Homeಸಿನಿಮಾಕ್ರೀಡೆಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಕೊನೆಯ ಮೂರು ಪಂದ್ಯಗಳು ಇಂದು ನಡೆಯಲಿವೆ. ಈಗಾಗಲೇ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ. ಪ್ಲೇ-ಆಫ್‌ ನ ಉಳಿದ ಮೂರು ಸ್ಥಾನಕ್ಕಾಗಿ ಬೆಂಗಳೂರು ಬುಲ್ಸ್, ಜೈಪುರ್ ಪಿಂಕ್ ಪ್ಯಾಂಥರ್ಸ್, ಹರಿಯಾಣ ಸ್ಟೀಲರ್ಸ್, ಗುಜರಾತ್ ಜೈಂಟ್ಸ್ ಮತ್ತು ಪುಣೇರಿ ಪಲ್ಟನ್ ಸೇರಿ ಐದು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ಮೂರು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ) ಈಗಾಗಲೇ ಪ್ಲೇ-ಆಫ್ ತಲುಪಿವೆ. ಆದರೆ, 4ನೇ ಸ್ಥಾನದಲ್ಲಿರುವ ಬೆಂಗಳೂರು ಬುಲ್ಸ್ ಈಗಾಗಲೇ ತನ್ನ ಎಲ್ಲಾ 22 ಪಂದ್ಯಗಳನ್ನೂ ಆಡಿದ್ದು 66 ಅಂಕಗಳನ್ನು ಗಳಿಸಲಷ್ಟೇ ಶಕ್ತವಾಗಿದೆ. ಬೇರೆ ಪ್ರತಿಸ್ಪರ್ಧಿ ತಂಡಗಳ ಸೋಲು ಬೆಂಗಳೂರು ಬುಲ್ಸ್ ಪ್ಲೇ-ಆಫ್‌ಗೆ ದಾರಿಯಾಗಲಿದೆ.

ಬೆಂಗಳೂರು ಬುಲ್ಸ್ ಪ್ಲೇ-ಆಫ್‌ ತಲುಪಲು ಈ ತಂಡಗಳು ಸೋಲಬೇಕು

ಇಂದು ಮೂರು ಪಂದ್ಯ ನಡೆಯಲಿವೆ. ಅದರಲ್ಲಿ ಮೊದಲ ಪಂದ್ಯದ ಫಲಿತಾಂಶದಲ್ಲಿಯೂ ಬೆಂಗಳೂರು ಭವಿಷ್ಯ ನಿಂತಿರುತ್ತದೆ.

ಮೊದಲ ಪಂದ್ಯ: ಜೈಪುರ್ ಪಿಂಕ್ ಪ್ಯಾಂಥರ್ಸ್ v/s ಪುಣೇರಿ ಪಲ್ಟನ್

ಈ ಪಂದ್ಯದಲ್ಲಿ ಈಗಾಗಲೇ 62 ಅಂಕ ಪಡೆದಿರುವ ಜೈಪುರ್ ಪಿಂಕ್ ಪ್ಯಾಂಥರ್ಸ್ ಗೆದ್ದರೆ ಅದು 67 ಅಂಕಗಳೊಂದಿಗೆ ಪ್ಲೆ ಆಫ್ ಪ್ರವೇಶಿಸುತ್ತದೆ. ಆಗ ರೇಸ್‌ನಿಂದ 61 ಅಂಕ ಪಡೆದಿರುವ ಪುಣೇರಿ ಪಲ್ಟನ್ ಹೊರಗುಳಿಯುತ್ತದೆ. ಒಂದು ವೇಳೆ ಪುಣೇರಿ ಪಲ್ಟಾನ್ ಗೆದ್ದರೆ ಜೈಪುರ್ ಹೊರಗುಳಿಯುತ್ತದೆ. ಆಗ ಬೆಂಗಳೂರು ತಂಡ 66 ಅಂಕ ಮತ್ತು ಪುಣೇರಿ ಪಲ್ಟಾನ್ 66 ಅಂಕ ಗಳಿಸಿ ಸಮಬಲ ಸಾಧಿಸುತ್ತವೆ. ಆದರೆ ಸ್ಕೋರ್ ಡಿಫರೆನ್ಸ್‌ನಲ್ಲಿ ಬೆಂಗಳೂರು 59 ಹೆಚ್ಚಿನ ಸ್ಕೋರ್ ಇದ್ದರೆ ಪುಣೇರಿ 26 ಮಾತ್ರ ಇದೆ. ಹಾಗಾಗಿ ಪುಣೇರಿ ಪಲ್ಟಾನ್ ಈ ಪಂದ್ಯವನ್ನು 28 ಸ್ಕೋರ್ ಅಂತರದಿಂದ ಗೆದ್ದರೆ ಮಾತ್ರ ಬೆಂಗಳೂರು ಹಿಂದಿಕ್ಕಿ ಪ್ಲೇಆಫ್ ಪ್ರವೇಶಿಸಲು ಸಾಧ್ಯ. 27 ಅಂಕಕ್ಕಿಂತ ಕಡಿಮೆ ಅಂತರದಲ್ಲಿ ಪುಣೇರಿ ಗೆದ್ದರೂ ಬೆಂಗಳೂರೂ ಪ್ಲೇಆಫ್ ಪ್ರವೇಶಿಸುತ್ತದೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ. ಬೆಂಗಳೂರು ಬುಲ್ಸ್ ಪ್ಲೆ ಆಫ್‌ಗೆ ಪ್ರವೇಶ ಪಡೆಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣವನ್ನು ಹಿಂದಿಕ್ಕಿ ಬೆಂಗಳೂರು ಬುಲ್ಸ್ ಪ್ಲೇ ಆಫ್‌ ಕಡೆಗೆ ನಡೆಯುತ್ತದೆ.

ಆದರೆ ಮೊದಲ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಮತ್ತು ಮೂರನೇ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ಗೆದ್ದರೆ ಆ ಮೂರು ತಂಡಗಳು ಪ್ಲೆ ಆಫ್ ಪ್ರವೇಶಿಸಲಿವೆ. ಬೆಂಗಳೂರು ಮತ್ತು ಪುಣೇರಿ ತಂಡಗಳು ಹೊರಬೀಳಲಿವೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಬಹುಜನ ಭಾರತ; ಬಿಜೆಪಿಗೆ ಉಳಿಗಾಲವಿಲ್ಲವೇ ಯುಪಿಯಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...