Homeಕರ್ನಾಟಕಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

- Advertisement -
- Advertisement -

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ.

ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಟಿ20 ಮತ್ತು ಟೆಸ್ಟ್ ಉಪನಾಯಕರನ್ನಾಗಿ ನೇಮಿಸಿದೆ. ಆದರೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

“ಇಬ್ಬರನ್ನೂ ಕೈಬಿಡುವ ನಿರ್ಣಯವನ್ನು ತೆಗೆದುಕೊಳ್ಳುವ ಮೊದಲು ನಾವು ದೀರ್ಘವಾಗಿ ಯೋಚಿಸಿದ್ದೇವೆ. ಅಲ್ಲದೆ, ಇದಕ್ಕೂ ಮೊದಲೇ ಅವರೊಂದಿಗೆ ಮಾತನಾಡಿದ್ದೇವೆ. ಅವರು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಭಾಗವಾಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ. ಈ ನಿರ್ಧಾರವು ಕೇವಲ ಈ ಟೆಸ್ಟ್‌ಗಳಿಗೆ ಮಾತ್ರ. ಮುಂದಿನ ಸರಣಿಗಳಲ್ಲಿ ಅವರು ತಂಡದ ಭಾಗವಾಗಿರುತ್ತಾರೆ”ಎಂದು ಚೇತನ್ ಶರ್ಮಾ ಹೇಳಿದ್ದಾರೆ.

“ಇಬ್ಬರು ಆಟಗಾರರೂ ಭಾರತ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರು ಯಾವಾಗಬೇಕಾದರೂ ತಂಡಕ್ಕೆ ಮರಳಬಹುದು. ಇದು ಗ್ರಾಫ್ನಂತೆ, ರಹಾನೆ ನಿನ್ನೆ (ರಣಜಿ ಟ್ರೋಫಿ) ಶತಕ ಬಾರಿಸಿದ್ದರು. ಅವರನ್ನು ಕೈಬಿಟ್ಟಿರುವುದು ನಿರ್ವಹಣೆಯ ಪ್ರಕ್ರಿಯೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

“ಸದ್ಯಕ್ಕೆ, ಎರಡು ಟೆಸ್ಟ್‌ಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಡುವೆ, ಬದಲಾವಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಗಮನಿಸುತ್ತೇವೆ. ನಾವು ಯಾರಿಗೂ ಸಂಪೂರ್ಣವಾಗಿ ಬಾಗಿಲು ಮುಚ್ಚುವವರಲ್ಲ. ಇದು ಕ್ರಿಕೆಟ್, ಇಲ್ಲಿ ಕಾರ್ಯಕ್ಷಮತೆ ಮುಖ್ಯ. ಈಗ ಅವರು ರಣಜಿ ಟ್ರೋಫಿ ಆಡುವುದನ್ನು ಆಯ್ಕೆ ಸಮಿತಿ ವೀಕ್ಷಿಸುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

“ಯಾವ ಆಧಾರದ ಮೇಲೆ ಅವರನ್ನು ಕೈಬಿಡಲಾಗಿದೆ ಎಂದು ನಾನು ನಿಮಗೆ ಹೇಳಲಾರೆ. ಅದು ಆಯ್ಕೆಗಾರರಿಗೆ ಬಿಟ್ಟ ವಿಷಯವಾಗಿದೆ. ನಾನು ನಿಮಗೆ ಹೇಳುವುದು ಇಷ್ಟೇ, ಅವರಿಗೆ ಮೊದಲೇ ಹೇಳಲಾಗಿತ್ತು ಮತ್ತು ಭಾರತ ತಂಡಕ್ಕೆ ಮೆಟ್ಟಿಲಾಗಿರುವ ರಣಜಿ ಟ್ರೋಫಿಯನ್ನು ಆಡುವಂತೆ ಕೇಳಲಾಯಿತು. ನಾವು ನಮ್ಮ ನಡುವೆ ಏನು ಚರ್ಚಿಸಿದ್ದೇವೆ ಎಂಬುದನ್ನು ನಾವು ನಿಮಗೆ ಹೇಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರಿಗೆ ಶರ್ಮಾ ಹೇಳಿದ್ದಾರೆ.

“ರಹಾನೆ ಈ ಮೊದಲು ರಣಜಿ ಆಡಿಲ್ಲ. ರಣಜಿ ಆಡುವುದು ಮುಖ್ಯ. ಇಲ್ಲದಿದ್ದರೆ, ನೀವು ಪಂದ್ಯಕ್ಕೆ ಸಿದ್ಧರಾಗಿದ್ದೀರಿ ಎಂದು ನಮಗೆ ಹೇಗೆ ತಿಳಿಯುತ್ತದೆ? ನಾವು ವಯಸ್ಸನ್ನು ನೋಡುತ್ತಿಲ್ಲ. ಯುವಕರು ಹೊರಗೆ ಕುಳಿತ್ತಿದ್ದಾರೆ. ಆ ಯುವಕರಿಗೆ ಅವಕಾಶ ಕೊಡೋಣ ಎಂದುಕೊಂಡೆವು”ಎಂದು ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ಆರ್ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಜೆ ಬುಮ್ರಾ (ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿರಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

T20I ತಂಡ: ರೋಹಿತ್ ಶರ್ಮಾ (c) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (wk), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (vc), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಎಂಡಿ ಸಿರಾಜ್, ಸಂಜು ಸ್ಯಾಮ್ಸನ್ (wk), ರವೀಂದ್ರ ಜಡೇಜಾ, ವೈ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಸರಣಿ ವೇಳಾಪಟ್ಟಿ

ಟಿ20 ಸರಣಿ: 1 ನೇ T20I: ಫೆಬ್ರವರಿ 24 – ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

2ನೇ T20I: ಫೆಬ್ರವರಿ 26 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

3 ನೇ T20I: ಫೆಬ್ರವರಿ 27 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಟೆಸ್ಟ್ ಸರಣಿ: 1 ನೇ ಟೆಸ್ಟ್: ಮಾರ್ಚ್ 4 ರಿಂದ ಮಾರ್ಚ್ 8 – ಮೊಹಾಲಿ

2 ನೇ ಟೆಸ್ಟ್: ಮಾರ್ಚ್ 12 ರಿಂದ ಮಾರ್ಚ್ 16 – ಬೆಂಗಳೂರು


ಇದನ್ನೂ ಓದಿರಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...