Homeಕರ್ನಾಟಕವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ವಜಾಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

- Advertisement -
- Advertisement -

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌- ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಗಿದ್ದವು. ನೂರಾರು ವಾಹನಗಳನ್ನು ಮಾಡಿಕೊಂಡು ದೂರದ ಜಿಲ್ಲೆಗಳಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಜೈಭೀಮ್ ಘೋಷಣೆಗಳು ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು, ನೀಲಿ ಟೋಪಿಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತ ಮೆರವಣಿಗೆಯನ್ನು ಮುನ್ನಡೆಸಿದರು. ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು.

“ಕೋರ್ಟ್ ಸಭಾಂಗಣದಲ್ಲಿಯೇ ಅಂಬೇಡ್ಕರ್‌ ಭಾವಚಿತ್ರ ಇರುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು. ನ್ಯಾಯಾಲಯದಲ್ಲಿ ಮೀಸಲಾತಿ ಕಡ್ಡಾಯ ಮಾಡಬೇಕು. ಹುಮನಾಬಾದ್ ತಹಸೀಲ್ದಾರ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಲಾಯಿತು.

ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಅಂಬೇಡ್ಕರ್‌ ಹಾಗೂ ಸಂವಿಧಾನವನ್ನು ಅವಮಾನಿಸುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇದೆ. ಮಲ್ಲಿಕಾರ್ಜುನಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.

ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, “ಅಂಬೇಡ್ಕರ್‌ ಹೆಸರಲ್ಲಿ ಗೆದ್ದ ಅನೇಕರು ಮನುವಾದಿಗಳಾಗಿದ್ದಾರೆ. ಈ ಹಿಂದೆಯೂ ಅಂಬೇಡ್ಕರ್‌ರವರಿಗೆ ಅವಮಾನ ಮಾಡಿರುವ ಘಟನೆಗಳು ನಡೆದಿವೆ” ಎಂದು ಬೇಸರ ವ್ಯಕ್ತಪಡಿಸಿದರು.

ಮೆರವಣಿಗೆ ವೇಳೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಿರಿಯ ದಲಿತ ಹೋರಾಟಗಾರ ಮಾವಳ್ಳಿ ಶಂಕರ್‌, “ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಬಾಬಾ ಅಂಬೇಡ್ಕರ್‌ರವರಿಗೆ ಕಿಂಚಿತ್ತು ಅಪಮಾನವಾದರೂ ಈ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂಬುದನ್ನು ಈ ನಾಡಿಗೆ ತೋರಿಸಿಕೊಡಲಾಗಿದೆ” ಎಂದರು.

ಇದನ್ನೂ ಓದಿರಿ: ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಬಾಬಾ ಸಾಹೇಬರು ಯಾವುದೋ ಒಂದು ಜಾತಿ ವರ್ಗದ ನಾಯಕರಲ್ಲ. ಇಡೀ ದೇಶದ ಜನ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕ ಸಮುದಾಯಗಳು ಬಾಬಾ ಸಾಹೇಬರು ಬರೆದ ಸಂವಿಧಾನ ಆಶಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆ ಹೆದರಿದ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಫೋಟೋ ಇಡಲು ಸೂಚಿಸಿದೆ. ಇಷ್ಟೇ ಅಲ್ಲದೆ ಬೇರೆ ದಿನಗಳಲ್ಲಿಯೂ ನ್ಯಾಯಾಲಯದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು. ಹೈಕೋರ್ಟ್ ಆದೇಶ ತಿದ್ದುಪಡಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

‘ಅರಾಜಕತೆಯೇ ಸಂಘಪರಿವಾರದ ಉದ್ದೇಶ’

ಅನೇಕ ಸಮಸ್ಯೆಗಳು ಜೀವಂತವಾಗಿವೆ. ಈ ಸರ್ಕಾರ, ಸಂಘಪರಿವಾರಕ್ಕೆ ಇದ್ಯಾವುದೂ ಬೇಕಾಗಿಲ್ಲ. ಬೇಕಾಗಿರುವುದು ಹಿಜಾಬ್ ವಿವಾದ ಮಾತ್ರ. ತಮ್ಮ ಧಾರ್ಮಿಕ ಹಕ್ಕುಗಳಿಗೆ ಅನುಸಾರವಾಗಿ ಹಿಜಾಬ್ ಧರಿಸಿ ಹೆಣ್ಣುಮಕ್ಕಳು ಶಾಲಾ, ಕಾಲೇಜುಗಳಿಗೆ ಹೋಗುತ್ತಿದ್ದರು. ಇದನ್ನು ದೊಡ್ಡದಾಗಿ ವಿವಾದ ಮಾಡಲಾಗಿದೆ. ಈ ವೈದಿಕರು, ಮನುವಾದಿ ಸಂತತಿಯವರು ದೇಶವನ್ನು ನೆಮ್ಮದಿಯಾಗಿ ಇಡಲು ಬಿಡುವುದಿಲ್ಲ. ದೇಶವನ್ನು ಅರಾಜಕ ಸ್ಥಿತಿಯಲ್ಲಿ ಇಡಬೇಕು ಎಂಬುದು ಸಂಘ ಪರಿವಾರದ ಪಿತೂರಿ. ಮುಂದಿನ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಬೇಕಿದೆ ಎಂದು ಮಾವಳ್ಳಿ ಶಂಕರ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಎಲ್ಲ ಅಂಬೇಡ್ಕರ್‌, ಪೆರಿಯಾರ್‌ ವಾದಿಗಳು ನೀಲಿ ಶಾಲು ಧರಿಸಿ ಇಲ್ಲಿ ಸೇರಿದ್ದೇವೆ. ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯ ಎಂದರೆ ಏನೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಿರ್ಲಕ್ಷ್ಯದ ಸರ್ಕಾರವಿದೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್ ಪಕ್ಷಗಳು ಈ ಹೋರಾಟದ ಪರ ನಿಲ್ಲಲಿಲ್ಲ” ಎಂದು ದೂರಿದರು.

ಮಲ್ಲಿಕಾರ್ಜುನಗೌಡರಂಥವರು ಕಣ್ಣಿಗೆ ಕಾಣುವ ಶತ್ರುಗಳು. ಆದರೆ ಎಲ್ಲ ಪಕ್ಷಗಳು ಬಾಬಾ ಸಾಹೇಬರ ಫೋಟೋ ಮಾತ್ರ ಹಾಕಿಕೊಂಡು ನಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಇವರು ಬಹಳ ಅಪಾಯಕಾರಿ ಶತ್ರುಗಳು. ಅವರ ವಿರುದ್ಧವೂ ನಾವು ನಿಂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ನಾವು ನೀಲಿ ಶಾಲುಗಳು: ಚೇತನ್‌

“ನಾವು ಹಿಂದೂ ಅಲ್ಲ, ಮುಸಲ್ಮಾನರೂ ಅಲ್ಲ. ನಾವು ಸಮಾನತಾ ವಾದಿಗಳು. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಈಗ ದೊಡ್ಡ ವಿವಾದ ನಡೆಯುತ್ತಿದೆ. ನಾವು ಕೇಸರಿ ಶಾಲೂ ಅಲ್ಲ, ಹಿಜಾಬೂ ಅಲ್ಲ. ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯದ ಮೂಲೆಮೂಲೆಗೂ ಹರಡುತ್ತಿದೆ” ಎಂದು ಚೇತನ್ ತಿಳಿಸಿದರು.

ಸಿಎಂ ಸ್ಥಳಕ್ಕೆ ಭೇಟಿ: ಭರವಸೆ

ಪ್ರತಿಭಟನಾ ಸ್ಥಳಕ್ಕೆ (ಫ್ರೀಡಂ ಪಾರ್ಕ್‌)  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ, ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಹೋರಾಟಗಾರರ ಮನವಿ ಪತ್ರವನ್ನು ಸಿಎಂ ಸ್ವೀಕರಿಸಿದರು. ಜೊತೆಗೆ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ಖಂಡಿಸಿದರು.

“ಅಂಬೇಡ್ಕರ್‌ ಫೋಟೋ ತೆರವು ಮಾಡಿಸಿ ಅವಮಾನ ಮಾಡಿದ ಘಟನೆಯು ನಮಗೂ ಕಣ್ಣು ತೆರೆಸಿದೆ. ಘಟನೆ ಸಂಬಂಧ ದಲಿತ ಸಮುದಾಯಗಳ ಮುಖಂಡರು ನನಗೆ ವಿವರಿಸಿದ್ದಾರೆ. ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗುವುದು” ಎಂದು ತಿಳಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಹೋರಾಟದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...