Homeಮುಖಪುಟಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

ಜೈಪುರ್ ಪಿಂಕ್ ಪ್ಯಾಂಥರ್ಸ್‌ಗೆ ಸೋಲು: ಪ್ಲೇಆಫ್ ಹಂತ ತಲುಪಿದ ಬೆಂಗಳೂರು ಬುಲ್ಸ್

- Advertisement -
- Advertisement -

ಪ್ರೊ ಕಬಡ್ಡಿ ಲೀಗ್‌ ಹಂತದ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡವು ಪುಣೇರಿ ಪಲ್ಟನ್ ವಿರುದ್ಧ 7 ಅಂಕಗಳ ಅಂತರದಿಂದ ಸೋಲುವುದರೊಂದಿಗೆ ಬೆಂಗಳೂರು ಬುಲ್ಸ್ ತಂಡಕ್ಕೆ ಪ್ಲೇಆಫ್ ಸ್ಥಾನ ಖಚಿತವಾಗಿದೆ. ಈಗಾಗಲೇ ಬೆಂಗಳೂರು ಜೊತೆಗೆ ಪಟ್ನಾ ಪೈರೇಟ್ಸ್, ದಬಾಂಗ್ ಡೆಲ್ಲಿ ಮತ್ತು ಯು.ಪಿ ಯೋಧ ತಂಡಗಳು ಪ್ಲೇ-ಆಫ್‌ ಪ್ರವೇಶಿಸಿವೆ. ತೆಲುಗು ಟೈಟನ್ಸ್, ಬೆಂಗಾಲ್ ವಾರಿಯರ್ಸ್, ಯು ಮುಂಬಾ ಮತ್ತು ತಮಿಳು ತಲೈವಾಸ್ ತಂಡಗಳು ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿವೆ.

ಪ್ಲೇ-ಆಫ್‌ ನ ಉಳಿದ ಎರಡು ಸ್ಥಾನಕ್ಕಾಗಿ ಪುಣೇರಿ ಪಲ್ಟನ್ (66 ಅಂಕ), ಜೈಪುರ್ ಪಿಂಕ್ ಪ್ಯಾಂಥರ್ಸ್(63 ಅಂಕ), ಹರಿಯಾಣ ಸ್ಟೀಲರ್ಸ್(63 ಅಂಕ), ಗುಜರಾತ್ ಜೈಂಟ್ಸ್ (62 ಅಂಕ) ಸೇರಿ ನಾಲ್ಕು ತಂಡಗಳು ಪೈಪೋಟಿ ನಡೆಸುತ್ತಿವೆ.

ಅಂಕಪಟ್ಟಿ ಲೆಕ್ಕಾಚಾರ

ಕಬಡ್ಡಿ ಅಂಕಪಟ್ಟಿಯ ಮೊದಲ ನಾಲ್ಕು ಸ್ಥಾನದಲ್ಲಿರುವ ಪಾಟ್ನಾ ಪೈರೇಟ್ಸ್ (81 ಅಂಕ) ದಬಾಂಗ್ ಡೆಲ್ಲಿ(75 ಅಂಕ) ಮತ್ತು ಯುಪಿ ಯೋಧ (68 ಅಂಕ), ಬೆಂಗಳೂರು ಬುಲ್ಸ್ (66 ಅಂಕ) ಗಳೊಂದಿಗೆ ಈಗಾಗಲೇ ಪ್ಲೇ-ಆಫ್ ತಲುಪಿವೆ.

ಎರಡನೇ ಪಂದ್ಯ: ಗುಜರಾತ್ ಜೈಂಟ್ಸ್ v/s ಯು ಮುಂಬಾ 

ಗುಜರಾತ್ ಜೈಂಟ್ಸ್ 62 ಅಂಕ ಗಳಿಸಿದೆ. ಆದರೆ ಯು ಮುಂಬಾ ರೇಸ್‌ನಿಂದ ಹೊರಹೋಗಿದ್ದು ಕೊನೆಯ ಔಪಚಾರಿಕ ಲೀಗ್ ಪಂದ್ಯ ಆಡುತ್ತಿದೆ. ಇಲ್ಲಿ ಗುಜರಾತ್ ಅನ್ನು ಯು ಮುಂಬಾ ಮಣಿಸಿದರೆ ಗುಜರಾತ್ ಸಹ ಸ್ಪರ್ಧೆಯಿಂದ ಹೊರಗುಳಿಯುತ್ತದೆ.

ಮೂರನೇ ಪಂದ್ಯ: ಪಟ್ನಾ ಪೈರೇಟ್ಸ್ v/s ಹರ್ಯಾಣ ಸ್ಟೀಲರ್ಸ್

ಪಟ್ನಾ ಪೈರೇಟ್ಸ್ ಈಗಾಗಲೇ ಪ್ಲೆ ಆಫ್ ಪ್ರವೇಶಿಸಿ ಅಗ್ರಸ್ಥಾನದಲ್ಲಿಗೆ. ಮೊದಲ ಸ್ಥಾನದಲ್ಲಿರುವ ಕಾರಣ ನೇರವಾಗಿ ಸೆಮಿಫೈನಲ್ ತಲುಪಿದೆ. ಅದು ತನ್ನ ಕೊನೆಯ ಪಂದ್ಯವನ್ನು 63 ಅಂಕಗಳನ್ನು ಗಳಿಸಿರುವ  ಹರ್ಯಾಣ ಸ್ಟೀಲರ್ಸ್ ಎದರು ಆಡಲಿದೆ. ಇಲ್ಲಿ ಪಟ್ನಾ ಗೆದ್ದರೆ ಹರಿಯಾಣ ಹೊರಬೀಳುವ ಆತಂಕದಲ್ಲಿರುತ್ತದೆ.

ಪ್ಲೇಆಫ್ ಪಂದ್ಯಾವಳಿ

ಪ್ಲೇಆಫ್‌ನ ಮೊದಲೆರಡು ಸ್ಥಾನದಲ್ಲಿರುವ ಪಟ್ನಾ ಮತ್ತು ಡೆಲ್ಲಿ ನೇರವಾಗಿ ಸೆಮಿಫೈನಲ್ ತಲುಪಲಿವೆ. ಫೆಬ್ರವರಿ 21 ರಂದು 3 v/s 6 ನೇ ಸ್ಥಾನದ ತಂಡಗಳು ಮತ್ತು 4 v/s5 ನೇ ಸ್ಥಾನದ ತಂಡಗಳು ಎಲಿಮಿನೇಟರ್ ಪಂದ್ಯಗಳನ್ನು ಆಡಲಿವೆ. ಅಲ್ಲಿ ಗೆದ್ದವರು ಫೆಬ್ರವರಿ 23 ರಂದು ಸೆಮಿಫೈನಲ್‌ನಲ್ಲಿ ಸೆಣಸಲಿವೆ. ಫೆಬ್ರವರಿ 25 ರಂದು ಫೈನಲ್ ಪಂದ್ಯ ನಡೆಯಲಿದೆ.


ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ 2023: ಎಚ್.ಡಿ ಕುಮಾರಸ್ವಾಮಿ V/S ಯೋಗೇಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...