Homeಕರ್ನಾಟಕ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸಲು ಆಗ್ರಹಿಸಿ ಬೆಂಗಳೂರಿನಲ್ಲಿ ಶನಿವಾರ "ಹೈಕೋರ್ಟ್ ಹಾಗೂ ವಿಧಾನಸೌಧ ಚಲೋ" ನಡೆಯಿತು.

- Advertisement -
- Advertisement -

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ‘ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ’ದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಲಾಯಿತು.

ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್‌ ರ್‍ಯಾಲಿ ಇಂದು ನಡೆಯಿತು.

ರಾಜ್ಯದ ಮೂಲೆ ಮೂಲೆಯಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಸೇರಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌ ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಗಿದ್ದವು. ದೂರದ ಊರುಗಳಿಂದ ಜಿಲ್ಲೆಗಳಿಂದ ನೂರಾರು ವಾಹನಗಳನ್ನು ಮಾಡಿಕೊಂಡು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ರೈಲ್ವೆ ನಿಲ್ದಾಣದಿಂದ ಫ್ರಿಡಂ ಪಾರ್ಕ್‌ವರೆಗೆ ಸಾವಿರಾರು ಜನರು ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಜೈಭೀಮ್ ಘೋಷಣೆ ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತಾ ಮೆರವಣಿಗೆಯನ್ನು ಮುನ್ನಡೆಸಿದರು.

ಮೆರವಣಿಗೆ ವೇಳೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಹೋರಾಟಗಾರ ಮಾವಳ್ಳಿ ಶಂಕರ್‌, ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಬಾಬಾ ಅಂಬೇಡ್ಕರ್‌ರವರಿಗೆ ಕಿಂಚಿತ್ತು ಅಪಮಾನವಾದರೂ ಈ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂಬುದನ್ನು ಈ ನಾಡಿಗೆ ತೋರಿಸಿಕೊಡಲಾಗಿದೆ ಎಂದರು.

ಇದನ್ನೂ ಓದಿರಿ: ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಬಾಬಾ ಸಾಹೇಬರು ಯಾವುದೋ ಒಂದು ಜಾತಿ ವರ್ಗದ ನಾಯಕರಲ್ಲ. ಇಡೀ ದೇಶದ ಜನ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕ ಸಮುದಾಯಗಳು ಬಾಬಾ ಸಾಹೇಬರು ಬರೆದ ಸಂವಿಧಾನ ಆಶಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ತಳಸಮುದಾಯಗಳಲ್ಲಿ ಜಾಗೃತಿ ಮತ್ತು ಎಚ್ಚರಿಕೆ ಹೆಚ್ಚು ಹೆಚ್ಚು ಆಗುತ್ತಿರುವುದು ಸಂತೋಷದ ಸಂಗತಿ. ಇಷ್ಟೆಲ್ಲ ಆದರೂ ಈ ಸಂಘಪರಿವಾರ ನೇತೃತ್ವದ ಸರ್ಕಾರ ಪಂಚೇಂದ್ರಿಗಳನ್ನು ಕಳೆದುಕೊಂಡು ಮೌನವಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ವಿಚಾರ. ಕನಿಷ್ಠ ಈ ಘಟನೆಗೆ ವಿಷಾದವನ್ನಾದರೂ  ವ್ಯಕ್ತಪಡಿಸಬಹುದಿತ್ತು. ಯಾವ್ಯಾವುದಕ್ಕೋ ಇವರು ಪ್ರತಿಕ್ರಿಯೆ ನೀಡುತ್ತಾರೆ. ಆದರೆ ಈ ವಿಚಾರದಲ್ಲಿ ಸರ್ಕಾರದ ಜಾತಿವಾದಿ ನೀತಿ ಬಹಿರಂಗವಾಗಿದೆ ಎಂದು ದೂರಿದರು.

ನ್ಯಾಯಾಧೀಶರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವರ್ಗಾವಣೆ ಶಿಕ್ಷೆಯಲ್ಲ. ಶಿಕ್ಷೆಯಾಗಬೇಕು ಎಂಬುದು ಬಹುದೊಡ್ಡ ಬೇಡಿಕೆ. ಸರ್ಕಾರ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದರೂ ನ್ಯಾಯಾಧೀಶರು ಅಂಬೇಡ್ಕರ್‌ ಫೋಟೋ ತೆಗೆಸಿದ್ದಾರೆ. ಶೋಷಿತ ಸಮುದಾಯದವರು ನ್ಯಾಯಾಂಗದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ನ್ಯಾಯಾಂಗದಲ್ಲಿ ತಳಸಮುದಾಯಗಳಿಗೆ ಪಾಲುದಾರಿಕೆ ಬೇಕಾಗಿದೆ ಎಂದರು.

ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆ ಹೆದರಿದ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಫೋಟೋ ಇಡಲು ಸೂಚಿಸಿದೆ. ಇಷ್ಟೇ ಅಲ್ಲದೆ ಬೇರೆ ದಿನಗಳಲ್ಲಿಯೂ ನ್ಯಾಯಾಲಯದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಇಡಬೇಕು. ಹೈಕೋರ್ಟ್ ಆದೇಶ ತಿದ್ದುಪಡಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

‘ಅರಾಜಕತೆಯೇ ಸಂಘಪರಿವಾರದ ಉದ್ದೇಶ’

ಅನೇಕ ಸಮಸ್ಯೆಗಳು ಜೀವಂತವಾಗಿವೆ. ಈ ಸರ್ಕಾರ, ಸಂಘಪರಿವಾರಕ್ಕೆ ಇದ್ಯಾವುದೂ ಬೇಕಾಗಿಲ್ಲ. ಬೇಕಾಗಿರುವುದು ಹಿಜಾಬ್ ವಿವಾದ ಮಾತ್ರ. ತಮ್ಮ ಧಾರ್ಮಿಕ ಹಕ್ಕುಗಳಿಗೆ ಅನುಸಾರವಾಗಿ ಹಿಜಾಬ್ ಧರಿಸಿ ಹೆಣ್ಣುಮಕ್ಕಳು ಶಾಲಾ, ಕಾಲೇಜುಗಳಿಗೆ ಹೋಗುತ್ತಿದ್ದರು. ಇದನ್ನು ದೊಡ್ಡದಾಗಿ ವಿವಾದ ಮಾಡಲಾಗಿದೆ. ಈ ವೈದಿಕರು, ಮನುವಾದಿ ಸಂತತಿಯವರು ದೇಶವನ್ನು ನೆಮ್ಮದಿಯಾಗಿ ಇಡಲು ಬಿಡುವುದಿಲ್ಲ. ದೇಶವನ್ನು ಅರಾಜಕ ಸ್ಥಿತಿಯಲ್ಲಿ ಇಡಬೇಕು ಎಂಬುದು ಸಂಘ ಪರಿವಾರದ ಪಿತೂರಿ. ಮುಂದಿನ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಬೇಕಿದೆ ಎಂದು ಮಾವಳ್ಳಿ ಶಂಕರ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಎಲ್ಲ ಅಂಬೇಡ್ಕರ್‌, ಪರಿಯಾರ್‌ ವಾದಿಗಳು ನೀಲಿ ಶಾಲು ಧರಿಸಿ ಇಲ್ಲಿ ಸೇರಿದ್ದೇವೆ. ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯ ಎಂದರೆ ಏನೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಿರ್ಲಕ್ಷ್ಯದ ಸರ್ಕಾರವಿದೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್ ಪಕ್ಷಗಳು ಈ ಹೋರಾಟದ ಪರ ನಿಲ್ಲಲಿಲ್ಲ” ಎಂದು ದೂರಿದರು.

ಮಲ್ಲಿಕಾರ್ಜುನಗೌಡರಂಥವರು ಕಣ್ಣಿಗೆ ಕಾಣುವ ಶತ್ರುಗಳು. ಆದರೆ ಎಲ್ಲ ಪಕ್ಷಗಳು ಬಾಬಾ ಸಾಹೇಬರ ಫೋಟೋ ಮಾತ್ರ ಹಾಕಿಕೊಂಡು ನಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಇವರು ಬಹಳ ಅಪಾಯಕಾರಿ ಶತ್ರುಗಳು. ಅವರ ವಿರುದ್ಧವೂ ನಾವು ನಿಂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ನಾವು ನೀಲಿ ಶಾಲುಗಳು: ಚೇತನ್‌

“ನಾವು ಹಿಂದೂ ಅಲ್ಲ, ಮುಸಲ್ಮಾನರೂ ಅಲ್ಲ. ನಾವು ಸಮಾನತಾ ವಾದಿಗಳು. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಈಗ ದೊಡ್ಡ ವಿವಾದ ನಡೆಯುತ್ತಿದೆ. ನಾವು ಕೇಸರಿ ಶಾಲೂ ಅಲ್ಲ, ಹಿಜಾಬೂ ಅಲ್ಲ. ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯದ ಮೂಲೆಮೂಲೆಗೂ ಹರಡುತ್ತಿದೆ” ಎಂದು ಚೇತನ್ ತಿಳಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಉರಿಲಿಂಗಿಪೆದ್ದಿ ಮಠದ  ಜ್ಞಾನಪ್ರಕಾಶ್ ಸ್ವಾಮೀಜಿ, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...