Homeಮುಖಪುಟಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ.

- Advertisement -
- Advertisement -

ಹಿಂದೆ ಒಂದು ಕಾಲವಿತ್ತು. ಬ್ರಿಟಿಷರ ವಿರುದ್ಧ ನಿಂತು ನಮ್ಮವರು, ಸುಧೀರ್ಘ ಹೋರಾಟದ ನಂತರ ಸ್ವಾಂತಂತ್ರ್ಯ ದೊರಕಿಸುವಲ್ಲಿ ಯಶಸ್ವಿಯಾದರು. ಅಂದಿನ ಹೋರಾಟ, ಪ್ರತಿಭಟನೆ ಅತೀ ಅಗತ್ಯದ್ದಾಗಿತ್ತು. ಸ್ವತಂತ್ರ ಭಾರತದ ನಂತರದ ಗುರಿ, ದೇಶದ ಅಭಿವೃದ್ಧಿ. ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೋರ್ವನ ಏಳಿಗೆ, ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಹಾನ್ ವ್ಯಕ್ತಿಯಾದ ಅಂಬೇಡ್ಕರ್ ಸಂವಿಧಾನ ರೂಪಿಸಿದರು. ಈ ಇತಿಹಾಸ ಬಹಳಷ್ಟು ಸರಳ ಮತ್ತು ಪ್ರತಿಯೋರ್ವನಿಗೂ ತಿಳಿದಿರುವ ವಿಚಾರ. ಆದರೆ ಇಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಾದದ್ದು ‘ದೇಶದ ಏಳಿಗೆ’ಯ ಕುರಿತಾಗಿ.

ಒಂದು ದೇಶವನ್ನು ನಾವು ಅಭಿವೃದ್ಧಿ ಹೊಂದಿದೆ ಅಥವಾ ಅಭಿವೃದ್ಧಿ ಹೊಂದುತ್ತಿದೆ ಎಂದು ಕರೆಯಬೇಕಾದರೆ,

·       ರಾಷ್ಟ್ರೀಯ ಉತ್ಪನ್ನ (GDP), ರಾಷ್ಟ್ರೀಯ ಆದಾಯ (GNI)

·       ದೇಶದ ಕೈಗಾರೀಕರಣದ ಹಂತ

·       ಜನರ ಜೀವನ ಮಟ್ಟ

·       ಬಳಸುತ್ತಿರುವ ತಂತ್ರಜ್ಞಾನದ ಗುಣಮಟ್ಟ

ಇವೇ ಮೊದಲಾದ ಅಂಶಗಳು ಮುಖ್ಯವಾಗಿ ಅಳತೆಗೋಲಾಗುತ್ತವೆ. ಇವುಗಳ ಆಧಾರದ ಮೇಲೆ ದೇಶದ ಏಳಿಗೆ ನಿಂತಿದೆ. ಇಂದು ಸುಮಾರು 22 ಶೇಕಡಾ ಭಾರತೀಯರು ಬಡತನದಲ್ಲಿದ್ದರೆ, ನಿರುದ್ಯೋಗ ಗೆರೆ 7ಶೇಕಡದಷ್ಟಿದೆ. ವಿಶ್ವದೆಲ್ಲೆಡೆ ವ್ಯಾಪಿಸಿದ ಕೊರೊನಾ ಭಾರತಕ್ಕೂ ತಗುಲಿ ಬಹಳಷ್ಟು ಬಳಲಿದೆ. ಕೊರೊನಾ ಸೇರಿದಂತೆ ಇನ್ನಿತರ ಕಾರಣಗಳಿಂದ ದೇಶದ ಸಾವಿಸಸಂಖ್ಯೆ 7.5 ಶೇಕಡಾವಾರು ಏರಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ನಾವಿಂದು ಕೋಮುಗಲಭೆಯಲ್ಲಿ ವಿಜ್ರಂಭಿಸುತ್ತಿದ್ದೇವೆ.

ಹಿಜಾಬ್ ಕುರಿತಾಗಿ ಇಂದು ದೇಶದಲ್ಲಿ ಸಾಕಷ್ಟುಗಲಭೆಗಳು, ವಿವಾದಗಳು, ಚರ್ಚೆಗಳು ಭುಗಿಲೆದ್ದಿದೆ. ಮುಸ್ಲೀಂ ಹೆಣ್ಣು ಮಕ್ಕಳ ವಸ್ತ್ರಸಂಹಿತೆಯ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿದ್ದೇವೆ. ಇದಕ್ಕೆ ಹೆಣ್ಣು ಮಕ್ಕಳ ಶಿಕ್ಷಣ ಬಲಿಯಾಗುತ್ತಿರುವುದು ವಿಷಾದನೀಯ. ಈ ಸಂಘರ್ಷಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯುತ್ತಿರುವ ಪಕ್ಷಗಳ ನಡೆ ಬೇಸರದ ಸಂಗತಿ. ಹಿಂದಿನಿಂದಲೂ ಶಾಲಾ-ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದು ಶಿಕ್ಷಣ ಪಡೆಯುತ್ತಿದ್ದ ಅದೆಷ್ಟೋ ಮುಸ್ಲೀಂ ವಿದ್ಯಾರ್ಥಿನಿಯರಿದ್ದರು. ಆಗ ನಮಗೆ ಇದೊಂದು ವಿಷಯವೇ ಆಗಿರಲಿಲ್ಲ. ನಮ್ಮ ಶಿಕ್ಷಣಕ್ಕೆ ತೊಂದರೆ ಆಗಿರಲಿಲ್ಲ. ನಮಗವರು ಬೇರೆ ಎಂದೆಣಿಸಿರಲಿಲ್ಲ. ಜೊತೆಯಾಗಿ ಕುಳಿತುಕೊಳ್ಳುವುದಕ್ಕೂ, ಮಾತನಾಡುವುದಕ್ಕೂ, ಗೆಳೆತನಕ್ಕೂ ಕಷ್ಟವಾಗಿರಲಿಲ್ಲ. ಇಂದೇಕೆ ಏಕಾಏಕಿ ಈ ಮನಸ್ಥಿತಿಗೆ ನಾವು ಬಂದಿದ್ದೇವೆ? ಮುಸ್ಲೀಂ ಹೆಣ್ಣು ಮಗಳೊಬ್ಬಳು ನಮ್ಮ ಒತ್ತಾಯದ ಮೇರೆಗೆ ಹಿಜಾಬ್ ಧರಿಸದೇ ಬಂದಳೆಂದರೆ ನಮ್ಮ ಶಿಕ್ಷಣ ಪ್ರಗತಿ ಸಾಧಿಸುತ್ತದೆಯೆ? ಇದರಿಂದ ನಮಗೇನು ದೊರಕುತ್ತದೆ?

ಏಕೆ ನಮಗೆ ಅನ್ಯಕೋಮಿನ ಪ್ರತಿಯೊಂದು ಆಚಾರ, ವಿಚಾರಗಳು ಪ್ರಚೋದನಕಾರಿಯಾಗಿ ಕಾಣುತ್ತಿದೆ? ಮಾನವ ಸಂಘಜೀವಿ ಸರಿ. ಆದರೆ ನಾವು ಆರಿಸಿಕೊಂಡ ಸಂಘ, ನಾವು ಮಾಡಿಕೊಂಡಿರುವ ಒಡನಾಟಗಳು ಏನನ್ನು ಕಲಿಸುತ್ತಿವೆ? ಯಾವುದರತ್ತ ಮುಖಮಾಡಿದೆ? ಅದರ ಮುಖ್ಯಗುರಿ ಏನು? ದೇಶದ ಏಳಿಗೆ ಅದರಿಂದ ಹೇಗೆ ಸಾಧ್ಯ?ನಾವು ಮಾಡುತ್ತಿರುವ ಇವೆಲ್ಲಾ ಗಲಭೆಗಳು ದೇಶಪ್ರೇಮ ಎಂದೆನ್ನಿಸಿರಬಹುದು. ಆದರೆ ‘ವಿವಿಧತೆಯಲ್ಲಿನ ಏಕತೆ’, ‘ನಾವೆಲ್ಲರೂ ಒಂದೇ’ ಎನ್ನುವ ಸಂವಿಧಾನದ ಧ್ಯೇಯ ಇಂದು ಪಠ್ಯಗಳಲ್ಲಷ್ಟೇ ಉಳಿತ್ತಿದೆಯೇ ವಿನಃ ನಮ್ಮ ಮನದೊಳಗೆ ಇಳಿಯುತ್ತಿಲ್ಲ. ನಾವು ಅಂದುಕೊಂಡಿರುವ ಈ ದೇಶಪ್ರೇಮ ಒಂದುಗೂಡಿಸುವ ಬದಲು, ದೇಶವನ್ನು ಒಡೆಯುತ್ತಿದೆ.

ಇಂದು ನಾವು ಅನ್ಯಕೋಮಿನ ಪ್ರತಿಯೋರ್ವನನ್ನು ಅನುಮಾನಿಸುತ್ತೇವೆ, ಕಾರಣವಿಲ್ಲದೆ ದ್ವೇಷಿಸುತ್ತೇವೆ. ಕಾಳಜಿ, ಪ್ರೀತಿ, ನಂಬಿಕೆಗಳು ಮೂಡುವುದಿಲ್ಲ. ಈ ವಿಷಯಕ್ಕೆ ಕೆಲವು ಮಾಧ್ಯಮ ಮತ್ತು ರಾಜಕಾರಣಿಗಳು ಇನ್ನಿಲ್ಲದಂತೆ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮ ಬಿತ್ತರಿಸುವ ಸುದ್ದಿಗಳು ಎಷ್ಟು ಸರಿ ಎಂದು ಅವಲೋಕಿಸುವ ಬದಲಿಗೆ ದ್ವೇಷ ಕಾರುವ ವಿಷಯಗಳನ್ನು ಆನಂದಿಸುತ್ತೇವೆ. ನಾವೇ ಆಯ್ಕೆ ಮಾಡಿದ ನಾಯಕರುಗಳು ವೇದಿಕೆಗಳಲ್ಲಿ ಉದ್ರೇಕದಿಂದ ಮಾತುನಾಡುತ್ತಿದ್ದರೆ ಚಪ್ಪಾಳೆ ತಟ್ಟುತ್ತೇವೆ, ಬೆಂಬಲಿಸುತ್ತೇವೆ. ಇದರಿಂದ ದೇಶದ ಪ್ರಗತಿ ಸಾಧ್ಯವೇ ಎಂದು ಯೋಚಿಸುವುದಿಲ್ಲ. ನಮ್ಮ ನಾಯಕರುಗಳ ಕೆಲಸ ನಮ್ಮನ್ನು ಉದ್ರೇಕಿಸಿ, ಗಲಭೆ ಸೃಷ್ಟಿಸುವುದೇ? ಎಂದು ನಮಗೆ ಹೊಳೆಯುವುದೇ ಇಲ್ಲ. ಮಾಧ್ಯಮ ಪ್ರತಿನಿಧಿಯೋರ್ವ ಚರ್ಚಿಸುತ್ತಾ ಮತ್ತೊಬ್ಬನ ಮಾತೇ ಕೇಳಿಸದಷ್ಟು ಬೊಬ್ಬೆ ಹಾಕುವಾಗ ನಮಗೇ ಗೆಲುವು ಸಿಕ್ಕಿದಷ್ಟು ಖುಷಿಯಾಗುತ್ತದೆ. ಹಾಗಾದರೆ ದೇಶ ಒಡೆಯುವುದರಲ್ಲಿ ನಮಗೆ ವಿಕೃತ ಆನಂದ ಸಿಗುತ್ತಿದೆ ಎಂದಲ್ಲವೇ ಇದರರ್ಥ. ನಮ್ಮ ಮನಸ್ಥಿತಿ ಎಲ್ಲಿಗೆ ತಲುಪಿದೆ ಹಾಗಾದರೆ?

ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ. ಈ ವಿಷಯಗಳು ದೇಶದ ಬೆಳವಣಿಗೆಗೆ ಮಾರಕವಾಗದಿರಲಿ. ಪ್ರಜೆಯಾಗಿ ನಾವು ನಾಳೆ ಎಂತಹ ಭಾರತವನ್ನು ಕಟ್ಟಲು ಹೊರಟಿದ್ದೇವೆ ಎನ್ನುವುದನ್ನು ಬೇರೆಯವರೊಂದಿಗೆ ಚರ್ಚಿಸುವ ಮೊದಲು, ವಾದಕ್ಕಿಳಿಯುವ ಮೊದಲು ನಮ್ಮೊಳಗೆ ಉತ್ತರ ಕಂಡುಕೊಳ್ಳಬೇಕಿರುವುದು ಈಗಿನ ತುರ್ತು. ನಮ್ಮ ದೇಶ ಪ್ರಗತಿ ಹೊಂದುವುದು ಹಲವಾರು ಸದ್ಯದ ತೊಂದರೆಗಳಿಗೆ ಪರಿಹಾರ ಕಂಡುಹಿಡಿದಾಗ ಮಾತ್ರ. ನಿರುದ್ಯೋಗ ,ಬಡತನ ಮುಂತಾದ ಅತೀ ದೊಡ್ಡ ಸಮಸ್ಯೆಗಳಿಗೆ ಎಲ್ಲರೂ ಒಂದಾಗಿದ್ದಾರೆ ಮಾತ್ರವೇ ಮುಕ್ತಾಯ ದೊರಕುತ್ತದೆ. ಯೋಚಿಸಿ ಮುನ್ನಡೆಯಬೇಕಾದದ್ದು ಪ್ರತಿಯೋರ್ವನ ಕರ್ತವ್ಯವಾಗಿರಲಿ ಎಂಬುದಷ್ಟೇ ಆಶಯ.

  • ಆದಿತ್ಯ ಪ್ರಸಾದ್ ಪಾಂಡೇಲು

ಪ್ರಸ್ತುತ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಆದಿತ್ಯ ಪ್ರಸಾದ್‌ರವರಿಗೆ ಸಾಹಿತ್ಯ ಹಾಗು ರಂಗಭೂಮಿ ಆಸಕ್ತಿಯ ಕ್ಷೇತ್ರಗಳು. ಸಣ್ಣ ವಯಸ್ಸಿನಿಂದ ಬರಹಗಾರನಾಗಬೇಕೆಂಬ ತುಡಿತಕ್ಕೆ ದಿಕ್ಕು ತೋರಿದ್ದು ರಂಗಭೂಮಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...