Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

- Advertisement -
- Advertisement -

ಫೆಬ್ರವರಿ 4ರಂದು ನಾವೆಲ್ಲ ಒಂದು ಆಘಾತಕಾರಿ ಘಟನೆಗೆ ಸಾಕ್ಷಿಯಾದೆವು. ಕುಂದಾಪುರದ ಸರಕಾರಿ ಕಾಲೇಜಿನ ಅಧ್ಯಾಪಕರು ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ತಮ್ಮ ತಲೆಯ ಮೇಲೆ ಹಿಜಾಬ್ ಧರಿಸಿ ಕಾಲೇಜಿನೊಳಗೆ ಬರುವುದನ್ನು ತಡೆಯಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು. ಈ ಘಟನೆಯ ನಂತರ ಇದೇ ರೀತಿಯಲ್ಲಿ ವಿವೇಚನಾರಹಿತವಾಗಿ ಉಡುಪಿಯ ಸರಕಾರಿ ಕಾಲೇಜೊಂದರಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿ ಪ್ರವೇಶಿಸದಂತೆ ತಡೆಯಲಾಯಿತು. ಈ ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸದ ವಿವಾದ ಉಡುಪಿಯ ಸರಕಾರಿ ಕಾಲೇಜಿನಿಂದಲೇ ಪ್ರಾರಂಭವಾಗಿತ್ತು.

ಸದಾ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿಗಳನ್ನು ಯಾವುದೇ ಮುನ್ಸೂಚನೆ ನೀಡದೆ, ಅಚಾನಕ್ಕಾಗಿ ಒಂದು ದಿನ ಪ್ರವೇಶ ನಿರಾಕರಿಸಲಾಯಿತು. ಆಗ ವಿದ್ಯಾರ್ಥಿಗಳು ಹೇಳಿದ್ದು ಹೀಗೆ ವರದಿಯಾಗಿದೆ: “ನಾವು ವಿದ್ಯಾರ್ಥಿಗಳು, ನಾವು ಮೊದಲಿನಿಂದಲೂ ಹಿಜಾಬ್ ಧರಿಸುತ್ತಿದ್ದೇವೆ. ಆದರೆ ಈಗ ಮಾತ್ರ ಅದನ್ನು ಸಮಸ್ಯೆಯನ್ನಾಗಿಸಲಾಗಿದೆ”. ಹಿಜಾಬ್ ಎಂಬುದು ಇದ್ದಕ್ಕಿದ್ದಂತೆಯೇ ಒಂದು ಸಮಸ್ಯೆಯಾಗಿದ್ದು ಈಗ ಅತ್ಯಂತ ಆಳದ ಮಹತ್ವ ಪಡೆದುಕೊಂಡಿದೆ. ಇದು ಸರಕಾರ ತೆಗೆದುಕೊಂಡ ಕ್ರಮದ ಬೇಕಾಬಿಟ್ಟಿಯಾದ ವಿವೇಚನಾರಹಿತವಾದ ಸ್ವರೂಪವನ್ನು ಎತ್ತಿತೋರಿಸುತ್ತದೆ. ಸರಕಾರದ ಈ ವಿವೇಚನಾರಹಿತ ಕ್ರಮ ಪ್ರಮುಖ ಪ್ರಶ್ನೆಯಾಗಬೇಕೇ ಹೊರತು ಹಿಜಾಬ್ ಎಂಬುದು ಇಸ್ಲಾಂಗೆ ಅತ್ಯಗತ್ಯವೋ ಇಲ್ಲವೋ ಎಂಬುದಲ್ಲ. ಏಕೆಂದರೆ, ವಿದ್ಯಾರ್ಥಿಗಳಿಗೆ ಶಿಕ್ಷಣದ ಹಕ್ಕಿದೆ ಹಾಗೂ ಪರೀಕ್ಷೆಗೆ ಎರಡು ತಿಂಗಳ ಮುನ್ನ ತರಗತಿಗೆ ಹಾಜರಾಗದಂತೆ ಇದ್ದಕ್ಕಿದ್ದಂತೆ ಅರ್ಥರಹಿತವಾಗಿ ತಡೆಯಲು ಸಾಧ್ಯವಿಲ್ಲ.

ಕರ್ನಾಟಕ ಸರಕಾರವು ಶಿಕ್ಷಣದ ಹಕ್ಕು ಮತ್ತು ತಾರತಮ್ಯರಹಿತ ಜೀವನದ ಹಕ್ಕು (ಇವುಗಳ ರಕ್ಷಣೆಗಾಗಿ ಸಂವಿಧಾನಾತ್ಮಕ ಹೊಣೆ ಹೊಂದಿದೆ), ಇವೆರಡರ ಉಲ್ಲಂಘನೆ ಆಗಿರುವುದನ್ನು ಉಪೇಕ್ಷಿಸಿದೆ. ಹಾಗೂ ಅದರ ಬದಲಿಗೆ ಒಂದು ಅತ್ಯಂತ ಬೇಜವಾಬ್ದಾರಿತನದಿಂದ ಕೂಡಿದ ಕಿತಾಪತಿಯ ಆದೇಶವನ್ನು ಹೊರಡಿಸಿತು. ಅದರಲ್ಲಿ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳ ಹಿಂದಿನ ಆದೇಶಗಳು ’ತಲೆಯ ಮೇಲೆ ಹೊದ್ದುಕೊಳ್ಳುವ ಸ್ಕಾರ್ಫ್ ಅಥವಾ ಬಟ್ಟೆಯನ್ನು ನಿಷೇಧಿಸುವುದು ಸಂವಿಧಾನದ ಆರ್ಟಿಕಲ್ 25ರ ಉಲ್ಲಂಘನೆ ಆಗುವುದಿಲ್ಲ’ ಎಂದು ತಪ್ಪಾಗಿ ಉಲ್ಲೇಖಿಸಿದೆ. ಇದು ಹಿಂದೆ ಬಂದ ಆದೇಶಗಳ ತಪ್ಪು ಗ್ರಹಿಕೆಯಾಗಿದೆ. ಆ ಆದೇಶಗಳು ವಾಸ್ತವದಲ್ಲಿ ಹಿಜಾಬ್ ಧರಿಸುವ ಹಕ್ಕು ವರ್ಸಸ್ ಪರೀಕ್ಷೆಗಳಲ್ಲಿ ನಕಲು ಮಾಡುವುದನ್ನು ತಡೆಯಲು ಕಾಲೇಜುಗಳಿಗೆ ಇರುವ ಹಕ್ಕುಗಳ ಬಗ್ಗೆ ಹಾಗೂ ಅಲ್ಪಸಂಖ್ಯಾತರ ಸಂಸ್ಥೆಗಳು ಸಮವಸ್ತ್ರವನ್ನು ನಿಗದಿಪಡಿಸುವ ಹಕ್ಕುಗಳು ವರ್ಸಸ್ ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಧರಿಸಲು ಇರುವ ಹಕ್ಕುಗಳನ್ನು ಬ್ಯಾಲೆನ್ಸ್ ಮಾಡುವ ಪ್ರಕರಣಗಳಲ್ಲಿ ಬಂದಿದ್ದ ಆದೇಶಗಳಾಗಿವೆ.

ಈ ಅಧಿಸೂಚನೆಯಲ್ಲಿ ’ತಲೆಯನ್ನು ಮರೆಮಾಚುವ ಬಟ್ಟೆ ಅಥವಾ ಹೆಡ್‌ಸ್ಕಾರ್ಫ್‌ಅನ್ನು ನಿಷೇಧಿಸುವುದು ಸಂವಿಧಾನದ ಆರ್ಟಿಕಲ್ 25ರ ಉಲ್ಲಂಘನೆ ಆಗುವುದಿಲ್ಲ’ ಎಂದು ತೀರ್ಮಾನಿಸುತ್ತದೆ. ಹಾಗೂ ಸರಕಾರಿ ಕಾಲೇಜುಗಳಲ್ಲಿ ಯಾವುದೇ ಸಮವಸ್ತ್ರ ನಿಗದಿಪಡಿಸದೇ ಇದ್ದಲ್ಲಿ, ಧರಿಸುವ ಬಟ್ಟೆಗಳು ’ಏಕತೆ, ಸಮಾನತೆ ಮತ್ತು ಸಾರ್ವಜನಿಕ ಸುವ್ಯವಸ್ಥೆ’ಯ ಹಿತಾಸಕ್ತಿಗಳ ಮೇರೆಗೆ ಇರಬೇಕು ಎಂದು ಹೇಳುತ್ತದೆ. ಇದು ಕಾಲೇಜಿನ ಅಭಿವೃದ್ಧಿ ಸಮಿತಿಗಳಿಗೆ ಯಾವ ಸಮವಸ್ತ್ರ ಇರಬೇಕು ಎಂದು ನಿರ್ಣಯಿಸಲು ಅಧಿಕಾರ ನೀಡುತ್ತದೆ.

ಈ ಅಪಾಯಕಾರಿ ಅಧಿಸೂಚನೆಯೊಂದಿಗೆ ಕರ್ನಾಟಕ ಸರಕಾರವು ತಾನು ನೇರವಾಗಿ ಮಾಡಲು ಹಿಂಜರಿದ ಕೆಲಸವನ್ನು ಸುತ್ತುಬಳಸಿ ಮಾಡುತ್ತಿರುವುದು ತಿಳಿಯುತ್ತದೆ. ಸಮಾಜದಲ್ಲಿ ಜನರು ಅದನ್ನು ಮಾಡಬಾರದು, ಇದನ್ನು ಮಾಡಬಾರದು ಎಂದು ಹೇಳುವ ವಿಜಿಲಾಂಟೆ ಶಕ್ತಿಗಳಿಗೆ (ಸ್ವಘೋಷಿತ ನೈತಿಕ ಪೊಲೀಸರ) ಮತ್ತು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ರಹಸ್ಯವಾದ ಸಂದೇಶ ನೀಡಿದಂತೆ ಕಾಣುವ ಸರಕಾರವು ಅವರಿಗೆ ಹೇಳುತ್ತಿರುವುದೇನೆಂದರೆ, ಹಿಜಾಬ್ ಧರಿಸುವುದನ್ನು ಸಂವಿಧಾನ 25ನೇ ವಿಧಿಯಲ್ಲಿ ರಕ್ಷಣೆ ನೀಡಲಾಗಿಲ್ಲ ಹಾಗೂ ಈ ಶಕ್ತಿಗಳು ತಮಗಿಷ್ಟ ಬಂದಂತೆ ಮುಂದುವರೆದು ಹಿಜಾಬ್‌ಅನ್ನು ನಿಷೇಧಿಸಿ ಎಂದಿದೆ. ಈಗ ಈ ವಿಜಿಲಾಂಟೆ ಶಕ್ತಿಗಳಿಗೆ ಸಂದೇಶ ತಲುಪಿದೆ ಹಾಗೂ ಅವರುಗಳು ಸರಕಾರದ ನಿಜವಾದ ಆದರೆ ಗುಪ್ತವಾದ ಉದ್ದೇಶವನ್ನು ನೆರವೇರಿಸಲು ಹೊರಟಿದ್ದಾರೆ. ಫೆಬ್ರವರಿ 8ರಂದು, ಕೇಸರಿ ಶಾಲನ್ನು ಹೊದ್ದ ಕಿಡಿಗೇಡಿಗಳು ಜೈ ಶ್ರೀರಾಮ ಘೋಷಣೆ ಕೂಗುತ್ತ, ಕಾಲೇಜಿಗೆ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿಯನ್ನು ಹೆದರಿಸಿ, ಕಿರುಕುಳ ನೀಡಿದರು. ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮುಸ್ಲಿಂ ಯುವತಿಯರು ತಮ್ಮ ಶಿಕ್ಷಣದ ಹಕ್ಕನ್ನು ಪಡೆಯುವುದನ್ನು ತಡೆಯಲಾಯಿತು. ಇಷ್ಟೆಲ್ಲ ಆದರೂ ಕರ್ನಾಟಕ ಸರಕಾರ ಮೂಕ ಪ್ರೇಕ್ಷಕನಾಗಿಯೇ ಇತ್ತು.

ಈ ಅಧಿಸೂಚನೆಯ ಮೂಲಕ ಕರ್ನಾಟಕ ಸರಕಾರ ಹೇಳುತ್ತಿರುವುದೇನೆಂದರೆ, ಮುಸ್ಲಿಂ ಬಾಲಕಿಯರ ಶಿಕ್ಷಣದ ಹಕ್ಕನ್ನು ರಕ್ಷಿಸುವ ಯಾವ ಜವಾಬ್ದಾರಿಯೂ ತಮಗಿಲ್ಲ ಎಂದು ಹಾಗೂ ಹಿಜಾಬ್ ಧರಿಸುವ ಮುಸ್ಲಿಂ ಬಾಲಕಿಯರನ್ನು ನಿಷೇಧಿಸುವ, ಅವಮಾನಿಸುವ, ಅವರನ್ನು ಹೊರಗಿಡುವುದು ಮುಂತಾದೆಲ್ಲವುಗಳಿಗೆ ಅನುವು ಮಾಡಿಕೊಡಲಾಗಿದೆ ಎಂದು. ಇದು ಒಂದು ಸಂವಿಧಾನಾತ್ಮಕವಾಗಿ ಚುನಾಯಿತ ಸರಕಾರಕ್ಕೆ ಸಂಬಂಧಪಟ್ಟಂತೆ, ತನ್ನ ಜವಾಬ್ದಾರಿಯನ್ನು ಕಳಚಿಕೊಳ್ಳುವ ಅತ್ಯಂತ ಆಘಾತಕಾರಿಯಾದ ನಡೆಯಾಗಿದೆ.

ಯಾವಾಗ ಒಂದು ಸರಕಾರ ತನ್ನ ಸಂವಿಧಾನಾತ್ಮಕ ಜವಾಬ್ದಾರಿಯನ್ನು ನಿಭಾಯಿಸಲು ವಿಫಲವಾಗುತ್ತದೆಯೋ, ಆಗ ಆ ಜವಾಬ್ದಾರಿ ಅದರ ನಾಗರಿಕರ ಮೇಲೆ ಬೀಳುತ್ತದೆ. ಬಿ.ಕಾಂ ಓದುತ್ತಿರುವ ಒಬ್ಬ ಮುಸ್ಲಿಂ ಯುವತಿ ಮುಸ್ಕಾನ್ ಕಾಲೇಜಿನ ಕ್ಯಾಂಪಸ್ಸಿನಲ್ಲಿ ತನ್ನ ವಾಹನದಲ್ಲಿ ಬಂದು, ಕೇಸರಿ ಶಾಲನ್ನು ಹೊದ್ದು ಪೀಡಿಸುತ್ತಿದ್ದ ಹೇಡಿಗಳನ್ನು ಧೈರ್ಯದಿಂದ ಎದುರಿಸಿದ್ದನ್ನು ಇಡೀ ಜಗತ್ತೇ ನೋಡಿತು. ಅವಳ ಧೈರ್ಯ, ಅವಳ ಆತ್ಮಸ್ಥೈರ್ಯ ಹಾಗೂ ತನ್ನ ಅಭಿವ್ಯಕ್ತಿ ಸ್ವಾತಂತ್ರದ ಹಕ್ಕು, ಶಿಕ್ಷಣದ ಹಕ್ಕು ಮತ್ತು ತಾರತಮ್ಯಕ್ಕೆ ಒಳಗಾಗದೇ ಇರುವ ಹಕ್ಕನ್ನು ಅವಳು ನಿರ್ಭೀತಿಯಿಂದ ಮತ್ತು ಘನತೆಯಿಂದ ಪ್ರತಿಪಾದಿಸಿದ್ದು, ಸಂವಿಧಾನದ ತತ್ವಗಳಾದ ಸ್ವಾತಂತ್ರ, ಸಮಾನತೆ ಮತ್ತು ಭ್ರಾತೃತ್ವದ ನಿಜ ಅರ್ಥದ ಪ್ರದರ್ಶನವಾಗಿತ್ತು.

ಯಾವಾಗ ಎಲ್ಲಾ ಸಂಸ್ಥೆಗಳ ಹೊಣೆಗಾರಿಕೆ ವಿಫಲವಾಗುತ್ತದೋ, ಆಗ ಹೊಣೆಗಾರಿಕೆಯನ್ನು
ಖಾತ್ರಿಪಡಿಸುವ ಜವಾಬ್ದಾರಿ ಅಂತಿಮವಾಗಿ ನ್ಯಾಯಾಂಗದ ಮೇಲೆ ಬೀಳುತ್ತದೆ. ದುರದೃಷ್ಟವಶಾತ್, ಕರ್ನಾಟಕ ಉಚ್ಚ ನ್ಯಾಯಾಲಯ ಏಕ ಸದಸ್ಯ ಪೀಠವು ಮುಸ್ಲಿಂ ಯುವತಿಯರಿಗೆ ತಾತ್ಕಾಲಿಕ/ಮಧ್ಯಂತರ ಪರಿಹಾರ ನೀಡಬೇಕು ಹಾಗೂ ಎರಡು ತಿಂಗಳ ನಂತರ ನಡೆಯಲಿರುವ ಪರೀಕ್ಷೆಯ ತನಕ, ಅವರಿಗೆ ತಾವು ಮುಂಚೆ ಧರಿಸಿದಂತೆ ಬಟ್ಟೆ ಧರಿಸಿ ಬರಲು ಅವಕಾಶ ಮಾಡಿಕೊಡಬೇಕು ಎಂಬ ಅರ್ಜಿದಾರರ ಮನವಿಗೆ ಕದಲಲಿಲ್ಲ. ಹಿಜಾಬ್ ಧರಿಸಿ ಪರೀಕ್ಷೆಗಳಲ್ಲಿ ಹಾಜರಾಗಲು ಅನುಮತಿ ನೀಡಲು, ಮಧ್ಯಂತರ ಪರಿಹಾರಕ್ಕಾಗಿ ಸಲ್ಲಿಸಿದ ಮನವಿಯನ್ನು ವಿರೋಧಿಸಿ ಕರ್ನಾಟಕ ಸರಕಾರವು ತನ್ನ ಕ್ರೌರ್ಯವನ್ನು ಮೆರೆಯಿತು. ವಿಷಯವು ಕರ್ನಾಟಕ ಉಚ್ಚ ನ್ಯಾಯಾಲಯದ ಪೂರ್ಣ ಪೀಠಕ್ಕೆ ತಲುಪಿದಾಗ, ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿತಲ್ಲದೇ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ವಿಚಾರಣೆಯ ಮುಂದಿನ ದಿನಾಂಕದ ತನಕ ಕಾಲೇಜಿನ ಅಭಿವೃದ್ಧಿ ಸಮಿತಿಗಳು ಆದೇಶಿಸಿದಲ್ಲಿ ಹಿಜಾಬ್‌ಗಳನ್ನು ಧರಿಸುವ ಹಕ್ಕನ್ನು ನಿರಾಕರಿಸುವುದನ್ನು ಕಾನೂನುಬದ್ಧಗೊಳಿಸಿತು. ಅಂದರೆ ಉಚ್ಚ ನ್ಯಾಯಾಲಯ ಮಾಡಿದ್ದೇನೆಂದರೆ, ಸರಕಾರದ ಬೇಜವಾಬ್ದಾರಿತನ ಹಾಗೂ ಕಾನೂನಿನ ವಿರುದ್ಧದ ಕ್ರಮಗಳಿಗೆ ಒಂದು ರೀತಿಯ ಲೈಸನ್ಸ್ ಕೊಟ್ಟಿದ್ದು. ಉಚ್ಚ ನ್ಯಾಯಾಲಯವು ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಅಂಶವೇ ಎಂಬ ಪ್ರಶ್ನೆಗೆ ಗಮನ ಹರಿಸುವುದರೊಂದಿಗೆ, ಅದಕ್ಕೂ ಮುಖ್ಯವಾದ ವಿಷಯವನ್ನು ನಿರ್ಲಕ್ಷಿಸಿದೆ; ಅದೇನೆಂದರೆ ಕೇವಲ ಹಿಜಾಬ್ ಧರಿಸಿದ್ದರೆಂದು ಮುಸ್ಲಿಂ ಯುವತಿಯರಿಗೆ ಶಿಕ್ಷಣದ ಹಕ್ಕನ್ನು ನಿರಾಕರಿಸುವುದರ ಪ್ರಶ್ನೆ. ಇಂದಿನಿಂದ ಮುಸ್ಲಿಂ ಯುವತಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರಿಗೆ ಕಾಲೇಜಿನಲ್ಲಿ ಮತ್ತು ಶಾಲೆಗಳಲ್ಲಿ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ನಿಜ ಆತ್ಮಸಾಕ್ಷಿಯೊಂದಿಗೆ ಅಂದರೆ ಸಕಾರಣಗಳೊಂದಿಗೆ ಹೇಳಬಲ್ಲದೇ? ಇದೇ ಪ್ರಶ್ನೆಯನ್ನು ನ್ಯಾಯಾಲಯ ಪರಿಗಣಿಸಬೇಕಿತ್ತು ಆದರೆ ದುರದೃಷ್ಟವಷಾತ್ ಹಾಗಾಗಲಿಲ್ಲ.

ಮುಸ್ಕಾನ್

ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ವೈಫಲ್ಯದ ಸಮಯದಲ್ಲಿ ನಾಗರಿಕ ಸಮಾಜದ ಧ್ವನಿ ಮತ್ತು ಮಾಧ್ಯಮಗಳು ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕಿದೆ. ಎಲ್ಲಿಯವರೆಗೆ ಸಂವಿಧಾನಿಕ ಅಂತಸ್ಸಾಕ್ಷಿ ಎಚ್ಚರಗೊಳ್ಳುವುದಿಲ್ಲವೋ ಹಾಗೂ ಕರ್ನಾಟಕ ಸರಕಾರ ಸಂವಿಧಾನದ ಅನುಗುಣವಾಗಿ ಕೆಲಸ ಮಾಡುವುದಿಲ್ಲವೋ, ಅಲ್ಲಿಯವರೆಗೆ ಮಾಧ್ಯಮ ಮತ್ತು ನಾಗರಿಕ ಸಮಾಜ ಈ ಜವಾಬ್ದಾರಿಯನ್ನು ಹೊರಬೇಕಿದೆ.

(ಕನ್ನಡಕ್ಕೆ): ರಾಜಶೇಖರ್ ಅಕ್ಕಿ

ಅರವಿಂದ್ ನಾರಾಯಣ್

ಅರವಿಂದ್ ನಾರಾಯಣ್
ಸಂವಿಧಾನ ತಜ್ಞರು, ಪಿಯುಸಿಎಲ್-ಕೆ ನ ರಾಜ್ಯಾಧ್ಯಕ್ಷರು


ಇದನ್ನೂ ಓದಿ: ಹಿಜಾಬ್‌-ಕೇಸರಿ ಶಾಲು ವಿವಾದ: ಸಾಮರಸ್ಯಕ್ಕೆ ಧರ್ಮಗುರುಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...