Homeಕರೋನಾ ತಲ್ಲಣಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

ಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

- Advertisement -
- Advertisement -

ಕೇರಳ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ 5,000ಕ್ಕೂ ಹೆಚ್ಚು ವೈದ್ಯಕೀಯ ಇಂಟರ್ನ್‌ಗಳು ಕೊರೊನಾ ಸಾಂಕ್ರಾಮಿಕದ ತುರ್ತು ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದ 2022ರ ನೀಟ್ ಪಿಜಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ.

ವೈದ್ಯಕೀಯ ವಿದ್ಯಾರ್ಥಿಗಳು ನೀಟ್‌-ಪಿಜಿ 2022 ಪರೀಕ್ಷೆ ಬರೆಯಲು ಇಂಟರ್ನ್‌ಶಿಪ್ ಪೂರ್ಣಗೊಳಿಸಿರಬೇಕು. ಆದರೆ, ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ಇಂಟರ್ನ್‌ಶಿಪ್ ಪೂರ್ಣಗೊಳಿಸುವ ಕಟ್-ಆಫ್ ದಿನಾಂಕವನ್ನು ಜುಲೈ 31ಕ್ಕೆ ವಿಸ್ತರಿಸಿದೆ. ಹೀಗಾಗಿ, ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿಗಳ ಇಂಟರ್ನ್‌ಶಿಪ್ ಮುಗಿಯುವುದಿಲ್ಲವಾದ್ದರಿಂದ ಈ ಇಂಟರ್ನ್‌ಗಳು ಪರೀಕ್ಷೆ ಬರೆಯಲು ಅನರ್ಹರಾಗುತ್ತಾರೆ.

’ಕೇರಳದಲ್ಲಿ 3,500 ಕ್ಕೂ ಹೆಚ್ಚು ಇಂಟರ್ನಿಗಳು ಕೋವಿಡ್ ವಿರುದ್ಧ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ನಾವು ಪಿಜೆಗೆ ಪ್ರವೇಶ ಪಡೆಯಲು ನಮ್ಮ ಮೊದಲ ಪ್ರಯತ್ನವನ್ನು ಕಳೆದುಕೊಳ್ಳುತ್ತಿರುವುದು ಕಳವಳಕಾರಿ ಸಂಗತತಿ’ ಎಂದು ಕೇರಳದ ಐಎಂಎ-ಮೆಡಿಕಲ್ ಸ್ಟೂಡೆಂಟ್ಸ್ ನೆಟ್ವರ್ಕ್‌ನ ಸಂಚಾಲಕ ವಿಷ್ಣು ಗೋಪನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“5,000 ಕ್ಕೂ ಹೆಚ್ಚು ಇಂಟರ್ನಿಗಳು ನೀಟ್‌-ಪಿಜಿ 2022 ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುವುದಿಲ್ಲ. ಭಾರತದ ಇತಿಹಾಸದಲ್ಲಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಶೂನ್ಯ ವರ್ಷವೇ ಇರಲಿಲ್ಲ” ಎಂದು ಐಎಂಎ – ಜೂನಿಯರ್ ಡಾಕ್ಟರ್ಸ್ ನೆಟ್ವರ್ಕ್‌ನ ರಾಷ್ಟ್ರೀಯ ಕಾರ್ಯದರ್ಶಿ ಡಾ. ಕರಣ್ ಜುನೇಜಾ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

ಕೇರಳ ಆರೋಗ್ಯ ಸೇವೆಗಳ ವಿಶ್ವವಿದ್ಯಾಲಯದ ಅಡಿಯಲ್ಲಿ 25 ವೈದ್ಯಕೀಯ ಕಾಲೇಜುಗಳಿವೆ. ಇಂಟರರ್ನ್‌ಶಿಪ್ ಅರ್ಹತೆಯನ್ನು ವಿಸ್ತರಿಸುವ ನಿರ್ಧಾರವನ್ನು ಗುಜರಾತ್ ಇಂಟರ್ನ್ ವೈದ್ಯರ ಸಂಘದ ಅಧ್ಯಕ್ಷ ಡಾ ಮೀತ್‌ ಘೋನಿಯಾ ಅವರು ಸ್ವಾಗತಿಸಿದ್ದಾರೆ.

“ಸಾಂಕ್ರಾಮಿಕ ಸಮಯದಲ್ಲಿ ಸರ್ಕಾರವು ಅವರನ್ನು ಉದ್ಯೋಗಿಗಳಾಗಿ ಬಳಸಿಕೊಂಡಿದೆ ಎಂಬ ಏಕೈಕ ಕಾರಣದಿಂದ ಅವರು ಪರೀಕ್ಷೆಗೆ ಅರ್ಹರಾಗುವುದಿಲ್ಲ. ಅವರು ಕೊರೊನ ವಿರುದ್ದದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರ ಇಂಟರ್ನ್‌ಶಿಪ್ ತಡವಾಗಿ ಪ್ರಾರಂಭವಾಗಿದೆ. ಈಗ ಅವರು ಪರೀಕ್ಷೆಗೆ ಅರ್ಹತೆ ಪಡೆಯುವುದಿಲ್ಲ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ” ಎಂದು ಘೋನಿಯಾ ಹೇಳಿದ್ದಾರೆ.

ಈ ಇಂಟರ್ನ್‌ಗಳು ತಮ್ಮ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಅವರು ಒಂದು ವರ್ಷದವರೆಗೆ ಅವಕಾಶಗಳಿಂದ ವಂಚಿತರಾಗುತ್ತಾರೆ. ಜೂನಿಯರ್ ವೈದ್ಯರು ಆರೋಗ್ಯ ಕ್ಷೇತ್ರದಲ್ಲಿ ಬೆನ್ನೆಲುಬಾಗಿದ್ದಾರೆ. ಇಂಟರ್ನ್‌ಗಳು ಪರೀಕ್ಷೆಯನ್ನು ತಪ್ಪಿಸಿಕೊಳ್ಳುವುದು ನಮ್ಮ ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುವುದಲ್ಲದೆ, ಜನರಿಗೂ ಸಮಸ್ಯೆಯಾಗಲಿದೆ ಎಂದು ಡಾ.ಕರಣ್ ಜುನೇಜಾ ಹೇಳಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌‌‌ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...