Homeಕರ್ನಾಟಕವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ವಜಾಕ್ಕೆ ಒತ್ತಾಯಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

- Advertisement -
- Advertisement -

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ವಿಧಾನಸೌಧ ಹಾಗೂ ಹೈಕೋರ್ಟ್ ಚಲೋದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವಜಾಗೊಳಿಸುವಂತೆ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಮಲ್ಲಿಕಾರ್ಜುನಗೌಡ ಅವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋವನ್ನು ಗಣರಾಜ್ಯೋತ್ಸವ ದಿನದಂದು ತೆರವುಗೊಳಿಸಿ ಧ್ವಜಾರೋಹಣ ಮಾಡಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

ರಾಜ್ಯದ ಮೂಲೆ ಮೂಲೆಗಳಿಂದ ಸಾಗರೋಪಾದಿಯಲ್ಲಿ ಅಂಬೇಡ್ಕರ್‌ ಅನುಯಾಯಿಗಳು ಆಗಮಿಸಿದ್ದರು. ದಲಿತ ವಿದ್ಯಾರ್ಥಿ ಪರಿಷತ್‌, ಎಸ್‌ಡಿಪಿಐ, ಬಿಎಸ್‌ಪಿ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಭಾರತೀಯ ದಲಿತ ಫ್ಯಾಂಥರ್‌- ಹೀಗೆ ಹಲವು ಸಂಘಟನೆಗಳು ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಭಾಗವಾಗಿದ್ದವು. ನೂರಾರು ವಾಹನಗಳನ್ನು ಮಾಡಿಕೊಂಡು ದೂರದ ಜಿಲ್ಲೆಗಳಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸಿದ್ದರು.

ಕೇಂದ್ರ ರೈಲ್ವೆ ನಿಲ್ದಾಣದಿಂದ ಪ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಜೈಭೀಮ್ ಘೋಷಣೆಗಳು ಮೊಳಗಿತು. ನೀಲಿ ಭಾವುಟ, ನೀಲಿ ಶಾಲುಗಳು, ನೀಲಿ ಟೋಪಿಗಳು ರಾರಾಜಿಸಿದವು. ಕಲಾವಿದರು ವಾದ್ಯ ನುಡಿಸುತ್ತ ಮೆರವಣಿಗೆಯನ್ನು ಮುನ್ನಡೆಸಿದರು. ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು.

“ಕೋರ್ಟ್ ಸಭಾಂಗಣದಲ್ಲಿಯೇ ಅಂಬೇಡ್ಕರ್‌ ಭಾವಚಿತ್ರ ಇರುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಬೇಕು. ನ್ಯಾಯಾಲಯದಲ್ಲಿ ಮೀಸಲಾತಿ ಕಡ್ಡಾಯ ಮಾಡಬೇಕು. ಹುಮನಾಬಾದ್ ತಹಸೀಲ್ದಾರ್‌ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಲಾಯಿತು.

ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, “ಅಂಬೇಡ್ಕರ್‌ ಹಾಗೂ ಸಂವಿಧಾನವನ್ನು ಅವಮಾನಿಸುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವೇ ಇದೆ. ಮಲ್ಲಿಕಾರ್ಜುನಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸದಿದ್ದರೆ ಹೋರಾಟ ತೀವ್ರಗೊಳ್ಳಲಿದೆ” ಎಂದು ಎಚ್ಚರಿಸಿದರು.

ಬಿಎಸ್‌ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, “ಅಂಬೇಡ್ಕರ್‌ ಹೆಸರಲ್ಲಿ ಗೆದ್ದ ಅನೇಕರು ಮನುವಾದಿಗಳಾಗಿದ್ದಾರೆ. ಈ ಹಿಂದೆಯೂ ಅಂಬೇಡ್ಕರ್‌ರವರಿಗೆ ಅವಮಾನ ಮಾಡಿರುವ ಘಟನೆಗಳು ನಡೆದಿವೆ” ಎಂದು ಬೇಸರ ವ್ಯಕ್ತಪಡಿಸಿದರು.

ಮೆರವಣಿಗೆ ವೇಳೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಹಿರಿಯ ದಲಿತ ಹೋರಾಟಗಾರ ಮಾವಳ್ಳಿ ಶಂಕರ್‌, “ಮಲ್ಲಿಕಾರ್ಜುನ ಗೌಡ ಅವರನ್ನು ನ್ಯಾಯಮೂರ್ತಿ ಎನ್ನುತ್ತಾರೆ. ಆದರೆ ಅವರ ಒಳಗಡೆ ಇರುವುದು ಜಾತಿವಾದಿ ಮನಸ್ಸು. ಬಸವಣ್ಣ ಹಾಗೂ ಕುವೆಂಪು ಅವರ ನಾಡಿನಲ್ಲಿ ಇಂತಹ ಜಾತಿವಾದಿ ಮನಸ್ಸುಗಳು ನ್ಯಾಯಸ್ಥಾನದಲ್ಲಿ ಕುಳಿತಿರುವುದು ಅತ್ಯಂತ ಅಪಮಾನಕರ ಸಂಗತಿ. ಬಾಬಾ ಅಂಬೇಡ್ಕರ್‌ರವರಿಗೆ ಕಿಂಚಿತ್ತು ಅಪಮಾನವಾದರೂ ಈ ಶೋಷಿತ ಸಮುದಾಯಗಳು ಸುಮ್ಮನಿರುವುದಿಲ್ಲ ಎಂಬುದನ್ನು ಈ ನಾಡಿಗೆ ತೋರಿಸಿಕೊಡಲಾಗಿದೆ” ಎಂದರು.

ಇದನ್ನೂ ಓದಿರಿ: ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ಬಾಬಾ ಸಾಹೇಬರು ಯಾವುದೋ ಒಂದು ಜಾತಿ ವರ್ಗದ ನಾಯಕರಲ್ಲ. ಇಡೀ ದೇಶದ ಜನ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಬಗ್ಗೆ ಮಾತನಾಡುತ್ತಿದ್ದಾರೆ. ಅನೇಕ ಸಮುದಾಯಗಳು ಬಾಬಾ ಸಾಹೇಬರು ಬರೆದ ಸಂವಿಧಾನ ಆಶಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಇದು ಒಂದು ಒಳ್ಳೆಯ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ಬಾಬಾ ಸಾಹೇಬರು ಸಮಾನತೆ, ಭ್ರಾತೃತ್ವದ ಸಂಕೇತ. ಎಲ್ಲ ನ್ಯಾಯಾಲಯಗಳಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕು. ಪ್ರತಿಭಟನೆಗೆ ಹೆದರಿದ ಹೈಕೋರ್ಟ್ ರಾಷ್ಟ್ರೀಯ ಹಬ್ಬಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್‌ ಫೋಟೋ ಇಡಲು ಸೂಚಿಸಿದೆ. ಇಷ್ಟೇ ಅಲ್ಲದೆ ಬೇರೆ ದಿನಗಳಲ್ಲಿಯೂ ನ್ಯಾಯಾಲಯದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು. ಹೈಕೋರ್ಟ್ ಆದೇಶ ತಿದ್ದುಪಡಿಯಾಗಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

‘ಅರಾಜಕತೆಯೇ ಸಂಘಪರಿವಾರದ ಉದ್ದೇಶ’

ಅನೇಕ ಸಮಸ್ಯೆಗಳು ಜೀವಂತವಾಗಿವೆ. ಈ ಸರ್ಕಾರ, ಸಂಘಪರಿವಾರಕ್ಕೆ ಇದ್ಯಾವುದೂ ಬೇಕಾಗಿಲ್ಲ. ಬೇಕಾಗಿರುವುದು ಹಿಜಾಬ್ ವಿವಾದ ಮಾತ್ರ. ತಮ್ಮ ಧಾರ್ಮಿಕ ಹಕ್ಕುಗಳಿಗೆ ಅನುಸಾರವಾಗಿ ಹಿಜಾಬ್ ಧರಿಸಿ ಹೆಣ್ಣುಮಕ್ಕಳು ಶಾಲಾ, ಕಾಲೇಜುಗಳಿಗೆ ಹೋಗುತ್ತಿದ್ದರು. ಇದನ್ನು ದೊಡ್ಡದಾಗಿ ವಿವಾದ ಮಾಡಲಾಗಿದೆ. ಈ ವೈದಿಕರು, ಮನುವಾದಿ ಸಂತತಿಯವರು ದೇಶವನ್ನು ನೆಮ್ಮದಿಯಾಗಿ ಇಡಲು ಬಿಡುವುದಿಲ್ಲ. ದೇಶವನ್ನು ಅರಾಜಕ ಸ್ಥಿತಿಯಲ್ಲಿ ಇಡಬೇಕು ಎಂಬುದು ಸಂಘ ಪರಿವಾರದ ಪಿತೂರಿ. ಮುಂದಿನ ಚುನಾವಣೆಯಲ್ಲಿ ಸರಿಯಾದ ಪಾಠವನ್ನು ಕಲಿಸಬೇಕಿದೆ ಎಂದು ಮಾವಳ್ಳಿ ಶಂಕರ್‌ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ನಟ, ಹೋರಾಟಗಾರ ಚೇತನ್‌ ಅಹಿಂಸಾ, “ಎಲ್ಲ ಅಂಬೇಡ್ಕರ್‌, ಪೆರಿಯಾರ್‌ ವಾದಿಗಳು ನೀಲಿ ಶಾಲು ಧರಿಸಿ ಇಲ್ಲಿ ಸೇರಿದ್ದೇವೆ. ಮಲ್ಲಿಕಾರ್ಜುನ ಗೌಡ ಅವರಿಗೆ ನ್ಯಾಯ ಎಂದರೆ ಏನೆಂದು ಗೊತ್ತಿಲ್ಲ. ರಾಜ್ಯದಲ್ಲಿ ನಿರ್ಲಕ್ಷ್ಯದ ಸರ್ಕಾರವಿದೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್ ಪಕ್ಷಗಳು ಈ ಹೋರಾಟದ ಪರ ನಿಲ್ಲಲಿಲ್ಲ” ಎಂದು ದೂರಿದರು.

ಮಲ್ಲಿಕಾರ್ಜುನಗೌಡರಂಥವರು ಕಣ್ಣಿಗೆ ಕಾಣುವ ಶತ್ರುಗಳು. ಆದರೆ ಎಲ್ಲ ಪಕ್ಷಗಳು ಬಾಬಾ ಸಾಹೇಬರ ಫೋಟೋ ಮಾತ್ರ ಹಾಕಿಕೊಂಡು ನಮ್ಮನ್ನು ದಿಕ್ಕು ತಪ್ಪಿಸುತ್ತಿವೆ. ಇವರು ಬಹಳ ಅಪಾಯಕಾರಿ ಶತ್ರುಗಳು. ಅವರ ವಿರುದ್ಧವೂ ನಾವು ನಿಂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ನಾವು ನೀಲಿ ಶಾಲುಗಳು: ಚೇತನ್‌

“ನಾವು ಹಿಂದೂ ಅಲ್ಲ, ಮುಸಲ್ಮಾನರೂ ಅಲ್ಲ. ನಾವು ಸಮಾನತಾ ವಾದಿಗಳು. ನಾವು ಬಿಜೆಪಿಯೂ ಅಲ್ಲ, ಕಾಂಗ್ರೆಸ್ಸೂ ಅಲ್ಲ. ನಾವು ಪರ್ಯಾಯ ಶಕ್ತಿಗಳು. ಈಗ ದೊಡ್ಡ ವಿವಾದ ನಡೆಯುತ್ತಿದೆ. ನಾವು ಕೇಸರಿ ಶಾಲೂ ಅಲ್ಲ, ಹಿಜಾಬೂ ಅಲ್ಲ. ನಾವು ನೀಲಿ ಶಾಲುಗಳು. ಬದಲಾವಣೆಯೇ ಪರ್ಯಾಯವಾಗಿದೆ. ಈ ಘೋಷಣೆ ರಾಜ್ಯದ ಮೂಲೆಮೂಲೆಗೂ ಹರಡುತ್ತಿದೆ” ಎಂದು ಚೇತನ್ ತಿಳಿಸಿದರು.

ಸಿಎಂ ಸ್ಥಳಕ್ಕೆ ಭೇಟಿ: ಭರವಸೆ

ಪ್ರತಿಭಟನಾ ಸ್ಥಳಕ್ಕೆ (ಫ್ರೀಡಂ ಪಾರ್ಕ್‌)  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ, ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಹೋರಾಟಗಾರರ ಮನವಿ ಪತ್ರವನ್ನು ಸಿಎಂ ಸ್ವೀಕರಿಸಿದರು. ಜೊತೆಗೆ ಮಲ್ಲಿಕಾರ್ಜುನ ಗೌಡ ಅವರ ನಡೆಯನ್ನು ಖಂಡಿಸಿದರು.

“ಅಂಬೇಡ್ಕರ್‌ ಫೋಟೋ ತೆರವು ಮಾಡಿಸಿ ಅವಮಾನ ಮಾಡಿದ ಘಟನೆಯು ನಮಗೂ ಕಣ್ಣು ತೆರೆಸಿದೆ. ಘಟನೆ ಸಂಬಂಧ ದಲಿತ ಸಮುದಾಯಗಳ ಮುಖಂಡರು ನನಗೆ ವಿವರಿಸಿದ್ದಾರೆ. ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗುವುದು” ಎಂದು ತಿಳಿಸಿದರು.

ಚಿಂತಕ ಯೋಗೇಶ್‌ ಮಾಸ್ಟರ್‌, ಹ.ರಾ.ಮಹೇಶ್‌, ಹರಿರಾಮ್‌, ಬಿ.ಆರ್‌.ಭಾಸ್ಕರ್‌ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಹೋರಾಟದಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...