Homeಕರ್ನಾಟಕಹಿಜಾಬ್‌-ಕೇಸರಿ ಶಾಲು ವಿವಾದ: ಸಾಮರಸ್ಯಕ್ಕೆ ಧರ್ಮಗುರುಗಳ ಕರೆ

ಹಿಜಾಬ್‌-ಕೇಸರಿ ಶಾಲು ವಿವಾದ: ಸಾಮರಸ್ಯಕ್ಕೆ ಧರ್ಮಗುರುಗಳ ಕರೆ

ವಿದ್ಯೆ ಇಲ್ಲವಾದರೆ ಜೀವನ ನಾಶವಾಗುತ್ತದೆ. ವಿದ್ಯೆಗೆ ಅಡಚಣೆಯಾಗದಂತಹ ವಾತಾವರಣ ನಿರ್ಮಿಸಬೇಕು: ಮುರುಘ ಶರಣರು

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ನ್ಯಾಯಾಲಯದಲ್ಲಿ ಇದ್ದು, ಎಲ್ಲರೂ ಕೋಮು ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂದು ಧರ್ಮಗುರುಗಳು ಕರೆ ನೀಡಿದರು.

ಶನಿವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಧರ್ಮಗುರುಗಳು, ಎಲ್ಲರೂ ಸಾಮರಸ್ಯದಿಂದ ಬಾಳಬೇಕು. ಕೋರ್ಟ್ ತೀರ್ಪು ಏನೇ ಬಂದರೂ ಅದನ್ನು ಪಾಲಿಸಬೇಕು ಎಂದು ಆಶಿಸಿದರು.

ಮುರುಘ ರಾಜೇಂದ್ರ ಮಠದ ಡಾ.ಶಿವಮೂರ್ತಿ ಮುರುಘ ಶರಣರು ಮಾತನಾಡಿ, ‘‘ಸಮಾಜ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಎಲ್ಲ ಧರ್ಮದಲ್ಲೂ ಧಾರ್ಮಿಕ ಮುಖಂಡರಿದ್ದಾರೆ. ನಾವು ಸಮಾಜಕ್ಕೆ ಶಾಂತಿ ರವಾನೆ ಸಾರಬೇಕಾಗಿದೆ. ಇವತ್ತು ಸಾಮಾಜಿಕ ಸಾಮರಸ್ಯ ಎಲ್ಲರಿಗೂ ಬೇಕಾಗಿದೆ. ಸಾಮಾಜಿಕ ಶಾಂತಿಗಾಗಿ ಎಲ್ಲರೂ ಕೈಜೋಡಿಸಬೇಕಾಗಿದೆ. ಸಮವಸ್ತ್ರ, ವಸ್ತ್ರ ಸಂಹಿತೆ ಎಲ್ಲರ ನೆಮ್ಮದಿ ಕೆಡಿಸಿದೆ. ನಾವೆಲ್ಲ ಶಾಂತಿ, ಸಾಮರಸ್ಯದ ಪರವಾಗಿದ್ದೇವೆ” ಎಂದರು.

“ಈಗ ಎದ್ದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಸದ್ಯ ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದೆ. ಕೋರ್ಟ್ ಹೇಳಿದಂತೆ ನಾವೆಲ್ಲ ಕೇಳಬೇಕಾಗಿದೆ. ಅದಕ್ಕೂ ಮುನ್ನ ಶಾಂತಿ ನೆಮ್ಮದಿ ಬೇಕಾದರೆ ಸದ್ಯಕ್ಕೆ ಸಾಮರಸ್ಯ ಕಾಯಬೇಕಾಗಿದೆ’’ ಎಂದು ತಿಳಿಸಿದರು.

“ವಿದ್ಯೆ ಇಲ್ಲವಾದರೆ ಜೀವನ ನಾಶವಾಗುತ್ತದೆ. ವಿದ್ಯೆಗೆ ಅಡಚಣೆಯಾಗದಂತಹ ವಾತಾವರಣ ನಿರ್ಮಿಸಬೇಕು. ನ್ಯಾಯಾಲಯದಿಂದ ಸ್ಪಷ್ಟ ಆದೇಶ ಬರುವವರೆಗೂ ನಾವು ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದರು.

ಕೊರೋನಾ ನಿರ್ಗದತ್ತ ಸಮಸ್ಯೆಯಾದರೆ, ಹಿಜಾಬ್-ಕೇಸರಿ ಶಾಲು ವಿವಾದ ಮಾನವ ನಿರ್ಮಿತ ಸಮಸ್ಯೆಯಾಗಿದೆ. ಇವರೆರಡರ ನಡುವೆಯಲ್ಲಿ ನಾವು ವೀಕ್ಷಕರಾಗಿದ್ದೇವೆ. ಈ ಪರಿಸ್ಥಿತಿಯಲ್ಲಿ ಸಾಮರಸ್ಯ ಮೂಡಿಸುವುದು ಮುಖ್ಯವಾಗಿದೆ. ಹಾಗಾಗಿ ಸಭೆಯನ್ನು ಆಯೋಜಿಸಿ ಚರ್ಚೆ ಮಾಡುತ್ತಿದ್ದೇವೆ. ಹಾಗೆಯೇ ರಾಜಕೀಯ ಪಕ್ಷಗಳು ಸಾಮಾನ್ಯ ಸಭೆಯೊಂದನ್ನು ಆಯೋಜಿಸಿ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಆಲ್‌‌ ಇಂಡಿಯಾ ಮಿಲ್ಲಿ ಕೌನ್ಸಿಲ್‌ನ ಮೌಲಾನಾ ಸುಲೇಮಾನ್ ಖಾನ್ ಮಾತನಾಡಿ, ‘‘ಶಾಂತಿಗಿಂತ ಯಾವುದು ದೊಡ್ಡದಲ್ಲ. ವಿವಿಧತೆಯಲ್ಲಿ ಏಕತೆ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲ ಧರ್ಮದವರು ಸೌರ್ಹಾದತೆಯಿಂದ ನಡೆದುಕೊಳ್ಳುತ್ತೇವೆ. ದರ್ಗಾಕ್ಕೆ ಹಿಂದೂಗಳು ಹೋಗಿ ಪ್ರದಕ್ಷಿಣೆ ಹಾಕುತ್ತಾರೆ. ಹಾಗೆಯೇ ಬೆಂಗಳೂರು ಕರಗದಲ್ಲಿ ಮುಸ್ಲಿಮರು ಪಾಲ್ಗೊಳ್ಳುತ್ತಾರೆ” ಎಂದು ಸ್ಮರಿಸಿದರು.

ಹಿಜಾಬ್‌ ದೊಡ್ಡ ಸಮಸ್ಯೆಯಾಗಿ ಬೆಳೆಯದಂತೆ ರಾಜಕೀಯ ವ್ಯಕ್ತಿಗಳು ನೋಡಿಕೊಳ್ಳಬೇಕು ಎಂದು ಮನವಿ ಮಾಡುತ್ತೇವೆ. ಹಿಜಾಬ್‌‌ ಸಂಬಂಧ ಅಂತಿಮವಾದ ತೀರ್ಪು ಬಂದಿಲ್ಲ. ಮಧ್ಯಂತರ ತೀರ್ಪು ಮಾತ್ರ ಬಂದಿದೆ. ಕೋರ್ಟ್ ಮಧ್ಯಂತರ ತೀರ್ಪು ಬಗ್ಗೆ ಸ್ಪಷ್ಟವಾಗಿ ತಿಳಿಯಿರಿ. ಪೋಷಕರು, ಶಿಕ್ಷಕರು, ಮಕ್ಕಳು, ಉಪನ್ಯಾಸಕರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ತೀರ್ಪನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಸುನ್ನಿ ಜಮಾಯಾತ್ ಕರ್ನಾಟಕದ ಅಧ್ಯಕ್ಯ ಮೌಲಾನ ಶಬ್ಬೀರ್ ಹಾಶ್ಮಿಪೀಠ ಮಾತನಾಡಿ, “ಹಿಜಾಬ್‌ ಇತ್ತೀಚಿನಿಂದ ಧರಿಸುತ್ತಿರುವ ವಸ್ತ್ರವಲ್ಲ. ಇದನ್ನು ತಿಳಿಯದೆ ಕೋಮು ಸಾಮರಸ್ಯ ಕದಡಲಾಗುತ್ತಿದೆ. ಶಿಕ್ಷಣವು ಮುಖ್ಯವಾಗಿದ್ದು, ಧರ್ಮದ ಹೆಸರಿನಲ್ಲಿ ಅದನ್ನು ಹಾಳು ಮಾಡುವುದು ಸರಿಯಲ್ಲ. ಸರ್ವಧರ್ಮ ಸಾಮರಸ್ಯವನ್ನು ಸ್ಥಾಪಿಸುವುದು ಸರಕಾರದ ಮೊದಲ ಕರ್ತವ್ಯ” ಎಂದು ಹೇಳಿದರು.

ಬೆಂಗಳೂರು ಸಿಟಿ ಮಾರ್ಕೆಟ್ ಜಾಮಿಯಾ ಮಸೀದಿಯ ಮೌಲಾನ ಮಕ್ಸೂದ್ ಇಮ್ರಾನ್ ಸಾಹೇಬ್ ಮಾತನಾಡಿ, “ಕೋವಿಡ್‌ನಿಂದ ಕೆಂಗೆಟ್ಟಿದ್ದ ಶೈಕ್ಷಣಿಕ ವ್ಯವಸ್ಥೆ ಮತ್ತೊಮ್ಮೆ ಹಿಜಾಬ್-ಕೇಸರಿ ಶಾಲು ವಿವಾದದಿಂದ ಹಾಳಾಗಿದೆ. ಇಸ್ಲಾಂನಲ್ಲಿ ಯಾವುದಕ್ಕೂ ಬಲವಂತ ಎಂಬುದು ಇಲ್ಲ, ಬದಲಾಗಿ ಮಕ್ಕಳಿಗೆ ಒಳ್ಳೆಯ ದಾರಿಯನ್ನು ತೋರಿಸುತ್ತೇವೆ. ಇದನ್ನು ದಿಕ್ಕರಿಸಿದರೆ, ಅವರ ಇಷ್ಟಕ್ಕೂ ಅವಕಾಶ ನೀಡುತ್ತೇವೆ” ಎಂದರು.

“ಹೆಣ್ಣುಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಬರುವುದರಲ್ಲಿ ಯಾವುದೇ ರಾಜಕೀಯ ಪಕ್ಷಗಳ ಒತ್ತಡವಾಗಲೀ, ಹಿರಿಯರ ಬಲವಂತವಾಗಲೀ ಇಲ್ಲ” ಎಂದು ಸ್ಪಷ್ಟಪಡಿಸಿದ ಅವರು, “ಇಷ್ಟು ದಿನ ಇಲ್ಲದ ವಿವಾದ ಈಗ ಸೃಷ್ಟಿಯಾಗಿದೆ. ಇವೆಲ್ಲದರ ಕುರಿತು, ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ಹೈಕೋರ್ಟ್ ಮಧ್ಯಂತರ ಆದೇಶದ ಕುರಿತು ‌ಉಂಟಾಗಿರುವ ಗೊಂದಲದ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು” ಎಂದು ಆಗ್ರಹಿಸಿದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಡಾ.ಬಿ.ಆರ್‌.ಅಂಬೇಡ್ಕರ್‌ ರವರು ರಚಿಸಿರುವ ಸಂವಿಧಾನದಲ್ಲಿ ಎಲ್ಲ ವಿಚಾರಗಳಿಗೂ ಸೂಕ್ತ ಪರಿಹಾರಗಳಿವೆ. ಸರ್ವಧರ್ಮಗಳ ದೇಶದಲ್ಲಿ ಜಾತಿ ಕಲಹ ಉಂಟಾಗಬಾರದು. ಸಂವಿಧಾನದ ಮೂಲಭೂತ ಹಕ್ಕಾದ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗಬಾರದು” ಎಂದು ಎಚ್ಚರಿಸಿದರು.

ನಾಸೆ ಫೌಂಡೇಷನ್‌ ಅಧ್ಯಕ್ಷ ಮೌಲಾನ ಶಬ್ಬೀರ್ ನಖ್ವೀ ಮಾತನಾಡಿ, “ರಾಜ್ಯದಲ್ಲಿ ಶಾಂತಿಯನ್ನು ಕದಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ತೊಂದರೆಗೆ ಸಿಲುಕಿಸಲಾಗಿದೆ. ಸಂವಿಧಾನದ ಅಡಿಯಲ್ಲೇ ಎಲ್ಲರೂ ನಡೆದುಕೊಳ್ಳಬೇಕು. ಆದರೆ ಅನಗತ್ಯವಾಗಿ ವಿವಾದವನ್ನು ಸೃಷ್ಟಿ ಮಾಡಲಾಗುತ್ತಿದೆ” ಎಂದು ವಿಷಾದಿಸಿದರು.

ಮಾದರ ಚೆನ್ನಯ್ಯ ಸ್ವಾಮೀಜಿ, ಫಾದರ್‌ ವಿವಿಯನ್ ಮೂನಿಸ್, ರಾಜ್ಯಸಭಾ ಸದಸ್ಯರಾದ ಸೈಯದ್ ನಾಸಿರ್ ಹುಸೇನ್ ಹಾಜರಿದ್ದರು.


ಇದನ್ನೂ ಓದಿರಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...