Homeಕರ್ನಾಟಕಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

- Advertisement -
- Advertisement -

ವಕೀಲರಾದ ಕೆ.ಎನ್.ಜಗದೀಶ್‌ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿ ಜಗದೀಶ್ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ, ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ಅವರ ಮಗನ ಮೇಲೆ ಹಲ್ಲೆಯಾದರೂ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಆದರೆ ವಕೀಲ ಜಗದೀಶ್ ಅವರ ವಿರುದ್ಧ ದಾಖಲಾದ ದೂರನ್ನು ಮಾತ್ರ ಕ್ಷಣಮಾತ್ರದಲ್ಲೇ ಪೊಲೀಸರು ಕ್ರಮ ಜರುಗಿಸಿದ್ದು ಅನುಮಾನಗಳಿಗೆ ಕಾರಣವಾಗಿವೆ.

ಐಪಿಎಸ್ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ವಕೀಲ ಜಗದೀಶ್ ಮಾಡಿದ್ದರು. ರವಿ ಡಿ.ಚನ್ನಣ್ಣನವರ್‌ ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ್ದಾರೆಂದು ಜಗದೀಶ್‌ ದೂರಿದ್ದರು. ಈ ಸಂಬಂಧ ರವಿ ಡಿ.ಚನ್ನಣ್ಣ ಮಾನನಷ್ಟ ಮೊಕದ್ದಮೆ ಹೂಡಿದ್ದು, ಪ್ರಕರಣ ವಿಚಾರಣೆಗೆ ನ್ಯಾಯಾಲಯಕ್ಕೆ ಜಗದೀಶ್‌‌ ಹಾಜರಾಗಿದ್ದ ವೇಳೆ ಹಲ್ಲೆ ನಡೆದಿತ್ತು.

ವಕೀಲರ ವೇಷದಲ್ಲಿದ್ದವರು ಜಗದೀಶ್ ಅವರ ಮಗನ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ 307 (ಕೊಲೆಯತ್ನ) ಪ್ರಕರಣ ದಾಖಲಾಗಬೇಕಿತ್ತು. ಆದರೆ ವಕೀಲ ಜಗದೀಶ್ ಮೇಲೆಯೇ 307 ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಲಭ್ಯವಿರುವ ಯಾವುದೇ ವಿಡಿಯೊದಲ್ಲಿಯೂ ವಕೀಲ ಜಗದೀಶ್ ಕೊಲೆಯತ್ನ ಮಾಡಿರುವುದು ಕಂಡು ಬರುವುದಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

16 ವರ್ಷದ ಯುವಕನ ಮೇಲೆ ಹಲ್ಲೆಯಾಗಿದ್ದು, ಪೊಲೀಸರು ಸುಮೊಟೊ ಪ್ರಕರಣ ದಾಖಸಬೇಕಿತ್ತು. ಆದರೆ ಪೊಲೀಸರು ಪಕ್ಷಪಾತಿಗಳಾಗಿ ವರ್ತಿಸಿದ್ದಾರೆಂಬ ಆರೋಪಗಳು ಬಂದಿವೆ. ಜಗದೀಶ್ ಅವರು ಕೊಲೆ ಬೆದರಿಕೆ ಹಾಕಿದ್ದಲ್ಲಿ ಸೆಕ್ಷನ್‌ 506, 504, 506 (ಬಿ) ಅಡಿಯಲ್ಲಿ ಪ್ರಕರಣ ದಾಖಸಬೇಕಿತ್ತು. ಆದರೆ 307 ಅಡಿ ಪ್ರಕರಣ ದಾಖಲಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ ನೀಡಿರುವ ದೂರಿನಲ್ಲಿ, “ವಕೀಲರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದವರಲ್ಲಿ ಜಗದೀಶ್‌ ಒಬ್ಬರಾಗಿದ್ದರು. ಅವರಿಗೆ ವಕೀಲರ ಸಂಘ ಬುದ್ಧಿ ಹೇಳಿತ್ತು. ಹೀಗಾಗಿ ನನ್ನ ಮೇಲೆ ಜಗದೀಶ್‌‌ ಫೆ. 10ರಂದು ಗಲಾಟೆ ಮಾಡಿದ್ದರು. ಕೊಲೆ ಮಾಡುವುದಾಗಿ ಬೆದರಿಸಿದ್ದರು. ಫೆ. 11ರಂದು ಸಿಟಿ ಸಿವಿಲ್‌ ಕೋರ್ಟ್ ಆವರಣದಲ್ಲಿ 40-50 ಗೂಂಡಾಗಳೊಂದಿಗೆ ಬಂದು ಅಶಾಂತಿ ಸೃಷ್ಟಿಸಿದರು. ಈ ವೇಳೆ ಕೊಲೆ ಮಾಡಲು ಯತ್ನಿಸಿದರು” ಎಂದು ಆರೋಪಿಸಲಾಗಿದೆ.

ಪೊಲೀಸ್ ಅಧಿಕಾರಿಗಳನ್ನು ಎದುರು ಹಾಕಿಕೊಂಡಿದ್ದೇ ಜಗದೀಶ್ ಅವರ ವಿರುದ್ಧ ಏಕಪಕ್ಷೀಯವಾಗಿ ಪೊಲೀಸರು ನಡೆದುಕೊಳ್ಳಲು ಕಾರಣವೇ ಎಂಬ ಪ್ರಶ್ನೆಯನ್ನು ಜನರು ಕೇಳಿದ್ದಾರೆ. ಆದರೆ ಇದಕ್ಕಿಂತ ಮುಖ್ಯವಾಗಿ ವಕೀಲರ ಸಂಘದ ವರ್ತನೆಯೂ ಟೀಕೆಗೆ ಗುರಿಯಾಗಿದೆ.

ಜಗದೀಶ್‌ ಅವರು ಕೆಲವೊಮ್ಮೆ ಅತಿರೇಕಕ್ಕೆ ಹೋಗಿ ಮಾತನಾಡಿದ್ದಿದೆ. ಏಕವಚನದಲ್ಲಿ ನಿಂದಿಸಿದ್ದನ್ನು ಯಾರೂ ಸಮರ್ಥಿಸಲಾರರು. ಆದರೆ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಗಳೂ ಗಂಭೀರವಾಗಿವೆ ಎಂಬುದನ್ನು ಜನರು ಗುರುತಿಸುತ್ತಿದ್ದಾರೆ.

ಸಾಮಾನ್ಯವಾಗಿ ಪೊಲೀಸರು ಸುಳ್ಳು ಕೇಸ್‌ಗಳನ್ನು ದಾಖಲಿಸಿದಾಗ ವಕೀಲರು ಧ್ವನಿ ಎತ್ತುತ್ತಾರೆ. ಹೀಗಾಗಿ ವಕೀಲರು ವರ್ಸಸ್‌ ಪೊಲೀಸ್‌ ಎಂಬ ಸಾಮಾನ್ಯ ಗ್ರಹಿಕೆ ಇದೆ. ಆದರೆ ಜಗದೀಶ್ ವಿಚಾರದಲ್ಲಿ ಬೆಂಗಳೂರು ವಕೀಲರ ಸಂಘ ಈ ರೀತಿಯ ದೂರು ನೀಡಿದ್ದು ಏತಕ್ಕೆ? ಇಲ್ಲಿ ಯಾವುದಾದರೂ ಮಾಫಿಯಾ ಕೆಲಸ ಮಾಡಿದೆಯೇ? ಈ ಪ್ರಕರಣಕ್ಕೆ ಯಾವುದಾದರೂ ರಾಜಕೀಯ ಆಯಾಮಗಳಿವೆಯೇ? ಇತ್ಯಾದಿ ಪ್ರಶ್ನೆಗಳು ಮೂಡುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌, “ವಕೀಲ ಜಗದೀಶ್ ಅವರ ವಿರುದ್ಧ 307 ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಅವರು ಎಷ್ಟು ತಪ್ಪು ಮಾಡಿದ್ದಾರೋ ಅಷ್ಟಕ್ಕೆ ಮಾತ್ರ ಪ್ರಕರಣ ದಾಖಲಿಸಬೇಕು. ಆದರೆ ಸುಳ್ಳು ಪ್ರಕರಣ ದಾಖಲಿಸಿರುವುದು ಕಂಡುಬರುತ್ತಿದೆ. ಜಗದೀಶ್ ಅವರು ಲಾಯರ್‌ಗಳನ್ನು ಬೈದಿರುವುದನ್ನು ನಾವು ಒಪ್ಪುವುದಿಲ್ಲ” ಎಂದಿದ್ದಾರೆ.

“ಸುಳ್ಳು ಕೇಸ್‌ಗಳ ವಿರುದ್ಧ ರಾಜ್ಯಾದ್ಯಂತ ವಕೀಲರು ಹೋರಾಡುತ್ತಿದ್ದೇವೆ. ಸಾರ್ವಜನಿಕರನ್ನು ರಕ್ಷಿಸುತ್ತಿದ್ದೇವೆ. ಹೀಗಿರುವ ವಕೀಲರ ಸಂಘ ಹಾಗೂ ಪದಾಧಿಕಾರಿಗಳೇ ನಿಂತು ಸುಳ್ಳು ಕೇಸು ದಾಖಲಾಗಲು ಕಾರಣವಾಗಿರುವುದು ವಕೀಲರ ವಿರುದ್ಧ ತಪ್ಪು ಸಂದೇಶ ಹೋಗಲು ಕಾರಣವಾಗುತ್ತದೆ. ಜಗದೀಶ್ ಅವರನ್ನು ವಕೀಲರ ಪರಿಷತ್‌ ಅಮಾನತು ಮಾಡಿರುವುದೂ ಸರಿಯಲ್ಲ. ಈ ಬೆಳವಣಿಗೆಯನ್ನು ವಕೀಲರ ಒಕ್ಕೂಟ ಖಂಡಿಸುತ್ತದೆ” ಎಂದು ಶ್ರೀನಿವಾಸ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್‌ ಸುಬ್ಬಾರೆಡ್ಡಿ ಅವರ ಹೇಳಿಕೆಯನ್ನು ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಅಧ್ಯಕ್ಷರು ಸಂಪರ್ಕಕ್ಕೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಂಧ್ರದ ಮೂಲದವರು ಕರ್ನಾಟಕದಲ್ಲಿ ರೈತರ ಭೂಮಿಯನ್ನು ನೂರಾರು ಕಬಳಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಆಂಧ್ರದ ಮೂಲದವರು ಮಾಡಿದ ಕುತಂತ್ರವೇ ಜಗದೀಶ್ ರವರ ಬಂಧನ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...