Homeಕರ್ನಾಟಕಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

ಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

- Advertisement -
- Advertisement -

ಮಡಿಕೇರಿ: ಶಾಲಾ ಕಾಲೇಜುಗಳ ಮಕ್ಕಳಿಗೆ ಕೇಸರಿ ಶಲ್ಯ ವಿತರಿಸುತ್ತಿರುವ ವೀಡಿಯೋ ವೈರಲ್ ಆಗಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಕೋಮು ಪ್ರಚೋದನೆಯನ್ನು ಮಾಡಿರುವುದೂ ವಿಡಿಯೊದಲ್ಲಿ ದಾಖಲಾಗಿದೆ.

ಸಿದ್ದಾಪುರ ಸಮೀಪದ ಅಭ್ಯತ್ ಮಂಗಲದಲ್ಲಿ ಬಜರಂಗದಳ ಮತ್ತು ದುರ್ಗಾವಾಹಿನಿಯ ಮುಖಂಡರು ಸೇರಿ ಕೇಸರಿ ಶಲ್ಯ ವಿತರಿಸಿದ್ದಾರೆ ಎಂದು ತಿಳಿದುಬಂದಿದೆ.

“ಸದ್ಯಕ್ಕೆ ಯೂನಿಫಾರ್ಮ್ ಫೋಲೋ ಮಾಡಿ, ಏನೂ ಮಾಡಬೇಡಿ… ಮಧ್ಯಂತರ ಆದೇಶ ಇದೆ. ಶಲ್ಯವನ್ನು ಬ್ಯಾಗೊಳಗೆ ಇಡ್ಕೊಳಿ… ಬ್ಯಾಗೊಳಗೂ ಬೇಡ… ಮನೆಯಲ್ಲಿ ಇಡ್ಕೊಳಿ” ಎಂದು ದುರ್ಗಾವಾಹಿನಿಯ ಮಹಿಳಾ ಪ್ರತಿನಿಧಿಯೊಬ್ಬರು ಹೇಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿರಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ಪುಟ್ಟ ಮಕ್ಕಳು ಸೇರಿದಂತೆ ವಿದ್ಯಾರ್ಥಿ ಸಮುದಾಯದಲ್ಲಿ ಕೋಮು ವೈರತ್ವವನ್ನು ಪ್ರಚೋದಿಸಿರುವ ಬಜರಂಗದಳ ಹಾಗೂ ದುರ್ಗಾವಾಹಿನಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಿಜಾಬ್‌ ಧರಿಸಿ ಬರುತ್ತಿದ್ದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸಿದ ಬಳಿಕ ವಿವಾದ ಮುನ್ನೆಲೆಗೆ ಬಂದಿತ್ತು. ಹಿಜಾಬ್‌ ಮೊದಲಿನಿಂದಲೂ ಧರಿಸಲಾಗುತ್ತಿತ್ತು. ಆದರೆ ಕೇಸರಿ ಶಾಲನ್ನು ಹಿಜಾಬ್‌ ವಿರೋಧಿಯಾಗಿ ಬಳಸಿ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳು ಆರಂಭಿಸಿದರು. ಇದರ ಹಿಂದೆ ಕೇಸರಿ ಸಂಘಟನೆಗಳ ಪ್ರಚೋದನೆ ಇತ್ತೆಂಬುದಕ್ಕೆ ಈಗಾಗಲೇ ಹಲವು ವರದಿಗಳು ಸಾಕ್ಷಿಯಾಗಿವೆ.

ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲು ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಪ್ರಚೋದಿಸಿದ್ದವು. ಕೇಸರಿ ಶಾಲು ಹಾಗೂ ಕೇಸರಿ ಪೇಟವನ್ನು ಹಿಂಜಾವೇ ವಿತರಿಸಿತ್ತು ಎಂಬುದನ್ನು ‘ದಿ ನ್ಯೂಸ್ ಮಿನಿಟ್‌’ ಜಾಲತಾಣ ವರದಿ ಮಾಡಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)

ಮಡಿಕೇರಿಯ ಫೀಲ್ಡ್‌ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹೋಗುವಂತೆ ಬಿಜೆಪಿ ಬೆಂಬಲಿತ ಹಿಂದುತ್ವ ಮುಖಂಡರು ಪ್ರಚೋದನೆ ಮಾಡುತ್ತಿರುವ ವಿಡಿಯೊ ವೈರಲ್ ಆಗಿತ್ತು. (ವರದಿಯನ್ನು ‘ಇಲ್ಲಿ’ ಓದಿರಿ)


ಇದನ್ನೂ ಓದಿರಿ: ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶವನ್ನು ಹರಾಜಿಗೆ ಚಾಲನೆ ನೀಡಿ ಯುವ ಶಕ್ತಿಯ ಬಿಸಿ ಆಲೋಚನೆಗಳನ್ನು ದಿಕ್ಕ ತಪಸುತ್ತಿರುವ ಸನಾತನಿಗಳ ಮರ್ಮ ಅರ್ಥವಾಗುತ್ತದೆ.

    ಜನ ಜಾಗೃತಿ ಅಗತ್ಯ

  2. ಮಕ್ಕಳಿಗೆ ಪ್ರಸ್ತುತ ದಿನಗಳಲ್ಲಿ ಯಾವ ರೀತಿಯ ಶಿಕ್ಷಣ ನೀಡಬೇಕೆಂಬ ಉದ್ದೇಶ ಈ ನೋ ಸರ್ಕಾರಕ್ಕೆ ಇಲ್ಲ.. ಆದರೆ ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಮಾಡೊಂದು ಎಷ್ಟು ಮಟ್ಟಿಗೆ ಸರಿ. ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ಮಕ್ಕಳ ಭವಿಷ್ಯದ ಜೊತೆ ಗೆ ಆಟ ಆಡೊಂದು ಸರಿ ಅಲ್ಲ . ಕೋಮುಗಲಭೆ ಧರ್ಮಾಧಾರಿತದೂರಣೆಗಳಿಗೆ ಈ ಶಿಕ್ಷಣ ಕ್ಷೇತ್ರದಲ್ಲಿ ಅವಕಾಶ ಇಲ್ಲ. ಏನು ಗೊತ್ತಿಲ್ಲದ ಈ ಮಕ್ಕಳಿಗೆ ನೀವು ದ್ವೇಷ ಭಾವನೆ ಬಿತ್ತುವುದು ಎಷ್ಟರ ಮಟ್ಟಿಗೆ ಸರಿ…
    ಶಾಲಾ ಕಾಲೇಜುಗಳಿಗೆ ಹೋಗಿ ಕೇಸರಿ ಶಲ್ಯ ವಿತರಣೆ ಮಾಡೂ ನೀವು ನೀವೇ ಜನ್ಮಕೊಂತಹ ಮಕ್ಕಳಿಗೆ ಈ ತರ ಶಲ್ಯ ಹಾಕಿ ಬಿದಿ ಬಿದಿಗೆ ಬಿಡಿ ನೋಡೋಣ ಆ ನಿಮ್ಮ ರಕ್ತದ ತಾಕತ್ತು ಗೊತ್ತಾಗಲಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...