Homeಚಳವಳಿತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

ತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

- Advertisement -
- Advertisement -

| ನಾನುಗೌರಿ ಡೆಸ್ಕ್ |

ನೀವು ಯಾವುದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಆಗಾಗ್ಗೆ ನಿಮ್ಮ ಕೆಲಸದ ವರದಿಯನ್ನು ಮ್ಯಾನೇಜರ್ ರವರಿಗೆ ಸಲ್ಲಿಸಬೇಕು. ಅದೇ ರೀತಿ ನಮ್ಮ ಎಂಪಿ, ಎಂಎಲ್‍ಎಗಳು ಸಹ ಎಷ್ಟು ಕೆಲಸ ಮಾಡಿದ್ದೇವೆ, ಮಾಡಿಲ್ಲ ಎಂಬುದರ ಕುರಿತು ಸಮಯಕ್ಕೆ ಸರಿಯಾಗಿ ತಮ್ಮ ವರದಿಯನ್ನು ಸಲ್ಲಿಸಬೇಕಲ್ಲವೆ? ಇದಕ್ಕೆ ಚುನಾವಣಾ ಆಯೋಗ ಒಂದು ವೆಬ್ ಸೈಟ್ ಅನ್ನು ಶುರು ಮಾಡಬೇಕು. ಅದೇನೂ ದೊಡ್ಡ ಕೆಲಸವಲ್ಲ. ದೇಶದ ಎಲ್ಲಾ ಎಂಪಿ, ಎಂ.ಎಲ್.ಎಗಳು ಅಲ್ಲಿ ತಮ್ಮ ವಾರ್ಷಿಕ ವರದಿಯನ್ನು ಅಪ್ ಲೋಡ್ ಮಾಡಬೇಕು. ಆ ವರದಿಯಲ್ಲಿ ಏನು ಬರೆದಿದೆ, ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಚುನಾವಣಾ ಆಯೋಗ ಪರಿಶೀಲಿಸುವ ಅಗತ್ಯವಿಲ್ಲ. ಆ ಕೆಲಸವನ್ನು ದೇಶದ ಜನತೆ ಮತ್ತು ಮಾಧ್ಯಮಗಳು ಮಾಡಲಿ.

ಹೇಗಿದೆ ಐಡಿಯಾ? ಇದನ್ನು ನಮ್ಮ ಪೇಟ್ರಿಯಾನ್‍ನ ಮೆಂಬರ್ ಸೂಚಿಸಿದ್ದಾರೆ. ಇದು ಚೆನ್ನಾಗಿದೆ. ನಮ್ಮ ರಾಜಕಾರಣಿಗಳ ಅಕೌಂಟಬಲಿಟಿ ತಿಳಿಯಲು ಇದೊಂದು ಶಕ್ತಿಶಾಲಿ ವಿಧಾನವಾಗಿದೆ. ಹಾಗಾಗಿ ಈ ಪಿಟಿಷನ್‍ಗೆ ಸಹಿ ಮಾಡಿ, ವೋಟ್ ಮಾಡಿ, ಷೇರ್ ಮಾಡಿ ಎಲೆಕ್ಷನ್ ಕಮಿಷನ್ ತಲುಪುವ ರೀತಿ ಮಾಡೋಣ.

ಈ ರೀತಿ ಹೇಳಿದವರು ಜನಪ್ರಿಯ ಯೂಟ್ಯೂಬ್ ಹೀರೋ, ಯುವ ಚಿಂತಕ ಧೃವ್ ರಾಠೀ. ಅವರು ಈ ವಿಡಿಯೋವನ್ನು ಟ್ವಿಟ್ಟರ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಎಂದಿನಂತೆ ಈ ವಿಡಿಯೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಅಷ್ಟು ಮಾತ್ರವಲ್ಲ ಅದಕ್ಕೆ ಕೆಲ ಎಂ.ಎಲ್.ಎ ಗಳು ಪ್ರತಿಕ್ರಿಯೆ ನೀಡುವ ಮೂಲಕ ವಿಷಯಕ್ಕೆ ಮತ್ತಷ್ಟು ಗಂಭೀರತೆಯನ್ನು ತಂದುಕೊಟ್ಟಿದ್ದಾರೆ.

ಡಿಎಂಕೆ ಪಕ್ಷದಿಂದ ಮಧುರೈನ ಶಾಸಕರಾಗಿರುವ ಡಾ.ಪಿ ತ್ಯಾಗರಾಜನ್‍ರವರು “ಚುನಾವಣಾ ಪ್ರಚಾರದಲ್ಲಿ ಕೊಟ್ಟ ಭರವಸೆಯಂತೆ, ಒಬ್ಬ ಶಾಸಕನಾಗಿ ಪ್ರತಿ ಆರು ತಿಂಗಳಿಗೊಮ್ಮೆ ನಾನು ವರದಿಯನ್ನು ಪ್ರಕಟಿಸುತ್ತಿದ್ದೇನೆ. ಈಗಾಗಲೇ 5 ವರದಿಗಳು (6, 12, 18, 24, 30) ಆನ್‍ಲೈನ್‍ನಲ್ಲಿ ಪ್ರಕಟವಾಗಿವೆ. ಜೊತೆಗೆ ನನ್ನ ಕ್ಷೇತ್ರದ 78,000 ಮನೆಗಳಿಗೆ ವರದಿಯನ್ನು ತಲುಪಿಸಿದ್ದೇವೆ. ಆರನೇಯ ವರದಿ ತಯಾರಿ ಹಂತದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಆ ವರದಿಯ ಲಿಂಕ್ ಅನ್ನು ಸಹ ಪ್ರಕಟಿಸಿದ್ದಾರೆ. ಇದಕ್ಕೆ ಬಹಳಷ್ಟು ಜನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಡಾ.ಪಿ ತ್ಯಾಗರಾಜನ್‍ರವರ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ತಿಲಕ್ ನಗರದ ಆಮ್ ಆದ್ಮಿ ಪಕ್ಷದ ಶಾಸಕರಾದ ಜರ್ನೈಲ್ ಸಿಂಗ್ ರವರು “ ನಿಮ್ಮ ಪ್ರಸ್ತಾಪಕ್ಕೆ 100% ನಮ್ಮ ಒಪ್ಪಿಗೆ ಇದೆ. ನಾವು ಈಗಾಗಲೇ ನಮ್ಮ ಆಮ್ ಆದ್ಮಿ ಪಕ್ಷಕ್ಕೆ ಈ ಕುರಿತು ವರದಿ ತಯಾರಿಸಲು ಸೂಚಿಸಿದ್ದೇವೆ, ಪ್ರತಿ ವರ್ಷವೂ ಸಾರ್ವಜನಿಕರ ಮುಂದೆ ಇದನ್ನು ಚರ್ಚಿಸುತ್ತೇವೆ ಎಂದು ರೀಟ್ವೀಟ್ ಮಾಡಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Plz update my court system in India present population case’s present valuable time for any badi like fragment women, old age people police& related officers etc court starting timing also modified whole day concentrate for case shortage of judges, govt lawyers ,court hall , no expire date of any case’s so many genius senior judges are theare think some time plz you write this related articles

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...