Homeಮುಖಪುಟನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ನಾವೆಲ್ಲರೂ ಒಂದೇ ತಾಯಿಗೆ ಮಕ್ಕಳು: ವಿದ್ಯಾರ್ಥಿಗಳು ಕಲಿಯಲು ಬಿಡಿ

ಮಕ್ಕಳಿಗೆ ಸಭ್ಯತೆ, ಘನತೆ, ಗಾಂಭೀರ್ಯತೆಯೊಂದಿಗೆ ಶಿಕ್ಷಣವನ್ನು ಮುಗಿಸಲು ಅನುವು ಮಾಡಿಕೊಡಿ. ಪರಸ್ಪರರನ್ನು ಕಚ್ಚಾಡಿಸುವವರನ್ನು ಯಾವ ಧರ್ಮದಲ್ಲಿ ಇದ್ದರೂ ಖಂಡಿಸಿ, ದೂರವಿಡಿ.

- Advertisement -
- Advertisement -

ಭಾರತ ಬಹುಸಂಸ್ಕೃತಿಯ ರಾಷ್ಟ್ರ. ಸರ್ವ ಜನಾಂಗದ ಶಾಂತಿಯ ತೋಟ ರಸಿಕರ ಕಂಗಳ ಸೆಳೆಯುವ ನೋಟ ಎಂದು ರಾಷ್ಟ್ರಕವಿ ಕುವೆಂಪು ಹಾಡಿಹೊಗಳಿದ ವಿವಿಧ ಧರ್ಮ, ಜನಾಂಗ, ಜಾತಿ -ಪಂಥಗಳ, ಭಾಷೆ, ಉಡುಗೆ- ತೊಡುಗೆ, ಆಹಾರ ಪದ್ಧತಿಗಳನ್ನು ತಲೆತಲಾಂತರದಿಂದ ಗೌರವಿಸಿಕೊಂಡು ಸಹಬಾಳ್ವೆ ಮತ್ತು ಸೌಹಾರ್ದತೆಗೆ ಜಗತ್ತಿಗೆ ಮಾದರಿಯಾದ ದೇಶ. ಮಾದರಿಯಾಗುವ ಎಲ್ಲಾ ಅರ್ಹತೆಗಳನ್ನು ಹೊಂದಿದ ದೇಶ. ನಾನು ಯಾವುದೇ ಧರ್ಮವನ್ನು ಅನುಸರಿಸುತ್ತಿದ್ದರು ನನಗೆ ಭಾರತೀಯಳು ಎನ್ನುವುದಕ್ಕೆ ಹೆಮ್ಮೆ .ಏಕೆಂದರೆ ಈ ನೆಲದ ಸಂಸ್ಕೃತಿ ಎಲ್ಲವನ್ನೂ ಒಳಗೊಂಡು ಜೀವಿಸುವ ವಿಶಾಲ ಹೃದಯವನ್ನು ನೀಡಿದೆ.

ಈ ಹೊಗಳಿಕೆ ಅತಿಯಾಯಿತು ಎಂದು ಅನಿಸುವ ವಿಭಾಗಕ್ಕೆ ನೀವು ಸೇರಿದ್ದರೆ ಅದು ನಿಮ್ಮ ದೃಷ್ಟಿಕೋನ. ಈ ಬಹುಸಂಸ್ಕೃತಿ, ಬಹುಧರ್ಮೀಯತಿಯನ್ನು ಒಪ್ಪಿಕೊಂಡು ಬಾಳುವುದನ್ನು ಕಲಿಸುವ ಪ್ರಥಮ ಮೆಟ್ಟಿಲು ಶಿಕ್ಷಣ ಸಂಸ್ಥೆಗಳು. ಅದರಲ್ಲೂ ಸರಕಾರಿ ಶಿಕ್ಷಣ ಸಂಸ್ಥೆಗಳು. ಇಂದಿನಂತೆ ಮಧ್ಯಮ, ಮೇಲುವರ್ಗದ ಜನರೆಲ್ಲರೂ ತಮ್ಮ ಮಕ್ಕಳನ್ನು ಆಂಗ್ಲ ಶಾಲೆಗೆ ಸೇರಿಸುವ ವ್ಯವಸ್ಥೆ ಅಂದಿರಲಿಲ್ಲ. ಹೆಚ್ಚಿನ ಎಲ್ಲರೂ ಸರಕಾರಿ ಶಾಲೆಗಳಿಗೆ ಹೋಗುತ್ತಿದ್ದರು ಮತ್ತು ಅದು ನಮಗೆ ಕೀಳರಿಮೆಯ ವಿಚಾರವಾಗಿರಲಿಲ್ಲ. ನನ್ನ ಸರಕಾರಿ ಶಾಲೆ ಹಾಗಿತ್ತು. ಮಾನವೀಯತೆಯನ್ನು, ವಿಶ್ವ ಭ್ರಾತೃತ್ವವನ್ನು ಕಲಿಸುವ, ಹಿರಿಯರನ್ನು ಹೇಗೆ ಗೌರವಿಸಬೇಕು? ಒಡನಾಡಿಗಳನ್ನು ಹೇಗೆ ಸ್ನೇಹದೊಂದಿಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು? ಕಿರಿಯರನ್ನು ಯಾವ ರೀತಿ ಪ್ರೀತಿಸಬೇಕು? ಎಂಬುದನ್ನು ಕಲಿಸಿಕೊಟ್ಟ ಶಾಲೆಗಳು ನಮ್ಮವು. ಅಂದಿನ ಬಾಲ್ಯದ ಗೆಳತಿ ರಶ್ಮಿ ಇಂದು ಸಿಕ್ಕರು ಅದೇ ಪ್ರೀತಿಯಿಂದ ಬಾಲ್ಯದ ಮುಗ್ಧತೆಯೊಂದಿಗೆ ಮಾತನಾಡಿಸುತ್ತಾಳೆ. ಸಹಪಾಠಿಗಳಾಗಿದ್ದ ಜೋಕಿಮ್, ರಮೇಶ್ ಈಗ ಎಲ್ಲಿರಬಹುದು ಅವರ ಸಂಸಾರ ಹೇಗಿರಬಹುದು? ಎಂಬ ಕುತೂಹಲ ಈಗಲೂ ನನಗಿದೆ  ಹೈಸ್ಕೂಲು ಕಾಲೇಜು ಗೆಳತಿಯರಾದ ದೀಪ ಕಲಾ, ರೂಪ, ಪ್ರಫುಲ್ಲ, ಚೇತನ, ಮಮತಾ, ಸುನೀತಾ, ಪ್ರೆಸಿಲ್ಲಾ, ಪ್ರಿಯಾ, ಮೀನಾ, ತಾವ್ರೋ ಹೀಗೆ ಪಟ್ಟಿ ಬೆಳೆಯುತ್ತದೆ. ನಮಗ್ಯಾರಿಗೂ ನಾವು ಒಂದೇ ತಂದೆ ತಾಯಿಯ ಮಕ್ಕಳಲ್ಲ ಎಂದು ಎಂದಿಗೂ ಅನಿಸಿದ್ದೇ ಇಲ್ಲ. ಅನೇಕ ಬಾರಿ ಅವರ ಮನೆಗೆ ಹೋಗಿದ್ದೆ, ಉಂಡಿದ್ದೆ. ಅವರ ಅಕ್ಕರೆಯಲ್ಲಿ ಮಿಂದು ಎದ್ದಿದ್ದೆ. ನನ್ನ ಧರ್ಮ ಅದ್ಯಾವುದಕ್ಕೂ ನನಗೆ ತಡೆಯಾಗಲಿಲ್ಲ. ನಾನು ಧರಿಸಿದ್ದ ಹಿಜಾಬ್ ಅವರಿಗೆ ಸಮಸ್ಯೆಯಾಗಿರಲಿಲ್ಲ.

ಇಂದು ಹಿಜಾಬ್ ಕಟಕಟೆಯಲ್ಲಿ ನಿಂತಿರುವುದಕ್ಕೆ, ಬೀದಿ ವಿಷಯವಾಗಿ ಮಾರ್ಪಟ್ಟಿರುವುದಕ್ಕೆ ವಿಷಾದವಿದೆ. ಒಂದೇ ಬೆಂಚಿನಲ್ಲಿ ಒಟ್ಟಿಗೆ ಕುಳಿತು ತರಲೆ ಮಾತುಗಳನ್ನಾಡುತ್ತಿದ್ದ, ವಿಮರ್ಶಿಸುತ್ತ, ಟೀಕಿಸುತ್ತಿದ್ದ ಅದರಾಚೆಗೆ ಅಷ್ಟೇ ಪ್ರೀತಿ ಕಾಳಜಿಯನ್ನು ವ್ಯಕ್ತಪಡಿಸುತ್ತಿದ್ದ ಸಹಪಾಠಿಗಳು ದಿನಬೆಳಗಾದರೆ ಅನ್ಯ ಧರ್ಮದವರಾಗಿ ಹೇಗೆ ಮಾರ್ಪಟ್ಟರು?

ನಿಜ ಹಿಜಾಬ್ ಒಂದು ಧರ್ಮದ ಸಹೋದರಿಯರು ಅನುಸರಿಸುತ್ತಿರುವ ವಸ್ತ್ರ ಪದ್ಧತಿ. ಅದನ್ನು ಬೇರೆ ಯಾವುದೋ ವಸ್ತ್ರದೊಂದಿಗೆ ಪ್ರತಿಸ್ಪರ್ಧಿಯಾಗಿಸಿದ್ದು ಯಾರು? ನಾವು ಇಂದಿಗೂ ಹಿಂದೂ-ಮುಸ್ಲಿಂ ಸಹೋದರಿಯರು ಪರಸ್ಪರ ಪ್ರೀತಿ ಗೌರವಗಳಿಂದ ನಡೆಸಿಕೊಳ್ಳುತ್ತಿದ್ದೇವೆ. ಹಬ್ಬಗಳಲ್ಲಿ, ಸಂತೋಷ ಮತ್ತು ದುಃಖದ ಸಂದರ್ಭಗಳಲ್ಲಿ ಪರಸ್ಪರ ಜೊತೆಗಿದ್ದೇವೆ. ಈ ರೀತಿ ಹಿಜಾಬ್ ಅನ್ನು ಚರ್ಚಾ ವಿಷಯವಾಗಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರ ದಾಳಕ್ಕೆ ನಾವೆಂದೂ ಬಲಿ ಬೀಳಬಾರದು.

ನಮಗೆ ಶಿಕ್ಷಣ ಮುಖ್ಯ. ಅದಕ್ಕಿಂತಲೂ ಮುಖ್ಯವಾಗಿ ಈ ದೇಶದ ಅಖಂಡತೆ ಸಾಮರಸ್ಯದ ಜೀವನ ಬಹಳ ಮುಖ್ಯ. ಅಲ್ಪಸಂಖ್ಯಾತರ ಎಲ್ಲ ಗುರುತುಗಳನ್ನು ಒಂದೊಂದಾಗಿ ಅಳಿಸಿ ಬಯಸುವ ಸಂವೇದನ ಶೂನ್ಯತೆ ಯುವಜನತೆಯನ್ನು ಯಾವ ದಿಕ್ಕಿನೆಡೆಗೆ ಕೊಂಡೊಯ್ಯುತ್ತದೆ, ಎಂಬುದರ ಬಗ್ಗೆ ದಿಗಿಲು ಆಗುತ್ತಿದೆ.

ಸಿಖ್ ಧರ್ಮೀಯ ಸಹೋದರರ ಶಿರವಸ್ತ್ರಕ್ಕಿಲ್ಲದ, ಕ್ರೈಸ್ತ ಸನ್ಯಾಸಿ ಭಗಿನಿಯರ ವಸ್ತ್ರಧಾರಣೆಗೆ ಇಲ್ಲದ ವಿರೋಧ ಹಿಜಾಬಿಗೆ ಯಾಕೆ? ತಲೆಯಮೇಲೆ ಹಾಕಿಕೊಳ್ಳುವ ಒಂದು ತುಂಡು ಬಟ್ಟೆಯ ಬಗ್ಗೆ ಇಷ್ಟು ಗೊಂದಲವೇಕೆ?

ಮಕ್ಕಳಿಗೆ ಸಭ್ಯತೆ, ಘನತೆ, ಗಾಂಭೀರ್ಯತೆಯೊಂದಿಗೆ ಶಿಕ್ಷಣವನ್ನು ಮುಗಿಸಲು ಅನುವು ಮಾಡಿಕೊಡಿ. ನಾಲಾಯಕ್ ಆದವರು, ಪರಸ್ಪರರನ್ನು ಕಚ್ಚಾಡಿಸುವವರನ್ನು ಯಾವ ಧರ್ಮದಲ್ಲಿ ಇದ್ದರೂ ಖಂಡಿಸಿ, ದೂರವಿಡಿ. ನಮ್ಮ ಮಕ್ಕಳು ವಿವಿಧ ಸಂಸ್ಕೃತಿಯನ್ನು ಪರಿಚಯಿಸಿಕೊಂಡು ಜೀವಿಸುವ ಹಕ್ಕನ್ನು ಅವರಿಂದ ಕಿತ್ತುಕೊಳ್ಳಬೇಡಿ. ರಾಜಕೀಯದವರ ಹಿತಾಸಕ್ತಿಗೆ ನೀವು ಬಲಿಯಾಗಬೇಡಿ. ಚೆನ್ನಾಗಿ ಕಲಿತು, ಬೆಳೆದು ನಮ್ಮ ಸಾಮರ್ಥ್ಯವನ್ನು ಅವರಿಗೆ ಗೊತ್ತುಪಡಿಸುವ. ಹೆಣ್ಣು ಮಕ್ಕಳ ಉಡುಪು ಅವರ ಹಕ್ಕು. ಹಾಗಾಗಿ ಹಿಜಾಬ್ ಸೇರಿದಂತೆ ಎಲ್ಲರ ವಸ್ತ್ರಗಳ ಪರವಾಗಿ ನಿಲ್ಲೋಣ. ನನ್ನ ವಸ್ತ್ರಧಾರಣೆ ನನ್ನ ಮೂಲಭೂತ ಹಕ್ಕು. ಅದು ನಿಮಗೆ ತೊಂದರೆಯನ್ನುಂಟು ಮಾಡುವುದಾದರೆ ಅದು ನನ್ನ ಅಥವಾ ಹಿಜಾಬಿನ ತಪ್ಪಲ್ಲ. ನಿಮ್ಮ ಮಾನಸಿಕತೆ, ಅದನ್ನು ಸ್ವಲ್ಪ ಶುದ್ಧವಾಗಿಟ್ಟುಕೊಳ್ಳಿ. ಸಮಸ್ಯೆಗೆ ಪರಿಹಾರ ನಿಮ್ಮಲ್ಲೇ ಇದೆ.

  • ಸಬೀಹ ಫಾತಿಮ

ಇದನ್ನೂ ಓದಿ: ಹೆಣ್ಣುಮಕ್ಕಳ ಬದುಕು, ಉಡುಪು ಮತ್ತು ಆಯ್ಕೆಯ ಹಕ್ಕುಗಳು ಮತ್ತು ಪುರುಷಾಧಿಪತ್ಯದ ಆಯ್ಕೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...