Homeಮುಖಪುಟಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

- Advertisement -
- Advertisement -

2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್ ಅವರನ್ನು ಗುರುವಾರ ಕೈಕೋಳದಲ್ಲಿ ದೆಹಲಿ ನ್ಯಾಯಾಲಯಕ್ಕೆ ಕರೆತರಲಾಗಿದೆ. ಈ ರೀತಿ ಮಾಡದಂತೆ ನ್ಯಾಯಾಲಯ ಆದೇಶ ನೀಡಿದ್ದರೂ, ಆದೇಶ ಧಿಕ್ಕರಿಸಿ ಪೊಲೀಸರು ಇಂತಹ ಕೃತ್ಯವೆಸಗಿದ್ದಾರೆ.

ಇದರಿಂದ ನ್ಯಾಯಾಲಯವು ಮಹಾನಿರ್ದೇಶಕರಿಗೆ (ಜೈಲುಗಳು) ನೋಟಿಸ್ ಜಾರಿ ಮಾಡಿದ್ದು, ಜೈಲು ಅಧಿಕಾರಿಗಳು ಕೈಕೋಳ ಹಾಕುವಂತೆ ಆದೇಶ ಹೊರಡಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಅಮಿತಾಭ್ ರಾವತ್ “ದೆಹಲಿಯ ಪೊಲೀಸ್ ಆಯುಕ್ತರ ಗಮನಕ್ಕೆ ಈ ವಿಷಯ ತರಲು ಸೂಕ್ತವೆಂದು ಭಾವಿಸುತ್ತೇನೆ. ಆರೋಪಿ ಉಮರ್ ಖಾಲಿದ್‌ ಅವರನ್ನು ಇಂದು ಕೈಕೋಳದಲ್ಲಿ ಕರೆತರಲಾಗಿದೆ. ಇದು ಯಾವ ಆಧಾರದ ಮೇಲೆ, ಆದೇಶದ ಮೇಲೆ ಎಂಬುದನ್ನು ಜವಾಬ್ದಾರಿಯುತ ಹಿರಿಯ ಅಧಿಕಾರಿಯ ಮೂಲಕ ತನಿಖೆಯ ನಂತರ ವರದಿಯನ್ನು ಸಲ್ಲಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ದೆಹಲಿ ಕಾರಾಗೃಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು,“ಅವರು ನಿಜವಾಗಿಯೂ ಕೈಕೋಳ ಹಾಕಿದ್ದರೆ ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ಕಾರಣ ತಿಳಿಯಲು ಸತ್ಯಶೋಧನೆ ನಡೆಸಲಾಗುವುದು. ಹಿರಿಯ ಅಧಿಕಾರಿಯೊಬ್ಬರು ಕೈಕೋಳಕ್ಕೆ ಆದೇಶ ನೀಡಿದ್ದಾರೆಯೇ ಅಥವಾ ಹಿಂದಿನ ನ್ಯಾಯಾಲಯದ ಆದೇಶದ ಷರತ್ತುಗಳನ್ನು ಪರಿಶೀಲಿಸುತ್ತೇವೆ” ಎಂದಿದ್ದಾರೆ.

“ಅವರನ್ನು ಏಕೆ ಕೈಕೋಳದಲ್ಲಿ ಕರೆತರಲಾಗಿದೆ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವಿಶೇಷ ಘಟಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಖಾಲಿದ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕ ಮತ್ತು ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಗಳು ನೋಟಿಸ್ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

’ನ್ಯಾಯಾಲಯದಿಂದ ಯಾವುದೇ ಆದೇಶವಿಲ್ಲದಿದ್ದರೂ ಮತ್ತು ಎರಡು ಪ್ರತ್ಯೇಕ ನ್ಯಾಯಾಲಯಗಳು ನೀಡಿದ ಎರಡು ವ್ಯತಿರಿಕ್ತ ಆದೇಶಗಳ ಹೊರತಾಗಿಯೂ ಪೊಲೀಸರು ಅವರನ್ನು ಕೈಕೋಳದಲ್ಲಿ ಹಾಜರುಪಡಿಸಿದ್ದಾರೆ’ ಎಂದು ಉಮರ್ ಪರ ಹಿರಿಯ ವಕೀಲ ತ್ರಿದೀಪ್ ಪೈಸ್  ತಿಳಿಸಿದ ನಂತರ ಎಎಸ್‌ಜೆ ರಾವತ್ ಸಂಜೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಇದು ಆರೋಪಿಯ ಹಕ್ಕುಗಳ ಉಲ್ಲಂಘನೆಯಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ತಪ್ಪುಗಳನ್ನು ಕಂಡುಹಿಡಿಯಲು ತನಿಖೆ ನಡೆಸಬೇಕು ಎಂದು ಹಿರಿಯ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಉಮರ್ ಖಾಲಿದ್ ಮತ್ತು ಇತರ ಹಲವರ ವಿರುದ್ಧ ಕಠಿಣವಾದ ಭಯೋತ್ಪಾದನಾ ವಿರೋಧಿ ಕಾನೂನಾದ ‘ಯುಎಪಿಎ’ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅವರನ್ನು ದೆಹಲಿ ಗಲಭೆಯ ‘ಮಾಸ್ಟರ್‌ಮೈಂಡ್‌ಗಳು’ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.


ಇದನ್ನೂ ಓದಿ: ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್ ಲಾಯರ್ ಜಗದೀಶ್ ರ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ನಿಮ್ಮ ಅನಿಸಿಕೆಗಳು ಅವರ ಹೋರಾಟದ ಬಗ್ಗೆ ತಿಳಿಸಿ ಕಾರ್ಯಂಗ ನ್ಯಾಯಾಂಗ ಕೆಲಸಮಾಡುತ್ತಿಲ್ಲ ಅನಿಸುತ್ತಿದೆ ಸರ್ಕಾರ ಇದ್ದು ಇಲ್ಲದಂತಿದೆ ನಿಮ್ಮ ಹೋರಾಟ ಹೋರಾಟ ಗಾರರು ಜೊತೆಯಲಿ

  2. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೂ ದಿಕ್ಕರಿಸಿ ಉಮರ್ ಕಾಲೀದ್ ಅವರಿಗೆ ಕೈಕೋಳ ತೊಡಿಸಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...