Homeಮುಖಪುಟಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

ಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವು ಪುಣೇರಿ ಪಲ್ಟನ್ ವಿರುದ್ಧ 7 ಅಂಕಗಳ ಅಂತರದಿಂದ ಸೋಲುವುದರೊಂದಿಗೆ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ಲೇಆಫ್ ಸ್ಥಾನ ಖಚಿತವಾಗಿದೆ. ಈಗಾಗಲೇ ಬೆಂಗಳೂರು ಜೊತೆಗೆ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ.

ಪ್ಲೇ-ಆಫ್‌ ನ ಉಳಿದ ಎರಡು ಸ್ಥಾನಕ್ಕಾಗಿ ಪುಣೇರಿ ಪಲ್ಟನ್ (66 ಅಂಕ), ಜೈಪುರ್ ಪಿಂಕ್ ಪ್ಯಾಂಥರ್ಸ್(63 ಅಂಕ), ಹರಿಯಾಣ ಸ್ಟೀಲರ್ಸ್(63 ಅಂಕ), ಗುಜರಾತ್ ಜೈಂಟ್ಸ್ (62 ಅಂಕ) ಸೇರಿ ನಾಲ್ಕು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ನಾಲ್ಕು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ), ಬೆಂಗಳೂರು ಬುಲ್ಸ್ (66 ಅಂಕ) ಗಳೊಂದಿಗೆ ಈಗಾಗಲೇ ಪ್ಲೇ-ಆಫ್ ತಲುಪಿವೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ 

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣ ಹೊರಬೀಳುವ ಆತಂಕದಲ್ಲಿರುತ್ತದೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...