Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಕೊನೆಯ ಮೂರು ಪಂದ್ಯಗಳು ಇಂದು ನಡೆಯಲಿವೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ ಬೆಂಗಳೂರು ಬುಲ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ಸೇರಿ ಐದು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ ತಲುಪಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ 22 ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಇಂದು ಮೂರು ಪಂದ್ಯ ನಡೆಯಲಿವೆ. ಅದರಲ್ಲಿ ಮೊದಲ ಪಂದ್ಯದ ಫಲಿತಾಂಶದಲ್ಲಿಯೂ ಬೆಂಗಳೂರು ಭವಿಷ್ಯ ನಿಂತಿರುತ್ತದೆ.

ಮೊದಲ ಪಂದ್ಯ: ಜೈಪುರ್ ಪಿಂಕ್ ಪ್ಯಾಂಥರ್ಸ್ v/s ಪುಣೇರಿ ಪಲ್ಟನ್

ಈ ಪಂದ್ಯದಲ್ಲಿ ಈಗಾಗಲೇ 62 ಅಂಕ ಪಡೆದಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಗೆದ್ದರೆ ಅದು 67 ಅಂಕಗಳೊಂದಿಗೆ ಪ್ಲೆ ಆಫ್ ಪ್ರವೇಶಿಸುತ್ತದೆ. ಆಗ ರೇಸ್‌ನಿಂದ 61 ಅಂಕ ಪಡೆದಿರುವ ಪುಣೇರಿ ಪಲ್ಟನ್ ಹೊರಗುಳಿಯುತ್ತದೆ. ಒಂದು ವೇಳೆ ಪುಣೇರಿ ಪಲ್ಟಾನ್ ಗೆದ್ದರೆ ಜೈಪುರ್ ಹೊರಗುಳಿಯುತ್ತದೆ. ಆಗ ಬೆಂಗಳೂರು ತಂಡ 66 ಅಂಕ ಮತ್ತು ಪುಣೇರಿ ಪಲ್ಟಾನ್ 66 ಅಂಕ ಗಳಿಸಿ ಸಮಬಲ ಸಾಧಿಸುತ್ತವೆ. ಆದರೆ ಸ್ಕೋರ್ ಡಿಫರೆನ್ಸ್‌ನಲ್ಲಿ ಬೆಂಗಳೂರು 59 ಹೆಚ್ಚಿನ ಸ್ಕೋರ್ ಇದ್ದರೆ ಪುಣೇರಿ 26 ಮಾತ್ರ ಇದೆ. ಹಾಗಾಗಿ ಪುಣೇರಿ ಪಲ್ಟಾನ್ ಈ ಪಂದ್ಯವನ್ನು 28 ಸ್ಕೋರ್ ಅಂತರದಿಂದ ಗೆದ್ದರೆ ಮಾತ್ರ ಬೆಂಗಳೂರು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಸಾಧ್ಯ. 27 ಅಂಕಕ್ಕಿಂತ ಕಡಿಮೆ ಅಂತರದಲ್ಲಿ ಪುಣೇರಿ ಗೆದ್ದರೂ ಬೆಂಗಳೂರೂ ಪ್ಲೇಆಫ್ ಪ್ರವೇಶಿಸುತ್ತದೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ. ಬೆಂಗಳೂರು ಬುಲ್ಸ್ ಪ್ಲೆ ಆಫ್‌ಗೆ ಪ್ರವೇಶ ಪಡೆಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣವನ್ನು ಹಿಂದಿಕ್ಕಿ ಬೆಂಗಳೂರು ಬುಲ್ಸ್ ಪ್ಲೇ ಆಫ್‌ ಕಡೆಗೆ ನಡೆಯುತ್ತದೆ.

ಆದರೆ ಮೊದಲ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮೂರನೇ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ಗೆದ್ದರೆ ಆ ಮೂರು ತಂಡಗಳು ಪ್ಲೆ ಆಫ್ ಪ್ರವೇಶಿಸಲಿವೆ. ಬೆಂಗಳೂರು ಮತ್ತು ಪುಣೇರಿ ತಂಡಗಳು ಹೊರಬೀಳಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಬಹುಜನ ಭಾರತ; ಬಿಜೆಪಿಗೆ ಉಳಿಗಾಲವಿಲ್ಲವೇ ಯುಪಿಯಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...