Homeಕರ್ನಾಟಕಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

- Advertisement -
- Advertisement -

ವಕೀಲರಾದ ಕೆ.ಎನ್.ಜಗದೀಶ್‌ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿ ಜಗದೀಶ್ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ, ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ಅವರ ಮಗನ ಮೇಲೆ ಹಲ್ಲೆಯಾದರೂ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಆದರೆ ವಕೀಲ ಜಗದೀಶ್ ಅವರ ವಿರುದ್ಧ ದಾಖಲಾದ ದೂರನ್ನು ಮಾತ್ರ ಕ್ಷಣಮಾತ್ರದಲ್ಲೇ ಪೊಲೀಸರು ಕ್ರಮ ಜರುಗಿಸಿದ್ದು ಅನುಮಾನಗಳಿಗೆ ಕಾರಣವಾಗಿವೆ.

ಐಪಿಎಸ್ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ವಕೀಲ ಜಗದೀಶ್ ಮಾಡಿದ್ದರು. ರವಿ ಡಿ.ಚನ್ನಣ್ಣನವರ್‌ ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ್ದಾರೆಂದು ಜಗದೀಶ್‌ ದೂರಿದ್ದರು. ಈ ಸಂಬಂಧ ರವಿ ಡಿ.ಚನ್ನಣ್ಣ ಮಾನನಷ್ಟ ಮೊಕದ್ದಮೆ ಹೂಡಿದ್ದು, ಪ್ರಕರಣ ವಿಚಾರಣೆಗೆ ನ್ಯಾಯಾಲಯಕ್ಕೆ ಜಗದೀಶ್‌‌ ಹಾಜರಾಗಿದ್ದ ವೇಳೆ ಹಲ್ಲೆ ನಡೆದಿತ್ತು.

ವಕೀಲರ ವೇಷದಲ್ಲಿದ್ದವರು ಜಗದೀಶ್ ಅವರ ಮಗನ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ 307 (ಕೊಲೆಯತ್ನ) ಪ್ರಕರಣ ದಾಖಲಾಗಬೇಕಿತ್ತು. ಆದರೆ ವಕೀಲ ಜಗದೀಶ್ ಮೇಲೆಯೇ 307 ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಲಭ್ಯವಿರುವ ಯಾವುದೇ ವಿಡಿಯೊದಲ್ಲಿಯೂ ವಕೀಲ ಜಗದೀಶ್ ಕೊಲೆಯತ್ನ ಮಾಡಿರುವುದು ಕಂಡು ಬರುವುದಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

16 ವರ್ಷದ ಯುವಕನ ಮೇಲೆ ಹಲ್ಲೆಯಾಗಿದ್ದು, ಪೊಲೀಸರು ಸುಮೊಟೊ ಪ್ರಕರಣ ದಾಖಸಬೇಕಿತ್ತು. ಆದರೆ ಪೊಲೀಸರು ಪಕ್ಷಪಾತಿಗಳಾಗಿ ವರ್ತಿಸಿದ್ದಾರೆಂಬ ಆರೋಪಗಳು ಬಂದಿವೆ. ಜಗದೀಶ್ ಅವರು ಕೊಲೆ ಬೆದರಿಕೆ ಹಾಕಿದ್ದಲ್ಲಿ ಸೆಕ್ಷನ್‌ 506, 504, 506 (ಬಿ) ಅಡಿಯಲ್ಲಿ ಪ್ರಕರಣ ದಾಖಸಬೇಕಿತ್ತು. ಆದರೆ 307 ಅಡಿ ಪ್ರಕರಣ ದಾಖಲಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ ನೀಡಿರುವ ದೂರಿನಲ್ಲಿ, “ವಕೀಲರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದವರಲ್ಲಿ ಜಗದೀಶ್‌ ಒಬ್ಬರಾಗಿದ್ದರು. ಅವರಿಗೆ ವಕೀಲರ ಸಂಘ ಬುದ್ಧಿ ಹೇಳಿತ್ತು. ಹೀಗಾಗಿ ನನ್ನ ಮೇಲೆ ಜಗದೀಶ್‌‌ ಫೆ. 10ರಂದು ಗಲಾಟೆ ಮಾಡಿದ್ದರು. ಕೊಲೆ ಮಾಡುವುದಾಗಿ ಬೆದರಿಸಿದ್ದರು. ಫೆ. 11ರಂದು ಸಿಟಿ ಸಿವಿಲ್‌ ಕೋರ್ಟ್ ಆವರಣದಲ್ಲಿ 40-50 ಗೂಂಡಾಗಳೊಂದಿಗೆ ಬಂದು ಅಶಾಂತಿ ಸೃಷ್ಟಿಸಿದರು. ಈ ವೇಳೆ ಕೊಲೆ ಮಾಡಲು ಯತ್ನಿಸಿದರು” ಎಂದು ಆರೋಪಿಸಲಾಗಿದೆ.

ಪೊಲೀಸ್ ಅಧಿಕಾರಿಗಳನ್ನು ಎದುರು ಹಾಕಿಕೊಂಡಿದ್ದೇ ಜಗದೀಶ್ ಅವರ ವಿರುದ್ಧ ಏಕಪಕ್ಷೀಯವಾಗಿ ಪೊಲೀಸರು ನಡೆದುಕೊಳ್ಳಲು ಕಾರಣವೇ ಎಂಬ ಪ್ರಶ್ನೆಯನ್ನು ಜನರು ಕೇಳಿದ್ದಾರೆ. ಆದರೆ ಇದಕ್ಕಿಂತ ಮುಖ್ಯವಾಗಿ ವಕೀಲರ ಸಂಘದ ವರ್ತನೆಯೂ ಟೀಕೆಗೆ ಗುರಿಯಾಗಿದೆ.

ಜಗದೀಶ್‌ ಅವರು ಕೆಲವೊಮ್ಮೆ ಅತಿರೇಕಕ್ಕೆ ಹೋಗಿ ಮಾತನಾಡಿದ್ದಿದೆ. ಏಕವಚನದಲ್ಲಿ ನಿಂದಿಸಿದ್ದನ್ನು ಯಾರೂ ಸಮರ್ಥಿಸಲಾರರು. ಆದರೆ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಗಳೂ ಗಂಭೀರವಾಗಿವೆ ಎಂಬುದನ್ನು ಜನರು ಗುರುತಿಸುತ್ತಿದ್ದಾರೆ.

ಸಾಮಾನ್ಯವಾಗಿ ಪೊಲೀಸರು ಸುಳ್ಳು ಕೇಸ್‌ಗಳನ್ನು ದಾಖಲಿಸಿದಾಗ ವಕೀಲರು ಧ್ವನಿ ಎತ್ತುತ್ತಾರೆ. ಹೀಗಾಗಿ ವಕೀಲರು ವರ್ಸಸ್‌ ಪೊಲೀಸ್‌ ಎಂಬ ಸಾಮಾನ್ಯ ಗ್ರಹಿಕೆ ಇದೆ. ಆದರೆ ಜಗದೀಶ್ ವಿಚಾರದಲ್ಲಿ ಬೆಂಗಳೂರು ವಕೀಲರ ಸಂಘ ಈ ರೀತಿಯ ದೂರು ನೀಡಿದ್ದು ಏತಕ್ಕೆ? ಇಲ್ಲಿ ಯಾವುದಾದರೂ ಮಾಫಿಯಾ ಕೆಲಸ ಮಾಡಿದೆಯೇ? ಈ ಪ್ರಕರಣಕ್ಕೆ ಯಾವುದಾದರೂ ರಾಜಕೀಯ ಆಯಾಮಗಳಿವೆಯೇ? ಇತ್ಯಾದಿ ಪ್ರಶ್ನೆಗಳು ಮೂಡುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌, “ವಕೀಲ ಜಗದೀಶ್ ಅವರ ವಿರುದ್ಧ 307 ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಅವರು ಎಷ್ಟು ತಪ್ಪು ಮಾಡಿದ್ದಾರೋ ಅಷ್ಟಕ್ಕೆ ಮಾತ್ರ ಪ್ರಕರಣ ದಾಖಲಿಸಬೇಕು. ಆದರೆ ಸುಳ್ಳು ಪ್ರಕರಣ ದಾಖಲಿಸಿರುವುದು ಕಂಡುಬರುತ್ತಿದೆ. ಜಗದೀಶ್ ಅವರು ಲಾಯರ್‌ಗಳನ್ನು ಬೈದಿರುವುದನ್ನು ನಾವು ಒಪ್ಪುವುದಿಲ್ಲ” ಎಂದಿದ್ದಾರೆ.

“ಸುಳ್ಳು ಕೇಸ್‌ಗಳ ವಿರುದ್ಧ ರಾಜ್ಯಾದ್ಯಂತ ವಕೀಲರು ಹೋರಾಡುತ್ತಿದ್ದೇವೆ. ಸಾರ್ವಜನಿಕರನ್ನು ರಕ್ಷಿಸುತ್ತಿದ್ದೇವೆ. ಹೀಗಿರುವ ವಕೀಲರ ಸಂಘ ಹಾಗೂ ಪದಾಧಿಕಾರಿಗಳೇ ನಿಂತು ಸುಳ್ಳು ಕೇಸು ದಾಖಲಾಗಲು ಕಾರಣವಾಗಿರುವುದು ವಕೀಲರ ವಿರುದ್ಧ ತಪ್ಪು ಸಂದೇಶ ಹೋಗಲು ಕಾರಣವಾಗುತ್ತದೆ. ಜಗದೀಶ್ ಅವರನ್ನು ವಕೀಲರ ಪರಿಷತ್‌ ಅಮಾನತು ಮಾಡಿರುವುದೂ ಸರಿಯಲ್ಲ. ಈ ಬೆಳವಣಿಗೆಯನ್ನು ವಕೀಲರ ಒಕ್ಕೂಟ ಖಂಡಿಸುತ್ತದೆ” ಎಂದು ಶ್ರೀನಿವಾಸ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್‌ ಸುಬ್ಬಾರೆಡ್ಡಿ ಅವರ ಹೇಳಿಕೆಯನ್ನು ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಅಧ್ಯಕ್ಷರು ಸಂಪರ್ಕಕ್ಕೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಂಧ್ರದ ಮೂಲದವರು ಕರ್ನಾಟಕದಲ್ಲಿ ರೈತರ ಭೂಮಿಯನ್ನು ನೂರಾರು ಕಬಳಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಆಂಧ್ರದ ಮೂಲದವರು ಮಾಡಿದ ಕುತಂತ್ರವೇ ಜಗದೀಶ್ ರವರ ಬಂಧನ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...