Homeಮುಖಪುಟನುಡಿ ನೆನಪು; ರಂಗಭೂಮಿಯ ಭಾರ್ಗವಿ ನಾರಾಯಣ್ ನೆನಪು ಸದಾ ಹಸಿರು..

ನುಡಿ ನೆನಪು; ರಂಗಭೂಮಿಯ ಭಾರ್ಗವಿ ನಾರಾಯಣ್ ನೆನಪು ಸದಾ ಹಸಿರು..

- Advertisement -
- Advertisement -

1998ರಲ್ಲಿ ನಾನು ನ್ಯಾಷನಲ್ ಕಾಲೇಜಿನ ನಾಟಕದ ಸಂಚಾಲಕನಾಗಿ ವಿದ್ಯಾರ್ಥಿಗಳಿಗೊಂದು ರಂಗತರಬೇತಿ ಕಾರ್ಯಾಗಾರವನ್ನು ನಡೆಸಿದ್ದೆ. ಆಗ ಮೇಕಪ್ ನಾಣಿ ಅವರನ್ನು ಮೇಕಪ್ ಕ್ಲಾಸ್ ಮಾಡಲು ಆಹ್ವಾನಿಸಿದ್ದೆ. ಅದೇ ಸಂದರ್ಭದಲ್ಲಿ ಶ್ರೀಮತಿ ಭಾರ್ಗವಿ ನಾರಾಯಣ್ ಅವರನ್ನೂ ತಮ್ಮ ರಂಗಭೂಮಿಯ ಅನುಭವವನ್ನು ಹಂಚಿಕೊಂಡು ನಮ್ಮ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕೆಂದು ಕೇಳಿಕೊಂಡಿದ್ದೆ. ಅದೇ ವರ್ಷ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿಯೂ ಸಂದಿತ್ತು. ಅವರು ಬಂದು ವಿದ್ಯಾರ್ಥಿಗಳೊಡನೆ ಅಮ್ಮನಂತೆ ಬೆರೆತು ಪ್ರೀತಿಯಿಂದ ಮಾತನಾಡಿದರು. ನಾಟಕಗಳಲ್ಲಿ ಹೆಣ್ಣಿನ ಪಾತ್ರಗಳನ್ನು ಗಂಡಸೇ ಮಾಡುತ್ತಿದ್ದ ಅಂದಿನ ಸಂದರ್ಭದಲ್ಲಿ ತಾವು ಕನ್ನಡ ರಂಗಭೂಮಿಯನ್ನು ಪ್ರವೇಶಿಸಿ ಹೆಣ್ಣಿನ ಪಾತ್ರವನ್ನು ನಿರ್ವಹಿಸಿದ್ದನ್ನು ಸ್ವಾರಸ್ಯಕರವಾಗಿ ಹೇಳಿ ವಿದ್ಯಾರ್ಥಿಗಳನ್ನು ಆಶ್ಚರ್ಯಗೊಳ್ಳುವಂತೆ ಮಾಡಿದ್ದರು.

ನಂತರದಲ್ಲಿ ನ್ಯಾಷನಲ್ ಕಾಲೇಜಿಗೆ ಸಂಜೆಯ ವೇಳೆ ವಿವಿಧ ನಾಟಕ ತಂಡಗಳ ನಾಟಕದ ತಾಲೀಮಿಗಾಗಿ ಬರುತ್ತಿದ್ದಾಗ ಕೆಲವೊಮ್ಮೆ ಕಂಡು ಮಾತನಾಡಿಸಿದ್ದೆ. ಅಷ್ಟೇ ನನ್ನ ಅವರ ಪರಿಚಯ ಮತ್ತು ಭೇಟಿ. ನಂತರದಲ್ಲಿ ನಾನು ಅವರನ್ನು ಕಂಡದ್ದು ಕೆಲವು ನಾಟಕಗಳಲ್ಲಿ ಮಾತ್ರ. ಅದರಲ್ಲೂ ಕಲಾಗಂಗೋತ್ರಿ ತಂಡ ಅಭಿನಯಿಸಿದ ಎರಡು ನಾಟಕಗಳು ನನಗೆ ಅವರ ನೆನಪನ್ನು ಯಾವಾಗಲೂ ಹಸಿರಾಗಿಸಿಡುತ್ತದೆ. ಒಂದು ’ಪರಹಿತ ಪಾಷಾಣ’ ಎಂಬ ನಾಟಕದಲ್ಲಿ ಯಮುನಾ ಮೂರ್ತಿಯವರೊಡನೆ ಜೋಡಿಯಾಗಿ ನಟಿಸಿದ್ದರು. ಅದರಲ್ಲಿ ಇಬ್ಬರು ಮದುವೆಯಾಗದೇ ಉಳಿದ ಹಿರಿಯ ಹೆಂಗಸರು ಮನೆಗೆ ಬಂದ ಅತಿಥಿಗಳನ್ನು ಕೊಲ್ಲುವ ಕಥೆಯುಳ್ಳ ಆ ನಾಟಕ. ಅದರಲ್ಲಿ ಅವರದು ’ಅಕ್ಕಯ್ಯಮ್ಮ’ನ ಪಾತ್ರ. ಆ ಪಾತ್ರವನ್ನು ಅವರು ನಿರ್ವಹಿಸಿದ ರೀತಿ ನನಗೆ ತುಂಬಾ ಮೆಚ್ಚುಗೆಯಾಗಿತ್ತು.

ತಣ್ಣನೆಯ ಕ್ರೌರ್ಯವನ್ನು ಮುಂದಿಡುವ ಆ ನಾಟಕದಲ್ಲಿ ಭಾರ್ಗವಿ ಅವರದು ಅಮಾಯಕತೆಯೇ ಮೈವೆತ್ತಿದಂತಹ ಪಾತ್ರ. ಹಾಸ್ಯದ ಧಾಟಿಯಲ್ಲಿ ಅತ್ಯಂತ ಸಹಜ ನಟನೆಯಲ್ಲಿ ರಂಜಿಸುತ್ತಿದ್ದರು. ಅವರು ನಾಟಕದ ಪಾತ್ರ ಎಂದು ಅಂದುಕೊಡೇ ಇಲ್ಲವೇನೋ ಎಂಬಷ್ಟು ಸಹಜವಾಗಿತ್ತು ಅವರ ರಂಗದ ಮೇಲಿನ ಓಡಾಟ. ಆ ಇಬ್ಬರು ಹಿರಿಯ ಜೀವಗಳ ನಟನಾ ಚಾತುರ್ಯವನ್ನು ಯಾರೂ ಮರೆಯಲಾರರು. ಇನ್ನೊಂದು ನಾಟಕ ಕಲಾಗಂಗೋತ್ರಿ ಅಭಿನಯಿಸಿದ ಅತ್ಯಂತ ಯಶಸ್ವೀ ನಾಟಕ ’ಮುಖ್ಯಮಂತ್ರಿ’. ಅದರಲ್ಲಿ ಅವರು ಮುಖ್ಯಮಂತ್ರಿಯವರ ಹೆಂಡತಿ ಪ್ರದ್ಯುಮ್ನಾದೇವಿಯವರ ಪಾತ್ರವನ್ನು ನಿರ್ವಹಿಸಿದ್ದರು. ಈ ಎರಡೂ ನಾಟಕಗಳ ಪಾತ್ರಗಳ ವೈವಿಧ್ಯತೆಯನ್ನು ತುಂಬಿಕೊಡುತ್ತಿದ್ದ ಭಾರ್ಗವಿ ನಾರಾಯಣ್ ಅವರು ಎಲ್ಲ ಬಗೆಯ ಗೌರವಗಳಿಗೂ ಅರ್ಹರು. ಅಂತೇ ಅವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳೂ ಲಭಿಸಿವೆ. ಒಂದು ಬಾರಿ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರೂ ಆಗಿದ್ದರು.

ಭಾರ್ಗವಿ ನಾರಾಯಣ್ ಅವರ ಸಿನೆಮಾ ನಟನೆಯ ಬಗೆಗೆ ನನಗೆ ಅಷ್ಟೇನೂ ಮೆಚ್ಚುಗೆ ಇಲ್ಲ. ಬಹುಷಃ ’ವಂಶವೃಕ್ಷ’ ಚಿತ್ರದಲ್ಲಿ ಅವರನ್ನು ನೋಡಿದಂತೆ ಇನ್ನಿತರ ಚತ್ರಗಳಲ್ಲಿ ನಾನು ಅವರನ್ನು ಕಾಣಲಿಲ್ಲ. ಇನ್ನೊಂದು ಚಿತ್ರ ಪ್ರೊಫೆಸರ್ ಹುಚ್ಚೂರಾಯ. ಇದರಲ್ಲಿ ಅವರಿಗೆ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿಯೂ ಸಂದಿದೆ. ನಾನು ನೋಡಿದ ಇತರೆ ಚಿತ್ರಗಳಲ್ಲಿ ಅವರದು ಒಂದೇ ಬಗೆಯ ನಟನೆ, ಎಲ್ಲ ಪಾತ್ರಗಳೂ ಒಂದೇ ಏನೋ ಎಂಬಂತಿರುತ್ತಿತ್ತು. ಬಹುಷಃ ಇದು ನಮ್ಮ ಚಿತ್ರರಂಗದ ಮಿತಿಯೇನೋ ಅದು! ಹೆಚ್ಚಗಿನ ಧಾರಾವಾಹಿಗಳಲ್ಲಿ ಮಧ್ಯಮವರ್ಗದ ಬ್ರಾಹ್ಮಣ ಕುಟುಂಬದ ಹೆಣ್ಣುಮಗಳ ಪಾತ್ರವನ್ನು ಮನಮುಟ್ಟುವಂತೆ ಅಭಿನಯಿಸುತ್ತಿದ್ದರು.

ಎಲ್ಲಕ್ಕಿಂತ ಹೆಚ್ಚಾಗಿ ಅವರ ರಂಗದ ಮೇಲಿನ ಚಟುವಟಿಕೆಯ ಪಾತ್ರಪೋಷಣೆ ನಮ್ಮನ್ನು ಬೆರಗುಗೊಳಿಸುತ್ತಿದ್ದುದು ನಿಜ. ಬೆಂಗಳೂರು ಆಕಾಶವಾಣಿಯ ಕಲಾವಿದೆಯಾಗಿದ್ದರು. ರೇಡಿಯೋ ನಾಟಕಗಳಲ್ಲಿ ಭಾಗವಹಿಸಿ, ಆಕಾಶವಾಣಿಗಾಗಿ ಹಲವಾರು ನಾಟಕಗಳನ್ನೂ ಬರೆದು ನಿರ್ದೇಶಿಸಿದರು. 600ಕ್ಕೂ ಹೆಚ್ಚು ನಾಟಕಗಳು, ನೂರಾರು ಸಿನೆಮಾಗಳು, ಹತ್ತಾರು ಧಾರಾವಾಹಿಗಳು, ನಿರಂತರ ರಂಗಭೂಮಿ ಮತ್ತಿತರ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ – ಈ ಎಲ್ಲವೂ ಅವರ ವೈವಿಧ್ಯಮಯ ಬದುಕಿನ ಆಯ್ಕೆಗೆ ಹಿಡಿದ ಕನ್ನಡಿಯೇ ಆಗಿದೆ. ಭಾರ್ಗವಿ ಅವರು ತಮ್ಮ ಜೀವನವನ್ನು ಕುರಿತಂತೆ ’ನಾನು ಭಾರ್ಗವಿ’ ಎಂಬ ಆತ್ಮಕಥೆಯನ್ನು ಬರೆದಿದ್ದಾರೆ. ಹಾಗೇ ’ನಾ ಕಂಡ ನಮ್ಮವರು’ ಎಂಬ ಪುಸ್ತಕವನ್ನೂ ಬರೆದಿದ್ದಾರೆ. ಡಾ. ಎಚ್.ಎನ್ ಅವರನ್ನು ಕಂಡರೆ ಅವರಿಗೆ ತುಂಬಾ ಗೌರವ. ಡಾ. ಎಚ್.ಎನ್ ಕೂಡಾ ಆಗಾಗ ನಾಣಿಯವರ ಬಗೆಗೆ ಮಾತು ಬಂದಾಗಲೆಲ್ಲ ಇವರನ್ನು ಅಕ್ಕರೆಯಿಂದ ಹಾಸ್ಯಮಯವಾಗಿ ನೆನಪಿಸಿಕೊಳ್ಳುತ್ತಿದ್ದುದನ್ನು ನಾನು ನೋಡಿದ್ದೇನೆ.

ಭಾರ್ಗವಿ ಅವರು ಕುಟುಂಬದಲ್ಲೂ ಅತ್ಯಂತ ಪ್ರಭಾವಶಾಲೀ ವ್ಯಕ್ತಿತ್ವ. ಪತಿ ಬಿ.ಎನ್.ನಾಣಿ, ಮಕ್ಕಳು ಎಲ್ಲರೂ ರಂಗಭೂಮಿ, ಕಿರುತೆರೆ, ಹಿರಿತೆರೆ ಎಲ್ಲದರಲ್ಲೂ ತುಂಬಾ ಚಟುವಟಿಕೆಯಿಂದ ನಿರಂತರವಾಗಿ ಸುದ್ದಿಯಲ್ಲಿರುವವರು. ತುಂಬು ಜೀವನವನ್ನು ಕಂಡ ಅವರು 84ನೇ ವಯಸ್ಸಿನಲ್ಲಿ ತೀರಿಕೊಂಡರು. ಅವರ ಅಗಲಿಕೆ ಸಹಜವಾಗಿಯೇ ದುಃಖ ತರುವಂಥದ್ದು. ರಂಗಭೂಮಿಯ ಹಿರಿಯರೆಲ್ಲರೂ ಒಬ್ಬೊಬ್ಬರಾಗಿ ಲೋಕವನ್ನು ಬಿಡುತ್ತಿದ್ದರೆ ಮುಂದಿನ ಯುವ ಜನಾಂಗಕ್ಕೆ ಅಗತ್ಯವಾಗಿ ಕಲೆಯ ಬದ್ಧತೆಯನ್ನು ತಿಳಿಸುವ ಅಗಣಿತ ಪ್ರೇರಣೆಯ ಕೊಂಡಿಗಳು ಕಳಚುತ್ತಾ ಬಂದಂತೆ ಎಂದೆನಿಸುತ್ತದೆ.

ಡಾ. ಹೆಚ್.ವಿ. ವೇಣುಗೋಪಾಲ್

ಡಾ. ಹೆಚ್.ವಿ. ವೇಣುಗೋಪಾಲ್
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಮತ್ತು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸಮುದಾಯ ರಂಗತಂಡದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...