Homeಮುಖಪುಟಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

ಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವು ಪುಣೇರಿ ಪಲ್ಟನ್ ವಿರುದ್ಧ 7 ಅಂಕಗಳ ಅಂತರದಿಂದ ಸೋಲುವುದರೊಂದಿಗೆ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ಲೇಆಫ್ ಸ್ಥಾನ ಖಚಿತವಾಗಿದೆ. ಈಗಾಗಲೇ ಬೆಂಗಳೂರು ಜೊತೆಗೆ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ.

ಪ್ಲೇ-ಆಫ್‌ ನ ಉಳಿದ ಎರಡು ಸ್ಥಾನಕ್ಕಾಗಿ ಪುಣೇರಿ ಪಲ್ಟನ್ (66 ಅಂಕ), ಜೈಪುರ್ ಪಿಂಕ್ ಪ್ಯಾಂಥರ್ಸ್(63 ಅಂಕ), ಹರಿಯಾಣ ಸ್ಟೀಲರ್ಸ್(63 ಅಂಕ), ಗುಜರಾತ್ ಜೈಂಟ್ಸ್ (62 ಅಂಕ) ಸೇರಿ ನಾಲ್ಕು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ನಾಲ್ಕು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ), ಬೆಂಗಳೂರು ಬುಲ್ಸ್ (66 ಅಂಕ) ಗಳೊಂದಿಗೆ ಈಗಾಗಲೇ ಪ್ಲೇ-ಆಫ್ ತಲುಪಿವೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ 

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣ ಹೊರಬೀಳುವ ಆತಂಕದಲ್ಲಿರುತ್ತದೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...