Homeಕರ್ನಾಟಕಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ., ಬಿ.ಟಿ.ವಿ., ಈ.ಟಿ.ವಿ. ಭಾರತ್‌ ಪ್ರತಿನಿಧಿಗಳಿಗೆ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಹಿಜಾಬ್‌- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ.

ಶಿವಮೊಗ್ಗದಲ್ಲಿ ವರದಿಗಾರರೊಬ್ಬರು ಮಗುವೊಂದನ್ನು ಓಡಿಸಿಕೊಂಡು ಹೋಗಿ ಫೋಟೋ ತೆಗೆದದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು ಮಾಧ್ಯಮಗಳ ಪತ್ರಕರ್ತರಿಗೆ ಸೂಚನೆ ನೀಡಿತ್ತು. ಸಮಿತಿಯ ಮುಂದೆ ಹಾಜರಾದ ಪತ್ರಕರ್ತರು ತಪ್ಪೊಪ್ಪಿಗೆ ಮುಚ್ಚಳಿಕೆ ಬರೆದಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ.

ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಹಾಗೂ ಪೋಷಣೆ) 2015ರ ಸೆಕ್ಷನ್‌ 29ರ ಅಡಿಯಲ್ಲಿ ರಚಿತವಾಗಿರುವ ಸಮಿತಿಯು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಆಯ್ದ ಮಾಧ್ಯಮಗಳ ಪತ್ರಕರ್ತರಿಗೆ ಬುದ್ಧಿ ಹೇಳಿದೆ.

ದಿನಾಂಕ 17.02.2022ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಸಂಬಂಧಪಟ್ಟ ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಜರಾಗಲು ಕ್ರಮವಹಿಸುವಂತೆ ಸೂಚಿಸಿತ್ತು.

ಇದನ್ನೂ ಓದಿರಿ: ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ದೃಶ್ಯಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು ಹಾಗೂ ಕ್ಯಾಮೆರಾಮನ್‌ಗಳು ಸಮಿತಿಯ ಮುಂದೆ ಹಾಜರಾಗುವಂತೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿತ್ತು.

ರಾಜ್ಯಾದ್ಯಂತ ಸುದ್ದಿಯಾಗಿರುವ, ವಿದ್ಯಾರ್ಥಿ ಸಮುದಾಯದಲ್ಲಿ ಗೊಂದಲಕ್ಕೆಡೆ ಮಾಡಿಕೊಟ್ಟ ‘ಹಿಜಾಬ್‌’ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮದವರು ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುತ್ತಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯವನ್ನು ಗಮನಿಸಲಾಗಿದೆ. ಮಕ್ಕಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿದ ದೃಶ್ಯವನ್ನು ಗಮನಿಸಿದ್ದು ಇದು ಬಾಲ ನ್ಯಾಯ ಕಾಯ್ದೆ 2015ರ ಸೆಕ್ಷನ್‌ 75ರ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಕೆಲವು ಟಿ.ವಿ.ಚಾನೆಲ್‌ಗಳು ಶಿವಮೊಗ್ಗ ಶಾಲೆಗಳಿಂದ ನೇರ ಪ್ರಸಾರ ಮಾಡಿವೆ ಎಂದು ಸಮಿತಿ ತಿಳಿಸಿತ್ತು.

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ. ಮತ್ತು ಬಿ.ಟಿ.ವಿ. ಚಾನೆಲ್‌ಗಳಲ್ಲಿ ದೃಶ್ಯಗಳು ಬಿತ್ತರಗೊಂಡಿವೆ. ಈ ವಿಷಯ ತುರ್ತು ಇದ್ದು, ಸದರಿ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು, ಕ್ಯಾಮೆರಾಮನ್‌ಗಳ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳು ಲಭ್ಯವಿಲ್ಲದ ಕಾರಣ ವೈಯಕ್ತಿಕವಾಗಿ ಪತ್ರ ವ್ಯವಹರಿಸಲು ಸಮಯ ಕಡಿಮೆ ಇರುವುದರಿಂದ ಸಂಬಂಧಪಟ್ಟ ಮಾಧ್ಯಮದವರು ತುರ್ತಾಗಿ ದಿನಾಂಕ 18.02.2022ರಂದು ಬೆಳಿಗ್ಗೆ 11 ಗಂಟೆಗೆ ಸಮಿತಿ ಎದುರು ಹಾಜರಾಗುವಂತೆ ನಿರ್ದೇಶನ ನೀಡಬೇಕು ಎಂದು ವಾರ್ತಾ ಇಲಾಖೆಗೆ ಸಮಿತಿ ಪತ್ರ ಬರೆದಿತ್ತು.

ಸಮಿತಿಯ ಸೂಚನೆಯ ಮೇರೆಗೆ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಪಟ್ಟ ಮಾಧ್ಯಮಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದರು. ಸಭೆ ಹಾಜರಾದ ಪತ್ರಕರ್ತರು ಮತ್ತೆ ಕಾನೂನು ಉಲ್ಲಂಘಿಸದಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ಸಭೆಗೆ ಹಾಜರಾಗಿದ್ದ, ಹೆಸರು ಹೇಳಲಿಚ್ಛಿಸದ ಪತ್ರಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಿ.ಎಂ.ರೇಖಾ, “ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಮತ್ತೆ ಮಾಡದಂತೆ ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಹೊಸದಾಗಿ ಪತ್ರಿಕೋದ್ಯಮಕ್ಕೆ ಬಂದವರಿರುತ್ತಾರೆ. ಅವರಿಗೆ ಮಕ್ಕಳ ಹಕ್ಕುಗಳ ಕುರಿತು ಅರಿವಿರುವುದಿಲ್ಲ. ಕೆಲವರು ಹೊಸ ಕಾಯ್ದೆಗಳ ಕುರಿತು ಅಪ್‌ಡೇಟ್ ಆಗಿರುವುದಿಲ್ಲ. ಮುಂದೆ ತೊಂದರೆಯಾಗಬಾರದು. ಅರಿವು ಮೂಡಿಸುವ ಕಾರಣಕ್ಕೆ ಅವರನ್ನು ಕರೆಸಲಾಗಿತ್ತು” ಎಂದು ತಿಳಿಸಿದರು.

“ಕಾನೂನು ಉಲ್ಲಂಘಿಸಿದ ಬಳಿಕ, ನಾಳೆ ನ್ಯಾಯಾಲಯದ ಎದುರು ನಮಗೆ ಕಾನೂನು ಗೊತ್ತಿರಲಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ” ಎಂದ ಅವರು, “ನೋಟಿಸ್‌ ನೀಡಲಾಗಿದ್ದ ಎಲ್ಲ ಮಾಧ್ಯಮದವರು ಹಾಗೂ ಇತರ ಸ್ಥಳೀಯ ಮಾಧ್ಯಮಗಳ ಪ್ರತಿನಿಧಿಗಳು ಹಾಜರಾಗಿದ್ದರು” ಎಂದು ಮಾಹಿತಿ ನೀಡಿದರು.

“ಹಿಜಾಬ್‌ ಬೇಕೋ, ಶಿಕ್ಷಣ ಬೇಕೋ ಎಂದು ಮಕ್ಕಳಲ್ಲಿ ಪ್ರಶ್ನಿಸುವುದು ಸರಿಯಲ್ಲ ಎಂದು ಮಾಧ್ಯಮದವರಿಗೆ ಮನವರಿಕೆ ಮಾಡಿದ್ದೇವೆ. ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಏನೇನೋ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿಸಿದರೆ ಅವರು ಮುಖ್ಯವಾಹಿನಿಗೆ ಬರುವುದೇ ಕಷ್ಟವಾಗುತ್ತದೆ. ದೇಶದ ಭವಿಷ್ಯವೇ ಮಕ್ಕಳು. ಹೀಗಾಗಿ ನಾವು ಮಕ್ಕಳ ವಿಚಾರವಾಗಿ ಗಂಭೀರವಾಗಿ ಯೋಚಿಸಬೇಕು” ಎಂದು ಅವರು ಮನವಿ ಮಾಡಿದರು.

“ನಿಷೇದಾಜ್ಞೆ ಜಾರಿ ಮಾಡಿದರೂ ಶಾಲಾ ಕಾಲೇಜುಗಳ ಬಳಿ ಮಾಧ್ಯಮದವರು ಹೋಗಿದ್ದಾರೆ. ಈ ಕುರಿತೂ ಮನವರಿಕೆ ಮಾಡಿದ್ದೇವೆ. ವಿಶ್ವ ಮಕ್ಕಳ ಒಡಂಬಡಿಕೆಯಿಂದ ಹಿಡಿದು ಇತ್ತೀಚಿನ ಕಾನೂನಿನವರೆಗೂ ತಿಳಿಸಿದ್ದೇವೆ. ನಿಮಗೆ ಬಿಡುವಾದಾಗ ಎರಡು ಗಂಟೆ ಸಮಯವನ್ನು ನಮಗೆ ನೀಡಿ. ನಾವು ಬಂದು ನಿಮಗೆ ಮಕ್ಕಳ ಹಕ್ಕುಗಳ ಕುರಿತು ಮಾರ್ಗದರ್ಶನ ಮಾಡುತ್ತೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದೇವೆ. ಅರಿವಿನ ಕೊರತೆಯಿಂದ ಹೀಗಾಗುತ್ತದೆ. ನಾಳೆ ನೀವು ಕಷ್ಟಕ್ಕೆ ಸಿಲುಕಿಕೊಂಡು ಒದ್ದಾಡಬೇಡಿ ಎಂದೂ ಎಚ್ಚರಿಕೆಯನ್ನು ಕೊಟ್ಟಿದ್ದೇವೆ” ಎಂದು ಅವರು ವಿವರಿಸಿದರು.

“ಮತ್ತೆ ಇದೇ ತಪ್ಪು ಪುನಾರಾವರ್ತನೆಯಾದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇವೆ” ಎಂದು ರೇಖಾ ಅವರು ಮಾತು ಮುಗಿಸಿದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...