Homeಮುಖಪುಟಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

ಹೀಗಿದ್ದರು ನಮ್ಮ ಡಾ. ಮನಮೋಹನ್ ಸಿಂಗ್: ಮಾಜಿ ಪ್ರಧಾನಿಗಳ ಕುರಿತು ಟ್ವಿಟರ್‌ನಲ್ಲಿ ಮೆಚ್ಚುಗೆಗೆ ಕಾರಣ?

- Advertisement -
- Advertisement -

ಹಲವು ದಿನಗಳ ನಂತರ ನಿನ್ನೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರು ಪ್ರಧಾನಿ ಮೋದಿ ಮತ್ತು ಅವರ ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದರು. ‘ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ, ನಿಮ್ಮ ಸರ್ಕಾರದ ಎಲ್ಲಾ ತಪ್ಪುಗಳಿಗೂ ನೆಹರೂರವರನ್ನು ದೂರಬೇಡಿ’ ಎಂದು ತಮ್ಮ ವಿಡಿಯೋ ಸಂದೇಶದಲ್ಲಿ ಅಸಮಾಧಾನ ಹೊರಹಾಕಿದ್ದರು. ತದನಂತರ ಹಲವಾರು ಸೆಲೆಬ್ರಿಟಿಗಳು ಮಾಜಿ ಪ್ರಧಾನಿಗಳ ಬೆನ್ನಿಗೆ ನಿಂತಿದ್ದು, ಅವರಿಗೆ ಮೆಚ್ಚುಗೆ ಸಲ್ಲಿಸಿದ್ದಾರೆ. ಜೊತೆಗೆ ಹಾಲಿ ಪ್ರಧಾನಿಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

“ಒಂದೆಡೆ ಜನರು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಮತ್ತೊಂದೆಡೆ ಕಳೆದ ಏಳೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಈಗಿನ ಸರ್ಕಾರವು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಸರಿಪಡಿಸುವ ಬದಲು ಜನರ ಸಮಸ್ಯೆಗಳಿಗೆ ಇನ್ನೂ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ದೂಷಿಸುತ್ತಿದೆ. ಪ್ರಧಾನಿ ಸ್ಥಾನಕ್ಕೆ ವಿಶೇಷ ಮಹತ್ವವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿಯವರು ಇತಿಹಾಸವನ್ನು ದೂಷಿಸುವ ಬದಲು ತಮ್ಮ ಘನತೆಯನ್ನು ಕಾಯ್ದುಕೊಳ್ಳಬೇಕು. ನಾನು 10 ವರ್ಷಗಳ ಕಾಲ ಪ್ರಧಾನಿಯಾಗಿದ್ದಾಗ ನನ್ನ ಕೆಲಸದ ಮೂಲಕ ಮಾತನಾಡಿದ್ದೇನೆ. ಪ್ರಪಂಚದ ಮುಂದೆ ದೇಶವು ಪ್ರತಿಷ್ಠೆಯನ್ನು ಕಳೆದುಕೊಳ್ಳಲು ನಾನು ಎಂದಿಗೂ ಬಿಡಲಿಲ್ಲ. ನಾನು ಎಂದಿಗೂ ಭಾರತದ ಹೆಮ್ಮೆಯನ್ನು ಕುಗ್ಗಿಸಿಲ್ಲ. ನನ್ನ ವಿರುದ್ಧ ದುರ್ಬಲ, ಶಾಂತ ಮತ್ತು ಭ್ರಷ್ಟ ಎಂಬ ಸುಳ್ಳು ಆರೋಪ ಮಾಡಿದ್ದ ಬಿಜೆಪಿ ಈಗ ಜಗತ್ತಿನೆದುರು ಬೆತ್ತಲುಗೊಳ್ಳುತ್ತಿದೆ” ಎಂದು ಸಿಂಗ್ ಕಿಡಿಕಾರಿದ್ದರು.

ಖ್ಯಾತ ಸ್ಟ್ಯಾಂಡಪ್ ಕಾಮಿಡಿಯನ್ ವೀರ್ ದಾಸ್, ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯ ಸೇರಿದಂತೆ ಹಲವರು ಮಾಜಿ ಪ್ರಧಾನಿಗಳ ಕುರಿತು ತಮ್ಮ ಅನಿಸಿಕೆಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿಂದೆ ನಾವು ಪ್ರಧಾನಿಗಳನ್ನು ಮತ್ತು ಸರ್ಕಾರವನ್ನು ಯಾವುದೇ ಅಳುಕಿಲ್ಲದೆ ಟೀಕಿಸುತ್ತಿದ್ದೆವು, ಜೋಕ್ ಮಾಡುತ್ತಿದ್ದೆವು ಮತ್ತು ಕಾರ್ಟೂನ್ ಬರೆಯುತ್ತಿದ್ದೆವು. ಅವರು ಸಹ ಅವನ್ನು ಆನಂದಿಸುತ್ತಿದ್ದರು. ಆಗ ಈಗ ಆ ಕಾಲ ಮಾಯವಾಗಿ, ಬೆದರಿಕೆಗಳ ಕಾಲವಾಗಿದೆ ಎಂದು ಪರೋಕ್ಷವಾಗಿ ಈಗಿನ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.

ವೀರ್ ದಾಸ್ ಟ್ವೀಟ್ ಮಾಡಿ, “ಡಾ. ಮನಮೋಹನ್ ಸಿಂಗ್‌ರವರ ಸುದ್ದಿ ನೋಡಿದಾಗ ಹಿಂದಿನ ಒಂದು ಸಾಮಾನ್ಯ ಕಾಲ ನೆನಪಾಯಿತು. ನಾವು ಸಿಎನ್‌ಬಿಸಿ ಚಾನೆಲ್‌ನಲ್ಲಿ ವಾರಕ್ಕೆ ಐದು ದಿನ ಪ್ರೈಮ್‌ಟೈಮ್ ಬುಲೆಟಿನ್‌ನಲ್ಲಿ ನಮ್ಮ ಪ್ರಧಾನಿ ಮತ್ತು ಆಡಳಿತ ಪಕ್ಷದ ಬಗ್ಗೆ ಜೋಕ್ ಮಾಡಿದ್ದೇವೆ. ನಮಗೆ ಗೊತ್ತು, ಕೆಲವೊಮ್ಮೆ ಅವರು ಆ ಕಾರ್ಯಕ್ರಮ ನೋಡಿ ನಕ್ಕಿರುತ್ತಾರೆ ಎಂದು. ಈಗ ಇದೆಲ್ಲ ಶತಮಾನದ ಹಿಂದೆ ಮರೆತುಹೋದಂತೆ ಭಾಸವಾಗುತ್ತಿದೆ” ಎಂದಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿರುವ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು, “ನಿಜ. ನಾನು ಮನಮೋಹನ್ ಸಿಂಗ್ ಮತ್ತು ಅವರ ಸರ್ಕಾರದ ಮೇಲೆ ಹಲವಾರು ಕಾರ್ಟೂನ್‌ಗಳನ್ನು ಚಿತ್ರಿಸಿದ್ದೇನೆ (ಅವರ ಬಗ್ಗೆ ನನಗೆ ಅಪಾಯ ತುಂಬಾ ಗೌರವವಿದ್ದರೂ). ಆಗ ಯಾರೂ ನನ್ನನ್ನು ತಡೆಯಲು ಪ್ರಯತ್ನಿಸಲಿಲ್ಲ. ಯಾರೂ ನನ್ನನ್ನು ನಿಂದಿಸಿಲ್ಲ. ಪತ್ರಿಕೆಗಳು ಅವುಗಳನ್ನು ಪ್ರಕಟಿಸಲು ಹೆದರುತ್ತಿರಲಿಲ್ಲ. ಯಾರೂ ನನ್ನ ಕೆಲಸವನ್ನು ಕಸಿದುಕೊಳ್ಳಲು ಪ್ರಯತ್ನಿಸಲಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅನು ಮಿತ್ತಲ್ ಎಂಬುವವರು ಸಿಂಗಾಪುರದ ಪ್ರಧಾನಿಗಳ ಉದಾಹರಣೆ ನೀಡಿದ್ದಾರೆ. ‘ಸಿಂಗಾಪುರ ಪ್ರಧಾನಿಗಳ ವಿಡಿಯೋವನ್ನು ನನ್ನ ಮಗುವಿಗೆ ತೋರಿಸಿದಾಗ, “ಇವರು ನಿಜವಾಗಲೂ ಪ್ರಧಾನಿಗಳೇ, ಅವರ ಮುಖ ಮತ್ತು ಉಡುಪಿನಲ್ಲಿನ ವಿನಯ ನೋಡಿ” ಎಂಬುದು ಅವನ ಮೊದಲ ಪ್ರತಿಕ್ರಿಯೆಯಾಗಿತ್ತು. ನಮ್ಮ ಹಿಂದಿನ ಪ್ರಧಾನಿಗಳು ಸಹ ಹೀಗೆ ಇದ್ದರು. ಅವರೆಲ್ಲರೂ ತಮ್ಮ ಅದ್ವೀತಿಯ ಕೆಲಸಗಳಿಂದ ನೆನಪಿನಲ್ಲಿದ್ದಾರೆಯೆ ಹೊರತು ಅವರ ಫ್ಯಾನ್ಸಿ ಡ್ರೆಸ್‌ನಿಂದ ಅಲ್ಲ ಎಂದು ನಾನು ಮಗುವಿಗೆ ಹೇಳಿದೆ’ ಎಂದು ಪರೋಕ್ಷವಾಗಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

“ಯಾರ್ಯಾರು ಡಾ.ಮನಮೋಹನ್ ಸಿಂಗ್‌ರವರನ್ನು ಪ್ರಧಾನಿಯಾಗಿ ಮಿಸ್ ಮಾಡಿಕೊಳ್ಳುತ್ತಿದ್ದೀರಿ” ಎಂದು ಕ್ಯಾಪ್ಟನ್ ನರೇಶ್ ಸಿಂಗ್ ಎಂಬುವವರು ಪ್ರಶ್ನಿಸಿದ್ದಾರೆ.

ನಿನ್ನೆಯ ವಿಡಿಯೋ ಸಂದೇಶದಲ್ಲಿ ಡಾ.ಸಿಂಗ್, “ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಆರ್ಥಿಕ ನೀತಿಯ ಬಗ್ಗೆ ತಿಳುವಳಿಕೆ ಇಲ್ಲ. ವಿದೇಶಾಂಗ ನೀತಿಯಲ್ಲೂ ಈ ಸರ್ಕಾರ ವಿಫಲವಾಗಿದೆ, ಚೀನಾ ನಮ್ಮ ಗಡಿಯಲ್ಲಿ ಕುಳಿತು ತಂಟೆ ಮಾಡುತ್ತಿದೆ. ಬೇರೆ ದೇಶದ ನಾಯಕರನ್ನು ಬಲವಂತವಾಗಿ ತಬ್ಬಿಕೊಳ್ಳುವುದು ಅಥವಾ ಅವರಿಗೆ ಬಿರಿಯಾನಿ ತಿನ್ನಿಸುವ ಮೂಲಕ ವಿದೇಶಾಂಗ ನೀತಿಯನ್ನು ನಡೆಸಲಾಗುವುದಿಲ್ಲ ಎಂದು ಪ್ರಧಾನಿ ಅರ್ಥಮಾಡಿಕೊಂಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾವು ಎಂದಿಗೂ ಪಟ್ಟಭದ್ರ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲಿಲ್ಲ. ನಾವು ಎಂದಿಗೂ ಸತ್ಯವನ್ನು ಮರೆಮಾಚಲು ಪ್ರಯತ್ನಿಸಲಿಲ್ಲ. ನಾವು ಎಂದಿಗೂ ದೇಶದ ಗೌರವ ಅಥವಾ ಪ್ರಧಾನಿ ಸ್ಥಾನಕ್ಕೆ ಧಕ್ಕೆ ತಂದಿಲ್ಲ. ಜನರು ಇಂದು ವಿಭಜನೆಯಾಗುತ್ತಿದ್ದಾರೆ. ಈ ಸರ್ಕಾರದ ನಕಲಿ ರಾಷ್ಟ್ರೀಯತೆ ಟೊಳ್ಳು ಮತ್ತು ಅಪಾಯಕಾರಿ. ಒಡೆದು ಆಳುವ ಬ್ರಿಟಿಷರ ನೀತಿಯ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಸರ್ಕಾರದ ಆರ್ಥಿಕ ನೀತಿಯಲ್ಲಿ ಸ್ವಾರ್ಥ ಮತ್ತು ದುರಾಸೆ ಇದೆ. ತಮ್ಮ ಸ್ವಾರ್ಥಕ್ಕಾಗಿ ಜನರನ್ನು ಒಡೆದು ಹೊಡೆದಾಡುವಂತೆ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಟೀಕಿಸಿದ್ದರು.


ಇದನ್ನೂ ಓದಿ; ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...