Homeದಲಿತ್ ಫೈಲ್ಸ್ದಲಿತ ಮಹಿಳೆಯನ್ನು ಪ್ರಾರ್ಥಿಸದಂತೆ ತಡೆದ ತಮಿಳುನಾಡಿನ ಚಿದಂಬರಂ ದೇವಸ್ಥಾನದ ಅರ್ಚಕರು

ದಲಿತ ಮಹಿಳೆಯನ್ನು ಪ್ರಾರ್ಥಿಸದಂತೆ ತಡೆದ ತಮಿಳುನಾಡಿನ ಚಿದಂಬರಂ ದೇವಸ್ಥಾನದ ಅರ್ಚಕರು

- Advertisement -
- Advertisement -

ದಲಿತ ಮಹಿಳೆಯೊಬ್ಬರನ್ನು ದೇವಸ್ಥಾನದ ಒಳಗಿನ ವೇದಿಕೆಯ ಮೇಲೆ ನಿಂತು ಪ್ರಾರ್ಥನೆ ಮಾಡುವುದನ್ನು ತಡೆದಿದ್ದಕ್ಕಾಗಿ ತಮಿಳುನಾಡಿನ ಚಿದಂಬರಂ ನಟರಾಜರ ದೇವಸ್ಥಾನದ 20 ಅರ್ಚಕರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ-1989 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೆಬ್ರವರಿ 15ರ ಮಂಗಳವಾರದಂದು ಈ ಘಟನೆ ನಡೆದಿದೆ. ಸ್ಥಳೀಯವಾಗಿ ದೀಕ್ಷಿತರೆಂದು ಕರೆಯಲ್ಪಡುವ ಅರ್ಚಕರು, ದೇವಸ್ಥಾನ ಪ್ರವೇಶಿಸಿದ ಎಸ್‌ಸಿ ಸಮುದಾಯಕ್ಕೆ ಸೇರಿರುವ ಜಯಶೀಲಾಳ ಎಂಬ ಮಹಿಳೆಯನ್ನು ಸುತ್ತುವರೆದರು ‘ಕನಗಸಬೈ ಮೇಡೈ’ಗೆ ಎಂಬ ವೇದಿಕೆಗೆ ಬರದಂತೆ ತಡೆದಿದ್ದರು.

ಇದನ್ನೂ ಓದಿ: ಯುಪಿ: ಮಾಜಿ ಸಚಿವರ ಮಗನ ಆಶ್ರಮದಲ್ಲಿ ದಲಿತ ಯುವತಿಯ ಶವ ಪತ್ತೆ, ಮಾಯಾವತಿ ಆಕ್ರೋಶ

ಜಯಶೀಲ ಅವರು ವೇದಿಕೆ ಏರಲು ಬೇಕಾಗಿ ಮೆಟ್ಟಿಲು ಹತ್ತಲು ಯತ್ನಿಸುತ್ತಿದ್ದಾಗ ಅರ್ಚಕರು ಮಹಿಳೆಯನ್ನು ಸುತ್ತುವರೆದು ಕಿರುಚಾಡಿದ್ದಾರೆ. ಈ ಘಟನೆಯ ಹಲವು ವಿಡಿಯೋಗಳು ರೆಕಾರ್ಡ್ ಆಗಿದ್ದು, ವೈರಲ್ ಆಗಿದೆ. ಅರ್ಚಕರೊಬ್ಬರು ಜಯಶೀಲಾ ಅವರನ್ನು ಕೈ ಹಿಡಿದು ಎಳೆದುಕೊಂಡು ಹೋಗಲು ಯತ್ನಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ.

ಘಟನೆಯ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅರ್ಚಕರು ತನಗೆ ಬೆದರಿಕೆ ಹಾಕಿದ್ದಾರೆ ಮತ್ತು ಪಾತ್ರೆಗಳನ್ನು ಕದ್ದಿದ್ದಾಗಿ ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾಗಿ ಜಯಶೀಲಾ ಅವರು ದೂರು ದಾಖಲಿಸಿದ್ದಾರೆ.

ಈ ದೇವಸ್ಥಾನದಲ್ಲಿ ಇತ್ತೀಚೆಗೆ ವರದಿಯಾದ ಎರಡನೇ ಘಟನೆ ಇದಾಗಿದೆ. ಇದಕ್ಕೂ ಮುನ್ನ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಗಣೇಶ್ ಎಂಬವರು ಕನಗಸಬೈ ವೇದಿಕೆಯಿಂದ ಪ್ರಾರ್ಥನೆ ಸಲ್ಲಿಸಲು ಯತ್ನಿಸಿದ್ದರು. ಆದರೆ, ಅವರನ್ನು ತಡೆದು ದೇವಸ್ಥಾನ ಪ್ರವೇಶಿಸದಂತೆ ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ಜಯಶೀಲ ಅವರ ದೂರಿನ ಆಧಾರದ ಮೇಲೆ 20 ಅರ್ಚಕರ ವಿರುದ್ಧ ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಜಯಶೀಲ ಅವರ ಜೊತೆಗಿದ್ದ ಅರ್ಚಕ ದರ್ಶನ್ ಅವರು ಹೇಳುವಂತೆ, ಕನಗಸಬೈ ವೇದಿಕೆಯಿಂದ ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದಿವ ನಿಯಮ ತಪ್ಪಾಗಿದ್ದು, ದೇವಸ್ಥಾನದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಚಿದಂಬರಂ ನಟರಾಜನ ದೇಗುಲದಲ್ಲಿ ಇಂತಹ ಹಲವಾರು ಅಕ್ರಮಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಕಾರಣಕ್ಕಾಗಿ ಈ ವೇದಿಕೆಯ ಮೇಲೆ ಅರ್ಚಕರು ಮಾತ್ರ ನಿಂತು ಪ್ರಾರ್ಥಿಸಬಹುದು ಎಂದು ನಿಯಮವನ್ನು ಮಾಡಲಾಗಿತ್ತು ಎಂದು ವರದಿಯಾಗಿದೆ. ಹಿಂದಿನ ಎಐಎಡಿಎಂಕೆ ಸರ್ಕಾರವು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಅಡಿಯಲ್ಲಿದ್ದ ದೇವಾಲಯವನ್ನು ಅರ್ಚಕರಿಗೆ ಹಿಂತಿರುಗಿಸಿತ್ತು.

ಇದನ್ನೂ ಓದಿ: ಯುಪಿ ಚುನಾವಣೆ: ಬದಲಾವಣೆ ಎದುರು ನೋಡುತ್ತಿರುವ ‘ದಲಿತ ರಾಜಧಾನಿ’ ಆಗ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...