Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಕೊನೆಯ ಮೂರು ಪಂದ್ಯಗಳು ಇಂದು ನಡೆಯಲಿವೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ ಬೆಂಗಳೂರು ಬುಲ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ಸೇರಿ ಐದು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ ತಲುಪಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ 22 ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಇಂದು ಮೂರು ಪಂದ್ಯ ನಡೆಯಲಿವೆ. ಅದರಲ್ಲಿ ಮೊದಲ ಪಂದ್ಯದ ಫಲಿತಾಂಶದಲ್ಲಿಯೂ ಬೆಂಗಳೂರು ಭವಿಷ್ಯ ನಿಂತಿರುತ್ತದೆ.

ಮೊದಲ ಪಂದ್ಯ: ಜೈಪುರ್ ಪಿಂಕ್ ಪ್ಯಾಂಥರ್ಸ್ v/s ಪುಣೇರಿ ಪಲ್ಟನ್

ಈ ಪಂದ್ಯದಲ್ಲಿ ಈಗಾಗಲೇ 62 ಅಂಕ ಪಡೆದಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಗೆದ್ದರೆ ಅದು 67 ಅಂಕಗಳೊಂದಿಗೆ ಪ್ಲೆ ಆಫ್ ಪ್ರವೇಶಿಸುತ್ತದೆ. ಆಗ ರೇಸ್‌ನಿಂದ 61 ಅಂಕ ಪಡೆದಿರುವ ಪುಣೇರಿ ಪಲ್ಟನ್ ಹೊರಗುಳಿಯುತ್ತದೆ. ಒಂದು ವೇಳೆ ಪುಣೇರಿ ಪಲ್ಟಾನ್ ಗೆದ್ದರೆ ಜೈಪುರ್ ಹೊರಗುಳಿಯುತ್ತದೆ. ಆಗ ಬೆಂಗಳೂರು ತಂಡ 66 ಅಂಕ ಮತ್ತು ಪುಣೇರಿ ಪಲ್ಟಾನ್ 66 ಅಂಕ ಗಳಿಸಿ ಸಮಬಲ ಸಾಧಿಸುತ್ತವೆ. ಆದರೆ ಸ್ಕೋರ್ ಡಿಫರೆನ್ಸ್‌ನಲ್ಲಿ ಬೆಂಗಳೂರು 59 ಹೆಚ್ಚಿನ ಸ್ಕೋರ್ ಇದ್ದರೆ ಪುಣೇರಿ 26 ಮಾತ್ರ ಇದೆ. ಹಾಗಾಗಿ ಪುಣೇರಿ ಪಲ್ಟಾನ್ ಈ ಪಂದ್ಯವನ್ನು 28 ಸ್ಕೋರ್ ಅಂತರದಿಂದ ಗೆದ್ದರೆ ಮಾತ್ರ ಬೆಂಗಳೂರು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಸಾಧ್ಯ. 27 ಅಂಕಕ್ಕಿಂತ ಕಡಿಮೆ ಅಂತರದಲ್ಲಿ ಪುಣೇರಿ ಗೆದ್ದರೂ ಬೆಂಗಳೂರೂ ಪ್ಲೇಆಫ್ ಪ್ರವೇಶಿಸುತ್ತದೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ. ಬೆಂಗಳೂರು ಬುಲ್ಸ್ ಪ್ಲೆ ಆಫ್‌ಗೆ ಪ್ರವೇಶ ಪಡೆಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣವನ್ನು ಹಿಂದಿಕ್ಕಿ ಬೆಂಗಳೂರು ಬುಲ್ಸ್ ಪ್ಲೇ ಆಫ್‌ ಕಡೆಗೆ ನಡೆಯುತ್ತದೆ.

ಆದರೆ ಮೊದಲ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮೂರನೇ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ಗೆದ್ದರೆ ಆ ಮೂರು ತಂಡಗಳು ಪ್ಲೆ ಆಫ್ ಪ್ರವೇಶಿಸಲಿವೆ. ಬೆಂಗಳೂರು ಮತ್ತು ಪುಣೇರಿ ತಂಡಗಳು ಹೊರಬೀಳಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಬಹುಜನ ಭಾರತ; ಬಿಜೆಪಿಗೆ ಉಳಿಗಾಲವಿಲ್ಲವೇ ಯುಪಿಯಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...