Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಕೊನೆಯ ಮೂರು ಪಂದ್ಯಗಳು ಇಂದು ನಡೆಯಲಿವೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ ಬೆಂಗಳೂರು ಬುಲ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ಸೇರಿ ಐದು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ ತಲುಪಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ 22 ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಇಂದು ಮೂರು ಪಂದ್ಯ ನಡೆಯಲಿವೆ. ಅದರಲ್ಲಿ ಮೊದಲ ಪಂದ್ಯದ ಫಲಿತಾಂಶದಲ್ಲಿಯೂ ಬೆಂಗಳೂರು ಭವಿಷ್ಯ ನಿಂತಿರುತ್ತದೆ.

ಮೊದಲ ಪಂದ್ಯ: ಜೈಪುರ್ ಪಿಂಕ್ ಪ್ಯಾಂಥರ್ಸ್ v/s ಪುಣೇರಿ ಪಲ್ಟನ್

ಈ ಪಂದ್ಯದಲ್ಲಿ ಈಗಾಗಲೇ 62 ಅಂಕ ಪಡೆದಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಗೆದ್ದರೆ ಅದು 67 ಅಂಕಗಳೊಂದಿಗೆ ಪ್ಲೆ ಆಫ್ ಪ್ರವೇಶಿಸುತ್ತದೆ. ಆಗ ರೇಸ್‌ನಿಂದ 61 ಅಂಕ ಪಡೆದಿರುವ ಪುಣೇರಿ ಪಲ್ಟನ್ ಹೊರಗುಳಿಯುತ್ತದೆ. ಒಂದು ವೇಳೆ ಪುಣೇರಿ ಪಲ್ಟಾನ್ ಗೆದ್ದರೆ ಜೈಪುರ್ ಹೊರಗುಳಿಯುತ್ತದೆ. ಆಗ ಬೆಂಗಳೂರು ತಂಡ 66 ಅಂಕ ಮತ್ತು ಪುಣೇರಿ ಪಲ್ಟಾನ್ 66 ಅಂಕ ಗಳಿಸಿ ಸಮಬಲ ಸಾಧಿಸುತ್ತವೆ. ಆದರೆ ಸ್ಕೋರ್ ಡಿಫರೆನ್ಸ್‌ನಲ್ಲಿ ಬೆಂಗಳೂರು 59 ಹೆಚ್ಚಿನ ಸ್ಕೋರ್ ಇದ್ದರೆ ಪುಣೇರಿ 26 ಮಾತ್ರ ಇದೆ. ಹಾಗಾಗಿ ಪುಣೇರಿ ಪಲ್ಟಾನ್ ಈ ಪಂದ್ಯವನ್ನು 28 ಸ್ಕೋರ್ ಅಂತರದಿಂದ ಗೆದ್ದರೆ ಮಾತ್ರ ಬೆಂಗಳೂರು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಸಾಧ್ಯ. 27 ಅಂಕಕ್ಕಿಂತ ಕಡಿಮೆ ಅಂತರದಲ್ಲಿ ಪುಣೇರಿ ಗೆದ್ದರೂ ಬೆಂಗಳೂರೂ ಪ್ಲೇಆಫ್ ಪ್ರವೇಶಿಸುತ್ತದೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ. ಬೆಂಗಳೂರು ಬುಲ್ಸ್ ಪ್ಲೆ ಆಫ್‌ಗೆ ಪ್ರವೇಶ ಪಡೆಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣವನ್ನು ಹಿಂದಿಕ್ಕಿ ಬೆಂಗಳೂರು ಬುಲ್ಸ್ ಪ್ಲೇ ಆಫ್‌ ಕಡೆಗೆ ನಡೆಯುತ್ತದೆ.

ಆದರೆ ಮೊದಲ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮೂರನೇ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ಗೆದ್ದರೆ ಆ ಮೂರು ತಂಡಗಳು ಪ್ಲೆ ಆಫ್ ಪ್ರವೇಶಿಸಲಿವೆ. ಬೆಂಗಳೂರು ಮತ್ತು ಪುಣೇರಿ ತಂಡಗಳು ಹೊರಬೀಳಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಬಹುಜನ ಭಾರತ; ಬಿಜೆಪಿಗೆ ಉಳಿಗಾಲವಿಲ್ಲವೇ ಯುಪಿಯಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...