Homeಮುಖಪುಟನುಡಿ ನೆನಪು; ರಂಗಭೂಮಿಯ ಭಾರ್ಗವಿ ನಾರಾಯಣ್ ನೆನಪು ಸದಾ ಹಸಿರು..

ನುಡಿ ನೆನಪು; ರಂಗಭೂಮಿಯ ಭಾರ್ಗವಿ ನಾರಾಯಣ್ ನೆನಪು ಸದಾ ಹಸಿರು..

- Advertisement -
- Advertisement -

1998ರಲ್ಲಿ ನಾನು ನ್ಯಾಷನಲ್ ಕಾಲೇಜಿನ ನಾಟಕದ ಸಂಚಾಲಕನಾಗಿ ವಿದ್ಯಾರ್ಥಿಗಳಿಗೊಂದು ರಂಗತರಬೇತಿ ಕಾರ್ಯಾಗಾರವನ್ನು ನಡೆಸಿದ್ದೆ. ಆಗ ಮೇಕಪ್ ನಾಣಿ ಅವರನ್ನು ಮೇಕಪ್ ಕ್ಲಾಸ್ ಮಾಡಲು ಆಹ್ವಾನಿಸಿದ್ದೆ. ಅದೇ ಸಂದರ್ಭದಲ್ಲಿ ಶ್ರೀಮತಿ ಭಾರ್ಗವಿ ನಾರಾಯಣ್ ಅವರನ್ನೂ ತಮ್ಮ ರಂಗಭೂಮಿಯ ಅನುಭವವನ್ನು ಹಂಚಿಕೊಂಡು ನಮ್ಮ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕೆಂದು ಕೇಳಿಕೊಂಡಿದ್ದೆ. ಅದೇ ವರ್ಷ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿಯೂ ಸಂದಿತ್ತು. ಅವರು ಬಂದು ವಿದ್ಯಾರ್ಥಿಗಳೊಡನೆ ಅಮ್ಮನಂತೆ ಬೆರೆತು ಪ್ರೀತಿಯಿಂದ ಮಾತನಾಡಿದರು. ನಾಟಕಗಳಲ್ಲಿ ಹೆಣ್ಣಿನ ಪಾತ್ರಗಳನ್ನು ಗಂಡಸೇ ಮಾಡುತ್ತಿದ್ದ ಅಂದಿನ ಸಂದರ್ಭದಲ್ಲಿ ತಾವು ಕನ್ನಡ ರಂಗಭೂಮಿಯನ್ನು ಪ್ರವೇಶಿಸಿ ಹೆಣ್ಣಿನ ಪಾತ್ರವನ್ನು ನಿರ್ವಹಿಸಿದ್ದನ್ನು ಸ್ವಾರಸ್ಯಕರವಾಗಿ ಹೇಳಿ ವಿದ್ಯಾರ್ಥಿಗಳನ್ನು ಆಶ್ಚರ್ಯಗೊಳ್ಳುವಂತೆ ಮಾಡಿದ್ದರು.

ನಂತರದಲ್ಲಿ ನ್ಯಾಷನಲ್ ಕಾಲೇಜಿಗೆ ಸಂಜೆಯ ವೇಳೆ ವಿವಿಧ ನಾಟಕ ತಂಡಗಳ ನಾಟಕದ ತಾಲೀಮಿಗಾಗಿ ಬರುತ್ತಿದ್ದಾಗ ಕೆಲವೊಮ್ಮೆ ಕಂಡು ಮಾತನಾಡಿಸಿದ್ದೆ. ಅಷ್ಟೇ ನನ್ನ ಅವರ ಪರಿಚಯ ಮತ್ತು ಭೇಟಿ. ನಂತರದಲ್ಲಿ ನಾನು ಅವರನ್ನು ಕಂಡದ್ದು ಕೆಲವು ನಾಟಕಗಳಲ್ಲಿ ಮಾತ್ರ. ಅದರಲ್ಲೂ ಕಲಾಗಂಗೋತ್ರಿ ತಂಡ ಅಭಿನಯಿಸಿದ ಎರಡು ನಾಟಕಗಳು ನನಗೆ ಅವರ ನೆನಪನ್ನು ಯಾವಾಗಲೂ ಹಸಿರಾಗಿಸಿಡುತ್ತದೆ. ಒಂದು ’ಪರಹಿತ ಪಾಷಾಣ’ ಎಂಬ ನಾಟಕದಲ್ಲಿ ಯಮುನಾ ಮೂರ್ತಿಯವರೊಡನೆ ಜೋಡಿಯಾಗಿ ನಟಿಸಿದ್ದರು. ಅದರಲ್ಲಿ ಇಬ್ಬರು ಮದುವೆಯಾಗದೇ ಉಳಿದ ಹಿರಿಯ ಹೆಂಗಸರು ಮನೆಗೆ ಬಂದ ಅತಿಥಿಗಳನ್ನು ಕೊಲ್ಲುವ ಕಥೆಯುಳ್ಳ ಆ ನಾಟಕ. ಅದರಲ್ಲಿ ಅವರದು ’ಅಕ್ಕಯ್ಯಮ್ಮ’ನ ಪಾತ್ರ. ಆ ಪಾತ್ರವನ್ನು ಅವರು ನಿರ್ವಹಿಸಿದ ರೀತಿ ನನಗೆ ತುಂಬಾ ಮೆಚ್ಚುಗೆಯಾಗಿತ್ತು.

ತಣ್ಣನೆಯ ಕ್ರೌರ್ಯವನ್ನು ಮುಂದಿಡುವ ಆ ನಾಟಕದಲ್ಲಿ ಭಾರ್ಗವಿ ಅವರದು ಅಮಾಯಕತೆಯೇ ಮೈವೆತ್ತಿದಂತಹ ಪಾತ್ರ. ಹಾಸ್ಯದ ಧಾಟಿಯಲ್ಲಿ ಅತ್ಯಂತ ಸಹಜ ನಟನೆಯಲ್ಲಿ ರಂಜಿಸುತ್ತಿದ್ದರು. ಅವರು ನಾಟಕದ ಪಾತ್ರ ಎಂದು ಅಂದುಕೊಡೇ ಇಲ್ಲವೇನೋ ಎಂಬಷ್ಟು ಸಹಜವಾಗಿತ್ತು ಅವರ ರಂಗದ ಮೇಲಿನ ಓಡಾಟ. ಆ ಇಬ್ಬರು ಹಿರಿಯ ಜೀವಗಳ ನಟನಾ ಚಾತುರ್ಯವನ್ನು ಯಾರೂ ಮರೆಯಲಾರರು. ಇನ್ನೊಂದು ನಾಟಕ ಕಲಾಗಂಗೋತ್ರಿ ಅಭಿನಯಿಸಿದ ಅತ್ಯಂತ ಯಶಸ್ವೀ ನಾಟಕ ’ಮುಖ್ಯಮಂತ್ರಿ’. ಅದರಲ್ಲಿ ಅವರು ಮುಖ್ಯಮಂತ್ರಿಯವರ ಹೆಂಡತಿ ಪ್ರದ್ಯುಮ್ನಾದೇವಿಯವರ ಪಾತ್ರವನ್ನು ನಿರ್ವಹಿಸಿದ್ದರು. ಈ ಎರಡೂ ನಾಟಕಗಳ ಪಾತ್ರಗಳ ವೈವಿಧ್ಯತೆಯನ್ನು ತುಂಬಿಕೊಡುತ್ತಿದ್ದ ಭಾರ್ಗವಿ ನಾರಾಯಣ್ ಅವರು ಎಲ್ಲ ಬಗೆಯ ಗೌರವಗಳಿಗೂ ಅರ್ಹರು. ಅಂತೇ ಅವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳೂ ಲಭಿಸಿವೆ. ಒಂದು ಬಾರಿ ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರೂ ಆಗಿದ್ದರು.

ಭಾರ್ಗವಿ ನಾರಾಯಣ್ ಅವರ ಸಿನೆಮಾ ನಟನೆಯ ಬಗೆಗೆ ನನಗೆ ಅಷ್ಟೇನೂ ಮೆಚ್ಚುಗೆ ಇಲ್ಲ. ಬಹುಷಃ ’ವಂಶವೃಕ್ಷ’ ಚಿತ್ರದಲ್ಲಿ ಅವರನ್ನು ನೋಡಿದಂತೆ ಇನ್ನಿತರ ಚತ್ರಗಳಲ್ಲಿ ನಾನು ಅವರನ್ನು ಕಾಣಲಿಲ್ಲ. ಇನ್ನೊಂದು ಚಿತ್ರ ಪ್ರೊಫೆಸರ್ ಹುಚ್ಚೂರಾಯ. ಇದರಲ್ಲಿ ಅವರಿಗೆ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿಯೂ ಸಂದಿದೆ. ನಾನು ನೋಡಿದ ಇತರೆ ಚಿತ್ರಗಳಲ್ಲಿ ಅವರದು ಒಂದೇ ಬಗೆಯ ನಟನೆ, ಎಲ್ಲ ಪಾತ್ರಗಳೂ ಒಂದೇ ಏನೋ ಎಂಬಂತಿರುತ್ತಿತ್ತು. ಬಹುಷಃ ಇದು ನಮ್ಮ ಚಿತ್ರರಂಗದ ಮಿತಿಯೇನೋ ಅದು! ಹೆಚ್ಚಗಿನ ಧಾರಾವಾಹಿಗಳಲ್ಲಿ ಮಧ್ಯಮವರ್ಗದ ಬ್ರಾಹ್ಮಣ ಕುಟುಂಬದ ಹೆಣ್ಣುಮಗಳ ಪಾತ್ರವನ್ನು ಮನಮುಟ್ಟುವಂತೆ ಅಭಿನಯಿಸುತ್ತಿದ್ದರು.

ಎಲ್ಲಕ್ಕಿಂತ ಹೆಚ್ಚಾಗಿ ಅವರ ರಂಗದ ಮೇಲಿನ ಚಟುವಟಿಕೆಯ ಪಾತ್ರಪೋಷಣೆ ನಮ್ಮನ್ನು ಬೆರಗುಗೊಳಿಸುತ್ತಿದ್ದುದು ನಿಜ. ಬೆಂಗಳೂರು ಆಕಾಶವಾಣಿಯ ಕಲಾವಿದೆಯಾಗಿದ್ದರು. ರೇಡಿಯೋ ನಾಟಕಗಳಲ್ಲಿ ಭಾಗವಹಿಸಿ, ಆಕಾಶವಾಣಿಗಾಗಿ ಹಲವಾರು ನಾಟಕಗಳನ್ನೂ ಬರೆದು ನಿರ್ದೇಶಿಸಿದರು. 600ಕ್ಕೂ ಹೆಚ್ಚು ನಾಟಕಗಳು, ನೂರಾರು ಸಿನೆಮಾಗಳು, ಹತ್ತಾರು ಧಾರಾವಾಹಿಗಳು, ನಿರಂತರ ರಂಗಭೂಮಿ ಮತ್ತಿತರ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ – ಈ ಎಲ್ಲವೂ ಅವರ ವೈವಿಧ್ಯಮಯ ಬದುಕಿನ ಆಯ್ಕೆಗೆ ಹಿಡಿದ ಕನ್ನಡಿಯೇ ಆಗಿದೆ. ಭಾರ್ಗವಿ ಅವರು ತಮ್ಮ ಜೀವನವನ್ನು ಕುರಿತಂತೆ ’ನಾನು ಭಾರ್ಗವಿ’ ಎಂಬ ಆತ್ಮಕಥೆಯನ್ನು ಬರೆದಿದ್ದಾರೆ. ಹಾಗೇ ’ನಾ ಕಂಡ ನಮ್ಮವರು’ ಎಂಬ ಪುಸ್ತಕವನ್ನೂ ಬರೆದಿದ್ದಾರೆ. ಡಾ. ಎಚ್.ಎನ್ ಅವರನ್ನು ಕಂಡರೆ ಅವರಿಗೆ ತುಂಬಾ ಗೌರವ. ಡಾ. ಎಚ್.ಎನ್ ಕೂಡಾ ಆಗಾಗ ನಾಣಿಯವರ ಬಗೆಗೆ ಮಾತು ಬಂದಾಗಲೆಲ್ಲ ಇವರನ್ನು ಅಕ್ಕರೆಯಿಂದ ಹಾಸ್ಯಮಯವಾಗಿ ನೆನಪಿಸಿಕೊಳ್ಳುತ್ತಿದ್ದುದನ್ನು ನಾನು ನೋಡಿದ್ದೇನೆ.

ಭಾರ್ಗವಿ ಅವರು ಕುಟುಂಬದಲ್ಲೂ ಅತ್ಯಂತ ಪ್ರಭಾವಶಾಲೀ ವ್ಯಕ್ತಿತ್ವ. ಪತಿ ಬಿ.ಎನ್.ನಾಣಿ, ಮಕ್ಕಳು ಎಲ್ಲರೂ ರಂಗಭೂಮಿ, ಕಿರುತೆರೆ, ಹಿರಿತೆರೆ ಎಲ್ಲದರಲ್ಲೂ ತುಂಬಾ ಚಟುವಟಿಕೆಯಿಂದ ನಿರಂತರವಾಗಿ ಸುದ್ದಿಯಲ್ಲಿರುವವರು. ತುಂಬು ಜೀವನವನ್ನು ಕಂಡ ಅವರು 84ನೇ ವಯಸ್ಸಿನಲ್ಲಿ ತೀರಿಕೊಂಡರು. ಅವರ ಅಗಲಿಕೆ ಸಹಜವಾಗಿಯೇ ದುಃಖ ತರುವಂಥದ್ದು. ರಂಗಭೂಮಿಯ ಹಿರಿಯರೆಲ್ಲರೂ ಒಬ್ಬೊಬ್ಬರಾಗಿ ಲೋಕವನ್ನು ಬಿಡುತ್ತಿದ್ದರೆ ಮುಂದಿನ ಯುವ ಜನಾಂಗಕ್ಕೆ ಅಗತ್ಯವಾಗಿ ಕಲೆಯ ಬದ್ಧತೆಯನ್ನು ತಿಳಿಸುವ ಅಗಣಿತ ಪ್ರೇರಣೆಯ ಕೊಂಡಿಗಳು ಕಳಚುತ್ತಾ ಬಂದಂತೆ ಎಂದೆನಿಸುತ್ತದೆ.

ಡಾ. ಹೆಚ್.ವಿ. ವೇಣುಗೋಪಾಲ್

ಡಾ. ಹೆಚ್.ವಿ. ವೇಣುಗೋಪಾಲ್
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಮತ್ತು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸಮುದಾಯ ರಂಗತಂಡದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ.


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...