Homeಮುಖಪುಟಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ.

- Advertisement -
- Advertisement -

ಹಿಂದೆ ಒಂದು ಕಾಲವಿತ್ತು. ಬ್ರಿಟಿಷರ ವಿರುದ್ಧ ನಿಂತು ನಮ್ಮವರು, ಸುಧೀರ್ಘ ಹೋರಾಟದ ನಂತರ ಸ್ವಾಂತಂತ್ರ್ಯ ದೊರಕಿಸುವಲ್ಲಿ ಯಶಸ್ವಿಯಾದರು. ಅಂದಿನ ಹೋರಾಟ, ಪ್ರತಿಭಟನೆ ಅತೀ ಅಗತ್ಯದ್ದಾಗಿತ್ತು. ಸ್ವತಂತ್ರ ಭಾರತದ ನಂತರದ ಗುರಿ, ದೇಶದ ಅಭಿವೃದ್ಧಿ. ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೋರ್ವನ ಏಳಿಗೆ, ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಹಾನ್ ವ್ಯಕ್ತಿಯಾದ ಅಂಬೇಡ್ಕರ್ ಸಂವಿಧಾನ ರೂಪಿಸಿದರು. ಈ ಇತಿಹಾಸ ಬಹಳಷ್ಟು ಸರಳ ಮತ್ತು ಪ್ರತಿಯೋರ್ವನಿಗೂ ತಿಳಿದಿರುವ ವಿಚಾರ. ಆದರೆ ಇಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಾದದ್ದು ‘ದೇಶದ ಏಳಿಗೆ’ಯ ಕುರಿತಾಗಿ.

ಒಂದು ದೇಶವನ್ನು ನಾವು ಅಭಿವೃದ್ಧಿ ಹೊಂದಿದೆ ಅಥವಾ ಅಭಿವೃದ್ಧಿ ಹೊಂದುತ್ತಿದೆ ಎಂದು ಕರೆಯಬೇಕಾದರೆ,

·       ರಾಷ್ಟ್ರೀಯ ಉತ್ಪನ್ನ (GDP), ರಾಷ್ಟ್ರೀಯ ಆದಾಯ (GNI)

·       ದೇಶದ ಕೈಗಾರೀಕರಣದ ಹಂತ

·       ಜನರ ಜೀವನ ಮಟ್ಟ

·       ಬಳಸುತ್ತಿರುವ ತಂತ್ರಜ್ಞಾನದ ಗುಣಮಟ್ಟ

ಇವೇ ಮೊದಲಾದ ಅಂಶಗಳು ಮುಖ್ಯವಾಗಿ ಅಳತೆಗೋಲಾಗುತ್ತವೆ. ಇವುಗಳ ಆಧಾರದ ಮೇಲೆ ದೇಶದ ಏಳಿಗೆ ನಿಂತಿದೆ. ಇಂದು ಸುಮಾರು 22 ಶೇಕಡಾ ಭಾರತೀಯರು ಬಡತನದಲ್ಲಿದ್ದರೆ, ನಿರುದ್ಯೋಗ ಗೆರೆ 7ಶೇಕಡದಷ್ಟಿದೆ. ವಿಶ್ವದೆಲ್ಲೆಡೆ ವ್ಯಾಪಿಸಿದ ಕೊರೊನಾ ಭಾರತಕ್ಕೂ ತಗುಲಿ ಬಹಳಷ್ಟು ಬಳಲಿದೆ. ಕೊರೊನಾ ಸೇರಿದಂತೆ ಇನ್ನಿತರ ಕಾರಣಗಳಿಂದ ದೇಶದ ಸಾವಿಸಸಂಖ್ಯೆ 7.5 ಶೇಕಡಾವಾರು ಏರಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ನಾವಿಂದು ಕೋಮುಗಲಭೆಯಲ್ಲಿ ವಿಜ್ರಂಭಿಸುತ್ತಿದ್ದೇವೆ.

ಹಿಜಾಬ್ ಕುರಿತಾಗಿ ಇಂದು ದೇಶದಲ್ಲಿ ಸಾಕಷ್ಟುಗಲಭೆಗಳು, ವಿವಾದಗಳು, ಚರ್ಚೆಗಳು ಭುಗಿಲೆದ್ದಿದೆ. ಮುಸ್ಲೀಂ ಹೆಣ್ಣು ಮಕ್ಕಳ ವಸ್ತ್ರಸಂಹಿತೆಯ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿದ್ದೇವೆ. ಇದಕ್ಕೆ ಹೆಣ್ಣು ಮಕ್ಕಳ ಶಿಕ್ಷಣ ಬಲಿಯಾಗುತ್ತಿರುವುದು ವಿಷಾದನೀಯ. ಈ ಸಂಘರ್ಷಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯುತ್ತಿರುವ ಪಕ್ಷಗಳ ನಡೆ ಬೇಸರದ ಸಂಗತಿ. ಹಿಂದಿನಿಂದಲೂ ಶಾಲಾ-ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದು ಶಿಕ್ಷಣ ಪಡೆಯುತ್ತಿದ್ದ ಅದೆಷ್ಟೋ ಮುಸ್ಲೀಂ ವಿದ್ಯಾರ್ಥಿನಿಯರಿದ್ದರು. ಆಗ ನಮಗೆ ಇದೊಂದು ವಿಷಯವೇ ಆಗಿರಲಿಲ್ಲ. ನಮ್ಮ ಶಿಕ್ಷಣಕ್ಕೆ ತೊಂದರೆ ಆಗಿರಲಿಲ್ಲ. ನಮಗವರು ಬೇರೆ ಎಂದೆಣಿಸಿರಲಿಲ್ಲ. ಜೊತೆಯಾಗಿ ಕುಳಿತುಕೊಳ್ಳುವುದಕ್ಕೂ, ಮಾತನಾಡುವುದಕ್ಕೂ, ಗೆಳೆತನಕ್ಕೂ ಕಷ್ಟವಾಗಿರಲಿಲ್ಲ. ಇಂದೇಕೆ ಏಕಾಏಕಿ ಈ ಮನಸ್ಥಿತಿಗೆ ನಾವು ಬಂದಿದ್ದೇವೆ? ಮುಸ್ಲೀಂ ಹೆಣ್ಣು ಮಗಳೊಬ್ಬಳು ನಮ್ಮ ಒತ್ತಾಯದ ಮೇರೆಗೆ ಹಿಜಾಬ್ ಧರಿಸದೇ ಬಂದಳೆಂದರೆ ನಮ್ಮ ಶಿಕ್ಷಣ ಪ್ರಗತಿ ಸಾಧಿಸುತ್ತದೆಯೆ? ಇದರಿಂದ ನಮಗೇನು ದೊರಕುತ್ತದೆ?

ಏಕೆ ನಮಗೆ ಅನ್ಯಕೋಮಿನ ಪ್ರತಿಯೊಂದು ಆಚಾರ, ವಿಚಾರಗಳು ಪ್ರಚೋದನಕಾರಿಯಾಗಿ ಕಾಣುತ್ತಿದೆ? ಮಾನವ ಸಂಘಜೀವಿ ಸರಿ. ಆದರೆ ನಾವು ಆರಿಸಿಕೊಂಡ ಸಂಘ, ನಾವು ಮಾಡಿಕೊಂಡಿರುವ ಒಡನಾಟಗಳು ಏನನ್ನು ಕಲಿಸುತ್ತಿವೆ? ಯಾವುದರತ್ತ ಮುಖಮಾಡಿದೆ? ಅದರ ಮುಖ್ಯಗುರಿ ಏನು? ದೇಶದ ಏಳಿಗೆ ಅದರಿಂದ ಹೇಗೆ ಸಾಧ್ಯ?ನಾವು ಮಾಡುತ್ತಿರುವ ಇವೆಲ್ಲಾ ಗಲಭೆಗಳು ದೇಶಪ್ರೇಮ ಎಂದೆನ್ನಿಸಿರಬಹುದು. ಆದರೆ ‘ವಿವಿಧತೆಯಲ್ಲಿನ ಏಕತೆ’, ‘ನಾವೆಲ್ಲರೂ ಒಂದೇ’ ಎನ್ನುವ ಸಂವಿಧಾನದ ಧ್ಯೇಯ ಇಂದು ಪಠ್ಯಗಳಲ್ಲಷ್ಟೇ ಉಳಿತ್ತಿದೆಯೇ ವಿನಃ ನಮ್ಮ ಮನದೊಳಗೆ ಇಳಿಯುತ್ತಿಲ್ಲ. ನಾವು ಅಂದುಕೊಂಡಿರುವ ಈ ದೇಶಪ್ರೇಮ ಒಂದುಗೂಡಿಸುವ ಬದಲು, ದೇಶವನ್ನು ಒಡೆಯುತ್ತಿದೆ.

ಇಂದು ನಾವು ಅನ್ಯಕೋಮಿನ ಪ್ರತಿಯೋರ್ವನನ್ನು ಅನುಮಾನಿಸುತ್ತೇವೆ, ಕಾರಣವಿಲ್ಲದೆ ದ್ವೇಷಿಸುತ್ತೇವೆ. ಕಾಳಜಿ, ಪ್ರೀತಿ, ನಂಬಿಕೆಗಳು ಮೂಡುವುದಿಲ್ಲ. ಈ ವಿಷಯಕ್ಕೆ ಕೆಲವು ಮಾಧ್ಯಮ ಮತ್ತು ರಾಜಕಾರಣಿಗಳು ಇನ್ನಿಲ್ಲದಂತೆ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮ ಬಿತ್ತರಿಸುವ ಸುದ್ದಿಗಳು ಎಷ್ಟು ಸರಿ ಎಂದು ಅವಲೋಕಿಸುವ ಬದಲಿಗೆ ದ್ವೇಷ ಕಾರುವ ವಿಷಯಗಳನ್ನು ಆನಂದಿಸುತ್ತೇವೆ. ನಾವೇ ಆಯ್ಕೆ ಮಾಡಿದ ನಾಯಕರುಗಳು ವೇದಿಕೆಗಳಲ್ಲಿ ಉದ್ರೇಕದಿಂದ ಮಾತುನಾಡುತ್ತಿದ್ದರೆ ಚಪ್ಪಾಳೆ ತಟ್ಟುತ್ತೇವೆ, ಬೆಂಬಲಿಸುತ್ತೇವೆ. ಇದರಿಂದ ದೇಶದ ಪ್ರಗತಿ ಸಾಧ್ಯವೇ ಎಂದು ಯೋಚಿಸುವುದಿಲ್ಲ. ನಮ್ಮ ನಾಯಕರುಗಳ ಕೆಲಸ ನಮ್ಮನ್ನು ಉದ್ರೇಕಿಸಿ, ಗಲಭೆ ಸೃಷ್ಟಿಸುವುದೇ? ಎಂದು ನಮಗೆ ಹೊಳೆಯುವುದೇ ಇಲ್ಲ. ಮಾಧ್ಯಮ ಪ್ರತಿನಿಧಿಯೋರ್ವ ಚರ್ಚಿಸುತ್ತಾ ಮತ್ತೊಬ್ಬನ ಮಾತೇ ಕೇಳಿಸದಷ್ಟು ಬೊಬ್ಬೆ ಹಾಕುವಾಗ ನಮಗೇ ಗೆಲುವು ಸಿಕ್ಕಿದಷ್ಟು ಖುಷಿಯಾಗುತ್ತದೆ. ಹಾಗಾದರೆ ದೇಶ ಒಡೆಯುವುದರಲ್ಲಿ ನಮಗೆ ವಿಕೃತ ಆನಂದ ಸಿಗುತ್ತಿದೆ ಎಂದಲ್ಲವೇ ಇದರರ್ಥ. ನಮ್ಮ ಮನಸ್ಥಿತಿ ಎಲ್ಲಿಗೆ ತಲುಪಿದೆ ಹಾಗಾದರೆ?

ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ. ಈ ವಿಷಯಗಳು ದೇಶದ ಬೆಳವಣಿಗೆಗೆ ಮಾರಕವಾಗದಿರಲಿ. ಪ್ರಜೆಯಾಗಿ ನಾವು ನಾಳೆ ಎಂತಹ ಭಾರತವನ್ನು ಕಟ್ಟಲು ಹೊರಟಿದ್ದೇವೆ ಎನ್ನುವುದನ್ನು ಬೇರೆಯವರೊಂದಿಗೆ ಚರ್ಚಿಸುವ ಮೊದಲು, ವಾದಕ್ಕಿಳಿಯುವ ಮೊದಲು ನಮ್ಮೊಳಗೆ ಉತ್ತರ ಕಂಡುಕೊಳ್ಳಬೇಕಿರುವುದು ಈಗಿನ ತುರ್ತು. ನಮ್ಮ ದೇಶ ಪ್ರಗತಿ ಹೊಂದುವುದು ಹಲವಾರು ಸದ್ಯದ ತೊಂದರೆಗಳಿಗೆ ಪರಿಹಾರ ಕಂಡುಹಿಡಿದಾಗ ಮಾತ್ರ. ನಿರುದ್ಯೋಗ ,ಬಡತನ ಮುಂತಾದ ಅತೀ ದೊಡ್ಡ ಸಮಸ್ಯೆಗಳಿಗೆ ಎಲ್ಲರೂ ಒಂದಾಗಿದ್ದಾರೆ ಮಾತ್ರವೇ ಮುಕ್ತಾಯ ದೊರಕುತ್ತದೆ. ಯೋಚಿಸಿ ಮುನ್ನಡೆಯಬೇಕಾದದ್ದು ಪ್ರತಿಯೋರ್ವನ ಕರ್ತವ್ಯವಾಗಿರಲಿ ಎಂಬುದಷ್ಟೇ ಆಶಯ.

  • ಆದಿತ್ಯ ಪ್ರಸಾದ್ ಪಾಂಡೇಲು

ಪ್ರಸ್ತುತ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಆದಿತ್ಯ ಪ್ರಸಾದ್‌ರವರಿಗೆ ಸಾಹಿತ್ಯ ಹಾಗು ರಂಗಭೂಮಿ ಆಸಕ್ತಿಯ ಕ್ಷೇತ್ರಗಳು. ಸಣ್ಣ ವಯಸ್ಸಿನಿಂದ ಬರಹಗಾರನಾಗಬೇಕೆಂಬ ತುಡಿತಕ್ಕೆ ದಿಕ್ಕು ತೋರಿದ್ದು ರಂಗಭೂಮಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...