Homeಕರ್ನಾಟಕ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸಲು ಆಗ್ರಹಿಸಿ ಬೆಂಗಳೂರಿನಲ್ಲಿ ಶನಿವಾರ "ಹೈಕೋರ್ಟ್ ಹಾಗೂ ವಿಧಾನಸೌಧ ಚಲೋ" ನಡೆಯಿತು.

- Advertisement -
- Advertisement -

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ‘ವಿಧಾನಸೌಧ ಹಾಗೂ ಹೈಕೋರ್ಟ್ ಚಲೋ’ದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಲಾಯಿತು.

ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್‌ ರ್‍ಯಾಲಿ ಇಂದು ನಡೆಯಿತು.

ರಾಜ್ಯದ ಮೂಲೆ ಮೂಲೆಯಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಸೇರಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌ ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಗಿದ್ದವು. ದೂರದ ಊರುಗಳಿಂದ ಜಿಲ್ಲೆಗಳಿಂದ ನೂರಾರು ವಾಹನಗಳನ್ನು ಮಾಡಿಕೊಂಡು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ರೈಲ್ವೆ ನಿಲ್ದಾಣದಿಂದ ಫ್ರಿಡಂ ಪಾರ್ಕ್‌ವರೆಗೆ ಸಾವಿರಾರು ಜನರು ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಜೈಭೀಮ್ ಘೋಷಣೆ ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತಾ ಮೆರವಣಿಗೆಯನ್ನು ಮುನ್ನಡೆಸಿದರು.

ಮೆರವಣಿಗೆ ವೇಳೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಹೋರಾಟಗಾರ ಮಾವಳ್ಳಿ ಶಂಕರ್‌, ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಬಾಬಾ ಅಂಬೇಡ್ಕರ್‌ರವರಿಗೆ ಕಿಂಚಿತ್ತು ಅಪಮಾನವಾದರೂ ಈ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂಬುದನ್ನು ಈ ನಾಡಿಗೆ ತೋರಿಸಿಕೊಡಲಾಗಿದೆ ಎಂದರು.

ಇದನ್ನೂ ಓದಿರಿ: ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಬಾಬಾ ಸಾಹೇಬರು ಯಾವುದೋ ಒಂದು ಜಾತಿ ವರ್ಗದ ನಾಯಕರಲ್ಲ. ಇಡೀ ದೇಶದ ಜನ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕ ಸಮುದಾಯಗಳು ಬಾಬಾ ಸಾಹೇಬರು ಬರೆದ ಸಂವಿಧಾನ ಆಶಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ತಳಸಮುದಾಯಗಳಲ್ಲಿ ಜಾಗೃತಿ ಮತ್ತು ಎಚ್ಚರಿಕೆ ಹೆಚ್ಚು ಹೆಚ್ಚು ಆಗುತ್ತಿರುವುದು ಸಂತೋಷದ ಸಂಗತಿ. ಇಷ್ಟೆಲ್ಲ ಆದರೂ ಈ ಸಂಘಪರಿವಾರ ನೇತೃತ್ವದ ಸರ್ಕಾರ ಪಂಚೇಂದ್ರಿಗಳನ್ನು ಕಳೆದುಕೊಂಡು ಮೌನವಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ವಿಚಾರ. ಕನಿಷ್ಠ ಈ ಘಟನೆಗೆ ವಿಷಾದವನ್ನಾದರೂ  ವ್ಯಕ್ತಪಡಿಸಬಹುದಿತ್ತು. ಯಾವ್ಯಾವುದಕ್ಕೋ ಇವರು ಪ್ರತಿಕ್ರಿಯೆ ನೀಡುತ್ತಾರೆ. ಆದರೆ ಈ ವಿಚಾರದಲ್ಲಿ ಸರ್ಕಾರದ ಜಾತಿವಾದಿ ನೀತಿ ಬಹಿರಂಗವಾಗಿದೆ ಎಂದು ದೂರಿದರು.

ನ್ಯಾಯಾಧೀಶರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ವರ್ಗಾವಣೆ ಶಿಕ್ಷೆಯಲ್ಲ. ಶಿಕ್ಷೆಯಾಗಬೇಕು ಎಂಬುದು ಬಹುದೊಡ್ಡ ಬೇಡಿಕೆ. ಸರ್ಕಾರ ಅನೇಕ ಸುತ್ತೋಲೆಗಳನ್ನು ಹೊರಡಿಸಿದ್ದರೂ ನ್ಯಾಯಾಧೀಶರು ಅಂಬೇಡ್ಕರ್‌ ಫೋಟೋ ತೆಗೆಸಿದ್ದಾರೆ. ಶೋಷಿತ ಸಮುದಾಯದವರು ನ್ಯಾಯಾಂಗದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ನ್ಯಾಯಾಂಗದಲ್ಲಿ ತಳಸಮುದಾಯಗಳಿಗೆ ಪಾಲುದಾರಿಕೆ ಬೇಕಾಗಿದೆ ಎಂದರು.

ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆ ಹೆದರಿದ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಫೋಟೋ ಇಡಲು ಸೂಚಿಸಿದೆ. ಇಷ್ಟೇ ಅಲ್ಲದೆ ಬೇರೆ ದಿನಗಳಲ್ಲಿಯೂ ನ್ಯಾಯಾಲಯದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಇಡಬೇಕು. ಹೈಕೋರ್ಟ್ ಆದೇಶ ತಿದ್ದುಪಡಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

‘ಅರಾಜಕತೆಯೇ ಸಂಘಪರಿವಾರದ ಉದ್ದೇಶ’

ಅನೇಕ ಸಮಸ್ಯೆಗಳು ಜೀವಂತವಾಗಿವೆ. ಈ ಸರ್ಕಾರ, ಸಂಘಪರಿವಾರಕ್ಕೆ ಇದ್ಯಾವುದೂ ಬೇಕಾಗಿಲ್ಲ. ಬೇಕಾಗಿರುವುದು ಹಿಜಾಬ್ ವಿವಾದ ಮಾತ್ರ. ತಮ್ಮ ಧಾರ್ಮಿಕ ಹಕ್ಕುಗಳಿಗೆ ಅನುಸಾರವಾಗಿ ಹಿಜಾಬ್ ಧರಿಸಿ ಹೆಣ್ಣುಮಕ್ಕಳು ಶಾಲಾ, ಕಾಲೇಜುಗಳಿಗೆ ಹೋಗುತ್ತಿದ್ದರು. ಇದನ್ನು ದೊಡ್ಡದಾಗಿ ವಿವಾದ ಮಾಡಲಾಗಿದೆ. ಈ ವೈದಿಕರು, ಮನುವಾದಿ ಸಂತತಿಯವರು ದೇಶವನ್ನು ನೆಮ್ಮದಿಯಾಗಿ ಇಡಲು ಬಿಡುವುದಿಲ್ಲ. ದೇಶವನ್ನು ಅರಾಜಕ ಸ್ಥಿತಿಯಲ್ಲಿ ಇಡಬೇಕು ಎಂಬುದು ಸಂಘ ಪರಿವಾರದ ಪಿತೂರಿ. ಮುಂದಿನ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಬೇಕಿದೆ ಎಂದು ಮಾವಳ್ಳಿ ಶಂಕರ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಎಲ್ಲ ಅಂಬೇಡ್ಕರ್‌, ಪರಿಯಾರ್‌ ವಾದಿಗಳು ನೀಲಿ ಶಾಲು ಧರಿಸಿ ಇಲ್ಲಿ ಸೇರಿದ್ದೇವೆ. ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯ ಎಂದರೆ ಏನೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಿರ್ಲಕ್ಷ್ಯದ ಸರ್ಕಾರವಿದೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್ ಪಕ್ಷಗಳು ಈ ಹೋರಾಟದ ಪರ ನಿಲ್ಲಲಿಲ್ಲ” ಎಂದು ದೂರಿದರು.

ಮಲ್ಲಿಕಾರ್ಜುನಗೌಡರಂಥವರು ಕಣ್ಣಿಗೆ ಕಾಣುವ ಶತ್ರುಗಳು. ಆದರೆ ಎಲ್ಲ ಪಕ್ಷಗಳು ಬಾಬಾ ಸಾಹೇಬರ ಫೋಟೋ ಮಾತ್ರ ಹಾಕಿಕೊಂಡು ನಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಇವರು ಬಹಳ ಅಪಾಯಕಾರಿ ಶತ್ರುಗಳು. ಅವರ ವಿರುದ್ಧವೂ ನಾವು ನಿಂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ನಾವು ನೀಲಿ ಶಾಲುಗಳು: ಚೇತನ್‌

“ನಾವು ಹಿಂದೂ ಅಲ್ಲ, ಮುಸಲ್ಮಾನರೂ ಅಲ್ಲ. ನಾವು ಸಮಾನತಾ ವಾದಿಗಳು. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಈಗ ದೊಡ್ಡ ವಿವಾದ ನಡೆಯುತ್ತಿದೆ. ನಾವು ಕೇಸರಿ ಶಾಲೂ ಅಲ್ಲ, ಹಿಜಾಬೂ ಅಲ್ಲ. ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯದ ಮೂಲೆಮೂಲೆಗೂ ಹರಡುತ್ತಿದೆ” ಎಂದು ಚೇತನ್ ತಿಳಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಉರಿಲಿಂಗಿಪೆದ್ದಿ ಮಠದ  ಜ್ಞಾನಪ್ರಕಾಶ್ ಸ್ವಾಮೀಜಿ, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನ್ಯಾಯಮೂರ್ತಿ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಬೇಕು.

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...