Homeಮುಖಪುಟಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

ಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮೊದಲ ಎರಡು ಹಂತದ ಮತದಾನದಲ್ಲಿ ಈಗಾಗಲೇ ತಮ್ಮ ಪಕ್ಷವು “ಶತಕ” ಬಾರಿಸಿದೆ. ನಾಲ್ಕನೇ ಹಂತದ ವೇಳೆಗೆ ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆದ ಮೊದಲ ಎರಡು ಹಂತದ ಚುನಾವಣೆಯಲ್ಲಿ 113 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ತಲಾ 59 ಕ್ಷೇತ್ರಗಳಿಗೆ ಮೂರನೇ ಹಂತದಲ್ಲಿ ಫೆಬ್ರವರಿ 20 ಮತ್ತು ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಮತದಾನ ನಡೆಯಲಿದೆ.

“ಮೊದಲ ಎರಡು ಹಂತಗಳಲ್ಲಿ ಈಗಾಗಲೇ ತಮ್ಮ ಪಕ್ಷವು ಶತಕ ಬಾರಿಸಿದೆ. ನಾಲ್ಕನೇ ಹಂತದ ಮತದಾನದ ವೇಳೆಗೆ ಸಮಾಜವಾದಿ ಪಕ್ಷವು ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ” ಎಂದು ಫಿರೋಜಾಬಾದ್‌ನ ನಾಸಿರ್‌ಪುರ ಪ್ರದೇಶದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಫಿರೋಜಾಬಾದ್ ಕ್ಷೇತ್ರದಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. “ಫಿರೋಜಾಬಾದ್‌ನ ಜನರು ಈ ಬಾರಿ ಬಿಜೆಪಿಯ ಕಣ್ಣು ತೆರೆಸುತ್ತಾರೆ” ಎಂದಿದ್ದಾರೆ. ರಾಜ್ಯದಲ್ಲಿ ಎಸ್‌ಪಿ ಸರ್ಕಾರ ರಚನೆಯಾದ ನಂತರ ಉತ್ತರ ಪ್ರದೇಶದಲ್ಲಿ ಜಾತಿ ಗಣತಿ, ಎಲ್ಲಾ ಜಾತಿಗಳಿಗೆ ಸಮಾನ ಪ್ರಾತಿನಿಧ್ಯ ಮತ್ತು ಘನತೆಯ ಭರವಸೆ ನೀಡಿದ್ದಾರೆ. 

ಇದನ್ನೂ ಓದಿ: ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

“ಪ್ರಜಾಪ್ರಭುತ್ವ ಉಳಿಸುವ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಉಳಿಸುವ, ಅವಮಾನಕ್ಕೊಳಗಾದ ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಗೌರವ ಉಳಿಸುವ ಚುನಾವಣೆ ಇದಾಗಿದೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ, ಕಾನೂನನ್ನು ಉಲ್ಲಂಘಿಸಬೇಕಾದವರು ಅಥವಾ ಕಾನೂನಿನ ಪ್ರಕಾರ ಕೆಲಸ ಮಾಡದಿರುವವರು ಸಮಾಜವಾದಿ ಪಕ್ಷಕ್ಕೆ ಮತ ಹಾಕಬೇಕಾಗಿಲ್ಲ” ಎಂದು ಹೇಳಿದ್ದಾರೆ.

ಬಿಜೆಪಿಯವರು ಜನರಿಗೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿರುವ ಅವರು, “ಅವರ ಮಾತುಗಳನ್ನು ಕೇಳಿ, ಸಣ್ಣ ನಾಯಕರು ಸಣ್ಣ ಸುಳ್ಳು ಹೇಳುತ್ತಾರೆ, ದೊಡ್ಡವರು ದೊಡ್ಡ ಸುಳ್ಳು ಹೇಳುತ್ತಾರೆ, ಮತ್ತೂ ದೊಡ್ಡವರು ಇನ್ನಷ್ಟು ದೊಡ್ಡ ಸುಳ್ಳು ಹೇಳುತ್ತಾರೆ. ಬಿಜೆಪಿಯು ಯುವಕರಿಗೆ ಉದ್ಯೋಗ, ರೈತರಿಗೆ ಆದಾಯ ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸಿಲ್ಲ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರ ವಿಮಾನ ನಿಲ್ದಾಣ, ರೈಲು, ರೈಲ್ವೇ ಸೇರಿದಂತೆ ಎಲ್ಲವನ್ನು ಮಾರಾಟ ಮಾಡುತ್ತಿದೆ ಇದರಿಂದ ಯಾರಿಗೂ ಉದ್ಯೋಗದಲ್ಲಿ ಮೀಸಲಾತಿ ಸಿಗುವುದಿಲ್ಲ ಎಂದಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ಹೋರಾಡಿದ ಸಮಾಜವಾದಿ ತತ್ವಗಳ ಮೇಲೆ ಕೆಲಸ ಮಾಡುವುದಾಗಿ ಅಖಿಲೇಶ್ ಯಾದವ್ ಜನರಿಗೆ ಭರವಸೆ ನೀಡಿದ್ದಾರೆ.

ಇನ್ನು, ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...