Homeಕರ್ನಾಟಕಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’...

ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

- Advertisement -
- Advertisement -

ಹಿಜಾಬ್ ಕುರಿತು ಮಾಡಲಾಗುತ್ತಿರುವ ತಪ್ಪಾದ ವರದಿಗಳ ಬಗ್ಗೆ ಚರ್ಚಿಸಲು ಕನ್ನಡದ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿಯ ಕಚೇರಿಗೆ ತೆರಳಿದ್ದವರನ್ನು ಕಚೇರಿಯ ಹೊರಗೆ ಗಂಟೆಗಳ ಕಾಲ ಕಾಯಿಸಿ ಮಾತನಾಡಲು ನಿರಾಕರಿಸಿದ್ದಾರೆ ಎಂದು “ಹೇಟ್‌ ಸ್ಪೀಚ್‌‌ ಬೇಡ” ಅಭಿಯಾನದ ಸಂಘಟಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹೇಟ್‌ ಸ್ಪೀಚ್‌ ಬೇಡ ತಂಡವು, “ಪಬ್ಲಿಕ್ ಟಿವಿಗೆ ಪಬ್ಲಿಕ್ ಜೊತೆಗೆ ಮಾತನಾಡಲು ಏನು ಸಂಕಷ್ಟ, ಸಾರ್ವಜನಿಕರ ಜೊತೆಗೆ ಮಾತನಾಡಲು ಅವರಿಗೆ ನಿರ್ಬಂಧವಿದೆಯೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡ, “Campaign Against Hate Speech ವತಿಯಿಂದ ಒಂದು ತಂಡವಾಗಿ ಪಬ್ಲಿಕ್‌‌ ಟಿವಿಯ ಸಂಪಾದಕರು ಮತ್ತು ಪತ್ರಕರ್ತರನ್ನು ಭೇಟಿ ಮಾಡಿ, ಚಾನೆಲ್ಲಿನ ಇತ್ತೀಚಿನ ಹಿಜಾಬ್ ವಿಷಯದ ವರದಿಗಾರಿಕೆಯ ಬಗ್ಗೆ ಚರ್ಚೆ ಮಾಡಲು ತೆರಳಿದ್ದವು. ಆದರೆ ಅಲ್ಲಿ ಸಾರ್ವಜನಿಕರಿಗೆ ಕೊರೊನಾ ನಿಯಮಾವಳಿಯ ಪ್ರಕಾರ ಪ್ರವೇಶವಿಲ್ಲವೆಂದು ನಮ್ಮನ್ನು ಹೊರಗೆ ನಿಲ್ಲಿಸಿದರು. ಸ್ವಲ್ಪ ಸಮಯ ಕಳೆದ ನಂತರ, ಒಬ್ಬೊಬ್ಬರಾಗಿ ಮೂರು ವರದಿಗಾರರು ಬಂದು ನಮ್ಮ ಪತ್ರವನ್ನು ಓದಿ ಹೋದರೇ ಹೊರತು ಸಂಪಾದಕರು ಅಥವಾ ಹಿರಿಯ ಸಂಪಾದಕರು ಚರ್ಚೆಗೆ ಬರಲು ನಮ್ಮ ಮನವಿಯನ್ನು ಒಪ್ಪಿಕೊಳ್ಳಲಿಲ್ಲ” ಎಂದು ಹೇಳಿದೆ.

“ಒಂದು ಘಂಟೆಯವರೆಗೂ ನಮ್ಮನ್ನು ಕಾಯಿಸಿದ್ದಾರೆ. ‘ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ಅಂಗೀಕರಿಸಿ ಕೊಡಿ’ ಎನ್ನುವ ನಮ್ಮ ಮನವಿಯನ್ನು ಕೂಡ ಒಪ್ಪಲ್ಲಿಲ್ಲ. ಕಾನೂನಿನ ನೋಟಿಸ್ ಕಳುಹಿಸಿ ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ನಮ್ಮ ಚರ್ಚೆಯ ಮನವಿಯನ್ನು ಚಾನೆಲ್‌ ನಿರಾಕರಿಸಿದೆ” ಎಂದು ‘ಹೇಟ್‌ ಸ್ಪೀಟ್‌ ಬೇಡ’ ತಂಡ ಹೇಳಿದೆ.

ಚಾನೆಲ್‌ನ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ‘ಹೇಟ್‌ ಸ್ಪೀಟ್‌ ಬೇಡ’ ತಂಡ, “ಚಾನೆಲ್‌ನ ಈ ನಡೆಯಿಂದಾಗಿ ವೀಕ್ಷಕರಾದ ನಮಗೆ ತುಂಬಾ ಬೇಸರವಾಗಿದ್ದು, ಪಬ್ಲಿಕ್‌ ಟಿವಿಗೆ ಸಾರ್ವಜನಿಕರ ಜೊತೆಗೆ ಮಾತಾಡಲು ಏನು ಸಂಕಷ್ಟ? ಅವರಿಗೆ ಸಾರ್ವಜನಿಕರ ಜೊತೆ ಮಾತಾಡಲು ನಿರ್ಬಂಧವಿದೆಯೇ? ಕೇವಲ ಕಾನೂನಿನ ಮೂಲಕ ಚಾನೆಲ್‌ಗಳ ಜೊತೆ ಮಾತನಾಡ ಬೇಕೆ?” ಎಂದು ಪ್ರಶ್ನಿಸಿದೆ.

ಮಾಧ್ಯಮಗಳಲ್ಲಿ ನಡೆಸಲಾಗುವ ದ್ವೇಷದ ವರದಿಗಾರಿಕೆಯನ್ನು ವಿರೋಧಿಸಿ ‘ಹೇಟ್‌ ಸ್ಪೀಚ್‌ ಬೇಡ’ ಅಭಿಯಾನದ ತಂಡವು ನಿರಂತರವಾಗಿ ಹೋರಾಡುತ್ತಿದೆ. ಕೊರೊನಾ ಪ್ರಾರಂಭದ ಸಮಯದಲ್ಲಿ ‘ತಬ್ಲೀಘಿ ವೈರಸ್‌’ ಎಂದು ಒಂದು ಸಮುದಾಯದ ಮೇಲೆ ಪೂರ್ವಾಗ್ರಹದಿಂದ ವರದಿ ಮಾಡಿದ್ದ ‘ಟೈಮ್ಸ್‌ ನೌ’, ‘ಸುವರ್ಣ ನ್ಯೂಸ್‌’ ಮತ್ತು ‘ನ್ಯೂಸ್‌18ಕನ್ನಡ’ ಚಾನೆಲ್‌ಗಳ ವಿರುದ್ಧ ಹೋರಾಟ ನಡೆಸಿತ್ತು. ಈ ಹೋರಾಟದ ಪರಿಣಾಮವಾಗಿ ನ್ಯೂಸ್‌18ಕನ್ನಡ ಮತ್ತು ಸುವರ್ಣ ನ್ಯೂಸ್‌‌ಗಳಿಗೆ ನ್ಯೂಸ್ ಬ್ರಾಡ್ಕಾಸ್ಟಿಂಗ್ ಸ್ಟ್ಯಾಂಡರ್ಡ್ಸ್ ಅಥಾರಿಟಿ (NBSA) ಯು ಕ್ರಮವಾಗಿ 1 ಲಕ್ಷ ಮತ್ತು 50 ಸಾವಿರ ದಂಡವನ್ನು ವಿಧಿಸಿತ್ತು. ಜೊತೆಗೆ ಇದೇ ವಿಷಯಕ್ಕೆ ಇಂಗ್ಲಿಷ್ ನ್ಯೂಸ್ ಚಾನೆಲ್ ಟೈಮ್ಸ್ ನೌ ಅನ್ನು NBSA ಖಂಡಿಸಿತ್ತು.

ಇದನ್ನೂ ಓದಿ: ತಬ್ಲೀಘಿಗಳನ್ನು ಕೆಟ್ಟದಾಗಿ ಬಿಂಬಿಸಿದ್ದಕ್ಕೆ ಕ್ಷಮೆ ಕೇಳಿದ ‘ನ್ಯೂಸ್‌18 ಕನ್ನಡ’! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. “ನಾವು ಹೇಳಿದ್ದೇ ಸತ್ಯ. ನಾವು ಪ್ರಶ್ನಾತೀತರು” ಎಂಬುದು ಮನುವಾದಿ ಮಾಧ್ಯಮಗಳ ನಿಲುವು. ಇಂತವರ ಜೊತೆಗೆ ಚರ್ಚೆಗೆ ಹೋಗುವುದು ಸಮಯದ ವ್ಯರ್ಥ.

  2. ನನ್ನ ಪ್ರಕಾರ ಇದಂತೂ ಸಣ್ಣ ವಿಷಯ.ದೊಡ್ಡ ದೊಡ್ಡ ವಿಷಯಗಳನ್ನೇ ಚರ್ಚೆ ಮಾಡದೇ ಕೇವಲ ದ್ವೇಶದ ಆಧಾರದ ಮೇಲೆ ಸಂಘಿಗಳು ಚುನಾವಣಾ ವಿಷಯ ಮಾಡಿಕೊಂಡು,ಕೆಲವನ್ನ ಜಾರಿ ಕೂಡಾ ಮಾಡಿಲ್ಲವೆ?

    ಏಕರೂಪ ನಾಗರೀಕ ಸಂಹಿತೆ,ಆರ್ಟಿಕಲ್ ೩೭೦,
    ನೋಟಬಂದಿ,ಕೃಷಿ ಬಿಲ್ಲುಗಳು ಯಾವುದನ್ನ ಇವರು ಪಬ್ಲಿಕ್ಕಾಗಿ ಚರ್ಚಿಸಿದ್ದಾರೆ?

  3. ನಗರ ನಕ್ಸಲೀಯರ ಗುಂಪೆ, ತಮ್ಮ ಹಿಂದೂ ವಿರೋಧಿ ಮನಸ್ಥಿತಿ ತಿಳಿದಿರುವುದೇ, ನೀವು ನಂಬಿರುವುದೇ ನಿಜ, ನೀವೇ ಎಲ್ಲವನ್ನು ಕೆಂಪಾಗಿಸುವ ಆತುರದಲ್ಲಿ ಕೆಲವು ಬಣ್ಣಗಳನ್ನು ದ್ವೇಷಿಸುವುದು ಕೆಲವು ಬಣ್ಣಗಳನ್ನು ಸಮಜಾಯಿಸುವುದು ಪೂರ್ಣ ಸತ್ಯ

  4. ಅದೊಂದು ಬಿಜೆಪಿ ಪರವೆಂದು ಘಂಟಾಘೋಷವಾಗಿ ತೋರಿಸಿ ಕೊಳ್ಳುವ ಚಾನಲ್. ರಂಗನಾಥ ಅಂತೂ ಕೇಂದ್ರ ಸರ್ಕಾರವನ್ನು ಅಪ್ಪತಪ್ಪಿಯೂ ಟೀಕಿಸುವುದಿಲ್ಲ.‌ಅಂತಹವರ ಜೊತೆ ಮಾತೇ ವ್ಯರ್ಥ, ಆವಯ್ಯಂದು ಏನಿದ್ರೂ ಬಾಯಿ ಮಾತಿನ ಸತ್ಯ ನೇರ ಅಷ್ಟೇ. ಮಾಧ್ಯಮಗಳು ಸಮಾಜದ‌ ಸಾಮರಸ್ಯ ಕಾಪಾಡಬೇಕೇ‌ ಹೊರತು ಕದಡಬಾರದೆಂಬ ಸಾಮಾನ್ಯ ಜ್ಞಾನವೂ ಇಲ್ಲದ‌ಮಾಧ್ಯಮಗಳಿಂದ ದೇಶಕ್ಕೆ ಏನೂ ಪ್ರಯೋಜನವಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...