Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...