Homeಕರ್ನಾಟಕಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ!

ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ!

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧ ಮಾಡಿರುವ ಪ್ರಕರಣದ ವಿರುದ್ದ ಸಲ್ಲಿಸಲಾಗಿರುವ ಅರ್ಜಿ ಇನ್ನೂ ಕೋರ್ಟ್‌ನಲ್ಲಿದೆ. ಈ ನಡುವೆ ರಾಜ್ಯ ಸರ್ಕಾರವು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಂದ ವಿಶೇಷವಾಗಿ 1 ರಿಂದ 10 ನೇ ತರಗತಿಗೆ ದಾಖಲಾಗಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಡೇಟಾವನ್ನು ಸದ್ದಿಲ್ಲದೆ ಸಂಗ್ರಹಿಸಲು ಹೊರಟಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಗುರುವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪಡೆದ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ವಿವಿಧ ಸರ್ಕಾರಿ ಶಾಲೆಗಳಲ್ಲಿ 17,39,742 ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ 1,55,104 ವಿದ್ಯಾರ್ಥಿಗಳಿದ್ದು ಇದು ಅತಿ ಹೆಚ್ಚು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿರುವ ಪ್ರದೇಶವಾಗಿದೆ. ನಂತರದ ಸ್ಥಾನದಲ್ಲಿ ಕಲಬುರಗಿಯಿದ್ದು, ಇಲ್ಲಿ 1,31,802 ವಿದ್ಯಾರ್ಥಿಗಳಿದ್ದಾರೆ. ಬೆಂಗಳೂರು ಉತ್ತರದಲ್ಲಿ 1,22,993 ವಿದ್ಯಾರ್ಥಿಗಳು ಇದ್ದಾರೆ ಎಂದು ಅಂಕಿಅಂಶಗಳು ಬಹಿರಂಗಪಡಿಸಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 9,603 ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. ಇದು ರಾಜ್ಯದಲ್ಲೇ ಅತಿ ಕಡಿಮೆ ಮುಸ್ಲಿಂ ವಿದ್ಯಾರ್ಥಿಗಳಿರುವ ಪ್ರದೇಶವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

ಈ ಮಧ್ಯೆ, ತಮ್ಮ ಕಾಲೇಜುಗಳಿಗೆ ದಾಖಲಾದ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆಯ ಡೇಟಾವನ್ನು ಸಲ್ಲಿಸಲು ಬೆಂಗಳೂರಿನ ಕೆಲವು ಖಾಸಗಿ ಕಾಲೇಜುಗಳಿಗೆ ಕೇಳಲಾಗಿದೆ ಎಂದು DH ಮೂಲಗಳಲ್ಲಿ ಉಲ್ಲೇಖಿಸಿ ವರದಿ ಮಾಡಿದೆ.

“ನಡೆಯುತ್ತಿರುವ ಹಿಜಾಬ್ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳನ್ನು ಸೂಕ್ಷ್ಮ ವಲಯಗಳಾಗಿ ವರ್ಗೀಕರಿಸಲು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಮಾಡುತ್ತಿರುವ ಕಸರತ್ತು ಇದು ಇರಬಹುದು ಎಂದು ನಾವು ಭಾವಿಸಿದ್ದೇವೆ” ಎಂದು ಬೆಂಗಳೂರು ದಕ್ಷಿಣದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರೊಬ್ಬರು ಅಭಿಪ್ರಾಯಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ವಿದ್ಯಾರ್ಥಿಗಳ ದತ್ತಾಂಶ ಸಂಗ್ರಹದ ಹಿಂದಿನ ಕಾರಣದ ಬಗ್ಗೆ ಅಧಿಕಾರಗಳೊಂದಿಗೆ ಪ್ರಶ್ನಿಸಿದಾಗ, ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನ ಮತ್ತು ಉಚ್ಚ ನ್ಯಾಯಾಲಯದ ವಿಚಾರಣೆ ಹಿನ್ನಲೆಯಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. “ವಿಧಾನ ಮಂಡಲ ಅಧಿವೇಶ ನಡೆಯುತ್ತಿರುವುದರಿಂದ ಚುನಾಯಿತ ಪ್ರತಿನಿಧಿಗಳು ಡೇಟಾವನ್ನು ಕೇಳಬಹುದು ಹಾಗೂ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಇದು ಬೇಕಾಗಬಹುದು” ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

ಈ ಕುರಿತು ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, ದಿನನಿತ್ಯ ಮಾಧ್ಯಮ ವರದಿಗಳು ತಪ್ಪುದಾರಿಗೆ ಎಳೆಯುತ್ತಿವೆ. ಈ ಅಂಕಿಅಂಶಗಳನ್ನು ಎದುರಿಸಲು ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಡಿಎಚ್‌ಗೆ ತಿಳಿಸಿದ್ದಾರೆ. “ಪ್ರತಿದಿನ, ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳು ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಧಿಕ್ಕರಿಸಿ ಮನೆಗೆ ಮರಳಿದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆಯ ವಿವಿಧ ಅಂಕಿಅಂಶಗಳೊಂದಿಗೆ ಸಮಸ್ಯೆಯನ್ನು ವರದಿ ಮಾಡುತ್ತಿವೆ. ವಿದ್ಯಾರ್ಥಿಗಳು ಈ ಸಮಸ್ಯೆಯಿಂದ ನಿಜವಾಗಿಯೂ ತೊಂದರೆಗೀಡಾಗಿದ್ದಾರೆಯೇ ಅಥವಾ ಅಧ್ಯಯನದ ಮೇಲೆ ಕೇಂದ್ರೀಕರಿಸಿದ್ದಾರೆಯೇ ಎಂದು ನೋಡುವುದು ನಮ್ಮ ಉದ್ದೇಶವಾಗಿತ್ತು. ಸುತ್ತಲೂ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಗಮನವಿಲ್ಲದೆ ಎಷ್ಟು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುತ್ತಿದ್ದಾರೆ ಎಂಬುದನ್ನು ನಾವು ತಿಳಿದುಕೊಳ್ಳಲು ಬಯಸಿದ್ದೇವೆ” ಎಂದು ಸಚಿವರು ಹೇಳಿದ್ದಾರೆ.

ಗುರುವಾರದಂದು ರಾಜ್ಯದ 14 ಶಾಲೆಗಳಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಧಿಕ್ಕರಿಸಿದ ಒಟ್ಟು 162 ವಿದ್ಯಾರ್ಥಿನಿಯರನ್ನು ಮನೆಗೆ ಕಳುಹಿಸಲಾಗಿದೆ ಎಂದು ಇಲಾಖೆಯ ಅಂಕಿಅಂಶಗಳು ಹೇಳಿವೆ. “ಬೀದರ್ ಒಂದರಲ್ಲೇ, ಹೈಕೋರ್ಟ್ ನಿರ್ದೇಶನವನ್ನು ಧಿಕ್ಕರಿಸಿದ ಮತ್ತು ತರಗತಿಯೊಳಗೆ ಹಿಜಾಬ್ ತೆಗೆಯಲು ನಿರಾಕರಿಸಿದ ಏಳು ಶಾಲೆಗಳ 114 ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಅದೇ ರೀತಿ ಶಿವಮೊಗ್ಗದ ಮೂರು ಶಾಲೆಗಳ 20 ವಿದ್ಯಾರ್ಥಿಗಳು, ಚಿತ್ರದುರ್ಗದ ಎರಡು ಶಾಲೆಗಳಲ್ಲಿ 18 ವಿದ್ಯಾರ್ಥಿನಿಯರು ಮತ್ತು ಚಿಕ್ಕಮಗಳೂರಿನ ಶಾಲೆಯಲ್ಲಿ ಎಂಟು ಮತ್ತು ಚಿಕ್ಕಬಳ್ಳಾಪುರದ ಇಬ್ಬರು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಡಿಎಚ್‌ ವರದಿ ಮಾಡಿದೆ.

ಇದನ್ನೂ ಓದಿ: ಹಿಜಾಬ್ ಸಮಸ್ಯೆಯಲ್ಲ: ಬಡತನ, ನಿರುದ್ಯೋಗ, ದೇಶದ ಅಭಿವೃದ್ದಿ ಬಗ್ಗೆ ಚರ್ಚಿಸೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...