Homeಮುಖಪುಟಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ.

- Advertisement -
- Advertisement -

ಹಿಂದೆ ಒಂದು ಕಾಲವಿತ್ತು. ಬ್ರಿಟಿಷರ ವಿರುದ್ಧ ನಿಂತು ನಮ್ಮವರು, ಸುಧೀರ್ಘ ಹೋರಾಟದ ನಂತರ ಸ್ವಾಂತಂತ್ರ್ಯ ದೊರಕಿಸುವಲ್ಲಿ ಯಶಸ್ವಿಯಾದರು. ಅಂದಿನ ಹೋರಾಟ, ಪ್ರತಿಭಟನೆ ಅತೀ ಅಗತ್ಯದ್ದಾಗಿತ್ತು. ಸ್ವತಂತ್ರ ಭಾರತದ ನಂತರದ ಗುರಿ, ದೇಶದ ಅಭಿವೃದ್ಧಿ. ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೋರ್ವನ ಏಳಿಗೆ, ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮಹಾನ್ ವ್ಯಕ್ತಿಯಾದ ಅಂಬೇಡ್ಕರ್ ಸಂವಿಧಾನ ರೂಪಿಸಿದರು. ಈ ಇತಿಹಾಸ ಬಹಳಷ್ಟು ಸರಳ ಮತ್ತು ಪ್ರತಿಯೋರ್ವನಿಗೂ ತಿಳಿದಿರುವ ವಿಚಾರ. ಆದರೆ ಇಲ್ಲಿ ನಾವು ಮುಖ್ಯವಾಗಿ ಗಮನಿಸಬೇಕಾದದ್ದು ‘ದೇಶದ ಏಳಿಗೆ’ಯ ಕುರಿತಾಗಿ.

ಒಂದು ದೇಶವನ್ನು ನಾವು ಅಭಿವೃದ್ಧಿ ಹೊಂದಿದೆ ಅಥವಾ ಅಭಿವೃದ್ಧಿ ಹೊಂದುತ್ತಿದೆ ಎಂದು ಕರೆಯಬೇಕಾದರೆ,

·       ರಾಷ್ಟ್ರೀಯ ಉತ್ಪನ್ನ (GDP), ರಾಷ್ಟ್ರೀಯ ಆದಾಯ (GNI)

·       ದೇಶದ ಕೈಗಾರೀಕರಣದ ಹಂತ

·       ಜನರ ಜೀವನ ಮಟ್ಟ

·       ಬಳಸುತ್ತಿರುವ ತಂತ್ರಜ್ಞಾನದ ಗುಣಮಟ್ಟ

ಇವೇ ಮೊದಲಾದ ಅಂಶಗಳು ಮುಖ್ಯವಾಗಿ ಅಳತೆಗೋಲಾಗುತ್ತವೆ. ಇವುಗಳ ಆಧಾರದ ಮೇಲೆ ದೇಶದ ಏಳಿಗೆ ನಿಂತಿದೆ. ಇಂದು ಸುಮಾರು 22 ಶೇಕಡಾ ಭಾರತೀಯರು ಬಡತನದಲ್ಲಿದ್ದರೆ, ನಿರುದ್ಯೋಗ ಗೆರೆ 7ಶೇಕಡದಷ್ಟಿದೆ. ವಿಶ್ವದೆಲ್ಲೆಡೆ ವ್ಯಾಪಿಸಿದ ಕೊರೊನಾ ಭಾರತಕ್ಕೂ ತಗುಲಿ ಬಹಳಷ್ಟು ಬಳಲಿದೆ. ಕೊರೊನಾ ಸೇರಿದಂತೆ ಇನ್ನಿತರ ಕಾರಣಗಳಿಂದ ದೇಶದ ಸಾವಿಸಸಂಖ್ಯೆ 7.5 ಶೇಕಡಾವಾರು ಏರಿದೆ. ಇಷ್ಟೆಲ್ಲಾ ಸಮಸ್ಯೆಗಳ ನಡುವೆ ನಾವಿಂದು ಕೋಮುಗಲಭೆಯಲ್ಲಿ ವಿಜ್ರಂಭಿಸುತ್ತಿದ್ದೇವೆ.

ಹಿಜಾಬ್ ಕುರಿತಾಗಿ ಇಂದು ದೇಶದಲ್ಲಿ ಸಾಕಷ್ಟುಗಲಭೆಗಳು, ವಿವಾದಗಳು, ಚರ್ಚೆಗಳು ಭುಗಿಲೆದ್ದಿದೆ. ಮುಸ್ಲೀಂ ಹೆಣ್ಣು ಮಕ್ಕಳ ವಸ್ತ್ರಸಂಹಿತೆಯ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿದ್ದೇವೆ. ಇದಕ್ಕೆ ಹೆಣ್ಣು ಮಕ್ಕಳ ಶಿಕ್ಷಣ ಬಲಿಯಾಗುತ್ತಿರುವುದು ವಿಷಾದನೀಯ. ಈ ಸಂಘರ್ಷಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯುತ್ತಿರುವ ಪಕ್ಷಗಳ ನಡೆ ಬೇಸರದ ಸಂಗತಿ. ಹಿಂದಿನಿಂದಲೂ ಶಾಲಾ-ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದು ಶಿಕ್ಷಣ ಪಡೆಯುತ್ತಿದ್ದ ಅದೆಷ್ಟೋ ಮುಸ್ಲೀಂ ವಿದ್ಯಾರ್ಥಿನಿಯರಿದ್ದರು. ಆಗ ನಮಗೆ ಇದೊಂದು ವಿಷಯವೇ ಆಗಿರಲಿಲ್ಲ. ನಮ್ಮ ಶಿಕ್ಷಣಕ್ಕೆ ತೊಂದರೆ ಆಗಿರಲಿಲ್ಲ. ನಮಗವರು ಬೇರೆ ಎಂದೆಣಿಸಿರಲಿಲ್ಲ. ಜೊತೆಯಾಗಿ ಕುಳಿತುಕೊಳ್ಳುವುದಕ್ಕೂ, ಮಾತನಾಡುವುದಕ್ಕೂ, ಗೆಳೆತನಕ್ಕೂ ಕಷ್ಟವಾಗಿರಲಿಲ್ಲ. ಇಂದೇಕೆ ಏಕಾಏಕಿ ಈ ಮನಸ್ಥಿತಿಗೆ ನಾವು ಬಂದಿದ್ದೇವೆ? ಮುಸ್ಲೀಂ ಹೆಣ್ಣು ಮಗಳೊಬ್ಬಳು ನಮ್ಮ ಒತ್ತಾಯದ ಮೇರೆಗೆ ಹಿಜಾಬ್ ಧರಿಸದೇ ಬಂದಳೆಂದರೆ ನಮ್ಮ ಶಿಕ್ಷಣ ಪ್ರಗತಿ ಸಾಧಿಸುತ್ತದೆಯೆ? ಇದರಿಂದ ನಮಗೇನು ದೊರಕುತ್ತದೆ?

ಏಕೆ ನಮಗೆ ಅನ್ಯಕೋಮಿನ ಪ್ರತಿಯೊಂದು ಆಚಾರ, ವಿಚಾರಗಳು ಪ್ರಚೋದನಕಾರಿಯಾಗಿ ಕಾಣುತ್ತಿದೆ? ಮಾನವ ಸಂಘಜೀವಿ ಸರಿ. ಆದರೆ ನಾವು ಆರಿಸಿಕೊಂಡ ಸಂಘ, ನಾವು ಮಾಡಿಕೊಂಡಿರುವ ಒಡನಾಟಗಳು ಏನನ್ನು ಕಲಿಸುತ್ತಿವೆ? ಯಾವುದರತ್ತ ಮುಖಮಾಡಿದೆ? ಅದರ ಮುಖ್ಯಗುರಿ ಏನು? ದೇಶದ ಏಳಿಗೆ ಅದರಿಂದ ಹೇಗೆ ಸಾಧ್ಯ?ನಾವು ಮಾಡುತ್ತಿರುವ ಇವೆಲ್ಲಾ ಗಲಭೆಗಳು ದೇಶಪ್ರೇಮ ಎಂದೆನ್ನಿಸಿರಬಹುದು. ಆದರೆ ‘ವಿವಿಧತೆಯಲ್ಲಿನ ಏಕತೆ’, ‘ನಾವೆಲ್ಲರೂ ಒಂದೇ’ ಎನ್ನುವ ಸಂವಿಧಾನದ ಧ್ಯೇಯ ಇಂದು ಪಠ್ಯಗಳಲ್ಲಷ್ಟೇ ಉಳಿತ್ತಿದೆಯೇ ವಿನಃ ನಮ್ಮ ಮನದೊಳಗೆ ಇಳಿಯುತ್ತಿಲ್ಲ. ನಾವು ಅಂದುಕೊಂಡಿರುವ ಈ ದೇಶಪ್ರೇಮ ಒಂದುಗೂಡಿಸುವ ಬದಲು, ದೇಶವನ್ನು ಒಡೆಯುತ್ತಿದೆ.

ಇಂದು ನಾವು ಅನ್ಯಕೋಮಿನ ಪ್ರತಿಯೋರ್ವನನ್ನು ಅನುಮಾನಿಸುತ್ತೇವೆ, ಕಾರಣವಿಲ್ಲದೆ ದ್ವೇಷಿಸುತ್ತೇವೆ. ಕಾಳಜಿ, ಪ್ರೀತಿ, ನಂಬಿಕೆಗಳು ಮೂಡುವುದಿಲ್ಲ. ಈ ವಿಷಯಕ್ಕೆ ಕೆಲವು ಮಾಧ್ಯಮ ಮತ್ತು ರಾಜಕಾರಣಿಗಳು ಇನ್ನಿಲ್ಲದಂತೆ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮ ಬಿತ್ತರಿಸುವ ಸುದ್ದಿಗಳು ಎಷ್ಟು ಸರಿ ಎಂದು ಅವಲೋಕಿಸುವ ಬದಲಿಗೆ ದ್ವೇಷ ಕಾರುವ ವಿಷಯಗಳನ್ನು ಆನಂದಿಸುತ್ತೇವೆ. ನಾವೇ ಆಯ್ಕೆ ಮಾಡಿದ ನಾಯಕರುಗಳು ವೇದಿಕೆಗಳಲ್ಲಿ ಉದ್ರೇಕದಿಂದ ಮಾತುನಾಡುತ್ತಿದ್ದರೆ ಚಪ್ಪಾಳೆ ತಟ್ಟುತ್ತೇವೆ, ಬೆಂಬಲಿಸುತ್ತೇವೆ. ಇದರಿಂದ ದೇಶದ ಪ್ರಗತಿ ಸಾಧ್ಯವೇ ಎಂದು ಯೋಚಿಸುವುದಿಲ್ಲ. ನಮ್ಮ ನಾಯಕರುಗಳ ಕೆಲಸ ನಮ್ಮನ್ನು ಉದ್ರೇಕಿಸಿ, ಗಲಭೆ ಸೃಷ್ಟಿಸುವುದೇ? ಎಂದು ನಮಗೆ ಹೊಳೆಯುವುದೇ ಇಲ್ಲ. ಮಾಧ್ಯಮ ಪ್ರತಿನಿಧಿಯೋರ್ವ ಚರ್ಚಿಸುತ್ತಾ ಮತ್ತೊಬ್ಬನ ಮಾತೇ ಕೇಳಿಸದಷ್ಟು ಬೊಬ್ಬೆ ಹಾಕುವಾಗ ನಮಗೇ ಗೆಲುವು ಸಿಕ್ಕಿದಷ್ಟು ಖುಷಿಯಾಗುತ್ತದೆ. ಹಾಗಾದರೆ ದೇಶ ಒಡೆಯುವುದರಲ್ಲಿ ನಮಗೆ ವಿಕೃತ ಆನಂದ ಸಿಗುತ್ತಿದೆ ಎಂದಲ್ಲವೇ ಇದರರ್ಥ. ನಮ್ಮ ಮನಸ್ಥಿತಿ ಎಲ್ಲಿಗೆ ತಲುಪಿದೆ ಹಾಗಾದರೆ?

ಎಲ್ಲಾ ಧರ್ಮಗಳಲ್ಲೂ ಒಳ್ಳೆಯವರಿದ್ದಾರೆ, ಕೆಟ್ಟವರಿದ್ದಾರೆ. ಅವರವರಿಗೆ ಅವರದೇ ಆದ ಧರ್ಮವಿದೆ. ಎಲ್ಲದರಲ್ಲೂ ಕೊರತೆಯಿದೆ, ಒಳ್ಳೆಯ ವಿಚಾರಗಳಿವೆ. ಅವರವರ ಧರ್ಮ ಪಾಲಿಸುವುದು ಅವರದೇ ಇಚ್ಚೆ. ಈ ವಿಷಯಗಳು ದೇಶದ ಬೆಳವಣಿಗೆಗೆ ಮಾರಕವಾಗದಿರಲಿ. ಪ್ರಜೆಯಾಗಿ ನಾವು ನಾಳೆ ಎಂತಹ ಭಾರತವನ್ನು ಕಟ್ಟಲು ಹೊರಟಿದ್ದೇವೆ ಎನ್ನುವುದನ್ನು ಬೇರೆಯವರೊಂದಿಗೆ ಚರ್ಚಿಸುವ ಮೊದಲು, ವಾದಕ್ಕಿಳಿಯುವ ಮೊದಲು ನಮ್ಮೊಳಗೆ ಉತ್ತರ ಕಂಡುಕೊಳ್ಳಬೇಕಿರುವುದು ಈಗಿನ ತುರ್ತು. ನಮ್ಮ ದೇಶ ಪ್ರಗತಿ ಹೊಂದುವುದು ಹಲವಾರು ಸದ್ಯದ ತೊಂದರೆಗಳಿಗೆ ಪರಿಹಾರ ಕಂಡುಹಿಡಿದಾಗ ಮಾತ್ರ. ನಿರುದ್ಯೋಗ ,ಬಡತನ ಮುಂತಾದ ಅತೀ ದೊಡ್ಡ ಸಮಸ್ಯೆಗಳಿಗೆ ಎಲ್ಲರೂ ಒಂದಾಗಿದ್ದಾರೆ ಮಾತ್ರವೇ ಮುಕ್ತಾಯ ದೊರಕುತ್ತದೆ. ಯೋಚಿಸಿ ಮುನ್ನಡೆಯಬೇಕಾದದ್ದು ಪ್ರತಿಯೋರ್ವನ ಕರ್ತವ್ಯವಾಗಿರಲಿ ಎಂಬುದಷ್ಟೇ ಆಶಯ.

  • ಆದಿತ್ಯ ಪ್ರಸಾದ್ ಪಾಂಡೇಲು

ಪ್ರಸ್ತುತ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಆದಿತ್ಯ ಪ್ರಸಾದ್‌ರವರಿಗೆ ಸಾಹಿತ್ಯ ಹಾಗು ರಂಗಭೂಮಿ ಆಸಕ್ತಿಯ ಕ್ಷೇತ್ರಗಳು. ಸಣ್ಣ ವಯಸ್ಸಿನಿಂದ ಬರಹಗಾರನಾಗಬೇಕೆಂಬ ತುಡಿತಕ್ಕೆ ದಿಕ್ಕು ತೋರಿದ್ದು ರಂಗಭೂಮಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...