Homeಮುಖಪುಟವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

ವಿಧಾನಸಭೆ ಚುನಾವಣೆ: ಪಂಜಾಬ್‌ನಲ್ಲಿ ಮತದಾನ; ಯುಪಿಯಲ್ಲಿ ಅಖಿಲೇಶ್‌‌ಗೆ ಅಗ್ನಿಪರೀಕ್ಷೆ

- Advertisement -
- Advertisement -

ಹೊಸದಿಲ್ಲಿ: ಉತ್ತರ ಪ್ರದೇಶದ 16 ಜಿಲ್ಲೆಗಳಲ್ಲಿನ ಐವತ್ತೊಂಬತ್ತು ಕ್ಷೇತ್ರಗಳಲ್ಲಿ ಇಂದು ಮೂರನೇ ಹಂತದ ಮತದಾನ ಚಲಾವಣೆ ನಡೆಯಲಿದೆ. ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಎಲ್ಲ ಕ್ಷೇತ್ರಗಳ ಮತದಾನ ಇಂದು ನಡೆಯಲಿದೆ.

ಉತ್ತರ ಪ್ರದೇಶ: ಎಸ್‌ಪಿ ಭದ್ರಕೋಟೆಯಲ್ಲಿ ಮತದಾನ

ಯುಪಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಪಂಜಾಬ್‌ನಲ್ಲಿ, ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.

ಉತ್ತರ ಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸ್ಪರ್ಧಿಸುತ್ತಿರುವ ಯಾದವ್ ಕುಟುಂಬದ ಭದ್ರಕೋಟೆಯಾದ ಮೈನ್‌ಪುರಿಯಲ್ಲಿರುವ ಕರ್ಹಾಲ್ ಸ್ಥಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅಖಿಲೇಶ್‌ ವಿರುದ್ಧ ಬಿಜೆಪಿಯು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ. 1992ರಲ್ಲಿ ಪಕ್ಷ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಎಸ್‌ಪಿ ಈ ಕ್ಷೇತ್ರವನ್ನು ಕೇವಲ ಒಂದು ಬಾರಿ ಮಾತ್ರ ಸೋತಿರುವುದು ಗಮನಾರ್ಹ.

2017ರ ವಿಧಾನಸಭಾ ಚುನಾವಣೆಯಲ್ಲಿ ಈ 59 ಸ್ಥಾನಗಳಲ್ಲಿ ಬಿಜೆಪಿ 49 ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಎಲ್ಲಾ ಸ್ಥಾನಗಳನ್ನು ಕಳೆದುಕೊಂಡಿದೆ. ಇಂದು ಮತದಾನ ನಡೆಯುವ ಕ್ಷೇತ್ರಗಳು ಉತ್ತರ ಪ್ರದೇಶದ ಪಶ್ಚಿಮ, ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿವೆ.

ಪ್ರಮುಖ ಮುಖಗಳು: ಅಖಿಲೇಶ್‌ ಯಾದವ್‌ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ (ಜಸ್ವಂತ್‌ನಗರ), ಬಿಜೆಪಿಯ ಸತೀಶ್ ಮಹಾನಾ (ಕಾನ್ಪುರದ ಮಹಾರಾಜಪುರ), ರಾಮ್‌ವೀರ್ ಉಪಾಧ್ಯಾಯ (ಹತ್ರಾಸ್‌ನ ಸದಾಬಾದ್), ಅಸಿಮ್ ಅರುಣ್ (ಕನೌಜ್ ಸದರ್) ಮತ್ತು ಕಾಂಗ್ರೆಸ್‌ನ ಲೂಯಿಸ್ ಖುರ್ಷಿದ್ (ಫರೂಕಾಬಾದ್ ಸದರ್) ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಲೂಯಿಸ್ ಖುರ್ಷಿದ್ ಅವರು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಪತ್ನಿ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ದಕ್ಷಿಣ ಯುಪಿಯ ಬುಂದೇಲ್‌ಖಂಡ್ ಪ್ರದೇಶದಲ್ಲಿ, 2017 ರಲ್ಲಿ ಬಿಜೆಪಿ ಎಲ್ಲಾ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದು ಮೊದಲು BSP ಭದ್ರಕೋಟೆಯಾಗಿತ್ತು. ಇಂದು ಮತ ಚಲಾಯಿಸುವ ಮಧ್ಯ ಯುಪಿ ಕ್ಷೇತ್ರಗಳು ಎಸ್‌ಪಿ ಭದ್ರಕೋಟೆಗಳಾಗಿವೆ.

ರಾಜ್ಯದ ದೊಡ್ಡ ನಗರಗಳಲ್ಲಿ ಕಾನ್ಪುರ್ ಒಂದಾಗಿದೆ. ವ್ಯಾಪಾರ ಶಕ್ತಿ ಕೇಂದ್ರವೂ ಹೌದು. ಕಳೆದ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು.

ಪಂಜಾಬ್‌ ಹೈವೋಲ್ಟೇಜ್‌

ರೈತ ಚಳವಳಿಯ ಮೂಲಕ ಗಮನ ಸೆಳೆದಿರುವ, ಬಿಜೆಪಿಗೆ ಬಹುದೊಡ್ಡ ಹೊಡೆತ ನೀಡಿರುವ ಪಂಜಾಬ್ ರಾಜ್ಯದಲ್ಲಿ ಒಂದೇ ಹಂತದಲ್ಲಿ 117 ಕ್ಷೇತ್ರಗಳ ವಿಧಾನಸಭಾ ಚುನಾವಣೆ ನಡೆಯಲಿದೆ.

2017ರ ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆಯುವ ಮೂಲಕ ಎಸ್ಎಡಿ-ಬಿಜೆಪಿ ಒಕ್ಕೂಟದ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತ್ತು. ಎಎಪಿ 20 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಸ್‌ಎಡಿ-ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದವು. ಎರಡು ಸ್ಥಾನಗಳಲ್ಲಿ ಲೋಕ ಇನ್ಸಾಫ್ ಗೆದ್ದಿತ್ತು.

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದು, ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಆಮ್ ಆದ್ಮಿ ಪಕ್ಷವು ದೊಡ್ಡ ಪೈಪೋಟಿಯನ್ನು ನೀಡುತ್ತಿದೆ.

ಪ್ರಮುಖ ಮುಖಗಳು: ಚಮ್ಕೌರ್ ಸಾಹಿಬ್ ಕ್ಷೇತ್ರದಿಂದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಅಮೃತಸರ ಪೂರ್ವ ಕ್ಷೇತ್ರದಿಂದ ಎಸ್‌ಎಡಿಯ ಬಿಕ್ರಮ್ ಸಿಂಗ್ ಮಜಿಥಿಯಾ ವಿರುದ್ಧ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಧುರಿಯಿಂದ ಎಎಪಿಯ ಭಗವಂತ್ ಮಾನ್, ಪಟಿಯಾಲದಿಂದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಜಲಾಲಾಬಾದ್  ವಿಧಾನಸಭಾ ಕ್ಷೇತ್ರದಿಂದ ಸುಖಬೀರ್ ಸಿಂಗ್ ಬಾದಲ್, ಲಂಬಿ ಕ್ಷೇತ್ರದಿಂದ ಪ್ರಕಾಶ್ ಸಿಂಗ್ ಬಾದಲ್, ಮಜಿತಾ ಕ್ಷೇತ್ರದಿಂದ ಗನೀವ್ ಕೌರ್ ಮಜಿಥಿಯಾ ಮತ್ತು ಬಟಿಂಡಾ ಕ್ಷೇತ್ರದಿಂದ ಹರ್ಸಿಮ್ರತ್ ಕೌರ್ ಬಾದಲ್ ಸ್ಪರ್ಧಿಸಿದ್ದಾರೆ.


ಇದನ್ನೂ ಓದಿರಿ: ಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...