂಡಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಕುರಿತು ನ್ಯಾಯಾಲಯದ ಮಧ್ಯಂತರ ಆದೇಶವನ್ನು ವ್ಯಾಖ್ಯಾನಿಸಿರುವ ರೀತಿಯ ಹಿನ್ನೆಲೆಯಲ್ಲಿ ಈ ಅಗೌರವ ಹಾಗೂ ಸಾರ್ವಜನಿಕ ಅವಮಾನವನ್ನು ನಡೆಸಲಾಗುತ್ತಿದೆ” ಎಂದು ಪತ್ರವು ಉಲ್ಲೇಖಿಸಿದೆ.

ಮಾಧ್ಯಮಗಳಲ್ಲಿ ವರದಿ ಮಾಡಿರುವ ಘಟನಾವಳಿಗಳ ವಿವರಗಳನ್ನು ಕೂಡಾ ಪತ್ರವು ನ್ಯಾಯಾಲಯದ ಗಮನಕ್ಕೆ ತಂದಿದೆ.

“ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಈ ಆದೇಶವು ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಅಥವಾ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಕಾಲೇಜು ಅಭಿವೃದ್ಧಿ ಸಮಿತಿಗಳು ಇಲ್ಲದಿರುವಲ್ಲಿ ಅಥವಾ ಅಭ್ಯಾಸ ಅಥವಾ ನಿಯಮದ ಪ್ರಕಾರ ಹಿಜಾಬ್ ಅನ್ನು ಅನುಮತಿಸಿದರೆ ಅದು ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಎಲ್ಲಿಯೂ ಸೂಚಿಸಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

“ಹೀಗಿದ್ದರೂ, ಈ ಆದೇಶವನ್ನು ರಾಜ್ಯದಾದ್ಯಂತ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿಯೂ ಹಿಜಾಬ್ ಅನ್ನು ಖಡಾಖಂಡಿತವಾಗಿ ನಿರ್ಬಂಧಿಸಲಾಗಿರುವುದಾಗಿ ಬಿಂಬಿಸಲಾಗಿದೆ. ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿಯೂ ಹಿಜಾಬ್ ಅನ್ನು ನಿರ್ಬಂಧಿಸಿರುವುದಾಗಿ ಜಿಲ್ಲಾಡಳಿತಗಳು ಮೌಖಿಕ ಸೂಚನೆಯನ್ನು ನೀಡಿರುವುದಾಗಿ ತಿಳಿದು ಬಂದಿದೆ.

ಸುದ್ದಿ ಚಾನೆಲ್‌ಗಳು ನಿಮ್ಮ ಆದೇಶವನ್ನು ಕಡ್ಡಾಯವಾಗಿ ‘ಅನುಷ್ಠಾನ’ಗೊಳಿಸಬೇಕೆಂದು ಬೊಬ್ಬೆಯಿಟ್ಟು, ಕ್ಯಾಮೆರಾಗಳೊಂದಿಗೆ ಶಾಲಾ ತರಗತಿ ಕೊಠಡಿಗಳ ಒಳಗೆ ಹೋಗಿ ಹಿಜಾಬ್ ಧರಿಸಿರುವಂತಹ ಅಪ್ರಾಪ್ತ ವಯಸ್ಕ ಬಾಲಕಿಯರ ಮುಖಗಳನ್ನು ಪದೇ ಪದೇ ತೋರಿಸುತ್ತಿವೆ. ಈ ಮೂಲಕ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಧಿಕ್ಕರಿಸುತ್ತಿರುವಂತೆ ಬಿಂಬಿಸುವ ಮೂಲಕ ಈಗಾಗಲೇ ಆತಂಕ ಸೃಷ್ಟಿಯಾಗಿರುವ ವಾತಾವರಣದಲ್ಲಿ ಮತ್ತಷ್ಟು ಭಯವನ್ನು ಸೃಷ್ಟಿಸುತ್ತಿವೆ. ಈ ವ್ಯತಿರಿಕ್ತ ಪ್ರಚಾರದಿಂದ ಭಯದ ಹಾಗು ಆತಂಕದ ವಾತಾವರಣ ಸೃಷ್ಟಿಯಾಗಿದೆ” ಎಂದು ಪತ್ರವು ಆತಂಕ ವ್ಯಕ್ತಪಡಿಸಿದೆ.

“ಕೆಲವು ಶಾಲೆಗಳು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರನ್ನು ಶಾಲೆಯನ್ನು ಪ್ರವೇಶಿಸುವ ಮುಂಚೆಯೇ ಎಲ್ಲರ ಎದುರಿಗೆ ಹಿಜಾಬ್ ಹಾಗೂ ಬುರ್ಖಾಗಳನ್ನು ತೆಗೆಯುವಂತೆ ಸೂಚಿಸುತ್ತಿವೆ. ಹಿಜಾಬ್ ತೆಗೆಯಲು ನಿರಾಕರಿಸಿದಂತಹ ಕೆಲವು ವಿದ್ಯಾರ್ಥಿನಿಯರನ್ನು ಪರೀಕ್ಷೆಗಳನ್ನು ಬರೆಯದಿರುವಂತೆ ತಡೆಯಲಾಗಿದೆ. ಶಿವಮೊಗ್ಗದ ಒಂದು ಶಾಲೆಯಲ್ಲಿ ಫೆಬ್ರವರಿ 15ರಂದು ನಡೆದಂತಹ ಒಂದು ಅಮಾನವೀಯ ಘಟನೆಯಲ್ಲಿ ಓರ್ವ ಶಿಕ್ಷಕಿ ಒಂದು ಮಗುವನ್ನು ಶಾಲೆಯಿಂದ ಹೊರದೂಡಿದರು, ಈಟಿವಿ ಭಾರತ ಎಂಬ ಸುದ್ದಿ ವಾಹಿನಿಯ ವರದಿಗಾರ ವಿದ್ಯಾರ್ಥಿನಿಯನ್ನು ದೂಡಿದ ನಂತರ ತಮ್ಮ ಕ್ಯಾಮೆರಾದೊಂದಿಗೆ ಆ ಬಾಲಕಿಯನ್ನು ಹಿಂಬಾಲಿಸಿ ಚಿತ್ರೀಕರಿಸಿದ್ದಾರೆ” ಎಂದು ಶಿವಮೊಗ್ಗದಲ್ಲಿ ನಡೆದ ಘಟನೆಯ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಫೆಬ್ರವರಿ 14 ಮತ್ತು 15ರಂದು ರಾಜ್ಯದ ಹಲವು ಕಡೆ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ರಾಜ್ಯದಲ್ಲಿ ಹಿಂದೆಂದೂ ಅನುಭವಿಸದೇ ಇರುವಂತಹ ಅವಮಾನವನ್ನು ಎದುರಿಸಿದ್ದು, ಕಿರುಕುಳಕ್ಕೀಡಾಗಿದ್ದಾರೆ. ನ್ಯಾಯಾಲಯದ ಮಧ್ಯಂತರ ಆದೇಶದ ತಪ್ಪು ವ್ಯಾಖ್ಯಾನದ ಫಲಿತಾಂಶವಾಗಿ, ಭಾರತದ ಸಂವಿಧಾನದ ಪರಿಚ್ಛೇದ 21 ಹಾಗೂ 21ಎ ಅಡಿ ಖಾತ್ರಿಪಡಿಸಿರುವಂತೆ, ಕರ್ನಾಟಕದ ಮುಸ್ಲಿಂ ಮಹಿಳೆಯರ ಧರ್ಮದ ಆಚರಣೆ, ಶಿಕ್ಷಣ ಹಾಗೂ ಘನತೆಯಂತಹ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆಗೆಯಾಗಿದೆ’‌’ ಎಂದು ಪತ್ರವು ಒತ್ತಿ ಹೇಳಿದೆ.

“ಕೋವಿಡ್ ಸಾಂಕ್ರಾಮಿಕದಿಂದಾಗಿ ದೀರ್ಘ ಕಾಲದವರೆಗೂ ಶಿಕ್ಷಣ ಸಂಸ್ಥೆಗಳು ಮುಚ್ಚಿದ್ದು ಈಗಷ್ಟೇ ಆರಂಭವಾಗಿವೆ. ಮೇಲಾಗಿ ವಾರ್ಷಿಕ ಪರೀಕ್ಷಾಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿರುವ ಶೈಕ್ಷಣಿಕ ವರ್ಷದ ಈ ನಿರ್ಣಾಯಕ ಸಮಯದಲ್ಲಿ ರಾಜ್ಯದಾದ್ಯಂತ ಹಿಜಾಬ್ ನಿರ್ಬಂಧಿಸಿರುವುದು ವಿದ್ಯಾರ್ಥಿಗಳಲ್ಲಿ ಗಂಭೀರ ಸ್ವರೂಪದ ಆತಂಕ ಹಾಗೂ ಕಷ್ಟದ ಸನ್ನಿವೇಶವನ್ನು ಸೃಷ್ಟಿಸಿದೆ. ಕೋವಿಡ್ ಪಿಡುಗಿನಿಂದಾಗಿ ವಿದ್ಯಾರ್ಥಿಗಳು ಎಲ್ಲಿಲ್ಲದ ವ್ಯಾಪಕ ರೀತಿಯಲ್ಲಿ ಶಾಲೆ ಬಿಟ್ಟಿರುವ ಪ್ರಕ್ರಿಯೆಯು ನಡೆಯುತ್ತಿರುವಾಗ, ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ನೋಡಿಕೊಳ್ಲುವುದು ಸರಕಾರದ ಕಾನೂನುಬದ್ಧ ಜವಾಬ್ದಾರಿಯಾಗಿರುತ್ತದೆ. ಆದರೆ ಸರಕಾರದ ಪ್ರಸ್ತುತ ಕ್ರಮಗಳಿಂದಾಗಿ ಬಾಲಕಿಯರು ಇನ್ನೂ ಹೆಚ್ಚು ಪ್ರಮಾಣದಲ್ಲಿ ಶಾಲೆಗೆ ಹೋಗುವುದನ್ನು ಬಿಡುತ್ತಿದ್ದಾರೆ” ಎಂದು ಪತ್ರವು ಹೇಳಿದೆ.

“ರಾಜ್ಯದಾದ್ಯಂತ ಮುಸ್ಲಿಂ ಮಹಿಳೆಯರು, ಬಾಲಕಿಯರು ಹಾಗೂ ಮಕ್ಕಳ ವಿರುದ್ಧದ ಈ ಅವಮಾನ ಮತ್ತು ಅಗೌರವದ ಸನ್ನಿವೇಶಗಳನ್ನು ಉಚ್ಛ ನ್ಯಾಯಾಲಯದ ಗಮನಕ್ಕೆ ಹಲವು ಬಾರಿ ತರಲಾಗಿದೆ. ಆದಾಗ್ಯೂ, ಈ ವಿಷಯದ ಕಡೆ ಗಮನ ನೀಡಿಲ್ಲ. ಸರಕಾರದಿಂದ ಮತ್ತು ಸುದ್ದಿ ಮಾಧ್ಯಮಗಳಿಂದ ಅಲ್ಪ ಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳುವಂತೆ ಸಂವಿಧಾನವು ನ್ಯಾಯಾಲಯಗಳಿಗೆ ಅಧಿಕಾರ ನೀಡುತ್ತದೆ. ಮಾನ್ಯ ಉಚ್ಛ ನ್ಯಾಯಾಲಯವು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವ ತನ್ನ ಕರ್ತವ್ಯನ್ನು ಪೂರೈಸಬೇಕಾಗಿ ಮಾನ್ಯ ನ್ಯಾಯಾಲಯದ ಸಾಂವಿಧಾನಿಕ ಆತ್ಮಸಾಕ್ಷಿಯನ್ನು ಉಲ್ಲೇಖಿಸಿ ಮನವಿ ಮಾಡುತ್ತಿದ್ದೇವೆ. ಇಂತಹ ವ್ಯಾಪಕ ರೀತಿಯಲ್ಲಿ ನಡೆಯುತ್ತಿರುವ ಘನತೆ ಮತ್ತು ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಸಾಂವಿಧಾನಿಕ ಉಚ್ಛ ನ್ಯಾಯಾಲಯವು ಪ್ರೇಕ್ಷಕನಾಗಿರುವಂತಿಲ್ಲ” ಎಂದು ಪತ್ರವು ಉಲ್ಲೇಖಿಸಿದೆ.

‘ರಾಜ್ಯದಲ್ಲಿ ಸರ್ಕಾರ ಹಾಗೂ ಸುದ್ದಿ ಮಾಧ್ಯಮಗಳ ಕ್ರಮಗಳಿಂದಾಗಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಮಾನ್ಯ ಉಚ್ಛ ನ್ಯಾಯಾಲಯದ ಈ ಉದ್ದೇಶಗಳನ್ನು ಎತ್ತಿ ಹಿಡಿಯಲಾಗಿಲ್ಲ ಎಂದು ಪತ್ರವು ಮತ್ತೊಮ್ಮೆ ನ್ಯಾಯಾಲಯದ ಮೂಲಕ ತಮ್ಮ ಗಮನಕ್ಕೆ ತರಲು ಬಯಸಿದ್ದೇವೆ ಎಂದು ತಿಳಿಸಿದ್ದು, “ನಮ್ಮ ಮಕ್ಕಳು ಹಾಗೂ ನಮ್ಮ ಸಹ ಮಹಿಳಾ ನಾಗರಿಕರ ವಿರುದ್ಧ ನಡೆಯುತ್ತಿರುವ ಈ ತೀವ್ರ ಅವಮಾನ ಮತ್ತು ಆತಂಕದ ಸನ್ನಿವೇಶ ಇನ್ನು ಮುಂದುವರೆಯುವಂತಿಲ್ಲ” ಎಂದು ಆಶಿಸಿದೆ.

ಮುಸ್ಲಿಮ್ ಮಕ್ಕಳು, ಬಾಲಕಿಯರು ಹಾಗೂ ಶಿಕ್ಷಕರು ಎದುರಿಸುತ್ತಿರುವಂತಹ ಅಗೌರವ ಮತ್ತು ಅವಮಾನದ ಕುರಿತು ಈ ಕೂಡಲೇ ಗಮನ ನೀಡುವಂತೆ ಪತ್ರವು ನ್ಯಾಯಾಲಯವನ್ನು ಕೋರಿದ್ದು, ಕೆಳಗಿನ ಅಂಶಗಳನ್ನು ಉಲ್ಲೇಖಿಸಿ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದೆ.

  • ಈ ಆದೇಶದ ವ್ಯಾಪ್ತಿಯ (ಸ್ಕೊಪ್ ) ಕುರಿತು ಕೂಡಲೇ ಸ್ಪಷ್ಟಪಡಿಸುವುದು.
  • ರಾಜ್ಯ ಶಿಕ್ಷಣ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ಆದೇಶದ ತಪ್ಪು ವ್ಯಾಖ್ಯಾನದ ಕುರಿತು ವಿಚಾರಣೆ ನಡೆಸಲು ನಿರ್ದೇಶಿಸುವುದು.
  • ಶಿಕ್ಷಣದ ಹಕ್ಕನ್ನು ನಿರಾಕರಿಸಿರುವಂತಹ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಪರಿಹಾರ ಒದಗಿಸುವುದು.
  • ಘನತೆಯ ಸಾಂವಿಧಾನಿಕ ತತ್ವಗಳು ಮತ್ತು ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತಹ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವುದು.

ಪತ್ರಕ್ಕೆ ಓದುಗರು ಕೂಡಾ ಸಹಿ ಹಾಕಬಹುದಾಗಿದ್ದು, ಸಹಿ ಹಾಕಲು ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...