Homeಕರ್ನಾಟಕಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

ಗೃಹ ಇಲಾಖೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ: ಕರ್ನಾಟಕ ಆಡಳಿತ ಸುಧಾರಣಾ ಸಮಿತಿ ಶಿಫಾರಸ್ಸು

- Advertisement -
- Advertisement -

ಗೃಹ ಇಲಾಖೆಯಲ್ಲಿ ಕಾನ್‌ಸ್ಟೆಬಲ್ ಮತ್ತು ಗೆಜೆಟೆಡ್‌ಯೇತರ ಸಿಬ್ಬಂದಿ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸು ಮಾಡಿದೆ.

ಆಯೋಗವು ತನ್ನ ಎರಡನೇ ಮತ್ತು ಮೂರನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದು, 2020ರ ವೇಳೆಗೆ ಕರ್ನಾಟಕದಲ್ಲಿ ಗೆಜೆಟೆಡ್ ಅಲ್ಲದ ಪೊಲೀಸ್ ಸಿಬ್ಬಂದಿಯಲ್ಲಿ ಮಹಿಳಾ ಪ್ರಾತಿನಿಧ್ಯವು ಕೇವಲ 8.3% ಇದೆ ಎಂದು ಆಯೋಗ ಕಳವಳ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರವು ಕಾನ್‌ಸ್ಟೆಬಲ್‌ಗಳು ಮತ್ತು ಇತರ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ 25% ಮೀಸಲಾತಿಯನ್ನು ಕಡ್ಡಾಯಗೊಳಿಸಿದೆ. ಅಲ್ಲದೆ, 2015 ರಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪೊಲೀಸ್ ಪಡೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಮಹಿಳೆಯರಿಗೆ 33% ರಷ್ಟು ಹುದ್ದೆಗಳನ್ನು ಮೀಸಲಿಡುವಂತೆ ಸಲಹೆ ನೀಡಿತ್ತು.

ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳಲ್ಲಿ ಗಣಕೀಕೃತ ಕೌನ್ಸೆಲಿಂಗ್ ಮೂಲಕ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆಗೆ ನಿಯಮಗಳನ್ನೂ ಸಹ ಆಯೋಗ ಶಿಫಾರಸು ಮಾಡಿದೆ.

ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯವನ್ನು ಖಾತ್ರಿಪಡಿಸದೆ ಹೊರಗುತ್ತಿಗೆ ಸಿಬ್ಬಂದಿಯನ್ನು ನಿಯೋಜಿಸುತ್ತಿವೆ. ಹೀಗಾಗಿ, ಸರ್ಕಾರದ ವಿವಿಧ ಇಲಾಖೆಗಳಿಗೆ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹೊರಗುತ್ತಿಗೆ ನೀಡಿದಾಗ ಎಸ್ಸಿ ಮತ್ತು ಎಸ್ಟಿಗಳಿಗೆ ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಬಹುದು ಎಂದೂ ಕೂಡ ಆಯೋಗ ಹೇಳಿದೆ.

ಪೊಲೀಸ್ ಇಲಾಖೆಯು 32 ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಒದಗಿಸುತ್ತದೆ. ಆದರೆ, ನಾಗರಿಕರು ಸಾಮಾನ್ಯವಾಗಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಲು ಹಿಂಜರಿಯುತ್ತಾರೆ. ಹೀಗಾಗಿ ಸಾರ್ವಜನಿಕರು ಮತ್ತು ಪೊಲೀಸರನ್ನು ಹತ್ತಿರ ತರುವ ಸಲುವಾಗಿ, ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಾಗರಿಕ ಸೇವಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಬಹುದು ಮತ್ತು ಅದನ್ನು ಸಾಂಸ್ಥಿಕಗೊಳಿಸಲು ಪೊಲೀಸ್ ಕೈಪಿಡಿಯಲ್ಲಿ ನಿಬಂಧನೆಯನ್ನು ಸೇರಿಸಬಹುದು ಎಂದು ಆಯೋಗ ಹೇಳಿದೆ.

BDA ಮತ್ತು BMRDA, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯನ್ನು ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಏಜೆನ್ಸಿಯಂದಿಗೆ ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯನ್ನು ಇಂಧನ ಇಲಾಖೆಯೊಂದಿಗೆ ವಿಲೀನಗೊಳಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದೆ.

ಆಯೋಗದ ಮೊದಲ ವರದಿಯನ್ನು ಹಲವು ಶಿಫಾರಸ್ಸುಗಳೊಂದಿಗೆ ಜುಲೈ 2021 ರಲ್ಲಿ ಕಂದಾಯ, ಸಾರಿಗೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗಳಿಗೆ ಸಲ್ಲಿಸಲಾಗಿತ್ತು. ಈ ಬಾರಿ ಗೃಹ, ಇಂಧನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಮಾಜ ಕಲ್ಯಾಣ, ಎಸ್ಟಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ವರದಿ ಮತ್ತು ಶಿಫಾರಸ್ಸುಗಳನ್ನು ಸಲ್ಲಿಸಲಾಗಿದೆ.

ಪ್ರಮುಖ ಶಿಫಾರಸುಗಳು

• ರಾಜ್ಯ ಸರ್ಕಾರವು ಸೆಕ್ರೆಟರಿಯೇಟ್‌ನಲ್ಲಿ ಯಾವುದೇ ಕಡತವು (ಫೈಲ್) ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚಿರಬಾರದು ಎಂದು ನಿರ್ಧರಿಸಬಹುದು. ಸದ್ಯ ಐದರಿಂದ 10 ಹಂತಗಳಲ್ಲಿ ಕಡತಗಳು ಸಾಗುತ್ತಿವೆ.

• ರಾಜ್ಯ ನಾಗರಿಕ ಸೇವೆಗಳ ವಿತರಣೆಗಾಗಿ ಸರ್ಕಾರವು ಅಂಚೆ ಕಚೇರಿಗಳನ್ನು ಬಳಸಿಕೊಳ್ಳಬಹುದು.

• ಬಿಡಿಎ, ಕೆಎಚ್ಬಿ ಮತ್ತು ಕೆಐಎಡಿಬಿಯಂತಹ ಸಂಸ್ಥೆಗಳು ಗ್ರಾಮ ಪಂಚಾಯಿತಿಗಳ ಮಿತಿಯಲ್ಲಿಯೂ ಮಂಜೂರು ಮಾಡಿದ ನಿವೇಶನಗಳಿಗೆ ಖಾತಾ ನೀಡುತ್ತಿವೆ. ಇದರೊಂದಿಗೆ ಅವು ಗ್ರಾಮ ಪಂಚಾಯಿತಿಗಳನ್ನು ಆಸ್ತಿ ತೆರಿಗೆಯಿಂದ ವಂಚಿತಗೊಳಿಸುತ್ತಿವೆ. ಚಾಯಿತಿಗಳು ಆಸ್ತಿ ತೆರಿಗೆ ಸಂಗ್ರಹಿಸಬೇಕು.

• ಬಿಬಿಎಂಪಿಯಲ್ಲಿ ವಲಯ ಆಯುಕ್ತರು ಮತ್ತು ನಗರ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬಹುದು.


ಇದನ್ನೂ ಓದಿ; ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ ಮತ್ತು ಯೋಗೇಶ್ವರ್ ನಡುವೆ ಪ್ರತಿಷ್ಠೆಯ ಕಣ ಚನ್ನಪಟ್ಟಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...